Homeಮುಖಪುಟಪತ್ರಕರ್ತ ಕಪ್ಪನ್‌ಗೆ ಪೊಲೀಸರು ಹಿಂಸೆ ನೀಡಿದ್ದಾರೆ- ಕೇರಳ ಪತ್ರಕರ್ತರ ಸಂಘ

ಪತ್ರಕರ್ತ ಕಪ್ಪನ್‌ಗೆ ಪೊಲೀಸರು ಹಿಂಸೆ ನೀಡಿದ್ದಾರೆ- ಕೇರಳ ಪತ್ರಕರ್ತರ ಸಂಘ

ನ. 21 ರಂದು ಮಥುರಾ ಜೈಲಿನಲ್ಲಿ KUWJ ವಕೀಲ ವಿಲ್ಸ್ ಮ್ಯಾಥ್ಯೂಸ್ ಮತ್ತು ಪತ್ರಕರ್ತ ಸಿದ್ದೀಕ್ ಕಪ್ಪನ್ ನಡುವೆ ನಡೆದ ಅರ್ಧ ಘಂಟೆಯ ಮಾತುಕತೆ ನಡೆದಿದೆ.

- Advertisement -
- Advertisement -

ಕೇರಳ ಯೂನಿಯನ್ ಆಫ್ ವರ್ಕಿಂಗ್ ಜರ್ನಲಿಸ್ಟ್ಸ್ (KUWJ), ಸುಪ್ರೀಂ ಕೋರ್ಟ್ ಮುಂದೆ ಸಲ್ಲಿಸಿರುವ ಅಫಿಡವಿಟ್‌ನಲ್ಲಿ, ಕೇರಳ ಪತ್ರಕರ್ತ ಸಿದ್ದೀಕ್ ಕಪ್ಪನ್ ಅವರನ್ನು “ಮೂರು ಬಾರಿ ಥಳಿಸಲಾಗಿದೆ ಮತ್ತು ಬಂಧನದಲ್ಲಿದ್ದಾಗ ಮಾನಸಿಕ ಹಿಂಸೆ ನೀಡಲಾಗಿದೆ” ಎಂದು ಆರೋಪಿಸಿದೆ.

ನವೆಂಬರ್ 21 ರಂದು ಮಥುರಾ ಜೈಲಿನಲ್ಲಿ KUWJ ವಕೀಲ ವಿಲ್ಸ್ ಮ್ಯಾಥ್ಯೂಸ್ ಮತ್ತು ಪತ್ರಕರ್ತ ಸಿದ್ದೀಕ್ ಕಪ್ಪನ್ ನಡುವೆ ನಡೆದ ಅರ್ಧ ಘಂಟೆಯ ಮಾತುಕತೆಯನ್ನು ಅಫಿಡವಿಟ್‌ನಲ್ಲಿ ಉಲ್ಲೇಖಿಸಲಾಗಿದೆ.

“ಕಪ್ಪನ್ ದೇಹದ ಮೇಲೆ ಮೂರು ಬಾರಿ ಲಾಠಿಯಿಂದ ಹೊಡೆಯಲಾಗಿದೆ. ಕನ್ನಡಕವನ್ನು ತೆಗೆದ ನಂತರ ಮೂರು ಬಾರಿ ಕಪಾಳಮೋಕ್ಷ ಮಾಡಿ, ಎಳೆದೊಯ್ಯಲಾಗಿದೆ, ಸಂಜೆ 6 ರಿಂದ ಬೆಳಗ್ಗೆ 6 ರವರೆಗೆ ಎಚ್ಚರವಾಗಿರುವಂತೆ ಬಲವಂತ ಮಾಡಲಾಗಿದೆ. ಸರಿಯಾದ ಔಷಧಿಗಳನ್ನು ನೀಡದೇ, ಗಂಭೀರ ಮಾನಸಿಕ ಹಿಂಸೆ ನೀಡಿದ್ದಾರೆ’ ಎಂದು ಉಲ್ಲೇಖಿಸಲಾಗಿದೆ.

ಇದನ್ನೂ ಓದಿ: ಕೇರಳ ಮೂಲದ ಪತ್ರಕರ್ತ ಸಿದ್ದೀಕ್‌ಗೆ ವಕೀಲರ ಭೇಟಿಗೆ ಸುಪ್ರೀಂ ಅನುಮತಿ

ದಿ ವೈರ್‌ನೊಂದಿಗೆ ಮಾತನಾಡಿರುವ ವಕೀಲ ಮ್ಯಾಥ್ಯೂಸ್, ’ಮಾತುಕತೆಯಲ್ಲಿ ಕಪ್ಪನ್ ತನ್ನನ್ನು ಹೊಡೆದು ಗಂಭೀರ ಮಾನಸಿಕ ಹಿಂಸೆಗೆ ಒಳಪಡಿಸಲಾಗಿದೆ ಎಂದು ದೃಢಪಡಿಸಿದ್ದಾರೆ. ಕಳೆದ ತಿಂಗಳು ಸುಪ್ರೀಂ ಕೋರ್ಟ್ ನೀಡಿದ ಆದೇಶದ ನಂತರ ವಕೀಲರು ಕೇರಳದ ಪತ್ರಕರ್ತರೊಂದಿಗೆ ಸಭೆ ನಡೆಸಲು ಸಾಧ್ಯವಾಯಿತು’ ಎಂದು ಹೇಳಿದ್ದಾರೆ.

ಹತ್ರಾಸ್‌ನ ದಲಿತ ಯುವತಿಯ ಮೇಲೆ ನಡೆದಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣದ ಕುರಿತು ವರದಿ ಮಾಡಲು ಅಕ್ಟೋಬರ್ 5 ರಂದು ಉತ್ತರಪ್ರದೇಶಕ್ಕೆ ತೆರಳಿದ್ದ, ದೆಹಲಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕೇರಳ ಮೂಲದ ಪರ್ತಕರ್ತ ಸಿದ್ದೀಕ್ ಕಪ್ಪನ್ ಅವರನ್ನುಉತ್ತರಪ್ರದೇಶ ಪೊಲೀಸರು ಬಂಧಿಸಿದ್ದರು.

ಕಪ್ಪನ್ ಮತ್ತು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದ (CFI) ಇಬ್ಬರು ಸದಸ್ಯರು ಹತ್ರಾಸ್ ಅತ್ಯಾಚಾರದ ಬಗ್ಗೆ ಧಾರ್ಮಿಕ ದ್ವೇಷವನ್ನು ಉಂಟುಮಾಡುವ “ಪಿತೂರಿಯ” ಭಾಗವಾಗಿದ್ದಾರೆ ಎಂದು ಉತ್ತರ ಪ್ರದೇಶ ಪೊಲೀಸರು ಆರೋಪಿಸಿದ್ದಾರೆ ಮತ್ತು ಕಠಿಣ ಯುಎಪಿಎ ಮತ್ತು ದೇಶದ್ರೋಹ ಸೇರಿದಂತೆ ವಿವಿಧ ಆರೋಪಗಳ ಮೇಲೆ ಬಂಧಿಸಿದ್ದಾರೆ.


ಇದನ್ನೂ ಓದಿ: ಬಿಜೆಪಿ ನಾಯಕರ ದ್ವಿನೀತಿ: ಬಂಧನದಲ್ಲಿರುವ ಕೇರಳ ಮೂಲದ ಪತ್ರಕರ್ತನ ಪತ್ನಿ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...

ಕರ್ನಾಟಕ ಎಸ್‌ಐಆರ್: ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಮಂಗಳೂರು: ಶೈಕ್ಷಣಿಕ ಕ್ಷೇತ್ರದಲ್ಲಿ ತಮ್ಮ ವಿಶಿಷ್ಟ ಸೇವೆಯ ಮೂಲಕ ದೇಶ-ವಿದೇಶಗಳಲ್ಲಿ ಗುರುತಿಸಿಕೊಂಡಿರುವ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರಿಗೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ...

SIR ಸೂತ್ರದಿಂದ ಬದಲಾಗುತ್ತಾ ಬೆಂಗಳೂರಿನ 28 ಕ್ಷೇತ್ರಗಳ ಗೆಲುವಿನ ಸಮೀಕರಣ?

ರಾಜ್ಯ ರಾಜಕೀಯದ ಶಕ್ತಿಕೇಂದ್ರವಾದ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ‘ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR)’ ಪ್ರಕ್ರಿಯೆಯು ಮಹತ್ವದ ರಾಜಕೀಯ ಮತ್ತು ಆಡಳಿತಾತ್ಮಕ ಚರ್ಚೆಯನ್ನು ಹುಟ್ಟುಹಾಕಿದೆ. ಎಸ್‌ಐಆರ್‌ಗೂ ಮುನ್ನ ನಗರದಲ್ಲಿದ್ದ ಸುಮಾರು 1.03...

ಮಣಿಪುರದಲ್ಲಿ ಹಿಂಸಾಚಾರಕ್ಕೆ 306 ಬಲಿ, 49 ಮಂದಿ ನಾಪತ್ತೆ: ವಿಧಾನಸಭೆಯಲ್ಲಿ ಗೃಹ ಸಚಿವರ ಸ್ಪಷ್ಟನೆ

ಇಂಫಾಲ್: ಮಣಿಪುರದಲ್ಲಿ 2023ರ ಮೇ ತಿಂಗಳಲ್ಲಿ ಭುಗಿಲೆದ್ದ ಜನಾಂಗೀಯ ಹಿಂಸಾಚಾರಕ್ಕೆ ಮೂರು ವರ್ಷಗಳಿಗೂ ಹೆಚ್ಚು ಕಾಲ ಕಳೆದಿದ್ದರೂ, ಅದರ ಪರಿಣಾಮದಿಂದ ರಾಜ್ಯ ಸಂಪೂರ್ಣವಾಗಿ ಹೊರಬಂದಿಲ್ಲ. ಹಿಂಸಾಚಾರ ಆರಂಭವಾದ ಬಳಿಕ ಇದುವರೆಗೆ ಕನಿಷ್ಠ 306...

ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ನಿಧಿ ದುರ್ಬಳಕೆ; ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷದ ಸಿ.ಸಿ. ರಸ್ತೆ ನಿರ್ಮಾಣ!

ಸಮಾಜ ಕಲ್ಯಾಣ ಇಲಾಖೆಯ 'ಪ್ರಗತಿ ಕಾಲೋನಿ' ಯೋಜನೆಯ ನಿಧಿ ದುರ್ಬಳಕೆಯಾಗಿರುವ ಆರೋಪ ಕೇಳಿಬಂದಿದ್ದು, ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣ ಮಾಡಿರುವ ಪ್ರಕರಣ ಬೆಂಗಳೂರು...

SIR: ‘ಚುನಾವಣಾ ಆಯೋಗದಿಂದ ನೋಟಿಸ್‌’ ಇಲ್ಲದಿರುವ ದಾಖಲೆಗಳನ್ನು ಎಲ್ಲಿಂದಾ ತರೋದು? ಸಾರ್ವಜನಿಕರ ಪ್ರಶ್ನೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗವು ಬಳಸುತ್ತಿರುವ 'Logical Discrepancy' (ತಾರ್ಕಿಕ ವ್ಯತ್ಯಾಸ) ಎಂಬ ಸಾಫ್ಟ್‌ವೇರ್ ಆಧಾರಿತ ಪರಿಶೀಲನೆಯು ತಾಂತ್ರಿಕವಾಗಿ ದೋಷರಹಿತವೆಂದು ತೋರಿದರೂ, ವಾಸ್ತವದಲ್ಲಿ ಲಕ್ಷಾಂತರ ನೈಜ...

SIR ರಗಳೆ: ಕೊನೆಗೂ 43.81 ಲಕ್ಷ ಮತದಾರರ ನೋಟಿಸ್ ಪಟ್ಟಿ ಬಹಿರಂಗಪಡಿಸಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಭಾರಿ ಸದ್ದು ಮಾಡುತ್ತಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗೆ ಗುರಿಯಾಗಿರುವ 43.81 ಲಕ್ಷ ಮತದಾರರ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಕೊನೆಗೂ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ...

‘ಆರ್‌ಎಸ್‌ಎಸ್‌ ಅಡಗಿಕೊಂಡಿದೆ’: ಮೋಹನ್ ಭಾಗವತ್‌ ಯುಕೆ ಭೇಟಿ ವಿರೋಧಿಸಿ ಲಂಡನ್‌ನಲ್ಲಿ ಪ್ರತಿಭಟನೆ

ಲಂಡನ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರ ಯುನೈಟೆಡ್ ಕಿಂಗ್‌ಡಮ್‌ ಭೇಟಿಯನ್ನು ವಿರೋಧಿಸಿ ಲಂಡನ್‌ನ ಪಾರ್ಲಿಮೆಂಟ್ ಸ್ಕ್ವೇರ್‌ನಲ್ಲಿ ನೂರಾರು ಜನರು ಪ್ರತಿಭಟನೆ ನಡೆಸಿದ್ದಾರೆ. ಭಾಗವತ್ ಅವರ ಯುಕೆ ಪ್ರವಾಸದ...

ಪಂಚಾಯಿತಿಯಲ್ಲಿ ಅಸ್ಪೃಶ್ಯತೆ ಆಚರಣೆ-ಪ್ರತ್ಯೇಕ ಟೀ ಲೋಟ; ಆತ್ಮಹತ್ಯೆಗೆ ಯತ್ನಿಸಿದ ಪೌರಕಾರ್ಮಿಕ ಮಹಿಳೆ

ಕೆಲಸದ ಸ್ಥಳದಲ್ಲಿ ನಡೆಯುತ್ತಿದ್ದ ಅಸ್ಪೃಶ್ಯತೆ ಆಚರಣೆಯಿಂದ ಮನನೊಂದ 37 ವರ್ಷದ ದಲಿತ ನೈರ್ಮಲ್ಯ ಕಾರ್ಮಿಕರೊಬ್ಬರು ಕ್ರಿಮಿನಾಶಕ ಸೇವಿಸಿ ಆತ್ಮತ್ಯೆಗೆ ಯತ್ನಿಸಿರುವ ಘಟನೆ ತಮಿಳುನಾಡಿನ ಮೇಲೂರು ಸಮೀಪದ ಕಂಬೂರ್ ಪಂಚಾಯತ್‌ನಲ್ಲಿ ಬೆಳಕಿಗೆ ಬಂದಿದೆ. ...

ಗೌರಿ, ಗಾಂಧಿಯನ್ನು ಕೊಂದದ್ದು ಬರೀ ಬುಲೆಟ್‌ಗಳಲ್ಲ, ಕೋಮುವಾದಿ ಸಿದ್ಧಾಂತ: ವಿದ್ಯಾರ್ಥಿ ನಾಯಕಿ ದಾನಿಶ್ ಅಲಿ

"ಗಾಂಧಿ, ಗೌರಿಯನ್ನು ಕೊಂದಿದ್ದು ಬರೀ ಬುಲೆಟ್‌ಗಳಲ್ಲ, ಅದು ಸಿದ್ಧಾಂತ ಎಂಬುದನ್ನು ನಾವು ನೆನಪಿಡಬೇಕು. ಈ ಸಿದ್ಧಾಂತಗಳ ವಿರುದ್ಧವಾಗಿ ನಾವು ಇಂದು ಹೋರಾಡಬೇಕಿದೆ” ಎಂದು ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (JNU) ವಿದ್ಯಾರ್ಥಿ ನಾಯಕಿ...