Homeಮುಖಪುಟಪತ್ರಕರ್ತ ಕಪ್ಪನ್‌ಗೆ ಪೊಲೀಸರು ಹಿಂಸೆ ನೀಡಿದ್ದಾರೆ- ಕೇರಳ ಪತ್ರಕರ್ತರ ಸಂಘ

ಪತ್ರಕರ್ತ ಕಪ್ಪನ್‌ಗೆ ಪೊಲೀಸರು ಹಿಂಸೆ ನೀಡಿದ್ದಾರೆ- ಕೇರಳ ಪತ್ರಕರ್ತರ ಸಂಘ

ನ. 21 ರಂದು ಮಥುರಾ ಜೈಲಿನಲ್ಲಿ KUWJ ವಕೀಲ ವಿಲ್ಸ್ ಮ್ಯಾಥ್ಯೂಸ್ ಮತ್ತು ಪತ್ರಕರ್ತ ಸಿದ್ದೀಕ್ ಕಪ್ಪನ್ ನಡುವೆ ನಡೆದ ಅರ್ಧ ಘಂಟೆಯ ಮಾತುಕತೆ ನಡೆದಿದೆ.

- Advertisement -
- Advertisement -

ಕೇರಳ ಯೂನಿಯನ್ ಆಫ್ ವರ್ಕಿಂಗ್ ಜರ್ನಲಿಸ್ಟ್ಸ್ (KUWJ), ಸುಪ್ರೀಂ ಕೋರ್ಟ್ ಮುಂದೆ ಸಲ್ಲಿಸಿರುವ ಅಫಿಡವಿಟ್‌ನಲ್ಲಿ, ಕೇರಳ ಪತ್ರಕರ್ತ ಸಿದ್ದೀಕ್ ಕಪ್ಪನ್ ಅವರನ್ನು “ಮೂರು ಬಾರಿ ಥಳಿಸಲಾಗಿದೆ ಮತ್ತು ಬಂಧನದಲ್ಲಿದ್ದಾಗ ಮಾನಸಿಕ ಹಿಂಸೆ ನೀಡಲಾಗಿದೆ” ಎಂದು ಆರೋಪಿಸಿದೆ.

ನವೆಂಬರ್ 21 ರಂದು ಮಥುರಾ ಜೈಲಿನಲ್ಲಿ KUWJ ವಕೀಲ ವಿಲ್ಸ್ ಮ್ಯಾಥ್ಯೂಸ್ ಮತ್ತು ಪತ್ರಕರ್ತ ಸಿದ್ದೀಕ್ ಕಪ್ಪನ್ ನಡುವೆ ನಡೆದ ಅರ್ಧ ಘಂಟೆಯ ಮಾತುಕತೆಯನ್ನು ಅಫಿಡವಿಟ್‌ನಲ್ಲಿ ಉಲ್ಲೇಖಿಸಲಾಗಿದೆ.

“ಕಪ್ಪನ್ ದೇಹದ ಮೇಲೆ ಮೂರು ಬಾರಿ ಲಾಠಿಯಿಂದ ಹೊಡೆಯಲಾಗಿದೆ. ಕನ್ನಡಕವನ್ನು ತೆಗೆದ ನಂತರ ಮೂರು ಬಾರಿ ಕಪಾಳಮೋಕ್ಷ ಮಾಡಿ, ಎಳೆದೊಯ್ಯಲಾಗಿದೆ, ಸಂಜೆ 6 ರಿಂದ ಬೆಳಗ್ಗೆ 6 ರವರೆಗೆ ಎಚ್ಚರವಾಗಿರುವಂತೆ ಬಲವಂತ ಮಾಡಲಾಗಿದೆ. ಸರಿಯಾದ ಔಷಧಿಗಳನ್ನು ನೀಡದೇ, ಗಂಭೀರ ಮಾನಸಿಕ ಹಿಂಸೆ ನೀಡಿದ್ದಾರೆ’ ಎಂದು ಉಲ್ಲೇಖಿಸಲಾಗಿದೆ.

ಇದನ್ನೂ ಓದಿ: ಕೇರಳ ಮೂಲದ ಪತ್ರಕರ್ತ ಸಿದ್ದೀಕ್‌ಗೆ ವಕೀಲರ ಭೇಟಿಗೆ ಸುಪ್ರೀಂ ಅನುಮತಿ

ದಿ ವೈರ್‌ನೊಂದಿಗೆ ಮಾತನಾಡಿರುವ ವಕೀಲ ಮ್ಯಾಥ್ಯೂಸ್, ’ಮಾತುಕತೆಯಲ್ಲಿ ಕಪ್ಪನ್ ತನ್ನನ್ನು ಹೊಡೆದು ಗಂಭೀರ ಮಾನಸಿಕ ಹಿಂಸೆಗೆ ಒಳಪಡಿಸಲಾಗಿದೆ ಎಂದು ದೃಢಪಡಿಸಿದ್ದಾರೆ. ಕಳೆದ ತಿಂಗಳು ಸುಪ್ರೀಂ ಕೋರ್ಟ್ ನೀಡಿದ ಆದೇಶದ ನಂತರ ವಕೀಲರು ಕೇರಳದ ಪತ್ರಕರ್ತರೊಂದಿಗೆ ಸಭೆ ನಡೆಸಲು ಸಾಧ್ಯವಾಯಿತು’ ಎಂದು ಹೇಳಿದ್ದಾರೆ.

ಹತ್ರಾಸ್‌ನ ದಲಿತ ಯುವತಿಯ ಮೇಲೆ ನಡೆದಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣದ ಕುರಿತು ವರದಿ ಮಾಡಲು ಅಕ್ಟೋಬರ್ 5 ರಂದು ಉತ್ತರಪ್ರದೇಶಕ್ಕೆ ತೆರಳಿದ್ದ, ದೆಹಲಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕೇರಳ ಮೂಲದ ಪರ್ತಕರ್ತ ಸಿದ್ದೀಕ್ ಕಪ್ಪನ್ ಅವರನ್ನುಉತ್ತರಪ್ರದೇಶ ಪೊಲೀಸರು ಬಂಧಿಸಿದ್ದರು.

ಕಪ್ಪನ್ ಮತ್ತು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದ (CFI) ಇಬ್ಬರು ಸದಸ್ಯರು ಹತ್ರಾಸ್ ಅತ್ಯಾಚಾರದ ಬಗ್ಗೆ ಧಾರ್ಮಿಕ ದ್ವೇಷವನ್ನು ಉಂಟುಮಾಡುವ “ಪಿತೂರಿಯ” ಭಾಗವಾಗಿದ್ದಾರೆ ಎಂದು ಉತ್ತರ ಪ್ರದೇಶ ಪೊಲೀಸರು ಆರೋಪಿಸಿದ್ದಾರೆ ಮತ್ತು ಕಠಿಣ ಯುಎಪಿಎ ಮತ್ತು ದೇಶದ್ರೋಹ ಸೇರಿದಂತೆ ವಿವಿಧ ಆರೋಪಗಳ ಮೇಲೆ ಬಂಧಿಸಿದ್ದಾರೆ.


ಇದನ್ನೂ ಓದಿ: ಬಿಜೆಪಿ ನಾಯಕರ ದ್ವಿನೀತಿ: ಬಂಧನದಲ್ಲಿರುವ ಕೇರಳ ಮೂಲದ ಪತ್ರಕರ್ತನ ಪತ್ನಿ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...