Homeಮುಖಪುಟಸಲಗ ಸಿನಿಮಾದಲ್ಲಿಲ್ಲ ಸಿದ್ದಿ ಬುಡಕಟ್ಟಿನ ಹಾಡು: ಪ್ರೇಕ್ಷಕರಿಗೆ ನಿರಾಸೆ-ಸಿದ್ದಿಗಳಿಗೆ ಬೇಸರ

ಸಲಗ ಸಿನಿಮಾದಲ್ಲಿಲ್ಲ ಸಿದ್ದಿ ಬುಡಕಟ್ಟಿನ ಹಾಡು: ಪ್ರೇಕ್ಷಕರಿಗೆ ನಿರಾಸೆ-ಸಿದ್ದಿಗಳಿಗೆ ಬೇಸರ

- Advertisement -
- Advertisement -

ದುನಿಯಾ ವಿಜಯ್ ನಿರ್ದೇಶನದ ಚೊಚ್ಚಲ ಚಿತ್ರ ಸಲಗದಲ್ಲಿ ಉತ್ತರ ಕನ್ನಡದ ಸಿದ್ದಿ ಬುಡಕಟ್ಟು ಜನಾಂಗದ ಜಾನಪದ ಹಾಡೊಂದನ್ನು ಸೇರಿಸಲಾಗಿದೆ; ಆ ಹಾಡನ್ನು ಯಲ್ಲಾಪುರದ ಸಿದ್ದಿ ಮಹಿಳೆಯರೆ ಹಾಡಿ ಕುಣಿದಿದ್ದಾರೆಂದು ಭರ್ಜರಿ ಪ್ರಚಾರ ಮಾಡಲಾಗಿತ್ತು. ಸ್ವತಃ ನಿರ್ದೇಶಕ-ನಟ ವಿಜಯ್ ಅವರೆ ಈ ಟಿಣಿಂಗ ಮಿಣಿಂಗ ಟಿಶ್ಯಾ ಎಂಬ ಹಾಡಿನ ಕುರಿತು, ಸಿದ್ದಿ ಹಾಡುಗಾರ್ತಿಯರ ಬಗ್ಗೆ ಹೆಮ್ಮೆ-ಖುಷಿಯಿಂದ ಮಾತಾಡಿದ್ದು ದೊಡ್ಡ ಸುದ್ದಿಯಾಗಿತ್ತು. ಹಾಡಂತೂ ಯೂಟ್ಯೂಬ್ ಮತ್ತಿತರೆಡೆ ವೈರಲ್ ಆಗಿ ಹವಾ ಸೃಷ್ಟಿಸಿತ್ತು.

ಈಗ ಸಲಗ ಸಿನೆಮಾ ಬಿಡುಗಡೆಯಾಗಿದ್ದು ಸ್ಯಾಂಡಲ್‌ವುಡ್‌ನಲ್ಲಿ ಸದ್ದು ಮಾಡುತ್ತಿದೆ. ಆದರೆ ಸಿನಿಮಾದ ಯಾವ ಭಾಗದಲ್ಲೂ ಮಂಚಿಕೇರಿ ಸಾವ್ಕಾರ್ ಅಂದರ್ ಬುಲಾಯಾ… ದರ್ವಾಜಾ ಲಗಾಯಾಟಿಣಿಂಗ ಮಿಣಿಂಗ ಟಿಶ್ಯಾ.. ಹಾಡಿಲ್ಲವೇ ಇಲ್ಲ. ಈ ಹಾಡು ಸಲಗ ಸಿನಿಮಾದ್ದು ಎಂಬುದಕ್ಕಿಂತ ಯಲ್ಲಾಪುರದ ಮಂಚಿಕೇರಿ ಬಳಿಯ ಸಿದ್ದಿಗಳ ಕೇರಿಯ ಪ್ರತಿಭಾನ್ವಿತ ಗಾಯಕಿ ಗಿಜಾ ಸಿದ್ದಿ ತಂಡ ಹಾಡಿ ನೃತ್ಯ ಮಾಡಿದೆ ಎಂಬುದೆ ಹೆಚ್ಚು ಪ್ರಚಾರಕ್ಕೆ ಕಾಣವಾಗಿತ್ತು.

ತಮ್ಮವರು ಹಾಡಿದ-ನಟಿಸಿದ ಚಿತ್ರವೆಂಬ ಆಕರ್ಷಣೆಯಿಂದ ಯಲ್ಲಾಪುರ ಸೀಮೆಯ ಸಿದ್ದಿಗಳು ಮತ್ತು ಉತ್ತರ ಕನ್ನಡದ ಸಿನಿಮಾಸಕ್ತರು ಶಿರಸಿಯ ನಟರಾಜ ಥೇಟರಿಗೆ ಹೋಗಿದ್ದಾರೆ. ಆದರೆ ಸಿನಿಮಾದಲ್ಲಿ ತಾವು ನಿರೀಕ್ಷಿಸಿದ ಹಾಡಿಲ್ಲದೆ ನಿರಾಸೆ ಮತ್ತು ಬೇಸರದಿಂದ ಹೊರಬಂದಿದ್ದಾರೆ. ಅಲ್ಲಲ್ಲಿ ಸಣ್ಣ ಸಣ್ಣ ಹಾಡಿನ ತುಣುಕು ಇದೆ ಹೊರತು ಪೂರ್ತಿ ಹಾಡು ಇಲ್ಲ ಎಂಬುದು ಅವರ ಬೇಸರಕ್ಕೆ ಕಾರಣ. ಸಲಗ ಸಿನಿಮಾ ತಂಡದ ತಾತ್ಸಾರದಿಂದ ತಮಗೆ ಅವಮಾನ ಮಾಡಿದಂತಾಗಿದೆಯೆಂದು ಸಿದ್ದಿ ಯುವಕರು ಅಸಮಾಧಾನ ವ್ಯಕ್ತ ಪಡಿಸಿದ್ದಾರೆ. ವಿಶಿಷ್ಟ ಸಂಸ್ಕೃತಿಯ ಸಿದ್ದಿ ಸಮುದಾಯದ ಪ್ರತಿಭೆ, ಮುಗ್ದತೆ ಸಿನಿಮಾ ಪ್ರಪಂಚ ಪ್ರಚಾರದ ಸರಕಾಗಿ ಬಳಸಿಕೊಂಡಿದೆಯೆಂಬ ಮಾತೀಗ ಕೇಳಿಬರುತ್ತಿದೆ.

ಉತ್ತರ ಕನ್ನಡದಲ್ಲಿರುವ ಆಫ್ರಿಕಾದ ನಿಗ್ರೊ ಮೂಲದ ಸಿದ್ದಿ ಬುಡಕಟ್ಟು ಜನಾಂಗಕ್ಕೆ ಅದರದೇ ಆದ ಸಂಸ್ಕ್ರತಿ, ಸಾಹಿತ್ಯ, ಕಲೆ, ಸಂಗೀತ, ಹಾಡು ಆಚರಣೆಗಳಿವೆ. ಮದುವೆ, ಹಬ್ಬ, ಉತ್ಸವ ಮುಂತಾದ ವಿಶೇಷ ಸಂದರ್ಭದಲ್ಲಿ ಜಾನಪದ ಶೈಲಿಯ ಹಾಡು ಹಾಡಿ, ನೃತ್ಯ ಮಾಡಿ ಸಂಭ್ರಮಿಸುತ್ತಾರೆ. ಸಿದ್ದಿಗಳ ಡಮಾಮಿ ಕುಣಿತಕ್ಕಂತೂ ಚೆತೋಹಾರಿ ಸೊಬಗಿದೆ.

ಕಾಡಿನ ವಾಸಿಗಳಾದ ಸಿದ್ದಿಗಳ ವಿಶಿಷ್ಟ ಹಾಡುಗಳೀಗ ಸಾಮಾಜಿಕ ಜಾಲತಾಣಕ್ಕೂ ವ್ಯಾಪಿಸಿ ಮೆಚ್ಚಿಗೆ ಗಳಿಸುತ್ತಿದೆ. ಈ ಬೆನ್ನಲ್ಲೆ ಸಿದ್ದಿ ಹಾಡೊಂದನ್ನು ಖ್ಯಾತ ನಟ ದುನಿಯಾ ವಿಜಯ್ ನಟನೆಯ ಸಲಗ ಸಿನಿಮಾಕ್ಕೆ ತೆಗೆದುಕೊಳ್ಳಲಾಗಿದೆ ಎನ್ನಲಾಗಿತ್ತು.

ಬಿಡುಗಡೆಗೆ ಸಿದ್ದವಾಗಿರುವ ಈ ಚಿತ್ರದ ಸಿದ್ದಿ ಹಾಡನ್ನು ಯಲ್ಲಾಪುರ ತಾಲೂಕಿನ ಮಂಚಿಕೇರಿಯ ಗೀತಾ ಸಿದ್ದಿ ಮತ್ತು ಗಿರಿಜಾ ಸಿದ್ದಿ ತಂಡ ತುಂಬಾ ಆಕರ್ಷಕವಾಗಿ ಹಾಡಿದೆ. ಜೊತೆಗೆ ಅಭಿನಯವನ್ನೂ ಮಾಡಿದ್ದಾರೆ. ಎ2 ಮ್ಯೂಸಿಕ್ ಕಂಪನಿ ಸಿದ್ದಿ ಕಲಾವಿದರು ಹಾಡಿರುವ ಹಾಡನ್ನು ಯೂ ಟ್ಯೂಬ್‌ನಲ್ಲಿ ಬಿಡುಗಡೆ ಮಾಡಿದೆ. ಈ ಹಾಡನ್ನು ಈಗಾಗಲೇ 8 ಲಕ್ಷ ಜನರು ನೋಡಿದ್ದಾರೆ. ಸಿದ್ದಿಗಳ ಕಲೆಗೆ ಸಿಕ್ಕಿರುವ ಈ ಮನ್ನಣೆ ದಾಖಲೆಯೇ ಸರಿ.


ಇದನ್ನೂ ಓದಿ: ‘ಸಲಗ’ ಸಿನಿಮಾಕ್ಕೆ ಸಿದ್ದಿ ಜಾನಪದ ಹಾಡು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...