Homeಮುಖಪುಟಸಲಗ ಸಿನಿಮಾದಲ್ಲಿಲ್ಲ ಸಿದ್ದಿ ಬುಡಕಟ್ಟಿನ ಹಾಡು: ಪ್ರೇಕ್ಷಕರಿಗೆ ನಿರಾಸೆ-ಸಿದ್ದಿಗಳಿಗೆ ಬೇಸರ

ಸಲಗ ಸಿನಿಮಾದಲ್ಲಿಲ್ಲ ಸಿದ್ದಿ ಬುಡಕಟ್ಟಿನ ಹಾಡು: ಪ್ರೇಕ್ಷಕರಿಗೆ ನಿರಾಸೆ-ಸಿದ್ದಿಗಳಿಗೆ ಬೇಸರ

- Advertisement -
- Advertisement -

ದುನಿಯಾ ವಿಜಯ್ ನಿರ್ದೇಶನದ ಚೊಚ್ಚಲ ಚಿತ್ರ ಸಲಗದಲ್ಲಿ ಉತ್ತರ ಕನ್ನಡದ ಸಿದ್ದಿ ಬುಡಕಟ್ಟು ಜನಾಂಗದ ಜಾನಪದ ಹಾಡೊಂದನ್ನು ಸೇರಿಸಲಾಗಿದೆ; ಆ ಹಾಡನ್ನು ಯಲ್ಲಾಪುರದ ಸಿದ್ದಿ ಮಹಿಳೆಯರೆ ಹಾಡಿ ಕುಣಿದಿದ್ದಾರೆಂದು ಭರ್ಜರಿ ಪ್ರಚಾರ ಮಾಡಲಾಗಿತ್ತು. ಸ್ವತಃ ನಿರ್ದೇಶಕ-ನಟ ವಿಜಯ್ ಅವರೆ ಈ ಟಿಣಿಂಗ ಮಿಣಿಂಗ ಟಿಶ್ಯಾ ಎಂಬ ಹಾಡಿನ ಕುರಿತು, ಸಿದ್ದಿ ಹಾಡುಗಾರ್ತಿಯರ ಬಗ್ಗೆ ಹೆಮ್ಮೆ-ಖುಷಿಯಿಂದ ಮಾತಾಡಿದ್ದು ದೊಡ್ಡ ಸುದ್ದಿಯಾಗಿತ್ತು. ಹಾಡಂತೂ ಯೂಟ್ಯೂಬ್ ಮತ್ತಿತರೆಡೆ ವೈರಲ್ ಆಗಿ ಹವಾ ಸೃಷ್ಟಿಸಿತ್ತು.

ಈಗ ಸಲಗ ಸಿನೆಮಾ ಬಿಡುಗಡೆಯಾಗಿದ್ದು ಸ್ಯಾಂಡಲ್‌ವುಡ್‌ನಲ್ಲಿ ಸದ್ದು ಮಾಡುತ್ತಿದೆ. ಆದರೆ ಸಿನಿಮಾದ ಯಾವ ಭಾಗದಲ್ಲೂ ಮಂಚಿಕೇರಿ ಸಾವ್ಕಾರ್ ಅಂದರ್ ಬುಲಾಯಾ… ದರ್ವಾಜಾ ಲಗಾಯಾಟಿಣಿಂಗ ಮಿಣಿಂಗ ಟಿಶ್ಯಾ.. ಹಾಡಿಲ್ಲವೇ ಇಲ್ಲ. ಈ ಹಾಡು ಸಲಗ ಸಿನಿಮಾದ್ದು ಎಂಬುದಕ್ಕಿಂತ ಯಲ್ಲಾಪುರದ ಮಂಚಿಕೇರಿ ಬಳಿಯ ಸಿದ್ದಿಗಳ ಕೇರಿಯ ಪ್ರತಿಭಾನ್ವಿತ ಗಾಯಕಿ ಗಿಜಾ ಸಿದ್ದಿ ತಂಡ ಹಾಡಿ ನೃತ್ಯ ಮಾಡಿದೆ ಎಂಬುದೆ ಹೆಚ್ಚು ಪ್ರಚಾರಕ್ಕೆ ಕಾಣವಾಗಿತ್ತು.

ತಮ್ಮವರು ಹಾಡಿದ-ನಟಿಸಿದ ಚಿತ್ರವೆಂಬ ಆಕರ್ಷಣೆಯಿಂದ ಯಲ್ಲಾಪುರ ಸೀಮೆಯ ಸಿದ್ದಿಗಳು ಮತ್ತು ಉತ್ತರ ಕನ್ನಡದ ಸಿನಿಮಾಸಕ್ತರು ಶಿರಸಿಯ ನಟರಾಜ ಥೇಟರಿಗೆ ಹೋಗಿದ್ದಾರೆ. ಆದರೆ ಸಿನಿಮಾದಲ್ಲಿ ತಾವು ನಿರೀಕ್ಷಿಸಿದ ಹಾಡಿಲ್ಲದೆ ನಿರಾಸೆ ಮತ್ತು ಬೇಸರದಿಂದ ಹೊರಬಂದಿದ್ದಾರೆ. ಅಲ್ಲಲ್ಲಿ ಸಣ್ಣ ಸಣ್ಣ ಹಾಡಿನ ತುಣುಕು ಇದೆ ಹೊರತು ಪೂರ್ತಿ ಹಾಡು ಇಲ್ಲ ಎಂಬುದು ಅವರ ಬೇಸರಕ್ಕೆ ಕಾರಣ. ಸಲಗ ಸಿನಿಮಾ ತಂಡದ ತಾತ್ಸಾರದಿಂದ ತಮಗೆ ಅವಮಾನ ಮಾಡಿದಂತಾಗಿದೆಯೆಂದು ಸಿದ್ದಿ ಯುವಕರು ಅಸಮಾಧಾನ ವ್ಯಕ್ತ ಪಡಿಸಿದ್ದಾರೆ. ವಿಶಿಷ್ಟ ಸಂಸ್ಕೃತಿಯ ಸಿದ್ದಿ ಸಮುದಾಯದ ಪ್ರತಿಭೆ, ಮುಗ್ದತೆ ಸಿನಿಮಾ ಪ್ರಪಂಚ ಪ್ರಚಾರದ ಸರಕಾಗಿ ಬಳಸಿಕೊಂಡಿದೆಯೆಂಬ ಮಾತೀಗ ಕೇಳಿಬರುತ್ತಿದೆ.

ಉತ್ತರ ಕನ್ನಡದಲ್ಲಿರುವ ಆಫ್ರಿಕಾದ ನಿಗ್ರೊ ಮೂಲದ ಸಿದ್ದಿ ಬುಡಕಟ್ಟು ಜನಾಂಗಕ್ಕೆ ಅದರದೇ ಆದ ಸಂಸ್ಕ್ರತಿ, ಸಾಹಿತ್ಯ, ಕಲೆ, ಸಂಗೀತ, ಹಾಡು ಆಚರಣೆಗಳಿವೆ. ಮದುವೆ, ಹಬ್ಬ, ಉತ್ಸವ ಮುಂತಾದ ವಿಶೇಷ ಸಂದರ್ಭದಲ್ಲಿ ಜಾನಪದ ಶೈಲಿಯ ಹಾಡು ಹಾಡಿ, ನೃತ್ಯ ಮಾಡಿ ಸಂಭ್ರಮಿಸುತ್ತಾರೆ. ಸಿದ್ದಿಗಳ ಡಮಾಮಿ ಕುಣಿತಕ್ಕಂತೂ ಚೆತೋಹಾರಿ ಸೊಬಗಿದೆ.

ಕಾಡಿನ ವಾಸಿಗಳಾದ ಸಿದ್ದಿಗಳ ವಿಶಿಷ್ಟ ಹಾಡುಗಳೀಗ ಸಾಮಾಜಿಕ ಜಾಲತಾಣಕ್ಕೂ ವ್ಯಾಪಿಸಿ ಮೆಚ್ಚಿಗೆ ಗಳಿಸುತ್ತಿದೆ. ಈ ಬೆನ್ನಲ್ಲೆ ಸಿದ್ದಿ ಹಾಡೊಂದನ್ನು ಖ್ಯಾತ ನಟ ದುನಿಯಾ ವಿಜಯ್ ನಟನೆಯ ಸಲಗ ಸಿನಿಮಾಕ್ಕೆ ತೆಗೆದುಕೊಳ್ಳಲಾಗಿದೆ ಎನ್ನಲಾಗಿತ್ತು.

ಬಿಡುಗಡೆಗೆ ಸಿದ್ದವಾಗಿರುವ ಈ ಚಿತ್ರದ ಸಿದ್ದಿ ಹಾಡನ್ನು ಯಲ್ಲಾಪುರ ತಾಲೂಕಿನ ಮಂಚಿಕೇರಿಯ ಗೀತಾ ಸಿದ್ದಿ ಮತ್ತು ಗಿರಿಜಾ ಸಿದ್ದಿ ತಂಡ ತುಂಬಾ ಆಕರ್ಷಕವಾಗಿ ಹಾಡಿದೆ. ಜೊತೆಗೆ ಅಭಿನಯವನ್ನೂ ಮಾಡಿದ್ದಾರೆ. ಎ2 ಮ್ಯೂಸಿಕ್ ಕಂಪನಿ ಸಿದ್ದಿ ಕಲಾವಿದರು ಹಾಡಿರುವ ಹಾಡನ್ನು ಯೂ ಟ್ಯೂಬ್‌ನಲ್ಲಿ ಬಿಡುಗಡೆ ಮಾಡಿದೆ. ಈ ಹಾಡನ್ನು ಈಗಾಗಲೇ 8 ಲಕ್ಷ ಜನರು ನೋಡಿದ್ದಾರೆ. ಸಿದ್ದಿಗಳ ಕಲೆಗೆ ಸಿಕ್ಕಿರುವ ಈ ಮನ್ನಣೆ ದಾಖಲೆಯೇ ಸರಿ.


ಇದನ್ನೂ ಓದಿ: ‘ಸಲಗ’ ಸಿನಿಮಾಕ್ಕೆ ಸಿದ್ದಿ ಜಾನಪದ ಹಾಡು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...