Homeಮುಖಪುಟಸಲಗ ಸಿನಿಮಾದಲ್ಲಿಲ್ಲ ಸಿದ್ದಿ ಬುಡಕಟ್ಟಿನ ಹಾಡು: ಪ್ರೇಕ್ಷಕರಿಗೆ ನಿರಾಸೆ-ಸಿದ್ದಿಗಳಿಗೆ ಬೇಸರ

ಸಲಗ ಸಿನಿಮಾದಲ್ಲಿಲ್ಲ ಸಿದ್ದಿ ಬುಡಕಟ್ಟಿನ ಹಾಡು: ಪ್ರೇಕ್ಷಕರಿಗೆ ನಿರಾಸೆ-ಸಿದ್ದಿಗಳಿಗೆ ಬೇಸರ

- Advertisement -
- Advertisement -

ದುನಿಯಾ ವಿಜಯ್ ನಿರ್ದೇಶನದ ಚೊಚ್ಚಲ ಚಿತ್ರ ಸಲಗದಲ್ಲಿ ಉತ್ತರ ಕನ್ನಡದ ಸಿದ್ದಿ ಬುಡಕಟ್ಟು ಜನಾಂಗದ ಜಾನಪದ ಹಾಡೊಂದನ್ನು ಸೇರಿಸಲಾಗಿದೆ; ಆ ಹಾಡನ್ನು ಯಲ್ಲಾಪುರದ ಸಿದ್ದಿ ಮಹಿಳೆಯರೆ ಹಾಡಿ ಕುಣಿದಿದ್ದಾರೆಂದು ಭರ್ಜರಿ ಪ್ರಚಾರ ಮಾಡಲಾಗಿತ್ತು. ಸ್ವತಃ ನಿರ್ದೇಶಕ-ನಟ ವಿಜಯ್ ಅವರೆ ಈ ಟಿಣಿಂಗ ಮಿಣಿಂಗ ಟಿಶ್ಯಾ ಎಂಬ ಹಾಡಿನ ಕುರಿತು, ಸಿದ್ದಿ ಹಾಡುಗಾರ್ತಿಯರ ಬಗ್ಗೆ ಹೆಮ್ಮೆ-ಖುಷಿಯಿಂದ ಮಾತಾಡಿದ್ದು ದೊಡ್ಡ ಸುದ್ದಿಯಾಗಿತ್ತು. ಹಾಡಂತೂ ಯೂಟ್ಯೂಬ್ ಮತ್ತಿತರೆಡೆ ವೈರಲ್ ಆಗಿ ಹವಾ ಸೃಷ್ಟಿಸಿತ್ತು.

ಈಗ ಸಲಗ ಸಿನೆಮಾ ಬಿಡುಗಡೆಯಾಗಿದ್ದು ಸ್ಯಾಂಡಲ್‌ವುಡ್‌ನಲ್ಲಿ ಸದ್ದು ಮಾಡುತ್ತಿದೆ. ಆದರೆ ಸಿನಿಮಾದ ಯಾವ ಭಾಗದಲ್ಲೂ ಮಂಚಿಕೇರಿ ಸಾವ್ಕಾರ್ ಅಂದರ್ ಬುಲಾಯಾ… ದರ್ವಾಜಾ ಲಗಾಯಾಟಿಣಿಂಗ ಮಿಣಿಂಗ ಟಿಶ್ಯಾ.. ಹಾಡಿಲ್ಲವೇ ಇಲ್ಲ. ಈ ಹಾಡು ಸಲಗ ಸಿನಿಮಾದ್ದು ಎಂಬುದಕ್ಕಿಂತ ಯಲ್ಲಾಪುರದ ಮಂಚಿಕೇರಿ ಬಳಿಯ ಸಿದ್ದಿಗಳ ಕೇರಿಯ ಪ್ರತಿಭಾನ್ವಿತ ಗಾಯಕಿ ಗಿಜಾ ಸಿದ್ದಿ ತಂಡ ಹಾಡಿ ನೃತ್ಯ ಮಾಡಿದೆ ಎಂಬುದೆ ಹೆಚ್ಚು ಪ್ರಚಾರಕ್ಕೆ ಕಾಣವಾಗಿತ್ತು.

ತಮ್ಮವರು ಹಾಡಿದ-ನಟಿಸಿದ ಚಿತ್ರವೆಂಬ ಆಕರ್ಷಣೆಯಿಂದ ಯಲ್ಲಾಪುರ ಸೀಮೆಯ ಸಿದ್ದಿಗಳು ಮತ್ತು ಉತ್ತರ ಕನ್ನಡದ ಸಿನಿಮಾಸಕ್ತರು ಶಿರಸಿಯ ನಟರಾಜ ಥೇಟರಿಗೆ ಹೋಗಿದ್ದಾರೆ. ಆದರೆ ಸಿನಿಮಾದಲ್ಲಿ ತಾವು ನಿರೀಕ್ಷಿಸಿದ ಹಾಡಿಲ್ಲದೆ ನಿರಾಸೆ ಮತ್ತು ಬೇಸರದಿಂದ ಹೊರಬಂದಿದ್ದಾರೆ. ಅಲ್ಲಲ್ಲಿ ಸಣ್ಣ ಸಣ್ಣ ಹಾಡಿನ ತುಣುಕು ಇದೆ ಹೊರತು ಪೂರ್ತಿ ಹಾಡು ಇಲ್ಲ ಎಂಬುದು ಅವರ ಬೇಸರಕ್ಕೆ ಕಾರಣ. ಸಲಗ ಸಿನಿಮಾ ತಂಡದ ತಾತ್ಸಾರದಿಂದ ತಮಗೆ ಅವಮಾನ ಮಾಡಿದಂತಾಗಿದೆಯೆಂದು ಸಿದ್ದಿ ಯುವಕರು ಅಸಮಾಧಾನ ವ್ಯಕ್ತ ಪಡಿಸಿದ್ದಾರೆ. ವಿಶಿಷ್ಟ ಸಂಸ್ಕೃತಿಯ ಸಿದ್ದಿ ಸಮುದಾಯದ ಪ್ರತಿಭೆ, ಮುಗ್ದತೆ ಸಿನಿಮಾ ಪ್ರಪಂಚ ಪ್ರಚಾರದ ಸರಕಾಗಿ ಬಳಸಿಕೊಂಡಿದೆಯೆಂಬ ಮಾತೀಗ ಕೇಳಿಬರುತ್ತಿದೆ.

ಉತ್ತರ ಕನ್ನಡದಲ್ಲಿರುವ ಆಫ್ರಿಕಾದ ನಿಗ್ರೊ ಮೂಲದ ಸಿದ್ದಿ ಬುಡಕಟ್ಟು ಜನಾಂಗಕ್ಕೆ ಅದರದೇ ಆದ ಸಂಸ್ಕ್ರತಿ, ಸಾಹಿತ್ಯ, ಕಲೆ, ಸಂಗೀತ, ಹಾಡು ಆಚರಣೆಗಳಿವೆ. ಮದುವೆ, ಹಬ್ಬ, ಉತ್ಸವ ಮುಂತಾದ ವಿಶೇಷ ಸಂದರ್ಭದಲ್ಲಿ ಜಾನಪದ ಶೈಲಿಯ ಹಾಡು ಹಾಡಿ, ನೃತ್ಯ ಮಾಡಿ ಸಂಭ್ರಮಿಸುತ್ತಾರೆ. ಸಿದ್ದಿಗಳ ಡಮಾಮಿ ಕುಣಿತಕ್ಕಂತೂ ಚೆತೋಹಾರಿ ಸೊಬಗಿದೆ.

ಕಾಡಿನ ವಾಸಿಗಳಾದ ಸಿದ್ದಿಗಳ ವಿಶಿಷ್ಟ ಹಾಡುಗಳೀಗ ಸಾಮಾಜಿಕ ಜಾಲತಾಣಕ್ಕೂ ವ್ಯಾಪಿಸಿ ಮೆಚ್ಚಿಗೆ ಗಳಿಸುತ್ತಿದೆ. ಈ ಬೆನ್ನಲ್ಲೆ ಸಿದ್ದಿ ಹಾಡೊಂದನ್ನು ಖ್ಯಾತ ನಟ ದುನಿಯಾ ವಿಜಯ್ ನಟನೆಯ ಸಲಗ ಸಿನಿಮಾಕ್ಕೆ ತೆಗೆದುಕೊಳ್ಳಲಾಗಿದೆ ಎನ್ನಲಾಗಿತ್ತು.

ಬಿಡುಗಡೆಗೆ ಸಿದ್ದವಾಗಿರುವ ಈ ಚಿತ್ರದ ಸಿದ್ದಿ ಹಾಡನ್ನು ಯಲ್ಲಾಪುರ ತಾಲೂಕಿನ ಮಂಚಿಕೇರಿಯ ಗೀತಾ ಸಿದ್ದಿ ಮತ್ತು ಗಿರಿಜಾ ಸಿದ್ದಿ ತಂಡ ತುಂಬಾ ಆಕರ್ಷಕವಾಗಿ ಹಾಡಿದೆ. ಜೊತೆಗೆ ಅಭಿನಯವನ್ನೂ ಮಾಡಿದ್ದಾರೆ. ಎ2 ಮ್ಯೂಸಿಕ್ ಕಂಪನಿ ಸಿದ್ದಿ ಕಲಾವಿದರು ಹಾಡಿರುವ ಹಾಡನ್ನು ಯೂ ಟ್ಯೂಬ್‌ನಲ್ಲಿ ಬಿಡುಗಡೆ ಮಾಡಿದೆ. ಈ ಹಾಡನ್ನು ಈಗಾಗಲೇ 8 ಲಕ್ಷ ಜನರು ನೋಡಿದ್ದಾರೆ. ಸಿದ್ದಿಗಳ ಕಲೆಗೆ ಸಿಕ್ಕಿರುವ ಈ ಮನ್ನಣೆ ದಾಖಲೆಯೇ ಸರಿ.


ಇದನ್ನೂ ಓದಿ: ‘ಸಲಗ’ ಸಿನಿಮಾಕ್ಕೆ ಸಿದ್ದಿ ಜಾನಪದ ಹಾಡು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...