Homeಮುಖಪುಟಜಾಮೀನು ಸಿಕ್ಕರೂ ಸಿದ್ದಿಕ್‌ ಕಪ್ಪನ್‌ಗೆ ಸಿಗದ ಬಿಡುಗಡೆ; ಯುಎಪಿಎ ಬಳಿಕ ಇ.ಡಿ. ತೊಂದರೆ

ಜಾಮೀನು ಸಿಕ್ಕರೂ ಸಿದ್ದಿಕ್‌ ಕಪ್ಪನ್‌ಗೆ ಸಿಗದ ಬಿಡುಗಡೆ; ಯುಎಪಿಎ ಬಳಿಕ ಇ.ಡಿ. ತೊಂದರೆ

- Advertisement -
- Advertisement -

ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಪ್ರಕರಣದಲ್ಲಿ ಎರಡು ವರ್ಷಗಳಿಂದ ಜೈಲಿನಲ್ಲಿರುವ ಕೇರಳದ ಪತ್ರಕರ್ತ ಸಿದ್ದಿಕ್ ಕಪ್ಪನ್‌ರವರಿಗೆ ಸುಪ್ರೀಂ ಕೋರ್ಟ್ ಜಾಮೀನು ನೀಡಲು ಒಪ್ಪಿದರೂ ಮತ್ತೊಂದು ಸವಾಲು ಕಪ್ಪನ್‌ ಅವರಿಗೆ ಎದುರಾಗಿದೆ. ಜಾರಿ ನಿರ್ದೇಶನಾಲಯದ (ಇ.ಡಿ.) ಮುಂದೆ ಅವರು ವಿಚಾರಣೆಗೆ ಒಳಗಾಗಬೇಕಿದೆ.

“ಜಾರಿ ನಿರ್ದೇಶನಾಲಯವು ತನಿಖೆ ನಡೆಸುತ್ತಿರುವ ಪ್ರಕರಣವು ಇನ್ನೂ ವಿಚಾರಣೆಗೆ ಬಾಕಿ ಇರುವ ಕಾರಣ ಲಕ್ನೋ ಜೈಲಿನಲ್ಲಿ ಸಿದ್ದಿಕ್‌ ಮುಂದುವರಿಯಲಿದ್ದಾರೆ” ಎಂದು ಕಾರಾಗೃಹ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರತಿಯೊಬ್ಬ ವ್ಯಕ್ತಿಗೂ ಅಭಿವ್ಯಕ್ತಿ ಸ್ವಾತಂತ್ರ್ಯವಿದೆ ಎಂದಿದ್ದ ಭಾರತದ ಮುಖ್ಯ ನ್ಯಾಯಮೂರ್ತಿಗಳಾದ ಯುಯು ಲಲಿತ್‌ರವರು, ಕಪ್ಪನ್‌ರವರಿಗೆ ಜಾಮೀನು ನೀಡಲು ಒಪ್ಪಿದ್ದರು. ಯುಎಪಿಎ ಕುಣಿಕೆಯಿಂದ ಕೊಂಚ ಬಿಡಿಸಿಕೊಂಡು ನಿಟ್ಟುಸಿರು ಬಿಡಬೇಕೆನ್ನುವ ಹೊತ್ತಿನಲ್ಲಿ ಜಾರಿ ನಿರ್ದೇಶನಾಲಯದ ಸವಾಲುಗಳನ್ನು ಸಿದ್ದಿಕ್ ಎದುರಿಸಬೇಕಾಗಿದೆ.

“ಕಪ್ಪನ್‌ ಮಾನ್ಯತೆ ಪಡೆದ ಪತ್ರಕರ್ತರಲ್ಲ. ಅವರಿಗೆ ಗಲಭೆಗಳನ್ನು ಪ್ರಚೋದಿಸಲು ಹಣ ನೀಡಲಾಗಿದೆ. ಅವರು ಗಲಭೆ ಪರಿಸ್ಥಿತಿಯನ್ನು ಸೃಷ್ಟಿಸಲು ಮತ್ತು ಸ್ಫೋಟಕಗಳನ್ನು ಬಳಸಲು ಪ್ರಯತ್ನಿಸುತ್ತಿದ್ದರು. ಅವರು ಪಿಎಫ್‌ಐಗೆ ಸೇರಿದವರು ಮತ್ತು ಇದು ಭಯೋತ್ಪಾದಕ ಸಂಘಟನೆ” ಎಂದು ಉತ್ತರ ಪ್ರದೇಶ ಸರ್ಕಾರದ ಪರವಾಗಿ ವಕೀಲ ಮಹೇಶ್ ಜೇಠ್ಮಲಾನಿ ಕೋರ್ಟ್‌ನಲ್ಲಿ ವಾದಿಸಿದ್ದರು.

ಕಪ್ಪನ್ ಬಳಿಯಿಂದ ಏನನ್ನು ವಶಪಡಿಸಿಕೊಂಡಿದ್ದೀರಿ? ಕಾರಿನಲ್ಲಿ ಯಾವುದೇ ಸ್ಫೋಟಕಗಳು ಕಂಡುಬಂದಿಲ್ಲ, ಅವನ ಬಳಿ ಯಾವುದೇ ವಸ್ತುಗಳು ಕಂಡುಬಂದಿಲ್ಲ. ಹಾಗಿದ್ದ ಮೇಲೆ ಸ್ಪೋಟಕಗಳನ್ನು ಎಲ್ಲಿ ಬಳಸಿದರು ಎಂದು ಪ್ರಶ್ನಿಸಿದ ಲಲಿತ್‌ರವರು ಜಾಮೀನು ಮಂಜೂರು ಮಾಡಿದ್ದರು. ಮುಂದಿನ ಆರು ವಾರಗಳ ಕಾಲ ದೆಹಲಿ ಪೊಲೀಸರಿಗೆ ಮತ್ತು ಆನಂತರ ಕೇರಳ ಪೊಲೀಸರಿಗೆ ವರದಿ ಮಾಡಿಕೊಳ್ಳಬೇಕು ಎಂಬ ಷರತ್ತು ವಿಧಿಸಲಾಗಿದೆ.

2020ರ ಅಕ್ಟೋಬರ್ 5 ರಂದು ಸಿದ್ದಿಕ್‌ ಕಪ್ಪನ್ ಅವರನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದರು. 2020ರ ಸೆಪ್ಟೆಂಬರ್ 14 ರಂದು ಹತ್ರಾಸ್‌ನಲ್ಲಿ 19 ವರ್ಷದ ದಲಿತ ಯುವತಿಯ ಮೇಲಿನ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ವರದಿ ಮಾಡುವುದಾಕ್ಕಾಗಿ ಕಪ್ಪನ್ ಇತರ ಮೂವರೊಂದಿಗೆ ಕಾರಿನಲ್ಲಿ ಹತ್ರಾಸ್‌ಗೆ ಪ್ರಯಾಣಿಸುತ್ತಿದ್ದಾಗ ಬಂಧನಕ್ಕೊಳಗಾಗಿದ್ದರು. ಅಂದಿನಿಂದ ಅವರಿಗೆ ಜಾಮೀನು ನಿರಾಕರಿಸಲಾಗಿತ್ತು.

ಇದನ್ನೂ ಓದಿರಿ: ನೀಟ್ ಟಾಪರ್ ಮೂರು ಕೋಚಿಂಗ್ ಸೆಂಟರ್‌ಗಳಲ್ಲಿ ತರಬೇತಿ ಪಡೆದಿದ್ದು ನಿಜವೇ? ಜಾಹೀರಾತುಗಳ ಹಿಂದಿನ ಮರ್ಮವೇನು?

ಕೇರಳ ಮೂಲದ ಪತ್ರಕರ್ತರಾಗಿರುವ ಸಿದ್ದಿಕ್‌ ಜಾತಿ ಆಧಾರಿತ ಗಲಭೆಯನ್ನು ಪ್ರಾರಂಭಿಸಲು ಮತ್ತು ಕೋಮು ಸೌಹಾರ್ದತೆಯನ್ನು ಸೃಷ್ಟಿಸಲು ಉದ್ದೇಶಿಸಿದ್ದಾರೆ ಎಂದು ಉತ್ತರ ಪ್ರದೇಶದ ಪೊಲೀಸರು ಮೊದಲು ಆರೋಪಿಸಿದ್ದರು. ತರುವಾಯ, ದೇಶದ್ರೋಹದ ಆರೋಪಗಳು ಮತ್ತು ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯಿದೆಯ ಅಡಿಯಲ್ಲಿ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.

“ಸಿದ್ದಿಕ್ ಕಪ್ಪನ್ ನಿರಪರಾಧಿಯಾಗಿದ್ದು ಅವರು ಸಾಮರಸ್ಯ ಕದಡಲು ಯಾವುದೇ ವೇದಿಕೆಯನ್ನು ಬಳಸಿಲ್ಲ. ಕಪ್ಪನ್‌ ಅವರಿಗೆ ಮರೆಮಾಚಲು ಏನೂ ಇಲ್ಲ. ಅವರು ತಮ್ಮ ಮುಗ್ಧತೆಯನ್ನು ಸಾಬೀತುಪಡಿಸಲು ನಾರ್ಕೋ ವಿಶ್ಲೇಷಣೆ ಅಥವಾ ಬ್ರೈನ್ ಮ್ಯಾಪಿಂಗ್ ಪರೀಕ್ಷೆಗಳಿಗೆ ಒಳಗಾಗಲು ಕೂಡಾ ತಯಾರು” ಎಂದು ನ್ಯಾಯಾಲಯದಲ್ಲಿ ಅವರ ಪರ ವಕೀಲರು ವಾದಿಸಿದ್ದರು.

ಕಪ್ಪನ್ ಮತ್ತು ಇತರ ಇಬ್ಬರೊಂದಿಗೆ ಬಂಧಿಸಲ್ಪಟ್ಟ ಕ್ಯಾಬ್ ಚಾಲಕನಿಗೆ ಇತ್ತೀಚೆಗೆ ಅಲಹಾಬಾದ್ ಹೈಕೋರ್ಟ್  ಜಾಮೀನು ನೀಡಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...