Homeಮುಖಪುಟಸಲಗ ಸಿನಿಮಾದಲ್ಲಿಲ್ಲ ಸಿದ್ದಿ ಬುಡಕಟ್ಟಿನ ಹಾಡು: ಪ್ರೇಕ್ಷಕರಿಗೆ ನಿರಾಸೆ-ಸಿದ್ದಿಗಳಿಗೆ ಬೇಸರ

ಸಲಗ ಸಿನಿಮಾದಲ್ಲಿಲ್ಲ ಸಿದ್ದಿ ಬುಡಕಟ್ಟಿನ ಹಾಡು: ಪ್ರೇಕ್ಷಕರಿಗೆ ನಿರಾಸೆ-ಸಿದ್ದಿಗಳಿಗೆ ಬೇಸರ

- Advertisement -
- Advertisement -

ದುನಿಯಾ ವಿಜಯ್ ನಿರ್ದೇಶನದ ಚೊಚ್ಚಲ ಚಿತ್ರ ಸಲಗದಲ್ಲಿ ಉತ್ತರ ಕನ್ನಡದ ಸಿದ್ದಿ ಬುಡಕಟ್ಟು ಜನಾಂಗದ ಜಾನಪದ ಹಾಡೊಂದನ್ನು ಸೇರಿಸಲಾಗಿದೆ; ಆ ಹಾಡನ್ನು ಯಲ್ಲಾಪುರದ ಸಿದ್ದಿ ಮಹಿಳೆಯರೆ ಹಾಡಿ ಕುಣಿದಿದ್ದಾರೆಂದು ಭರ್ಜರಿ ಪ್ರಚಾರ ಮಾಡಲಾಗಿತ್ತು. ಸ್ವತಃ ನಿರ್ದೇಶಕ-ನಟ ವಿಜಯ್ ಅವರೆ ಈ ಟಿಣಿಂಗ ಮಿಣಿಂಗ ಟಿಶ್ಯಾ ಎಂಬ ಹಾಡಿನ ಕುರಿತು, ಸಿದ್ದಿ ಹಾಡುಗಾರ್ತಿಯರ ಬಗ್ಗೆ ಹೆಮ್ಮೆ-ಖುಷಿಯಿಂದ ಮಾತಾಡಿದ್ದು ದೊಡ್ಡ ಸುದ್ದಿಯಾಗಿತ್ತು. ಹಾಡಂತೂ ಯೂಟ್ಯೂಬ್ ಮತ್ತಿತರೆಡೆ ವೈರಲ್ ಆಗಿ ಹವಾ ಸೃಷ್ಟಿಸಿತ್ತು.

ಈಗ ಸಲಗ ಸಿನೆಮಾ ಬಿಡುಗಡೆಯಾಗಿದ್ದು ಸ್ಯಾಂಡಲ್‌ವುಡ್‌ನಲ್ಲಿ ಸದ್ದು ಮಾಡುತ್ತಿದೆ. ಆದರೆ ಸಿನಿಮಾದ ಯಾವ ಭಾಗದಲ್ಲೂ ಮಂಚಿಕೇರಿ ಸಾವ್ಕಾರ್ ಅಂದರ್ ಬುಲಾಯಾ… ದರ್ವಾಜಾ ಲಗಾಯಾಟಿಣಿಂಗ ಮಿಣಿಂಗ ಟಿಶ್ಯಾ.. ಹಾಡಿಲ್ಲವೇ ಇಲ್ಲ. ಈ ಹಾಡು ಸಲಗ ಸಿನಿಮಾದ್ದು ಎಂಬುದಕ್ಕಿಂತ ಯಲ್ಲಾಪುರದ ಮಂಚಿಕೇರಿ ಬಳಿಯ ಸಿದ್ದಿಗಳ ಕೇರಿಯ ಪ್ರತಿಭಾನ್ವಿತ ಗಾಯಕಿ ಗಿಜಾ ಸಿದ್ದಿ ತಂಡ ಹಾಡಿ ನೃತ್ಯ ಮಾಡಿದೆ ಎಂಬುದೆ ಹೆಚ್ಚು ಪ್ರಚಾರಕ್ಕೆ ಕಾಣವಾಗಿತ್ತು.

ತಮ್ಮವರು ಹಾಡಿದ-ನಟಿಸಿದ ಚಿತ್ರವೆಂಬ ಆಕರ್ಷಣೆಯಿಂದ ಯಲ್ಲಾಪುರ ಸೀಮೆಯ ಸಿದ್ದಿಗಳು ಮತ್ತು ಉತ್ತರ ಕನ್ನಡದ ಸಿನಿಮಾಸಕ್ತರು ಶಿರಸಿಯ ನಟರಾಜ ಥೇಟರಿಗೆ ಹೋಗಿದ್ದಾರೆ. ಆದರೆ ಸಿನಿಮಾದಲ್ಲಿ ತಾವು ನಿರೀಕ್ಷಿಸಿದ ಹಾಡಿಲ್ಲದೆ ನಿರಾಸೆ ಮತ್ತು ಬೇಸರದಿಂದ ಹೊರಬಂದಿದ್ದಾರೆ. ಅಲ್ಲಲ್ಲಿ ಸಣ್ಣ ಸಣ್ಣ ಹಾಡಿನ ತುಣುಕು ಇದೆ ಹೊರತು ಪೂರ್ತಿ ಹಾಡು ಇಲ್ಲ ಎಂಬುದು ಅವರ ಬೇಸರಕ್ಕೆ ಕಾರಣ. ಸಲಗ ಸಿನಿಮಾ ತಂಡದ ತಾತ್ಸಾರದಿಂದ ತಮಗೆ ಅವಮಾನ ಮಾಡಿದಂತಾಗಿದೆಯೆಂದು ಸಿದ್ದಿ ಯುವಕರು ಅಸಮಾಧಾನ ವ್ಯಕ್ತ ಪಡಿಸಿದ್ದಾರೆ. ವಿಶಿಷ್ಟ ಸಂಸ್ಕೃತಿಯ ಸಿದ್ದಿ ಸಮುದಾಯದ ಪ್ರತಿಭೆ, ಮುಗ್ದತೆ ಸಿನಿಮಾ ಪ್ರಪಂಚ ಪ್ರಚಾರದ ಸರಕಾಗಿ ಬಳಸಿಕೊಂಡಿದೆಯೆಂಬ ಮಾತೀಗ ಕೇಳಿಬರುತ್ತಿದೆ.

ಉತ್ತರ ಕನ್ನಡದಲ್ಲಿರುವ ಆಫ್ರಿಕಾದ ನಿಗ್ರೊ ಮೂಲದ ಸಿದ್ದಿ ಬುಡಕಟ್ಟು ಜನಾಂಗಕ್ಕೆ ಅದರದೇ ಆದ ಸಂಸ್ಕ್ರತಿ, ಸಾಹಿತ್ಯ, ಕಲೆ, ಸಂಗೀತ, ಹಾಡು ಆಚರಣೆಗಳಿವೆ. ಮದುವೆ, ಹಬ್ಬ, ಉತ್ಸವ ಮುಂತಾದ ವಿಶೇಷ ಸಂದರ್ಭದಲ್ಲಿ ಜಾನಪದ ಶೈಲಿಯ ಹಾಡು ಹಾಡಿ, ನೃತ್ಯ ಮಾಡಿ ಸಂಭ್ರಮಿಸುತ್ತಾರೆ. ಸಿದ್ದಿಗಳ ಡಮಾಮಿ ಕುಣಿತಕ್ಕಂತೂ ಚೆತೋಹಾರಿ ಸೊಬಗಿದೆ.

ಕಾಡಿನ ವಾಸಿಗಳಾದ ಸಿದ್ದಿಗಳ ವಿಶಿಷ್ಟ ಹಾಡುಗಳೀಗ ಸಾಮಾಜಿಕ ಜಾಲತಾಣಕ್ಕೂ ವ್ಯಾಪಿಸಿ ಮೆಚ್ಚಿಗೆ ಗಳಿಸುತ್ತಿದೆ. ಈ ಬೆನ್ನಲ್ಲೆ ಸಿದ್ದಿ ಹಾಡೊಂದನ್ನು ಖ್ಯಾತ ನಟ ದುನಿಯಾ ವಿಜಯ್ ನಟನೆಯ ಸಲಗ ಸಿನಿಮಾಕ್ಕೆ ತೆಗೆದುಕೊಳ್ಳಲಾಗಿದೆ ಎನ್ನಲಾಗಿತ್ತು.

ಬಿಡುಗಡೆಗೆ ಸಿದ್ದವಾಗಿರುವ ಈ ಚಿತ್ರದ ಸಿದ್ದಿ ಹಾಡನ್ನು ಯಲ್ಲಾಪುರ ತಾಲೂಕಿನ ಮಂಚಿಕೇರಿಯ ಗೀತಾ ಸಿದ್ದಿ ಮತ್ತು ಗಿರಿಜಾ ಸಿದ್ದಿ ತಂಡ ತುಂಬಾ ಆಕರ್ಷಕವಾಗಿ ಹಾಡಿದೆ. ಜೊತೆಗೆ ಅಭಿನಯವನ್ನೂ ಮಾಡಿದ್ದಾರೆ. ಎ2 ಮ್ಯೂಸಿಕ್ ಕಂಪನಿ ಸಿದ್ದಿ ಕಲಾವಿದರು ಹಾಡಿರುವ ಹಾಡನ್ನು ಯೂ ಟ್ಯೂಬ್‌ನಲ್ಲಿ ಬಿಡುಗಡೆ ಮಾಡಿದೆ. ಈ ಹಾಡನ್ನು ಈಗಾಗಲೇ 8 ಲಕ್ಷ ಜನರು ನೋಡಿದ್ದಾರೆ. ಸಿದ್ದಿಗಳ ಕಲೆಗೆ ಸಿಕ್ಕಿರುವ ಈ ಮನ್ನಣೆ ದಾಖಲೆಯೇ ಸರಿ.


ಇದನ್ನೂ ಓದಿ: ‘ಸಲಗ’ ಸಿನಿಮಾಕ್ಕೆ ಸಿದ್ದಿ ಜಾನಪದ ಹಾಡು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...