Homeಕರ್ನಾಟಕಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ ಇನ್ನಿಲ್ಲ

ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ ಇನ್ನಿಲ್ಲ

- Advertisement -
- Advertisement -

ಶತಮಾನದ ಸಂತ ಎಂಬ ಗೌರವಕ್ಕೆ ಪಾತ್ರರಾದ ವಿಜಯಪುರದ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿಯವರು ನಿಧನರಾಗಿದ್ದಾರೆ. ಅನಾರೋಗ್ಯದ ಕಾರಣ ಹಲವು ದಿನಗಳಿಂದ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಸೋಮವಾರ ಸಂಜೆ ಅವರ ಆರೋಗ್ಯ ತೀವ್ರ ಹದಗೆಟ್ಟಿತ್ತು.

ಸ್ವಾಮೀಜಿಯವರ ಅಂತಿಮ ದರ್ಶನ ಪಡೆಯುವುದಕ್ಕಾಗಿ ವಿಜಯಪುರದ ಜ್ಞಾನಯೋಗಾಶ್ರಮದತ್ತ ಜನರು ಸಾಗರೋಪಾದಿಯಲ್ಲಿ ಧಾವಿಸುತ್ತಿದ್ದಾರೆ. ಮಂಗಳವಾರ ಸಂಜೆ 5 ಗಂಟೆಗೆ ಸ್ವಾಮೀಜಿಯವರ ಸಂಕಲ್ಪದ ಪ್ರಕಾರದಂತೆಯೇ ಸಕಲ ಸರ್ಕಾರಿ ಗೌರವಗಳೊಂದಿಗೆ ಅವರ ಅಂತ್ಯಕ್ರಿಯೆ ನಡೆಯಲಿದೆ.

ಕೆಲವು ವರ್ಷಗಳ ಹಿಂದೆಯೇ ತಮ್ಮ ಅಂತ್ಯಕ್ರಿಯೆಯ ವಿಧಿವಿಧಾನಗಳ ಬಗ್ಗೆ ಇಚ್ಛೆಯನ್ನು ಸ್ಪಷ್ಟವಾಗಿ ತಿಳಿಸಿದ್ದ ಸ್ವಾಮೀಜಿಯವರು ತಮಗಾಗಿ ಯಾವುದೇ ಸ್ಮಾರಕ ನಿರ್ಮಿಸಬಾರದು ಎಂಬ ಸೂಚಿಸಿದ್ದರು ಎಂದು ಯೋಗಾಶ್ರಮದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಬಿಜ್ಜರಗಿ ಗ್ರಾಮದ ರೈತ ಕುಟುಂಬದಲ್ಲಿ 1941ರ ಅಕ್ಟೋಬರ್ 24ರಂದು ಜನಿಸಿದ್ದ ಸ್ವಾಮೀಜಿಯವರ ಪೂರ್ವಾಶ್ರಮದ ಹೆಸರು ಸಿದ್ದಗೊಂಡಪ್ಪ. ಬಿಜ್ಜರಗಿ ಗ್ರಾಮದ ಶಾಲೆಯಲ್ಲಿ 4ನೇ ತರಗತಿವರೆಗೆ ಓದಿದ ನಂತರ ಜ್ಞಾನಯೋಗಾಶ್ರಮದ ಮಲ್ಲಿಕಾರ್ಜುನ ಸ್ವಾಮೀಜಿಯವರಲ್ಲಿ ಆಶ್ರಯಪಡೆದರು.

ತಾವು ಪ್ರವಚನ ಮಾಡುವ ಸ್ಥಳಗಳಿಗೆ ಮಲ್ಲಿಕಾರ್ಜುನಾ ಸ್ವಾಮೀಜಿಯವರು, ಸಿದ್ದೇಶ್ವರರನ್ನು ಕರೆದುಕೊಂಡು ಹೋಗುತ್ತಿದ್ದರು. ಜೊತೆಯಲ್ಲಿಯೇ ಅವರ ಶಾಲಾ ಕಾಲೇಜುಗಳ ವಿದ್ಯಾಭ್ಯಾಸವೂ ಮುಂದುವರಿಯುವಂತೆ ನೋಡಿಕೊಂಡರು. ಸಿದ್ದೇಶ್ವರ ಸ್ವಾಮೀಜಿ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದರು. ಕೊಲ್ಹಾಪುರ ವಿಶ್ವವಿದ್ಯಾನಿಲಯದಿಂದ ತತ್ವಶಾಸ್ತ ವಿಷಯದಲ್ಲಿ ಎಂ.ಎ ಪದವಿಯನ್ನು ಪಡೆದರು.

ಕನ್ನಡದ ಜೊತೆ ಸಂಸ್ಕೃತ, ಇಂಗ್ಲೀಷ್, ಮರಾಠಿ, ಮತ್ತು ಹಿಂದಿ ಭಾಷೆಗಳಲ್ಲಿ ಸಿದ್ದೇಶ್ವರ ಸ್ವಾಮೀಜಿಯವರಿಗೆ ಅಪಾರ ಪಾಂಡಿತ್ಯವಿತ್ತು. ಅತ್ಯಂತ ಸರಳವಾಗಿ ಬದುಕುತ್ತಾ, ಅಧ್ಯಾತ್ಮವನ್ನು ಬೋಧಿಸಿದರು.

ಜನತೆಗೆ ಜ್ಞಾನದಾಸೋಹ ನೀಡುವ ಮೂಲಕ ಜ್ಞಾನಯೋಗಾಶ್ರಮ, ಉತ್ತರ ಕರ್ನಾಟಕದ ಜನಮಾನಸದಲ್ಲಿ ಬಹಳವಾಗಿ ಮಹತ್ವ ಪಡೆಯಿತು. ವಿಜಯಪುರ ಜ್ಞಾನಯೋಗಾಶ್ರಮದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಂತರ ಸಿದ್ಧೇಶ್ವರರು ತಮ್ಮ ಗುರುಗಳ ಮಾರ್ಗದರ್ಶನದಲ್ಲೇ ಆಶ್ರಮದ ಚಟುವಟಿಕೆಗಳನ್ನು ಮುಂದುವರಿಸಿಕೊಂಡು ಬಂದಿದ್ದಾರೆ.

ಕೊಲ್ಹಾಪುರದಲ್ಲಿ ತಮ್ಮ ಗುರುಗಳಾದ ಮಲ್ಲಿಕಾರ್ಜುನ ಸ್ವಾಮೀಜಿಯವರು ಮಾಡಿದ ಪ್ರವಚನಗಳನ್ನು ಒಂದುಗೂಡಿಸಿ ‘ಸಿದ್ದಾಂತ ಶಿಖಾಮಣಿ’ ಎಂಬ ಪುಸ್ತಕವನ್ನು ಬರೆದು ಗುರುಗಳ ಹೆಸರಿನಲ್ಲೇ ಪ್ರಕಟಿಸಿದ್ದರು. ಸ್ವಾಮೀಜಿಯವರು ವಚನಕಾರರ ಅಧ್ಯಾತ್ಮವನ್ನು ಜನರಿಗೆ ಸರಳವಾಗಿ ಬಿಡಿಸಿ ಹೇಳಿದರು. ಬದುಕಿನ ಮಾರ್ಗವನ್ನು ತೋರಿದರು. ‘ಪತಂಜಲಿಯ ಯೋಗಶಾಸ್ತ್ರ’ವನ್ನು ಸಂಪಾದಿಸಿದರು.

ಗಣ್ಯರ ಸಂತಾಪ

ಸ್ವಾಮೀಜಿಯವರ ನಿಧನಕ್ಕೆ ಗಣ್ಯರು ಸಂತಾಪ ಸೂಚಿಸಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಟ್ವೀಟ್ ಮಾಡಿದ್ದು, “ವಿಜಯಪುರದ ಜ್ಞಾನ ಯೋಗಾಶ್ರಮದ ಪರಮ ಪೂಜ್ಯ ಸಿದ್ದೇಶ್ವರ ಸ್ವಾಮೀಜಿಯವರು ಲಿಂಗೈಕ್ಯರಾದ ಸುದ್ದಿ ತಿಳಿದು ಅತ್ಯಂತ ದುಃಖವಾಗಿದೆ. ತಮ್ಮ ಪ್ರವಚನಗಳ ಮೂಲಕ ಮನುಕುಲದ ಉದ್ಧಾರಕ್ಕೆ ಶ್ರಮಿಸಿದ ಶ್ರೀಗಳ ಸೇವೆ ಅಮೋಘ ಹಾಗೂ ಅನನ್ಯವಾದುದು” ಎಂದಿದ್ದಾರೆ.

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಪ್ರತಿಕ್ರಿಯಿಸಿದ್ದು, “ದೇಶ ಕಂಡ ಶ್ರೇಷ್ಟ ಸಂತರು,ಆಧ್ಯಾತ್ಮಿಕ ಪ್ರವಚನಕಾರ, ವಿಜಯಪುರದ ಜ್ಞಾನಯೋಗಾಶ್ರಮದ ಶ್ರೀ ಸಿದ್ದೇಶ್ವರ ಸ್ವಾಮೀಜಿರವರು ಲಿಂಗೈಕ್ಯರಾದ ಸುದ್ದಿ ತಿಳಿದು ಮನಸ್ಸಿಗೆ ಅತೀವ ದುಃಖ ಉಂಟುಮಾಡಿದೆ. ನಡೆದಾಡುವ ದೇವರೆಂದೇ ಖ್ಯಾತರಾಗಿದ್ದ ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ,ಅವರ ಭಕ್ತ ಸಮೂಹಕ್ಕೆ ಈ ದುಃಖ ತಡೆಯುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ” ಎಂದಿದ್ದಾರೆ.

ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರು ಸಂತಾಪ ಸೂಚಿಸಿದ್ದು, “ಜ್ಞಾನಯೋಗಾಶ್ರಮದ ಪೀಠಾಧೀಶರಾದ ಸಿದ್ದೇಶ್ವರ ಸ್ವಾಮೀಜಿಯವರು ಲಿಂಗೈಕ್ಯರಾದ ಸುದ್ದಿ ಅತೀವ ನೋವುಂಟುಮಾಡಿದೆ. ಧಾರ್ಮಿಕ ಪ್ರವಚನದ ಮೂಲಕ ಸಮಾಜವನ್ನು ಸನ್ಮಾರ್ಗದಲ್ಲಿ ನಡೆಸುತ್ತಿದ್ದ ದಾರ್ಶನಿಕ ಗುರುವಿನ ಅಗಲಿಕೆ ವೈಯಕ್ತಿಕವಾಗಿ ಮತ್ತು ನಾಡಿಗೆ ತುಂಬಲಾಗದ ನಷ್ಟ” ಎಂದು ಅಭಿಪ್ರಾಯಪಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...