Homeಕರ್ನಾಟಕಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ ಇನ್ನಿಲ್ಲ

ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ ಇನ್ನಿಲ್ಲ

- Advertisement -
- Advertisement -

ಶತಮಾನದ ಸಂತ ಎಂಬ ಗೌರವಕ್ಕೆ ಪಾತ್ರರಾದ ವಿಜಯಪುರದ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿಯವರು ನಿಧನರಾಗಿದ್ದಾರೆ. ಅನಾರೋಗ್ಯದ ಕಾರಣ ಹಲವು ದಿನಗಳಿಂದ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಸೋಮವಾರ ಸಂಜೆ ಅವರ ಆರೋಗ್ಯ ತೀವ್ರ ಹದಗೆಟ್ಟಿತ್ತು.

ಸ್ವಾಮೀಜಿಯವರ ಅಂತಿಮ ದರ್ಶನ ಪಡೆಯುವುದಕ್ಕಾಗಿ ವಿಜಯಪುರದ ಜ್ಞಾನಯೋಗಾಶ್ರಮದತ್ತ ಜನರು ಸಾಗರೋಪಾದಿಯಲ್ಲಿ ಧಾವಿಸುತ್ತಿದ್ದಾರೆ. ಮಂಗಳವಾರ ಸಂಜೆ 5 ಗಂಟೆಗೆ ಸ್ವಾಮೀಜಿಯವರ ಸಂಕಲ್ಪದ ಪ್ರಕಾರದಂತೆಯೇ ಸಕಲ ಸರ್ಕಾರಿ ಗೌರವಗಳೊಂದಿಗೆ ಅವರ ಅಂತ್ಯಕ್ರಿಯೆ ನಡೆಯಲಿದೆ.

ಕೆಲವು ವರ್ಷಗಳ ಹಿಂದೆಯೇ ತಮ್ಮ ಅಂತ್ಯಕ್ರಿಯೆಯ ವಿಧಿವಿಧಾನಗಳ ಬಗ್ಗೆ ಇಚ್ಛೆಯನ್ನು ಸ್ಪಷ್ಟವಾಗಿ ತಿಳಿಸಿದ್ದ ಸ್ವಾಮೀಜಿಯವರು ತಮಗಾಗಿ ಯಾವುದೇ ಸ್ಮಾರಕ ನಿರ್ಮಿಸಬಾರದು ಎಂಬ ಸೂಚಿಸಿದ್ದರು ಎಂದು ಯೋಗಾಶ್ರಮದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಬಿಜ್ಜರಗಿ ಗ್ರಾಮದ ರೈತ ಕುಟುಂಬದಲ್ಲಿ 1941ರ ಅಕ್ಟೋಬರ್ 24ರಂದು ಜನಿಸಿದ್ದ ಸ್ವಾಮೀಜಿಯವರ ಪೂರ್ವಾಶ್ರಮದ ಹೆಸರು ಸಿದ್ದಗೊಂಡಪ್ಪ. ಬಿಜ್ಜರಗಿ ಗ್ರಾಮದ ಶಾಲೆಯಲ್ಲಿ 4ನೇ ತರಗತಿವರೆಗೆ ಓದಿದ ನಂತರ ಜ್ಞಾನಯೋಗಾಶ್ರಮದ ಮಲ್ಲಿಕಾರ್ಜುನ ಸ್ವಾಮೀಜಿಯವರಲ್ಲಿ ಆಶ್ರಯಪಡೆದರು.

ತಾವು ಪ್ರವಚನ ಮಾಡುವ ಸ್ಥಳಗಳಿಗೆ ಮಲ್ಲಿಕಾರ್ಜುನಾ ಸ್ವಾಮೀಜಿಯವರು, ಸಿದ್ದೇಶ್ವರರನ್ನು ಕರೆದುಕೊಂಡು ಹೋಗುತ್ತಿದ್ದರು. ಜೊತೆಯಲ್ಲಿಯೇ ಅವರ ಶಾಲಾ ಕಾಲೇಜುಗಳ ವಿದ್ಯಾಭ್ಯಾಸವೂ ಮುಂದುವರಿಯುವಂತೆ ನೋಡಿಕೊಂಡರು. ಸಿದ್ದೇಶ್ವರ ಸ್ವಾಮೀಜಿ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದರು. ಕೊಲ್ಹಾಪುರ ವಿಶ್ವವಿದ್ಯಾನಿಲಯದಿಂದ ತತ್ವಶಾಸ್ತ ವಿಷಯದಲ್ಲಿ ಎಂ.ಎ ಪದವಿಯನ್ನು ಪಡೆದರು.

ಕನ್ನಡದ ಜೊತೆ ಸಂಸ್ಕೃತ, ಇಂಗ್ಲೀಷ್, ಮರಾಠಿ, ಮತ್ತು ಹಿಂದಿ ಭಾಷೆಗಳಲ್ಲಿ ಸಿದ್ದೇಶ್ವರ ಸ್ವಾಮೀಜಿಯವರಿಗೆ ಅಪಾರ ಪಾಂಡಿತ್ಯವಿತ್ತು. ಅತ್ಯಂತ ಸರಳವಾಗಿ ಬದುಕುತ್ತಾ, ಅಧ್ಯಾತ್ಮವನ್ನು ಬೋಧಿಸಿದರು.

ಜನತೆಗೆ ಜ್ಞಾನದಾಸೋಹ ನೀಡುವ ಮೂಲಕ ಜ್ಞಾನಯೋಗಾಶ್ರಮ, ಉತ್ತರ ಕರ್ನಾಟಕದ ಜನಮಾನಸದಲ್ಲಿ ಬಹಳವಾಗಿ ಮಹತ್ವ ಪಡೆಯಿತು. ವಿಜಯಪುರ ಜ್ಞಾನಯೋಗಾಶ್ರಮದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಂತರ ಸಿದ್ಧೇಶ್ವರರು ತಮ್ಮ ಗುರುಗಳ ಮಾರ್ಗದರ್ಶನದಲ್ಲೇ ಆಶ್ರಮದ ಚಟುವಟಿಕೆಗಳನ್ನು ಮುಂದುವರಿಸಿಕೊಂಡು ಬಂದಿದ್ದಾರೆ.

ಕೊಲ್ಹಾಪುರದಲ್ಲಿ ತಮ್ಮ ಗುರುಗಳಾದ ಮಲ್ಲಿಕಾರ್ಜುನ ಸ್ವಾಮೀಜಿಯವರು ಮಾಡಿದ ಪ್ರವಚನಗಳನ್ನು ಒಂದುಗೂಡಿಸಿ ‘ಸಿದ್ದಾಂತ ಶಿಖಾಮಣಿ’ ಎಂಬ ಪುಸ್ತಕವನ್ನು ಬರೆದು ಗುರುಗಳ ಹೆಸರಿನಲ್ಲೇ ಪ್ರಕಟಿಸಿದ್ದರು. ಸ್ವಾಮೀಜಿಯವರು ವಚನಕಾರರ ಅಧ್ಯಾತ್ಮವನ್ನು ಜನರಿಗೆ ಸರಳವಾಗಿ ಬಿಡಿಸಿ ಹೇಳಿದರು. ಬದುಕಿನ ಮಾರ್ಗವನ್ನು ತೋರಿದರು. ‘ಪತಂಜಲಿಯ ಯೋಗಶಾಸ್ತ್ರ’ವನ್ನು ಸಂಪಾದಿಸಿದರು.

ಗಣ್ಯರ ಸಂತಾಪ

ಸ್ವಾಮೀಜಿಯವರ ನಿಧನಕ್ಕೆ ಗಣ್ಯರು ಸಂತಾಪ ಸೂಚಿಸಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಟ್ವೀಟ್ ಮಾಡಿದ್ದು, “ವಿಜಯಪುರದ ಜ್ಞಾನ ಯೋಗಾಶ್ರಮದ ಪರಮ ಪೂಜ್ಯ ಸಿದ್ದೇಶ್ವರ ಸ್ವಾಮೀಜಿಯವರು ಲಿಂಗೈಕ್ಯರಾದ ಸುದ್ದಿ ತಿಳಿದು ಅತ್ಯಂತ ದುಃಖವಾಗಿದೆ. ತಮ್ಮ ಪ್ರವಚನಗಳ ಮೂಲಕ ಮನುಕುಲದ ಉದ್ಧಾರಕ್ಕೆ ಶ್ರಮಿಸಿದ ಶ್ರೀಗಳ ಸೇವೆ ಅಮೋಘ ಹಾಗೂ ಅನನ್ಯವಾದುದು” ಎಂದಿದ್ದಾರೆ.

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಪ್ರತಿಕ್ರಿಯಿಸಿದ್ದು, “ದೇಶ ಕಂಡ ಶ್ರೇಷ್ಟ ಸಂತರು,ಆಧ್ಯಾತ್ಮಿಕ ಪ್ರವಚನಕಾರ, ವಿಜಯಪುರದ ಜ್ಞಾನಯೋಗಾಶ್ರಮದ ಶ್ರೀ ಸಿದ್ದೇಶ್ವರ ಸ್ವಾಮೀಜಿರವರು ಲಿಂಗೈಕ್ಯರಾದ ಸುದ್ದಿ ತಿಳಿದು ಮನಸ್ಸಿಗೆ ಅತೀವ ದುಃಖ ಉಂಟುಮಾಡಿದೆ. ನಡೆದಾಡುವ ದೇವರೆಂದೇ ಖ್ಯಾತರಾಗಿದ್ದ ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ,ಅವರ ಭಕ್ತ ಸಮೂಹಕ್ಕೆ ಈ ದುಃಖ ತಡೆಯುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ” ಎಂದಿದ್ದಾರೆ.

ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರು ಸಂತಾಪ ಸೂಚಿಸಿದ್ದು, “ಜ್ಞಾನಯೋಗಾಶ್ರಮದ ಪೀಠಾಧೀಶರಾದ ಸಿದ್ದೇಶ್ವರ ಸ್ವಾಮೀಜಿಯವರು ಲಿಂಗೈಕ್ಯರಾದ ಸುದ್ದಿ ಅತೀವ ನೋವುಂಟುಮಾಡಿದೆ. ಧಾರ್ಮಿಕ ಪ್ರವಚನದ ಮೂಲಕ ಸಮಾಜವನ್ನು ಸನ್ಮಾರ್ಗದಲ್ಲಿ ನಡೆಸುತ್ತಿದ್ದ ದಾರ್ಶನಿಕ ಗುರುವಿನ ಅಗಲಿಕೆ ವೈಯಕ್ತಿಕವಾಗಿ ಮತ್ತು ನಾಡಿಗೆ ತುಂಬಲಾಗದ ನಷ್ಟ” ಎಂದು ಅಭಿಪ್ರಾಯಪಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...