Homeಮುಖಪುಟಪತ್ರಕರ್ತ ಕಪ್ಪನ್‌ಗೆ ಪೊಲೀಸರು ಹಿಂಸೆ ನೀಡಿದ್ದಾರೆ- ಕೇರಳ ಪತ್ರಕರ್ತರ ಸಂಘ

ಪತ್ರಕರ್ತ ಕಪ್ಪನ್‌ಗೆ ಪೊಲೀಸರು ಹಿಂಸೆ ನೀಡಿದ್ದಾರೆ- ಕೇರಳ ಪತ್ರಕರ್ತರ ಸಂಘ

ನ. 21 ರಂದು ಮಥುರಾ ಜೈಲಿನಲ್ಲಿ KUWJ ವಕೀಲ ವಿಲ್ಸ್ ಮ್ಯಾಥ್ಯೂಸ್ ಮತ್ತು ಪತ್ರಕರ್ತ ಸಿದ್ದೀಕ್ ಕಪ್ಪನ್ ನಡುವೆ ನಡೆದ ಅರ್ಧ ಘಂಟೆಯ ಮಾತುಕತೆ ನಡೆದಿದೆ.

- Advertisement -
- Advertisement -

ಕೇರಳ ಯೂನಿಯನ್ ಆಫ್ ವರ್ಕಿಂಗ್ ಜರ್ನಲಿಸ್ಟ್ಸ್ (KUWJ), ಸುಪ್ರೀಂ ಕೋರ್ಟ್ ಮುಂದೆ ಸಲ್ಲಿಸಿರುವ ಅಫಿಡವಿಟ್‌ನಲ್ಲಿ, ಕೇರಳ ಪತ್ರಕರ್ತ ಸಿದ್ದೀಕ್ ಕಪ್ಪನ್ ಅವರನ್ನು “ಮೂರು ಬಾರಿ ಥಳಿಸಲಾಗಿದೆ ಮತ್ತು ಬಂಧನದಲ್ಲಿದ್ದಾಗ ಮಾನಸಿಕ ಹಿಂಸೆ ನೀಡಲಾಗಿದೆ” ಎಂದು ಆರೋಪಿಸಿದೆ.

ನವೆಂಬರ್ 21 ರಂದು ಮಥುರಾ ಜೈಲಿನಲ್ಲಿ KUWJ ವಕೀಲ ವಿಲ್ಸ್ ಮ್ಯಾಥ್ಯೂಸ್ ಮತ್ತು ಪತ್ರಕರ್ತ ಸಿದ್ದೀಕ್ ಕಪ್ಪನ್ ನಡುವೆ ನಡೆದ ಅರ್ಧ ಘಂಟೆಯ ಮಾತುಕತೆಯನ್ನು ಅಫಿಡವಿಟ್‌ನಲ್ಲಿ ಉಲ್ಲೇಖಿಸಲಾಗಿದೆ.

“ಕಪ್ಪನ್ ದೇಹದ ಮೇಲೆ ಮೂರು ಬಾರಿ ಲಾಠಿಯಿಂದ ಹೊಡೆಯಲಾಗಿದೆ. ಕನ್ನಡಕವನ್ನು ತೆಗೆದ ನಂತರ ಮೂರು ಬಾರಿ ಕಪಾಳಮೋಕ್ಷ ಮಾಡಿ, ಎಳೆದೊಯ್ಯಲಾಗಿದೆ, ಸಂಜೆ 6 ರಿಂದ ಬೆಳಗ್ಗೆ 6 ರವರೆಗೆ ಎಚ್ಚರವಾಗಿರುವಂತೆ ಬಲವಂತ ಮಾಡಲಾಗಿದೆ. ಸರಿಯಾದ ಔಷಧಿಗಳನ್ನು ನೀಡದೇ, ಗಂಭೀರ ಮಾನಸಿಕ ಹಿಂಸೆ ನೀಡಿದ್ದಾರೆ’ ಎಂದು ಉಲ್ಲೇಖಿಸಲಾಗಿದೆ.

ಇದನ್ನೂ ಓದಿ: ಕೇರಳ ಮೂಲದ ಪತ್ರಕರ್ತ ಸಿದ್ದೀಕ್‌ಗೆ ವಕೀಲರ ಭೇಟಿಗೆ ಸುಪ್ರೀಂ ಅನುಮತಿ

ದಿ ವೈರ್‌ನೊಂದಿಗೆ ಮಾತನಾಡಿರುವ ವಕೀಲ ಮ್ಯಾಥ್ಯೂಸ್, ’ಮಾತುಕತೆಯಲ್ಲಿ ಕಪ್ಪನ್ ತನ್ನನ್ನು ಹೊಡೆದು ಗಂಭೀರ ಮಾನಸಿಕ ಹಿಂಸೆಗೆ ಒಳಪಡಿಸಲಾಗಿದೆ ಎಂದು ದೃಢಪಡಿಸಿದ್ದಾರೆ. ಕಳೆದ ತಿಂಗಳು ಸುಪ್ರೀಂ ಕೋರ್ಟ್ ನೀಡಿದ ಆದೇಶದ ನಂತರ ವಕೀಲರು ಕೇರಳದ ಪತ್ರಕರ್ತರೊಂದಿಗೆ ಸಭೆ ನಡೆಸಲು ಸಾಧ್ಯವಾಯಿತು’ ಎಂದು ಹೇಳಿದ್ದಾರೆ.

ಹತ್ರಾಸ್‌ನ ದಲಿತ ಯುವತಿಯ ಮೇಲೆ ನಡೆದಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣದ ಕುರಿತು ವರದಿ ಮಾಡಲು ಅಕ್ಟೋಬರ್ 5 ರಂದು ಉತ್ತರಪ್ರದೇಶಕ್ಕೆ ತೆರಳಿದ್ದ, ದೆಹಲಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕೇರಳ ಮೂಲದ ಪರ್ತಕರ್ತ ಸಿದ್ದೀಕ್ ಕಪ್ಪನ್ ಅವರನ್ನುಉತ್ತರಪ್ರದೇಶ ಪೊಲೀಸರು ಬಂಧಿಸಿದ್ದರು.

ಕಪ್ಪನ್ ಮತ್ತು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದ (CFI) ಇಬ್ಬರು ಸದಸ್ಯರು ಹತ್ರಾಸ್ ಅತ್ಯಾಚಾರದ ಬಗ್ಗೆ ಧಾರ್ಮಿಕ ದ್ವೇಷವನ್ನು ಉಂಟುಮಾಡುವ “ಪಿತೂರಿಯ” ಭಾಗವಾಗಿದ್ದಾರೆ ಎಂದು ಉತ್ತರ ಪ್ರದೇಶ ಪೊಲೀಸರು ಆರೋಪಿಸಿದ್ದಾರೆ ಮತ್ತು ಕಠಿಣ ಯುಎಪಿಎ ಮತ್ತು ದೇಶದ್ರೋಹ ಸೇರಿದಂತೆ ವಿವಿಧ ಆರೋಪಗಳ ಮೇಲೆ ಬಂಧಿಸಿದ್ದಾರೆ.


ಇದನ್ನೂ ಓದಿ: ಬಿಜೆಪಿ ನಾಯಕರ ದ್ವಿನೀತಿ: ಬಂಧನದಲ್ಲಿರುವ ಕೇರಳ ಮೂಲದ ಪತ್ರಕರ್ತನ ಪತ್ನಿ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...

ಬಿಹಾರದ ನಳಂದ ಜಿಲ್ಲೆಯ ಶೀತ್ಲಾ ದೇವಸ್ಥಾನದಲ್ಲಿ ಕಾಲ್ತುಳಿತ: ಎಂಟು ಮಹಿಳೆಯರು ಸಾವು; ಹಲವು ಮಂದಿಗೆ ಗಾಯ 

ಬಿಹಾರದ ನಳಂದ ಜಿಲ್ಲೆಯ ಶೀತ್ಲಾ ದೇವಸ್ಥಾನದಲ್ಲಿ ಮಂಗಳವಾರ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ ಎಂಟು ಮಹಿಳೆಯರು ಸಾವನ್ನಪ್ಪಿದ್ದು, ಹಲವಾರು ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ.  ಪೂಜೆಗಾಗಿ ದೇವಾಲಯದಲ್ಲಿ ಹೆಚ್ಚಿನ ಸಂಖ್ಯೆಯ ಭಕ್ತರು ಜಮಾಯಿಸಿದಾಗ ಈ ಘಟನೆ ಸಂಭವಿಸಿದ್ದು,...

ದಲಿತ ಕ್ರೈಸ್ತರ ಎಸ್‌ಸಿ ಸ್ಥಾನಮಾನ ರದ್ದು ಆದೇಶ; ಸುಪ್ರೀಂ ಕೋರ್ಟ್ ತೀರ್ಪು ಖಂಡಿಸಿದ ಮಂದಕೃಷ್ಣ ಮಾದಿಗ

ದಲಿತರು ಕ್ರೈಸ್ತರಾದರೆ ಅವರ ಎಸ್‌ಸಿ ಸ್ಥಾನಮಾನ ರದ್ದುಗೊಳ್ಳಲಿದೆ ಎಂಬ ಸುಪ್ರೀಂ ಕೋರ್ಟ್ ತೀರ್ಪನ್ನು ಬಲವಾಗಿ ಖಂಡಿಸುತ್ತೇವೆ ಎಂದು ಎಂಆರ್‌ಪಿಎಸ್ ಫೌಂಡೇಶನ್ ಅಧ್ಯಕ್ಷ ಮಂದಕೃಷ್ಣ ಮಾದಿಗ ಹೇಳಿದರು. "ದೇಶದಲ್ಲಿ ಜಾತಿ ವ್ಯವಸ್ಥೆಯನ್ನು ನಿರ್ಮೂಲನೆ ಮಾಡಬೇಕು,...

ಜಾರ್ಖಂಡ್: ರಾಮನವಮಿ ಘರ್ಷಣೆಗೆ ಸಂಬಂಧಿಸಿದ 19 ಜನರನ್ನು ಬಂಧಿಸಿ, ಕೈಕೋಳ ಹಾಕಿ ಸಾರ್ವಜನಿಕ ಮೆರವಣಿಗೆ ಮಾಡಿದ ಪೊಲೀಸರು

ಜಾರ್ಖಂಡ್‌ನ ಗರ್ವಾ ಜಿಲ್ಲೆಯಲ್ಲಿ ರಾಮನವಮಿ ಮೆರವಣಿಗೆಯ ಸಂದರ್ಭದಲ್ಲಿ ಎರಡು ಸಮುದಾಯಗಳ ನಡುವೆ ನಡೆದ ಘರ್ಷಣೆಯ ನಂತರ ಕನಿಷ್ಠ 19 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.  ಭದ್ರತಾ ಪಡೆಗಳನ್ನು ಭಾರೀ ಪ್ರಮಾಣದಲ್ಲಿ ನಿಯೋಜಿಸಿದ ನಂತರ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ : ಹೊಸ ಮಸೂದೆ ಅಂಗೀಕರಿಸಿದ ಇಸ್ರೇಲ್ ಸಂಸತ್ತು

ಇಸ್ರೇಲ್ ಸಂಸತ್ತು ಸೋಮವಾರ (ಮಾರ್ಚ್ 30, 2026) ಹೊಸ ಮಸೂದೆಯೊಂದನ್ನು ಅಂಗೀಕರಿಸಿದೆ. ಇದರ ಪ್ರಕಾರ, ಮಿಲಿಟರಿ ನ್ಯಾಯಾಲಯದಲ್ಲಿ ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಲಾಗಿದೆ. ಪ್ರಧಾನಿ ಬೆಂಜಮಿನ್...

ಇರಾನ್ ಮೇಲೆ ದಾಳಿ : ಅಮೆರಿಕ ವಿಮಾನಗಳಿಗೆ ತನ್ನ ವಾಯುಪ್ರದೇಶ ಮುಚ್ಚಿದ ಸ್ಪೇನ್

ಇರಾನ್ ಮೇಲಿನ ದಾಳಿಗಳಲ್ಲಿ ಭಾಗಿಯಾಗಿರುವ ಅಮೆರಿಕದ ವಿಮಾನಗಳಿಗೆ ಸ್ಪೇನ್ ತನ್ನ ವಾಯುಪ್ರದೇಶವನ್ನು ನಿರ್ಬಂಧಿಸಿದೆ ಎಂದು ರಕ್ಷಣಾ ಸಚಿವೆ ಮಾರ್ಗರಿಟಾ ರೋಬಲ್ಸ್ (ಮಾ.30) ಸೋಮವಾರ ತಿಳಿಸಿದ್ದಾರೆ. ಜಂಟಿಯಾಗಿ ನಿರ್ವಹಿಸುವ ಸೇನಾ ನೆಲೆಗಳನ್ನು ಬಳಸಲು ಈ...

ಜನಗಣತಿ-2027 : ‘ಸ್ಥಿರ’ ಲಿವ್-ಇನ್ ಜೋಡಿಗೆ ವೈವಾಹಿಕ ಸ್ಥಾನಮಾನ

ತಮ್ಮ ಸಂಬಂಧ 'ಸ್ಥಿರ' ಎಂದು ಹೇಳಿಕೊಳ್ಳುವ ಲಿವ್-ಇನ್ ಜೋಡಿಗಳನ್ನು 2027ರ ಜನಗಣತಿಯಲ್ಲಿ ವಿವಾಹಿತ ದಂಪತಿಯೆಂದು ಪರಿಗಣಿಸಲಾಗುತ್ತದೆ ಎಂದು ವರದಿಯಾಗಿದೆ. ಜನಗಣತಿ ವೆಬ್‌ಸೈಟ್‌ನ FAQ (ಪದೇ ಪದೇ ಕೇಳಲಾಗುವ ಪ್ರಶ್ನೆಗಳು) ವಿಭಾಗದಲ್ಲಿ ಈ ಬಗ್ಗೆ ಸ್ಪಷ್ಟನೆ...

ಉನ್ನತ ಸಾಂಸ್ಥಿಕ ಹುದ್ದೆಗಳಲ್ಲಿ ‘ಬಹುಜನ’ ಪ್ರಾತಿನಿಧ್ಯದ ಕೊರತೆ: ವ್ಯವಸ್ಥಿತ ತಾರತಮ್ಯದ ರೂಪ ಎಂದ ರಾಹುಲ್ ಗಾಂಧಿ 

ಉನ್ನತ ಸಂಸ್ಥೆಗಳ ಹಿರಿಯ ನಾಯಕತ್ವದಲ್ಲಿ "ಬಹುಜನ" ಸಮುದಾಯಗಳಿಗೆ ಪ್ರಾತಿನಿಧ್ಯದ ಕೊರತೆಯಿದೆ ಎಂದು ರಾಹುಲ್ ಗಾಂಧಿ ಸೋಮವಾರ ಆರೋಪಿಸಿದ್ದಾರೆ. ಇದು ವ್ಯವಸ್ಥಿತ ತಾರತಮ್ಯದ ಒಂದು ರೂಪವಾಗಿದ್ದು ಅದನ್ನು ಪರಿಹರಿಸಬೇಕು ಎಂದು ಹೇಳಿದ್ದಾರೆ.  ಲೋಕಸಭೆಯ ವಿರೋಧ ಪಕ್ಷದ...