Homeಮುಖಪುಟಬಿಜೆಪಿಯಿಂದ 'ಸಿದ್ದು ನಿಜಕನಸುಗಳು' ಪುಸ್ತಕ ಬಿಡುಗಡೆ ಇಂದು: ಕಾರ್ಯಕ್ರಮ ರದ್ದುಗೊಳಿಸಲು ಕಾಂಗ್ರೆಸ್ ದೂರು

ಬಿಜೆಪಿಯಿಂದ ‘ಸಿದ್ದು ನಿಜಕನಸುಗಳು’ ಪುಸ್ತಕ ಬಿಡುಗಡೆ ಇಂದು: ಕಾರ್ಯಕ್ರಮ ರದ್ದುಗೊಳಿಸಲು ಕಾಂಗ್ರೆಸ್ ದೂರು

- Advertisement -
- Advertisement -

ಆಧಾರ ರಹಿತವಾಗಿ, ಧರ್ಮಗಳ ನಡುವೆ ಕಲಹ ಉಂಟು ಮಾಡುವಂತೆ ರಚನೆಯಾಗಿರುವ ‘ಟಿಪ್ಪು ನಿಜಕನಸುಗಳು’ ಕೃತಿ ಮಾರಾಟ ಮಾಡದಂತೆ ನ್ಯಾಯಾಲಯ ತಾತ್ಕಾಲಿಕ ತಡೆ ನೀಡಿರುವ ಬೆನ್ನಲ್ಲೆ ಬಿಜೆಪಿಯು ಇಂದು ‘ಸಿದ್ದು ನಿಜಕನಸುಗಳು’ ಎಂಬ ಪುಸ್ತಕ ಬಿಡುಗಡೆಗೆ ಮುಂದಾಗಿದೆ. ಇದು ಮಾಜಿ ಸಿಎಂ ಸಿದ್ದರಾಮಯ್ಯನವರ ತೇಜೋವಧೆ ಮಾಡಲು ನಡೆಸಿರುವ ಪಿತೂರಿ ಎಂದು ಆರೋಪಿಸಿರುವ ಕಾಂಗ್ರೆಸ್ ಪಕ್ಷವು ಪುಸ್ತಕ ಬಿಡುಗಡೆ ಕಾರ್ಯಕ್ರಮ ರದ್ದುಪಡಿಸುವಂತೆ ಒತ್ತಾಯಿಸಿ ಪೊಲೀಸರಿಗೆ ದೂರು ನೀಡಿದೆ.

“ಸಿದ್ದು ನಿಜಕನಸುಗಳು” ಎಂಬ ಪುಸ್ತಕದ ಮೂಲಕ ಹಲವು ಸೂಕ್ಷ್ಮ ವಿಷಯಗಳನ್ನು ಬಹಿರಂಗಪಡಿಸುವ ಜತೆ ಹಲವು ಪ್ರಶ್ನೆಗಳಿಗೆ ಉತ್ತರ ಹುಡುಕಿ ಕೊಡುವ ಪ್ರಯತ್ನವನ್ನು ಶ್ಲಾಘಿಸುತ್ತೇನೆ. ಈ ಪುಸ್ತಕದ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದೇನೆ. ನೀವೂ ಬನ್ನಿ ಎಂದು ಉನ್ನತ ಶಿಕ್ಷಣ ಸಚಿವ ಡಾ.ಅಶ್ವಥ್ ನಾರಾಯಣ್ ಆಹ್ವಾನ ಪತ್ರಿಕೆಯನ್ನು ಟ್ವೀಟ್ ಮಾಡಿದ್ದಾರೆ.

ಆಹ್ವಾನ ಪತ್ರಿಕೆಯ ಪ್ರಕಾರ ಈ ಪುಸ್ತಕವನ್ನು ವಿಕೆಪಿ ಎಂಬ ಅನಾಮಧೇಯ ವ್ಯಕ್ತಿ ಬರೆದಿದ್ದಾರೆ. ಇದು ಮೊದಲ ಸಂಪುಟವಾಗಿದ್ದು, ಇನ್ನು ಹಲವು ಸಂಪುಟಗಳನ್ನು ರಚಿಸುವ ಉದ್ದೇಶ ಬಿಜೆಪಿಗಿದೆ ಎಂಬುದು ತಿಳಿದುಬಂದಿದೆ. ಸೋಮವಾರ ಮಧ್ಯಾಹ್ನ 3 ಗಂಟೆಗೆ ಟೌನ್‌ಹಾಲ್‌ನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಡಾ.ಅಶ್ವಥ್ ನಾರಾಯಣ್ ಪುಸ್ತಕ ಬಿಡುಗಡೆ ಮಾಡಿದರೆ, ವಿಧಾನ ಪರಿಷತ್ ಸದಸ್ಯರಾದ ಛಲವಾದಿ ನಾರಾಯಣಸ್ವಾಮಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಪಠ್ಯಪುಸ್ತಕ ತಿರುಚಿದ ಆರೋಪ ಹೊತ್ತಿರುವ ಬಲಪಂಥೀಯ ಬರಹಗಾರ-ಪತ್ರಕರ್ತರಾದ ರೋಹಿತ್ ಚಕ್ರತೀರ್ಥ, ವೃಶಾಂಕ್ ಭಟ್, ಸಂತೋಷ್ ತಮ್ಮಯ್ಯ  ಮತ್ತು ರಾಕೇಶ್ ಶೆಟ್ಟಿ ಕಾರ್ಯಕ್ರಮದಲ್ಲಿ ಉಪಸ್ಥಿತರಿರುತ್ತಾರೆ ಎನ್ನಲಾಗಿದೆ.

ಈ ಪುಸ್ತಕವು ಸಿದ್ದರಾಮಯ್ಯನವರ ವಿರುದ್ಧ ಇಲ್ಲ ಸಲ್ಲದ ಅಪಪ್ರಚಾರ ಮಾಡಲು ಮತ್ತು ಒಂದು ಸಮುದಾಯವನ್ನು ತುಚ್ಛೀಕರಣ ಮಾಡಲು ರಚಿಸಲಾಗಿದೆ ಎಂದು ಕೆಪಿಸಿಸಿ ಕಾನೂನು ವಿಭಾಗದ ಪ್ರಧಾನ ಕಾರ್ಯದರ್ಶಿ ಸೂರ್ಯ ಮುಕುಂದರಾಜ್ ಎಸ್‌ಜೆ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

“ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ತೇಜೋವಧೆ ಮಾಡುವ ದುರುದ್ದೇಶದ ಪುಸ್ತಕ ಬಿಡುಗಡೆ ಕಾರ್ಯಕ್ರಮ ಆಯೋಜಿಸಲಾಗಿದೆ. ಜ.9ರಂದು ಮಧ್ಯಾಹ್ನ 3 ಗಂಟೆಗೆ ತಮ್ಮ ಠಾಣಾ ವ್ಯಾಪ್ತಿಯಲ್ಲಿ ಬರುವ ಪುರಭವನದಲ್ಲಿ ಈ ಕಾರ್ಯಕ್ರಮ ಇರುವ ಬಗ್ಗೆ ಆಹ್ವಾನ ಪತ್ರಿಕೆ ಹರಿದಾಡುತ್ತಿದೆ ಸಿದ್ದರಾಮಯ್ಯ ಅವರ ವಿರೂಪಗೊಳಿಸಿದ ಭಾವಚಿತ್ರವನ್ನು ಬಳಸಿ ‘ಸಿದ್ದು ನಿಜಕನಸುಗಳು’ ಎಂಬ ಶೀರ್ಷಿಕೆಯಡಿ ಪುಸ್ತಕ ಬಿಡುಗಡೆ ಕಾರ್ಯಕ್ರಮ ಆಯೋಜಿಸಲಾಗಿದೆ. ಪತ್ರಿಕೆಯಲ್ಲಿನ ಪುಸ್ತಕದ ಮುಖಪುಟ ವಿಪಕ್ಷ ನಾಯಕರ ಅವಹೇಳನಕಾರಿ, ಕಪೋಲಕಲ್ಪಿತ, ಪ್ರಚೋದನಕಾರಿ ಲೇಖನಗಳನ್ನು ಒಳಗೊಂಡಿರುವುದು ಸ್ಪಷ್ಟವಾಗಿದೆ. ಇಂತಹ ದ್ವೇ‍ಷಪೂರಿತ ಕಾರ್ಯಕ್ರಮಕ್ಕೆ ಅವಕಾಶ ನೀಡಬಾರದು” ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಅಲ್ಲದೆ ಕಾಂಗ್ರೆಸ್ ಪಕ್ಷವು ಬಿಜೆಪಿಯ ಪುಸ್ತಕ ಬಿಡುಗಡೆಗೆ ತಿರುಗೇಟು ನೀಡಲು ಸಜ್ಜಾಗಿದೆ. ಸಿದ್ದರಾಮಯ್ಯ ಸರ್ಕಾರದ ಅಭಿವೃದ್ದಿ ಯೋಜನೆಗಳ ಸಾಲು ಸಾಲು ಪೋಸ್ಟರ್‌ಗಳನ್ನು ಬಿಡುಗಡೆ ಮಾಡಿದೆ.

ಸಿದ್ದರಾಮಯ್ಯನವರ ಕನಸು ಹಸಿವು ಮುಕ್ತ ಕರ್ನಾಟಕ: ಬಡಜನರು ಯಾರ ಬಳಿಯೂ ಅನ್ನಕ್ಕಾಗಿ ಕೈಚಾಚದೆ ಸ್ವಾಭಿಮಾನದ ಬದುಕನ್ನು ಸಾಗಿಸಬೇಕೆನ್ನುವುದು ಸಿದ್ದರಾಮಯ್ಯ ಸರ್ಕಾರದ ನಿಜಕನಸುಗಳು. ಇದಕ್ಕಾಗಿ ಹಸಿವು ಮುಕ್ತ ಕರ್ನಾಟಕದ ಕನಸಿನೊಂದಿಗೆ ಅನ್ನಭಾಗ್ಯ ಯೋಜನೆಯು ರಾಜ್ಯದಲ್ಲಿ ಅನುಷ್ಠಾನಗೊಳಿಸಿದ ಸಿದ್ದು, ಈ ಯೋಜನೆಯಿಂದ 3.85 ಕೋಟಿ ಬಡ ಜನರ ಪೌಷ್ಠಿಕತೆ ಉತ್ತಮಗೊಂಡಿದೆ.

ಬಡವರಿಗೆ ಉದ್ಯೋಗ: ರಾಜ್ಯದ ಗ್ರಾಮೀಣ ಪ್ರದೇಶದಲ್ಲಿ ಪಶುಸಂಗೋಪನೆ ಬಹುಮುಖ್ಯ ಕಸುಬಾಗಿದ್ದು, ಈ ಕ್ಷೇತ್ರದಲ್ಲಿ ಉದ್ಯೋಗಾಭಿವೃದ್ಧಿಗೆ ವಿಫುಲ ಅವಕಾಶಗಳಿವೆ. ಪ್ರಮುಖ ಯೋಜನೆಗಳಾದ ಕುರಿಗಾಹಿ ಸುರಕ್ಷಾ ಯೋಜನೆ, ಕ್ಷೀರಭಾಗ್ಯ, ಪಶುಭಾಗ್ಯ ಮುಂತಾದವುಗಳ ಮೂಲಕ ಗ್ರಾಮೀಣ ರೈತರಿಗೆ ಸಿದ್ದರಾಮಯ್ಯನವರ ಸರ್ಕಾರವು ಪ್ರೋತ್ಸಾಹ ನೀಡಿದೆ. ಇದರ ಫಲವಾಗಿ ಫಲಾನುಭವಿಗಳ ಸಂಖ್ಯೆಯಲ್ಲಿ ಒಂದು ಲಕ್ಷದಷ್ಟು ಹೆಚ್ಚಳವಾಗಿ 10 ಲಕ್ಷಕ್ಕೆ ಏರಿಕೆಗೊಂಡಿತ್ತು.

ಗುಡಿಸಲು ಮುಕ್ತ ಕರ್ನಾಟಕದ ಕನಸು: ಸಿದ್ದರಾಮಯ್ಯ ಸರ್ಕಾರ ತನ್ನ ಆಡಳಿತಾವಧಿಯಲ್ಲಿ ಗುಡಿಸಲು ಮುಕ್ತ ಕರ್ನಾಟಕವನ್ನಾಗಿಸುವ ನಿಜಕನಸನ್ನು ಹೊಂದಿತ್ತು, ಇದಕ್ಕಾಗಿ ಪ್ರತಿ ವರ್ಷವೂ 3 ಲಕ್ಷ ಮನೆಗಳನ್ನು ನಿರ್ಮಿಸಿದೆ. ಸಾರ್ವಜನಿಕ ವಸತಿಗೆ ಹೆಚ್ಚಿನ ಆದ್ಯತೆ ನೀಡಿರುವ ಕೆಲವೇ ರಾಜ್ಯಗಳಲ್ಲಿ ಕರ್ನಾಟಕವೂ ಒಂದಾಗಿತ್ತು. ಸಿದ್ದರಾಮಯ್ಯನವರ 5 ವರ್ಷದ ಆಡಳಿತದಲ್ಲಿ 15 ಲಕ್ಷಕ್ಕೂ ಹೆಚ್ಚು ಮನೆಗಳನ್ನು ನಿರ್ಮಿಸಿದ್ದು ಸಿದ್ದು ಸರ್ಕಾರ. ಇದಕ್ಕಾಗಿ ಸರ್ಕಾರವು ಹುಟ್ಕ ಸಂಸ್ಥೆಯಿಂದ ವಸತಿ ಯೋಜನೆಗಳ ಅನುಷ್ಠಾನದ ಅತ್ಯುತ್ತಮ ಸಾಧನೆಯ ಪುರಸ್ಕಾರಕ್ಕೂ ಭಾಜನವಾಗಿದೆ.

ಶಿಕ್ಷಣ ಕ್ರಾಂತಿ -ಸಿದ್ದು ಕನಸು: ‘ಪ್ರತಿಯೊಂದು ಮಗು ಶಾಲೆಯಲ್ಲಿ ಮತ್ತು ಉತ್ತಮ ಕಲಿಕೆಯೊಂದಿಗೆ’ ಎನ್ನುವ ಗುರಿಯೊಂದಿಗೆ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣದ ಗುಣಮಟ್ಟದ ಹೆಚ್ಚಳಕ್ಕಾಗಿ ಸರ್ಕಾರ ಅನೇಕ ಸುಧಾರಣಾ ಕ್ರಮಗಳನ್ನು ಕೈಗೊಂಡಿದೆ. ಮಕ್ಕಳಿಗೆ ಉಚಿತ ಪಠ್ಯಪುಸ್ತಕ, ಸಮವಸ್ತ್ರ, ಮಧ್ಯಾಹ್ನದ ಬಿಸಿಯೂಟ ಮತ್ತು ಬಿಸಿಹಾಲನ್ನು ನೀಡಿತ್ತು. 1 ಕೋಟಿಗೂ ಹೆಚ್ಚು ಮಕ್ಕಳು ಪ್ರಯೋಜನ ಪಡೆದುಕೊಂಡಿದ್ದಾರೆ.

ಇದನ್ನೂ ಓದಿ: ಆಧಾರ ರಹಿತ ‘ಟಿಪ್ಪು ನಿಜಕನಸುಗಳು’ ಕೃತಿ ಮಾರಾಟಕ್ಕೆ ಕೋರ್ಟ್ ತಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...