Homeಮುಖಪುಟಪತ್ರಕರ್ತ ಕಪ್ಪನ್‌ಗೆ ಪೊಲೀಸರು ಹಿಂಸೆ ನೀಡಿದ್ದಾರೆ- ಕೇರಳ ಪತ್ರಕರ್ತರ ಸಂಘ

ಪತ್ರಕರ್ತ ಕಪ್ಪನ್‌ಗೆ ಪೊಲೀಸರು ಹಿಂಸೆ ನೀಡಿದ್ದಾರೆ- ಕೇರಳ ಪತ್ರಕರ್ತರ ಸಂಘ

ನ. 21 ರಂದು ಮಥುರಾ ಜೈಲಿನಲ್ಲಿ KUWJ ವಕೀಲ ವಿಲ್ಸ್ ಮ್ಯಾಥ್ಯೂಸ್ ಮತ್ತು ಪತ್ರಕರ್ತ ಸಿದ್ದೀಕ್ ಕಪ್ಪನ್ ನಡುವೆ ನಡೆದ ಅರ್ಧ ಘಂಟೆಯ ಮಾತುಕತೆ ನಡೆದಿದೆ.

- Advertisement -
- Advertisement -

ಕೇರಳ ಯೂನಿಯನ್ ಆಫ್ ವರ್ಕಿಂಗ್ ಜರ್ನಲಿಸ್ಟ್ಸ್ (KUWJ), ಸುಪ್ರೀಂ ಕೋರ್ಟ್ ಮುಂದೆ ಸಲ್ಲಿಸಿರುವ ಅಫಿಡವಿಟ್‌ನಲ್ಲಿ, ಕೇರಳ ಪತ್ರಕರ್ತ ಸಿದ್ದೀಕ್ ಕಪ್ಪನ್ ಅವರನ್ನು “ಮೂರು ಬಾರಿ ಥಳಿಸಲಾಗಿದೆ ಮತ್ತು ಬಂಧನದಲ್ಲಿದ್ದಾಗ ಮಾನಸಿಕ ಹಿಂಸೆ ನೀಡಲಾಗಿದೆ” ಎಂದು ಆರೋಪಿಸಿದೆ.

ನವೆಂಬರ್ 21 ರಂದು ಮಥುರಾ ಜೈಲಿನಲ್ಲಿ KUWJ ವಕೀಲ ವಿಲ್ಸ್ ಮ್ಯಾಥ್ಯೂಸ್ ಮತ್ತು ಪತ್ರಕರ್ತ ಸಿದ್ದೀಕ್ ಕಪ್ಪನ್ ನಡುವೆ ನಡೆದ ಅರ್ಧ ಘಂಟೆಯ ಮಾತುಕತೆಯನ್ನು ಅಫಿಡವಿಟ್‌ನಲ್ಲಿ ಉಲ್ಲೇಖಿಸಲಾಗಿದೆ.

“ಕಪ್ಪನ್ ದೇಹದ ಮೇಲೆ ಮೂರು ಬಾರಿ ಲಾಠಿಯಿಂದ ಹೊಡೆಯಲಾಗಿದೆ. ಕನ್ನಡಕವನ್ನು ತೆಗೆದ ನಂತರ ಮೂರು ಬಾರಿ ಕಪಾಳಮೋಕ್ಷ ಮಾಡಿ, ಎಳೆದೊಯ್ಯಲಾಗಿದೆ, ಸಂಜೆ 6 ರಿಂದ ಬೆಳಗ್ಗೆ 6 ರವರೆಗೆ ಎಚ್ಚರವಾಗಿರುವಂತೆ ಬಲವಂತ ಮಾಡಲಾಗಿದೆ. ಸರಿಯಾದ ಔಷಧಿಗಳನ್ನು ನೀಡದೇ, ಗಂಭೀರ ಮಾನಸಿಕ ಹಿಂಸೆ ನೀಡಿದ್ದಾರೆ’ ಎಂದು ಉಲ್ಲೇಖಿಸಲಾಗಿದೆ.

ಇದನ್ನೂ ಓದಿ: ಕೇರಳ ಮೂಲದ ಪತ್ರಕರ್ತ ಸಿದ್ದೀಕ್‌ಗೆ ವಕೀಲರ ಭೇಟಿಗೆ ಸುಪ್ರೀಂ ಅನುಮತಿ

ದಿ ವೈರ್‌ನೊಂದಿಗೆ ಮಾತನಾಡಿರುವ ವಕೀಲ ಮ್ಯಾಥ್ಯೂಸ್, ’ಮಾತುಕತೆಯಲ್ಲಿ ಕಪ್ಪನ್ ತನ್ನನ್ನು ಹೊಡೆದು ಗಂಭೀರ ಮಾನಸಿಕ ಹಿಂಸೆಗೆ ಒಳಪಡಿಸಲಾಗಿದೆ ಎಂದು ದೃಢಪಡಿಸಿದ್ದಾರೆ. ಕಳೆದ ತಿಂಗಳು ಸುಪ್ರೀಂ ಕೋರ್ಟ್ ನೀಡಿದ ಆದೇಶದ ನಂತರ ವಕೀಲರು ಕೇರಳದ ಪತ್ರಕರ್ತರೊಂದಿಗೆ ಸಭೆ ನಡೆಸಲು ಸಾಧ್ಯವಾಯಿತು’ ಎಂದು ಹೇಳಿದ್ದಾರೆ.

ಹತ್ರಾಸ್‌ನ ದಲಿತ ಯುವತಿಯ ಮೇಲೆ ನಡೆದಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣದ ಕುರಿತು ವರದಿ ಮಾಡಲು ಅಕ್ಟೋಬರ್ 5 ರಂದು ಉತ್ತರಪ್ರದೇಶಕ್ಕೆ ತೆರಳಿದ್ದ, ದೆಹಲಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕೇರಳ ಮೂಲದ ಪರ್ತಕರ್ತ ಸಿದ್ದೀಕ್ ಕಪ್ಪನ್ ಅವರನ್ನುಉತ್ತರಪ್ರದೇಶ ಪೊಲೀಸರು ಬಂಧಿಸಿದ್ದರು.

ಕಪ್ಪನ್ ಮತ್ತು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದ (CFI) ಇಬ್ಬರು ಸದಸ್ಯರು ಹತ್ರಾಸ್ ಅತ್ಯಾಚಾರದ ಬಗ್ಗೆ ಧಾರ್ಮಿಕ ದ್ವೇಷವನ್ನು ಉಂಟುಮಾಡುವ “ಪಿತೂರಿಯ” ಭಾಗವಾಗಿದ್ದಾರೆ ಎಂದು ಉತ್ತರ ಪ್ರದೇಶ ಪೊಲೀಸರು ಆರೋಪಿಸಿದ್ದಾರೆ ಮತ್ತು ಕಠಿಣ ಯುಎಪಿಎ ಮತ್ತು ದೇಶದ್ರೋಹ ಸೇರಿದಂತೆ ವಿವಿಧ ಆರೋಪಗಳ ಮೇಲೆ ಬಂಧಿಸಿದ್ದಾರೆ.


ಇದನ್ನೂ ಓದಿ: ಬಿಜೆಪಿ ನಾಯಕರ ದ್ವಿನೀತಿ: ಬಂಧನದಲ್ಲಿರುವ ಕೇರಳ ಮೂಲದ ಪತ್ರಕರ್ತನ ಪತ್ನಿ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...

‘ಜಿಡಿಪಿ ಬಿಟ್ಟು ನಿಮ್ಮ ಮುಖದ ಸೌಂದರ್ಯದ ರಹಸ್ಯ ತಿಳಿಸಿ..’; ಪ್ರಧಾನಿ ಮೋದಿ ಕಾಲೆಳೆದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ

ಇತ್ತೀಚೆಗೆ ಬಿಡುಗಡೆಯಾದ ಭಾರತದ ತ್ರೈಮಾಸಿಕ ಜಿಡಿಪಿ ಅಂಕಿಅಂಶಗಳ ಕುರಿತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವ್ಯಂಗ್ಯವಾಡಿದ್ದಾರೆ. 2026-27ರ ಹಣಕಾಸು ವರ್ಷದ ಮೊದಲ...

ರಾಜಕೀಯ ಪಕ್ಷಗಳ ಬಿಎಲ್‌ಎಗಳು ಎಸ್‌ಐಆರ್‌ನ ಎಲ್ಲ ಮಾಹಿತಿಗಳನ್ನೂ ಪರಿಶೀಲಿಸಲು ಜವಾಬ್ದಾರರಲ್ಲ : ದೆಹಲಿ ಹೈಕೋರ್ಟ್

ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟ್‌ಗಳು (ಬಿಎಲ್‌ಎ) ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಸಂದರ್ಭದಲ್ಲಿ ಎಣಿಕೆ ನಮೂನೆಗಳಲ್ಲಿರುವ (ಎನ್ಯುಮರೇಷನ್ ಫಾರಂ) ಎಲ್ಲ ವಿವರಗಳನ್ನು ಪರಿಶೀಲಿಸಲು ಜವಾಬ್ದಾರರಲ್ಲ ಎಂದು ದೆಹಲಿ ಹೈಕೋರ್ಟ್...

‘ಕೈಯಿಂದ ಮಲ ಹೊರುವ ಪದ್ಧತಿ ಇಲ್ಲ’ ಎಂದ ಸರ್ಕಾರ: ‘ಹಾಗಾದರೆ ನಾವು ಇನ್ನೂ ಏಕೆ ಈ ಕೆಲಸ ಮಾಡುತ್ತಿದ್ದೇವೆ?’ ಎಂದು ಪ್ರಶ್ನಿಸಿದ ಮಹಿಳಾ ಕಾರ್ಮಿಕರು

ನವದೆಹಲಿ: ದೇಶದಲ್ಲಿ ಕೈಯಿಂದ ಮಲ ಹೊರುವ ಪದ್ಧತಿ ಸಂಪೂರ್ಣವಾಗಿ ನಿರ್ಮೂಲನೆಯಾಗಿದೆ ಎಂದು ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಹೇಳಿರುವ ಬೆನ್ನಲ್ಲೇ, ಉತ್ತರ ಪ್ರದೇಶ, ಮಧ್ಯಪ್ರದೇಶ, ಬಿಹಾರ ಮತ್ತು ಜಮ್ಮು ಮತ್ತು ಕಾಶ್ಮೀರದ ಮಹಿಳಾ ನೈರ್ಮಲ್ಯ...