Homeಮುಖಪುಟ‘ಹತ್ರಾಸ್‌ನಲ್ಲಿ ಯಾವುದೇ ಕೆಲಸ ಇರಲಿಲ್ಲ’: ಪತ್ರಕರ್ತ ಸಿದ್ದಿಕ್ ಕಪ್ಪನ್‌‌ಗೆ ಜಾಮೀನು ತಿರಸ್ಕರಿಸಿದ ಅಲಹಾಬಾದ್ ಹೈಕೋರ್ಟ್

‘ಹತ್ರಾಸ್‌ನಲ್ಲಿ ಯಾವುದೇ ಕೆಲಸ ಇರಲಿಲ್ಲ’: ಪತ್ರಕರ್ತ ಸಿದ್ದಿಕ್ ಕಪ್ಪನ್‌‌ಗೆ ಜಾಮೀನು ತಿರಸ್ಕರಿಸಿದ ಅಲಹಾಬಾದ್ ಹೈಕೋರ್ಟ್

- Advertisement -
- Advertisement -

ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಅಡಿ ಪ್ರಕರಣದಲ್ಲಿ ಸಿಲುಕಿರುವ ಪತ್ರಕರ್ತ ಸಿದ್ದಿಕ್ ಕಪ್ಪನ್ ಅವರ ಜಾಮೀನು ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ಮಂಗಳವಾರ ತಿರಸ್ಕರಿಸಿದ್ದು, ಹತ್ರಾಸ್‌ನಲ್ಲಿ ಸಿದ್ದಿಕ್ ಕಪ್ಪನ್‌ಗೆ ಯಾವುದೇ ಕೆಲಸ ಇರಲಿಲ್ಲ ಎಂದು ಹೇಳಿದೆ. ಸಿದ್ದೀಕ್ ಕಪ್ಪನ್ ಅವರು ಕಳೆದ 670 ದಿನಗಳಿಂದ ಜೈಲಿನಲ್ಲಿದ್ದಾರೆ. 2020ರ ಅಕ್ಟೋಬರ್‌ನಲ್ಲಿ ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ನಡೆದ ದಲಿತ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣವನ್ನು ವರದಿ ಮಾಡಲು ತೆರಳುತ್ತಿದ್ದಾಗ ಅವರನ್ನು ಬಂಧಿಸಲಾಗಿತ್ತು.

2020 ರ ಅಕ್ಟೋಬರ್ 5 ರಂದು ಸಿದ್ದೀಕ್ ಕಪ್ಪನ್ ಅವರನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದರು. ಅವರು ಇತರ ಮೂವರೊಂದಿಗೆ ಕಾರಿನಲ್ಲಿ ಹತ್ರಾಸ್‌ಗೆ ಪ್ರಯಾಣಿಸುತ್ತಿದ್ದರು. 2020 ರ ಸೆಪ್ಟೆಂಬರ್ 14 ರಂದು ಹತ್ರಾಸ್‌ನಲ್ಲಿ ದಲಿತ 19 ವರ್ಷದ ಯುವತಿಯ ಮೇಲೆ ಠಾಕೂರ್ ಸಮುದಾಯದ ನಾಲ್ವರು ಸಾಮೂಹಿಕ ಅತ್ಯಾಚಾರ ಮಾಡಿ ಮತ್ತು ಹತ್ಯೆಗೈದಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕೇರಳ ಮೂಲದ ಪತ್ರಕರ್ತರಾಗಿರುವ ಸಿದ್ದಿಕ್‌ ಜಾತಿ ಆಧಾರಿತ ಗಲಭೆಯನ್ನು ಪ್ರಾರಂಭಿಸಲು ಮತ್ತು ಕೋಮು ಸೌಹಾರ್ದತೆಯನ್ನು ಸೃಷ್ಟಿಸಲು ಉದ್ದೇಶಿಸಿದ್ದಾರೆ ಎಂದು ಉತ್ತರ ಪ್ರದೇಶದ ಪೊಲೀಸರು ಮೊದಲು ಆರೋಪಿಸಿದ್ದರು. ತರುವಾಯ, ದೇಶದ್ರೋಹದ ಆರೋಪಗಳು ಮತ್ತು ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯಿದೆಯ ಅಡಿಯಲ್ಲಿ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.

ಜಾಮೀನು ನಿರಾಕರಿಸಿದ ಮಥುರಾ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿದ ಮೇಲ್ಮನವಿಯನ್ನು ಅಲಹಾಬಾದ್ ಹೈಕೋರ್ಟ್‌ನ ಲಕ್ನೋ ಪೀಠದ ನ್ಯಾಯಮೂರ್ತಿ ಕ್ರಿಶನ್ ಪಹಲ್ ತಿರಸ್ಕರಿಸಿದ್ದಾರೆ. ಗುರುವಾರ ಬಿಡುಗಡೆ ಮಾಡಿದ ತಮ್ಮ ಆದೇಶದಲ್ಲಿ ನ್ಯಾಯಮೂರ್ತಿ ಪಹಲ್ ಅವರು, “ಸಿದ್ದೀಕ್ ಕಪ್ಪನ್ ಅವರನ್ನು ಬಂಧಿಸಿದಾಗ ಹತ್ರಾಸ್‌ನಲ್ಲಿ ಅವರಿಗೆ ಯಾವುದೇ ಕೆಲಸವಿರಲಿಲ್ಲ ಎಂದು ತನಿಖೆಯ ಸಮಯದಲ್ಲಿ ತಿಳಿದುಬಂದಿದೆ. ಚಾರ್ಜ್ ಶೀಟ್ ಮತ್ತು ದಾಖಲಿಸಲಾದ ದಾಖಲೆಗಳನ್ನು ಪರಿಶೀಲಿಸಿದಾಗ, ಅರ್ಜಿದಾರನು ಅಪರಾಧ ಎಸಗಿದ್ದಾನೆ ಎಂದು ಪ್ರಾಥಮಿಕವಾಗಿ ಬಹಿರಂಗಪಡಿಸುತ್ತದೆ” ಎಂದು ಹೇಳಿದ್ದಾರೆ.

“ಅರ್ಜಿದಾರನು ತಾನು ಪತ್ರಕರ್ತನಾಗಿದ್ದು, ತನ್ನ ವೃತ್ತಿಪರ ಕರ್ತವ್ಯದ ಕಾರಣದಿಂದ ಹತ್ರಾಸ್ ಘಟನೆಯ ಸ್ಥಳಕ್ಕೆ ಭೇಟಿ ನೀಡಲು ಬಯಸಿದ್ದಾಗಿ ಹೇಳಿರುವ ಪ್ರತಿವಾದವನ್ನು ಚಾರ್ಜ್ ಶೀಟ್‌ನಲ್ಲಿನ ಅಸಮರ್ಪಕತೆಗಳು ಮತ್ತು ಕಾರಿನಲ್ಲಿ ಪ್ರಯಾಣಿಸುವಾಗ ಬಂಧಿಸಲ್ಪಟ್ಟ ವ್ಯಕ್ತಿಗಳ ಕಾರಣಕ್ಕೆ ರದ್ದಾಗಿದೆ. ಅರ್ಜಿದಾರರು ಮತ್ತು ಅವರ ಸಹೋದ್ಯೋಗಿಗಳು ಬಳಸುತ್ತಿರುವ ಕಳಂಕಿತ ಹಣವನ್ನು ತಳ್ಳಿಹಾಕಲಾಗುವುದಿಲ್ಲ” ಎಂದು ನ್ಯಾಯಾಲಯ ಹೇಳಿದೆ.

ಇದನ್ನೂ ಓದಿ: ಹತ್ರಾಸ್ ದಲಿತ ಯುವತಿಯ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆಗೆ 1 ವರ್ಷ – ಸಂಪೂರ್ಣ ವಿವರ

ಸಿದ್ದಿಕ್ ಕಪ್ಪನ್ ನಿರಪರಾಧಿಯಾಗಿದ್ದು ಅವರು ಅಸಾಮರಸ್ಯ ಹರಡಲು ಯಾವುದೇ ವೇದಿಕೆಯನ್ನು ಬಳಸಿಲ್ಲ ಎಂದು ನ್ಯಾಯಾಲಯದಲ್ಲಿ ಅವರ ಪರ ವಕೀಲರು ವಾದಿಸಿದ್ದರು.

ಕಳೆದ ವರ್ಷ ಸಲ್ಲಿಸಲಾಗಿರುವ 5,000 ಪುಟಗಳ ಚಾರ್ಜ್‌ಶೀಟ್‌ನಲ್ಲಿ ಸಿದ್ದಿಕ್ ಕಪ್ಪನ್ ಅವರು ನಿಷೇಧಿತ ಸಂಘಟನೆಯಾದ ಸಿಮಿಗೆ ಜೊತೆಗೆ ಸಂಪರ್ಕ ಹೊಂದಿದ್ದಾರೆಂದು ಆರೋಪಿಸಲಾಗಿತ್ತು. ಸಿದ್ದಿಕ್ ಕಪ್ಪನ್ ಅವರು ಬರೆದ ಮೂವತ್ತಾರು ಲೇಖನಗಳು ಆರೋಪಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ.

ಈ ಲೇಖನಗಳಲ್ಲಿ ವಿವಾದಾತ್ಮಕ ಪೌರತ್ವ ಕಾನೂನಿನ ವಿರುದ್ಧದ ಪ್ರತಿಭಟನೆಗಳ ವರದಿ ಕೂಡಾ ಒಂದಾಗಿದೆ. “ಶಾಹೀನ್ ಬಾಗ್ ಪ್ರತಿಭಟನೆಯ ಸಂದರ್ಭದಲ್ಲಿ ಹಿಂದೂ ವ್ಯಕ್ತಿ ಕಪಿಲ್ ಗುರ್ಜರ್ ನಡೆಸಿದ ಗುಂಡಿನ ದಾಳಿಯ ಬಗ್ಗೆ ಲೇಖನವು ಮಾತನಾಡುತ್ತದೆ. ಈ ಘಟನೆಯನ್ನು ಲೇಖನವು ಮಹಾತ್ಮ ಗಾಂಧಿಯವರ ಹತ್ಯೆಗೆ ಹೋಲಿಸುತ್ತದೆ. ಲೇಖನವು ದೆಹಲಿ ಪೊಲೀಸರು ಪ್ರತಿಭಟನೆಗಳನ್ನು ನಿರ್ವಹಿಸಿದ ರೀತಿಯನ್ನು ಟೀಕಿಸುತ್ತದೆ” ಎಂದು ಆರೋಪಪಟ್ಟಿ ಹೇಳಿದೆ.

ಇದನ್ನೂ ಓದಿ: ಹತ್ರಾಸ್ ಪ್ರಕರಣ: ಸಂತ್ರಸ್ತ ಕುಟುಂಬ ಮತ್ತು ವಕೀಲರಿಗೆ ನ್ಯಾಯಾಲಯದಲ್ಲೇ ಬೆದರಿಕೆ!

ಆದಾಗ್ಯೂ, ಸಿದ್ದಿಕ್ ಕಪ್ಪನ್ ಅವರ ವಕೀಲ ವಿಲ್ಸ್ ಮ್ಯಾಥ್ಯೂಸ್ ಈ ಆರೋಪ ಪಟ್ಟಿಯನ್ನು ಏಕಪಕ್ಷೀಯ ಎಂದು ಕರೆದಿದ್ದಾರೆ. “ಕಪ್ಪನ್‌ ಅವರಿಗೆ ಮರೆಮಾಚಲು ಏನೂ ಇಲ್ಲ. ಅವರು ತಮ್ಮ ಮುಗ್ಧತೆಯನ್ನು ಸಾಬೀತುಪಡಿಸಲು ನಾರ್ಕೋ ವಿಶ್ಲೇಷಣೆ ಅಥವಾ ಬ್ರೈನ್ ಮ್ಯಾಪಿಂಗ್ ಪರೀಕ್ಷೆಗಳಿಗೆ ಒಳಗಾಗಲು ಕೂಡಾ ತಯಾರು” ಎಂದು ಮ್ಯಾಥ್ಯೂಸ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಅಲಹಾಬಾದ್ ಹೈಕೋರ್ಟ್‌ನ ಆದೇಶದಿಂದ ನಿರಾಶೆಯಾಗಿದೆ ಎಂದು ಕೇರಳದ ಕಾರ್ಯನಿರತ ಪತ್ರಕರ್ತರ ಒಕ್ಕೂಟದ ದೆಹಲಿ ಘಟಕ ಹೇಳಿದ್ದು, ಈ ಆದೇಶವನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸುವುದಾಗಿ ಪತ್ರಕರ್ತರ ಸಂಘ ತಿಳಿಸಿದೆ. “ಗೌರವಾನ್ವಿತ ಸುಪ್ರೀಂ ಕೋರ್ಟ್ ಮಧ್ಯಪ್ರವೇಶಿಸುತ್ತದೆ ಮತ್ತು ಪ್ರತಿ ನಾಗರಿಕರಿಗೆ ಮತ್ತು ವಿಶೇಷವಾಗಿ ಸಂವಿಧಾನದ ಭಾಗ 3 ರ ಅಡಿಯಲ್ಲಿ ಪತ್ರಕರ್ತರಿಗೆ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಮೂಲಭೂತ ಹಕ್ಕನ್ನು ಎತ್ತಿಹಿಡಿಯುತ್ತದೆ ಎಂದು ನಾವು ಭಾವಿಸುತ್ತೇವೆ” ಎಂದು ಅದು ಹೇಳಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

  1. ಜಾಮೀನು ನಿರಾಕರಿಸುವಂತಹ ಯಾವ ಅಪರಾಧವನ್ನು ಈ ಪತ್ರಕರ್ತ ಎಸಗಿದ್ದಾನೆ? ನ್ಯಾಯಾಂಗದ ಬಗ್ಗೆ ಇದ್ದ ಬರವಸೆಯೂ ಹುಸಿಯಾದರೆ,ಅದಕ್ಕಿಂತ ದೊಡ್ಡ ದುರಂತ ಮತ್ತೊಂದು ಇಲ್ಲ.

LEAVE A REPLY

Please enter your comment!
Please enter your name here

- Advertisment -

Must Read

ಸರ್ವಾಧಿಕಾರಿಗಳ ಕಪಿಮುಷ್ಠಿಯಿಂದ ಪ್ರಜಾಪ್ರಭುತ್ವವನ್ನು ರಕ್ಷಿಸಲು ಮತದಾನ ಮಾಡಿ: ಖರ್ಗೆ, ರಾಹುಲ್‌ ಗಾಂಧಿ ಆಗ್ರಹ

0
ಲೋಕಸಭೆ ಚುನಾವಣೆಯ ಎರಡನೇ ಹಂತದ ಮತದಾನ ಬಿರುಸಿನಿಂದ ನಡೆಯುತ್ತಿದೆ. ಸರ್ವಾಧಿಕಾರಿಗಳ ಕಪಿಮುಷ್ಠಿಯಿಂದ ಪ್ರಜಾಪ್ರಭುತ್ವವನ್ನು ರಕ್ಷಿಸಲು ಮತದಾರರು ಮನೆಯಿಂದ ಹೊರಗೆ ಬಂದು ಮತ ಚಲಾಯಿಸುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮನವಿ ಮಾಡಿದ್ದಾರೆ. ಇದು ಸಾಮಾನ್ಯ...