Homeಮುಖಪುಟಪತ್ರಕರ್ತ ಕಪ್ಪನ್‌ಗೆ ಪೊಲೀಸರು ಹಿಂಸೆ ನೀಡಿದ್ದಾರೆ- ಕೇರಳ ಪತ್ರಕರ್ತರ ಸಂಘ

ಪತ್ರಕರ್ತ ಕಪ್ಪನ್‌ಗೆ ಪೊಲೀಸರು ಹಿಂಸೆ ನೀಡಿದ್ದಾರೆ- ಕೇರಳ ಪತ್ರಕರ್ತರ ಸಂಘ

ನ. 21 ರಂದು ಮಥುರಾ ಜೈಲಿನಲ್ಲಿ KUWJ ವಕೀಲ ವಿಲ್ಸ್ ಮ್ಯಾಥ್ಯೂಸ್ ಮತ್ತು ಪತ್ರಕರ್ತ ಸಿದ್ದೀಕ್ ಕಪ್ಪನ್ ನಡುವೆ ನಡೆದ ಅರ್ಧ ಘಂಟೆಯ ಮಾತುಕತೆ ನಡೆದಿದೆ.

- Advertisement -
- Advertisement -

ಕೇರಳ ಯೂನಿಯನ್ ಆಫ್ ವರ್ಕಿಂಗ್ ಜರ್ನಲಿಸ್ಟ್ಸ್ (KUWJ), ಸುಪ್ರೀಂ ಕೋರ್ಟ್ ಮುಂದೆ ಸಲ್ಲಿಸಿರುವ ಅಫಿಡವಿಟ್‌ನಲ್ಲಿ, ಕೇರಳ ಪತ್ರಕರ್ತ ಸಿದ್ದೀಕ್ ಕಪ್ಪನ್ ಅವರನ್ನು “ಮೂರು ಬಾರಿ ಥಳಿಸಲಾಗಿದೆ ಮತ್ತು ಬಂಧನದಲ್ಲಿದ್ದಾಗ ಮಾನಸಿಕ ಹಿಂಸೆ ನೀಡಲಾಗಿದೆ” ಎಂದು ಆರೋಪಿಸಿದೆ.

ನವೆಂಬರ್ 21 ರಂದು ಮಥುರಾ ಜೈಲಿನಲ್ಲಿ KUWJ ವಕೀಲ ವಿಲ್ಸ್ ಮ್ಯಾಥ್ಯೂಸ್ ಮತ್ತು ಪತ್ರಕರ್ತ ಸಿದ್ದೀಕ್ ಕಪ್ಪನ್ ನಡುವೆ ನಡೆದ ಅರ್ಧ ಘಂಟೆಯ ಮಾತುಕತೆಯನ್ನು ಅಫಿಡವಿಟ್‌ನಲ್ಲಿ ಉಲ್ಲೇಖಿಸಲಾಗಿದೆ.

“ಕಪ್ಪನ್ ದೇಹದ ಮೇಲೆ ಮೂರು ಬಾರಿ ಲಾಠಿಯಿಂದ ಹೊಡೆಯಲಾಗಿದೆ. ಕನ್ನಡಕವನ್ನು ತೆಗೆದ ನಂತರ ಮೂರು ಬಾರಿ ಕಪಾಳಮೋಕ್ಷ ಮಾಡಿ, ಎಳೆದೊಯ್ಯಲಾಗಿದೆ, ಸಂಜೆ 6 ರಿಂದ ಬೆಳಗ್ಗೆ 6 ರವರೆಗೆ ಎಚ್ಚರವಾಗಿರುವಂತೆ ಬಲವಂತ ಮಾಡಲಾಗಿದೆ. ಸರಿಯಾದ ಔಷಧಿಗಳನ್ನು ನೀಡದೇ, ಗಂಭೀರ ಮಾನಸಿಕ ಹಿಂಸೆ ನೀಡಿದ್ದಾರೆ’ ಎಂದು ಉಲ್ಲೇಖಿಸಲಾಗಿದೆ.

ಇದನ್ನೂ ಓದಿ: ಕೇರಳ ಮೂಲದ ಪತ್ರಕರ್ತ ಸಿದ್ದೀಕ್‌ಗೆ ವಕೀಲರ ಭೇಟಿಗೆ ಸುಪ್ರೀಂ ಅನುಮತಿ

ದಿ ವೈರ್‌ನೊಂದಿಗೆ ಮಾತನಾಡಿರುವ ವಕೀಲ ಮ್ಯಾಥ್ಯೂಸ್, ’ಮಾತುಕತೆಯಲ್ಲಿ ಕಪ್ಪನ್ ತನ್ನನ್ನು ಹೊಡೆದು ಗಂಭೀರ ಮಾನಸಿಕ ಹಿಂಸೆಗೆ ಒಳಪಡಿಸಲಾಗಿದೆ ಎಂದು ದೃಢಪಡಿಸಿದ್ದಾರೆ. ಕಳೆದ ತಿಂಗಳು ಸುಪ್ರೀಂ ಕೋರ್ಟ್ ನೀಡಿದ ಆದೇಶದ ನಂತರ ವಕೀಲರು ಕೇರಳದ ಪತ್ರಕರ್ತರೊಂದಿಗೆ ಸಭೆ ನಡೆಸಲು ಸಾಧ್ಯವಾಯಿತು’ ಎಂದು ಹೇಳಿದ್ದಾರೆ.

ಹತ್ರಾಸ್‌ನ ದಲಿತ ಯುವತಿಯ ಮೇಲೆ ನಡೆದಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣದ ಕುರಿತು ವರದಿ ಮಾಡಲು ಅಕ್ಟೋಬರ್ 5 ರಂದು ಉತ್ತರಪ್ರದೇಶಕ್ಕೆ ತೆರಳಿದ್ದ, ದೆಹಲಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕೇರಳ ಮೂಲದ ಪರ್ತಕರ್ತ ಸಿದ್ದೀಕ್ ಕಪ್ಪನ್ ಅವರನ್ನುಉತ್ತರಪ್ರದೇಶ ಪೊಲೀಸರು ಬಂಧಿಸಿದ್ದರು.

ಕಪ್ಪನ್ ಮತ್ತು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದ (CFI) ಇಬ್ಬರು ಸದಸ್ಯರು ಹತ್ರಾಸ್ ಅತ್ಯಾಚಾರದ ಬಗ್ಗೆ ಧಾರ್ಮಿಕ ದ್ವೇಷವನ್ನು ಉಂಟುಮಾಡುವ “ಪಿತೂರಿಯ” ಭಾಗವಾಗಿದ್ದಾರೆ ಎಂದು ಉತ್ತರ ಪ್ರದೇಶ ಪೊಲೀಸರು ಆರೋಪಿಸಿದ್ದಾರೆ ಮತ್ತು ಕಠಿಣ ಯುಎಪಿಎ ಮತ್ತು ದೇಶದ್ರೋಹ ಸೇರಿದಂತೆ ವಿವಿಧ ಆರೋಪಗಳ ಮೇಲೆ ಬಂಧಿಸಿದ್ದಾರೆ.


ಇದನ್ನೂ ಓದಿ: ಬಿಜೆಪಿ ನಾಯಕರ ದ್ವಿನೀತಿ: ಬಂಧನದಲ್ಲಿರುವ ಕೇರಳ ಮೂಲದ ಪತ್ರಕರ್ತನ ಪತ್ನಿ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...