Homeಮುಖಪುಟಪತ್ರಕರ್ತ ಕಪ್ಪನ್‌ಗೆ ಪೊಲೀಸರು ಹಿಂಸೆ ನೀಡಿದ್ದಾರೆ- ಕೇರಳ ಪತ್ರಕರ್ತರ ಸಂಘ

ಪತ್ರಕರ್ತ ಕಪ್ಪನ್‌ಗೆ ಪೊಲೀಸರು ಹಿಂಸೆ ನೀಡಿದ್ದಾರೆ- ಕೇರಳ ಪತ್ರಕರ್ತರ ಸಂಘ

ನ. 21 ರಂದು ಮಥುರಾ ಜೈಲಿನಲ್ಲಿ KUWJ ವಕೀಲ ವಿಲ್ಸ್ ಮ್ಯಾಥ್ಯೂಸ್ ಮತ್ತು ಪತ್ರಕರ್ತ ಸಿದ್ದೀಕ್ ಕಪ್ಪನ್ ನಡುವೆ ನಡೆದ ಅರ್ಧ ಘಂಟೆಯ ಮಾತುಕತೆ ನಡೆದಿದೆ.

- Advertisement -
- Advertisement -

ಕೇರಳ ಯೂನಿಯನ್ ಆಫ್ ವರ್ಕಿಂಗ್ ಜರ್ನಲಿಸ್ಟ್ಸ್ (KUWJ), ಸುಪ್ರೀಂ ಕೋರ್ಟ್ ಮುಂದೆ ಸಲ್ಲಿಸಿರುವ ಅಫಿಡವಿಟ್‌ನಲ್ಲಿ, ಕೇರಳ ಪತ್ರಕರ್ತ ಸಿದ್ದೀಕ್ ಕಪ್ಪನ್ ಅವರನ್ನು “ಮೂರು ಬಾರಿ ಥಳಿಸಲಾಗಿದೆ ಮತ್ತು ಬಂಧನದಲ್ಲಿದ್ದಾಗ ಮಾನಸಿಕ ಹಿಂಸೆ ನೀಡಲಾಗಿದೆ” ಎಂದು ಆರೋಪಿಸಿದೆ.

ನವೆಂಬರ್ 21 ರಂದು ಮಥುರಾ ಜೈಲಿನಲ್ಲಿ KUWJ ವಕೀಲ ವಿಲ್ಸ್ ಮ್ಯಾಥ್ಯೂಸ್ ಮತ್ತು ಪತ್ರಕರ್ತ ಸಿದ್ದೀಕ್ ಕಪ್ಪನ್ ನಡುವೆ ನಡೆದ ಅರ್ಧ ಘಂಟೆಯ ಮಾತುಕತೆಯನ್ನು ಅಫಿಡವಿಟ್‌ನಲ್ಲಿ ಉಲ್ಲೇಖಿಸಲಾಗಿದೆ.

“ಕಪ್ಪನ್ ದೇಹದ ಮೇಲೆ ಮೂರು ಬಾರಿ ಲಾಠಿಯಿಂದ ಹೊಡೆಯಲಾಗಿದೆ. ಕನ್ನಡಕವನ್ನು ತೆಗೆದ ನಂತರ ಮೂರು ಬಾರಿ ಕಪಾಳಮೋಕ್ಷ ಮಾಡಿ, ಎಳೆದೊಯ್ಯಲಾಗಿದೆ, ಸಂಜೆ 6 ರಿಂದ ಬೆಳಗ್ಗೆ 6 ರವರೆಗೆ ಎಚ್ಚರವಾಗಿರುವಂತೆ ಬಲವಂತ ಮಾಡಲಾಗಿದೆ. ಸರಿಯಾದ ಔಷಧಿಗಳನ್ನು ನೀಡದೇ, ಗಂಭೀರ ಮಾನಸಿಕ ಹಿಂಸೆ ನೀಡಿದ್ದಾರೆ’ ಎಂದು ಉಲ್ಲೇಖಿಸಲಾಗಿದೆ.

ಇದನ್ನೂ ಓದಿ: ಕೇರಳ ಮೂಲದ ಪತ್ರಕರ್ತ ಸಿದ್ದೀಕ್‌ಗೆ ವಕೀಲರ ಭೇಟಿಗೆ ಸುಪ್ರೀಂ ಅನುಮತಿ

ದಿ ವೈರ್‌ನೊಂದಿಗೆ ಮಾತನಾಡಿರುವ ವಕೀಲ ಮ್ಯಾಥ್ಯೂಸ್, ’ಮಾತುಕತೆಯಲ್ಲಿ ಕಪ್ಪನ್ ತನ್ನನ್ನು ಹೊಡೆದು ಗಂಭೀರ ಮಾನಸಿಕ ಹಿಂಸೆಗೆ ಒಳಪಡಿಸಲಾಗಿದೆ ಎಂದು ದೃಢಪಡಿಸಿದ್ದಾರೆ. ಕಳೆದ ತಿಂಗಳು ಸುಪ್ರೀಂ ಕೋರ್ಟ್ ನೀಡಿದ ಆದೇಶದ ನಂತರ ವಕೀಲರು ಕೇರಳದ ಪತ್ರಕರ್ತರೊಂದಿಗೆ ಸಭೆ ನಡೆಸಲು ಸಾಧ್ಯವಾಯಿತು’ ಎಂದು ಹೇಳಿದ್ದಾರೆ.

ಹತ್ರಾಸ್‌ನ ದಲಿತ ಯುವತಿಯ ಮೇಲೆ ನಡೆದಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣದ ಕುರಿತು ವರದಿ ಮಾಡಲು ಅಕ್ಟೋಬರ್ 5 ರಂದು ಉತ್ತರಪ್ರದೇಶಕ್ಕೆ ತೆರಳಿದ್ದ, ದೆಹಲಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕೇರಳ ಮೂಲದ ಪರ್ತಕರ್ತ ಸಿದ್ದೀಕ್ ಕಪ್ಪನ್ ಅವರನ್ನುಉತ್ತರಪ್ರದೇಶ ಪೊಲೀಸರು ಬಂಧಿಸಿದ್ದರು.

ಕಪ್ಪನ್ ಮತ್ತು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದ (CFI) ಇಬ್ಬರು ಸದಸ್ಯರು ಹತ್ರಾಸ್ ಅತ್ಯಾಚಾರದ ಬಗ್ಗೆ ಧಾರ್ಮಿಕ ದ್ವೇಷವನ್ನು ಉಂಟುಮಾಡುವ “ಪಿತೂರಿಯ” ಭಾಗವಾಗಿದ್ದಾರೆ ಎಂದು ಉತ್ತರ ಪ್ರದೇಶ ಪೊಲೀಸರು ಆರೋಪಿಸಿದ್ದಾರೆ ಮತ್ತು ಕಠಿಣ ಯುಎಪಿಎ ಮತ್ತು ದೇಶದ್ರೋಹ ಸೇರಿದಂತೆ ವಿವಿಧ ಆರೋಪಗಳ ಮೇಲೆ ಬಂಧಿಸಿದ್ದಾರೆ.


ಇದನ್ನೂ ಓದಿ: ಬಿಜೆಪಿ ನಾಯಕರ ದ್ವಿನೀತಿ: ಬಂಧನದಲ್ಲಿರುವ ಕೇರಳ ಮೂಲದ ಪತ್ರಕರ್ತನ ಪತ್ನಿ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...