Homeಮುಖಪುಟಸಲಗ ಸಿನಿಮಾದಲ್ಲಿಲ್ಲ ಸಿದ್ದಿ ಬುಡಕಟ್ಟಿನ ಹಾಡು: ಪ್ರೇಕ್ಷಕರಿಗೆ ನಿರಾಸೆ-ಸಿದ್ದಿಗಳಿಗೆ ಬೇಸರ

ಸಲಗ ಸಿನಿಮಾದಲ್ಲಿಲ್ಲ ಸಿದ್ದಿ ಬುಡಕಟ್ಟಿನ ಹಾಡು: ಪ್ರೇಕ್ಷಕರಿಗೆ ನಿರಾಸೆ-ಸಿದ್ದಿಗಳಿಗೆ ಬೇಸರ

- Advertisement -
- Advertisement -

ದುನಿಯಾ ವಿಜಯ್ ನಿರ್ದೇಶನದ ಚೊಚ್ಚಲ ಚಿತ್ರ ಸಲಗದಲ್ಲಿ ಉತ್ತರ ಕನ್ನಡದ ಸಿದ್ದಿ ಬುಡಕಟ್ಟು ಜನಾಂಗದ ಜಾನಪದ ಹಾಡೊಂದನ್ನು ಸೇರಿಸಲಾಗಿದೆ; ಆ ಹಾಡನ್ನು ಯಲ್ಲಾಪುರದ ಸಿದ್ದಿ ಮಹಿಳೆಯರೆ ಹಾಡಿ ಕುಣಿದಿದ್ದಾರೆಂದು ಭರ್ಜರಿ ಪ್ರಚಾರ ಮಾಡಲಾಗಿತ್ತು. ಸ್ವತಃ ನಿರ್ದೇಶಕ-ನಟ ವಿಜಯ್ ಅವರೆ ಈ ಟಿಣಿಂಗ ಮಿಣಿಂಗ ಟಿಶ್ಯಾ ಎಂಬ ಹಾಡಿನ ಕುರಿತು, ಸಿದ್ದಿ ಹಾಡುಗಾರ್ತಿಯರ ಬಗ್ಗೆ ಹೆಮ್ಮೆ-ಖುಷಿಯಿಂದ ಮಾತಾಡಿದ್ದು ದೊಡ್ಡ ಸುದ್ದಿಯಾಗಿತ್ತು. ಹಾಡಂತೂ ಯೂಟ್ಯೂಬ್ ಮತ್ತಿತರೆಡೆ ವೈರಲ್ ಆಗಿ ಹವಾ ಸೃಷ್ಟಿಸಿತ್ತು.

ಈಗ ಸಲಗ ಸಿನೆಮಾ ಬಿಡುಗಡೆಯಾಗಿದ್ದು ಸ್ಯಾಂಡಲ್‌ವುಡ್‌ನಲ್ಲಿ ಸದ್ದು ಮಾಡುತ್ತಿದೆ. ಆದರೆ ಸಿನಿಮಾದ ಯಾವ ಭಾಗದಲ್ಲೂ ಮಂಚಿಕೇರಿ ಸಾವ್ಕಾರ್ ಅಂದರ್ ಬುಲಾಯಾ… ದರ್ವಾಜಾ ಲಗಾಯಾಟಿಣಿಂಗ ಮಿಣಿಂಗ ಟಿಶ್ಯಾ.. ಹಾಡಿಲ್ಲವೇ ಇಲ್ಲ. ಈ ಹಾಡು ಸಲಗ ಸಿನಿಮಾದ್ದು ಎಂಬುದಕ್ಕಿಂತ ಯಲ್ಲಾಪುರದ ಮಂಚಿಕೇರಿ ಬಳಿಯ ಸಿದ್ದಿಗಳ ಕೇರಿಯ ಪ್ರತಿಭಾನ್ವಿತ ಗಾಯಕಿ ಗಿಜಾ ಸಿದ್ದಿ ತಂಡ ಹಾಡಿ ನೃತ್ಯ ಮಾಡಿದೆ ಎಂಬುದೆ ಹೆಚ್ಚು ಪ್ರಚಾರಕ್ಕೆ ಕಾಣವಾಗಿತ್ತು.

ತಮ್ಮವರು ಹಾಡಿದ-ನಟಿಸಿದ ಚಿತ್ರವೆಂಬ ಆಕರ್ಷಣೆಯಿಂದ ಯಲ್ಲಾಪುರ ಸೀಮೆಯ ಸಿದ್ದಿಗಳು ಮತ್ತು ಉತ್ತರ ಕನ್ನಡದ ಸಿನಿಮಾಸಕ್ತರು ಶಿರಸಿಯ ನಟರಾಜ ಥೇಟರಿಗೆ ಹೋಗಿದ್ದಾರೆ. ಆದರೆ ಸಿನಿಮಾದಲ್ಲಿ ತಾವು ನಿರೀಕ್ಷಿಸಿದ ಹಾಡಿಲ್ಲದೆ ನಿರಾಸೆ ಮತ್ತು ಬೇಸರದಿಂದ ಹೊರಬಂದಿದ್ದಾರೆ. ಅಲ್ಲಲ್ಲಿ ಸಣ್ಣ ಸಣ್ಣ ಹಾಡಿನ ತುಣುಕು ಇದೆ ಹೊರತು ಪೂರ್ತಿ ಹಾಡು ಇಲ್ಲ ಎಂಬುದು ಅವರ ಬೇಸರಕ್ಕೆ ಕಾರಣ. ಸಲಗ ಸಿನಿಮಾ ತಂಡದ ತಾತ್ಸಾರದಿಂದ ತಮಗೆ ಅವಮಾನ ಮಾಡಿದಂತಾಗಿದೆಯೆಂದು ಸಿದ್ದಿ ಯುವಕರು ಅಸಮಾಧಾನ ವ್ಯಕ್ತ ಪಡಿಸಿದ್ದಾರೆ. ವಿಶಿಷ್ಟ ಸಂಸ್ಕೃತಿಯ ಸಿದ್ದಿ ಸಮುದಾಯದ ಪ್ರತಿಭೆ, ಮುಗ್ದತೆ ಸಿನಿಮಾ ಪ್ರಪಂಚ ಪ್ರಚಾರದ ಸರಕಾಗಿ ಬಳಸಿಕೊಂಡಿದೆಯೆಂಬ ಮಾತೀಗ ಕೇಳಿಬರುತ್ತಿದೆ.

ಉತ್ತರ ಕನ್ನಡದಲ್ಲಿರುವ ಆಫ್ರಿಕಾದ ನಿಗ್ರೊ ಮೂಲದ ಸಿದ್ದಿ ಬುಡಕಟ್ಟು ಜನಾಂಗಕ್ಕೆ ಅದರದೇ ಆದ ಸಂಸ್ಕ್ರತಿ, ಸಾಹಿತ್ಯ, ಕಲೆ, ಸಂಗೀತ, ಹಾಡು ಆಚರಣೆಗಳಿವೆ. ಮದುವೆ, ಹಬ್ಬ, ಉತ್ಸವ ಮುಂತಾದ ವಿಶೇಷ ಸಂದರ್ಭದಲ್ಲಿ ಜಾನಪದ ಶೈಲಿಯ ಹಾಡು ಹಾಡಿ, ನೃತ್ಯ ಮಾಡಿ ಸಂಭ್ರಮಿಸುತ್ತಾರೆ. ಸಿದ್ದಿಗಳ ಡಮಾಮಿ ಕುಣಿತಕ್ಕಂತೂ ಚೆತೋಹಾರಿ ಸೊಬಗಿದೆ.

ಕಾಡಿನ ವಾಸಿಗಳಾದ ಸಿದ್ದಿಗಳ ವಿಶಿಷ್ಟ ಹಾಡುಗಳೀಗ ಸಾಮಾಜಿಕ ಜಾಲತಾಣಕ್ಕೂ ವ್ಯಾಪಿಸಿ ಮೆಚ್ಚಿಗೆ ಗಳಿಸುತ್ತಿದೆ. ಈ ಬೆನ್ನಲ್ಲೆ ಸಿದ್ದಿ ಹಾಡೊಂದನ್ನು ಖ್ಯಾತ ನಟ ದುನಿಯಾ ವಿಜಯ್ ನಟನೆಯ ಸಲಗ ಸಿನಿಮಾಕ್ಕೆ ತೆಗೆದುಕೊಳ್ಳಲಾಗಿದೆ ಎನ್ನಲಾಗಿತ್ತು.

ಬಿಡುಗಡೆಗೆ ಸಿದ್ದವಾಗಿರುವ ಈ ಚಿತ್ರದ ಸಿದ್ದಿ ಹಾಡನ್ನು ಯಲ್ಲಾಪುರ ತಾಲೂಕಿನ ಮಂಚಿಕೇರಿಯ ಗೀತಾ ಸಿದ್ದಿ ಮತ್ತು ಗಿರಿಜಾ ಸಿದ್ದಿ ತಂಡ ತುಂಬಾ ಆಕರ್ಷಕವಾಗಿ ಹಾಡಿದೆ. ಜೊತೆಗೆ ಅಭಿನಯವನ್ನೂ ಮಾಡಿದ್ದಾರೆ. ಎ2 ಮ್ಯೂಸಿಕ್ ಕಂಪನಿ ಸಿದ್ದಿ ಕಲಾವಿದರು ಹಾಡಿರುವ ಹಾಡನ್ನು ಯೂ ಟ್ಯೂಬ್‌ನಲ್ಲಿ ಬಿಡುಗಡೆ ಮಾಡಿದೆ. ಈ ಹಾಡನ್ನು ಈಗಾಗಲೇ 8 ಲಕ್ಷ ಜನರು ನೋಡಿದ್ದಾರೆ. ಸಿದ್ದಿಗಳ ಕಲೆಗೆ ಸಿಕ್ಕಿರುವ ಈ ಮನ್ನಣೆ ದಾಖಲೆಯೇ ಸರಿ.


ಇದನ್ನೂ ಓದಿ: ‘ಸಲಗ’ ಸಿನಿಮಾಕ್ಕೆ ಸಿದ್ದಿ ಜಾನಪದ ಹಾಡು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...