Homeಮುಖಪುಟಸಿದ್ದೀಕ್ ಕಪ್ಪನ್ ಮುಸ್ಲಿಮರನ್ನು ಸಂತ್ರಸ್ತ್ರರಂತೆ ಚಿತ್ರಿಸಿ, ಪ್ರಚೋದಿಸುತ್ತಿದ್ದರು: ಅವರ ಲೇಖನಗಳೆ ಚಾರ್ಜ್‌ಶೀಟ್‌ಗೆ ಆಧಾರ!

ಸಿದ್ದೀಕ್ ಕಪ್ಪನ್ ಮುಸ್ಲಿಮರನ್ನು ಸಂತ್ರಸ್ತ್ರರಂತೆ ಚಿತ್ರಿಸಿ, ಪ್ರಚೋದಿಸುತ್ತಿದ್ದರು: ಅವರ ಲೇಖನಗಳೆ ಚಾರ್ಜ್‌ಶೀಟ್‌ಗೆ ಆಧಾರ!

- Advertisement -
- Advertisement -

ಕಳೆದ ವರ್ಷ ಅಕ್ಟೋಬರ್‌ 5 ರಂದು ಉತ್ತರ ಪ್ರದೇಶದ ಹತ್ರಾಸ್‌‌ ದಲಿತ ಬಾಲಕಿಯ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ವರದಿ ಮಾಡಲು ತೆರಳಿದ್ದ ಕೇರಳ ಮೂಲದ ಪತ್ರಕರ್ತ ಸಿದ್ದೀಕ್ ಕಪ್ಪನ್‌ ರವರನ್ನು ದೇಶದ್ರೋಹದ ಮೇಲೆ ಬಂಧಿಸಿ ಯುಎಪಿಎ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಕಳೆದ ಒಂದು ವರ್ಷದಿಂದ ಅವರು ಜೈಲಿನಲ್ಲಿದ್ದಾರೆ. ಅವರ ವಿರುದ್ಧ ಸಲ್ಲಿಸಿರುವ ಚಾರ್ಜ್‌ಶೀಟ್‌ನಲ್ಲಿ ಅವರು ‘ಮುಸ್ಲಿಮರನ್ನು ಸಂತ್ರಸ್ತ್ರರಂತೆ ಚಿತ್ರಿಸಿ, ಪ್ರಚೋದಿಸುತ್ತಿದ್ದರು’ ಎಂಬುದೇ ಅವರ ವಿರುದ್ಧ ಸಾಕ್ಷ್ಯ ಎಂದು ಪರಿಗಣಿಸಲಾಗಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

“ಸಿದ್ದೀಕ್ ಕಪ್ಪನ್‌ ಜವಾಬ್ದಾರಿಯುತ ಪತ್ರಕರ್ತನಂತೆ ಬರೆದಿಲ್ಲ. ಅವರು ಕೇವಲ ಮುಸ್ಲಿಮರನ್ನು ಪ್ರಚೋದಿಸುವ, ಮಾವೋವಾದಿಗಳು ಮತ್ತು ಕಮ್ಯುನಿಷ್ಟರ ಬಗ್ಗೆ ಸಿಂಪಥಿ ತೋರುವ ಲೇಖನಗಳನ್ನು ಮಾತ್ರ ಬರೆದರು ಎಂದು ಅವರು ವಿರುದ್ಧ ಉತ್ತರ ಪ್ರದೇಶದ ವಿಶೇಷ ಕಾರ್ಯಪಡೆ ಚಾರ್ಜ್ ಶೀಟ್‌ನಲ್ಲಿ ಉಲ್ಲೇಖಿಸಿದೆ.

ಒಟ್ಟು 5000 ಪುಟಗಳ ಚಾರ್ಜ್‌ ಶೀಟ್ ಕೇಸ್‌ ಡೈರಿಯನ್ನು ಸಹ ಒಳಗೊಂಡಿದ್ದು, ಅವರು ಮಲೆಯಾಳಂ ಮಾಧ್ಯಮಗಳಿಗೆ ಬರೆದ 36 ಲೇಖನಗಳನ್ನು ಸಾಕ್ಷ್ಯಗಳಾಗಿ ಬಳಸಲಾಗಿದೆ. ಅವುಗಳಲ್ಲಿ ಕೋವಿಡ್ ಸಂದರ್ಭದಲ್ಲಿ ನಡೆದ ನಿಜಾಮುದ್ದೀನ್ ಮರ್ಕಜ್ ಸಭೆ, ಸಿಎಎ ವಿರೋಧಿ ಹೋರಾಟಗಳು, ದೆಹಲಿ ಗಲಭೆ, ರಾಮಜನ್ಮಭೂಮಿ ವಿವಾದ ಮತ್ತು ಶಾರ್ಜಿಲ್ ಇಮಾಮ್ ವಿರುದ್ಧ ಚಾರ್ಜ್‌ಶೀಟ್‌ ಕುರಿತ ಲೇಖನಗಳು ಮುಖ್ಯವಾದವುಗಳಾಗಿವೆ.

“ಅಲಿಘರ್ ಮುಸ್ಲಿಂ ವಿವಿಯಲ್ಲಿ ನಡೆದ ಸಿಎಎ ವಿರುದ್ಧದ ಪ್ರತಿಭಟನೆ ಕುರಿತು, ಮುಸ್ಲಿಮರನ್ನು ಪೊಲೀಸರು ಥಳಿಸಿದರು, ಪಾಕಿಸ್ತಾನಕ್ಕೆ ಹೋಗುವಂತೆ ನಿಂದಿಸಲಾಯಿತು” ಎಂದು ಬರೆದಿದ್ದಾರೆ. ಅಲ್ಲದೆ ದೆಹಲಿ ಗಲಭೆ ಸಂದರ್ಭದಲ್ಲಿ ಮುಸ್ಲಿಮರನ್ನು ಹೆಸರನ್ನು ಬಳಸಿ ಅವರು ಪ್ರಚೋದನೆಗೊಳ್ಳುವಂತೆ ಮಾಡಿದ್ದಾರೆ. ಒಟ್ಟಿನಲ್ಲಿ ಇವರು ಕೇವಲ ಮುಸ್ಲಿಮರನ್ನು ಪ್ರಚೋದಿಸುವ ಲೇಖನಗಳನ್ನೆ ಬರೆದಿದ್ದಾರೆ. ಇದು ಪಿಎಫ್ಐ ಸಂಘಟನೆಯ ಅಜೆಂಡಾವಾಗಿದೆ ಎಂದು ಚಾರ್ಜ್ ಶೀಟ್‌ನಲ್ಲಿ ದೂರಲಾಗಿದೆ. ಇದನ್ನು ಏಪ್ರಿಲ್‌ನಲ್ಲಿ ಸಲ್ಲಿಸಲಾಗಿದೆ.

ಹತ್ರಾಸ್ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಘಟನೆಯನ್ನು ಬಳಸಿಕೊಂಡು ಗಲಭೆ ಸೃಷ್ಟಿಸಲು ಪಿಎಫ್‌ಐ ಬಯಸಿತ್ತು. ಸಿದ್ದೀಕ್ ಕಪ್ಪನ್ ಆ ಸಂಘಟನೆಯ ಥಿಂಕ್ ಟ್ಯಾಂಕ್ ಥರ ಕೆಲಸ ಮಾಡುತ್ತಿದ್ದರು. ಅವರು ನಿಷೇಧಿತ ಸಂಘಟನೆ ಸಿಮಿ ನಡೆಸಿದ ಭಯೋತ್ಪಾದನೆಯನ್ನು ನಿರಾಕರಿಸಲು ಪ್ರಯತ್ನಿಸಿದ್ದಾನೆ ಎಂದು ತನಿಖಾ ಸಂಸ್ಥೆ ಆರೋಪಿಸಿದೆ. ಕಪ್ಪನ್ ಪ್ರಚೋದಿಸಿದ್ದಾರೆ ಎಂಬುದಕ್ಕೆ ಇಬ್ಬರು ಸಾಕ್ಷಿಗಳನ್ನು ಸಹ ಒದಗಿಸಲಾಗಿದೆ.

ಇದನ್ನು ಕಪ್ಪನ್ ವಕೀಲರು ತೀವ್ರವಾಗಿ ವಿರೋಧಿಸಿದ್ದಾರೆ. ಘಟನೆ ನಡೆದ ಉತ್ತರ ಪ್ರದೇಶ ಹತ್ರಾಸ್ ಸ್ಥಳದಲ್ಲಿ ಸಿದ್ದೀಕ್ ಕಪ್ಪನ್ ಇರಲೇ ಇಲ್ಲ. ಘಟನೆ ನಡೆದ ಎರಡು ದಿನಗಳ ನಂತರ ಹತ್ರಾಸ್‌ಗೆ ಹೋಗುವ ದಾರಿಯಲ್ಲಿ ಅವರನ್ನು ಬಂಧಿಸಲಾಯಿತು. ಹೀಗಿದ್ದಾಗ ಅವರು ಅಲ್ಲಿ ಗಲಭೇ ಪ್ರಚೋದಿಸಲು ಸಾಧ್ಯವೇ ಇಲ್ಲ. ಅವರು ಸ್ಥಳಕ್ಕೆ ಹೋಗದಿದ್ದರೆ ಅವರ ವಿರುದ್ಧ ಸಾಕ್ಷಿಗಳು ಹೇಗೆ ಇರಲು ಸಾಧ್ಯ ಎಂದು ಪ್ರಶ್ನಿಸಿದ್ದಾರೆ.

ಪತ್ರಕರ್ತ ಸಿದ್ದೀಕ್ ಕಪ್ಪನ್ ಮತ್ತು ಇತರ ಮೂವರ ವಿರುದ್ಧ ದಾಖಲಾದ, ‘ಶಾಂತಿ ಕದಡುವ ಭೀತಿ’ಯ ಆರೋಪದ ವಿಚಾರಣೆಯನ್ನು ಉತ್ತರ ಪ್ರದೇಶದ ಮಥುರಾದ ನ್ಯಾಯಾಲಯವು ಜೂನ್ 16 ರಂದು ಕೈಬಿಟ್ಟಿದೆ. ನಿಗದಿತ ಆರು ತಿಂಗಳೊಳಗೆ ಅವರ ವಿರುದ್ಧದ ವಿಚಾರಣೆಯನ್ನು ಪೂರ್ಣಗೊಳಿಸಲು ಪೊಲೀಸರು ವಿಫಲರಾಗಿದ್ದಾರೆ ಎಂದು ಪ್ರತಿವಾದಿ ವಕೀಲರು ತಿಳಿಸಿದ್ದಾರೆ.ನ ಯುಎಪಿಎ ಅಡಿಯಲ್ಲಿನ ಪ್ರಕರಣದ ವಿಚಾರಣೆ ನಡೆಯುತ್ತಿದೆ.


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೆಎನ್‌ಯು: ಎಡಪಂಥೀಯ ವಿದ್ಯಾರ್ಥಿ ಸಂಘಟನೆ ಮತ್ತು ಎಬಿವಿಪಿ ನಡುವೆ ಘರ್ಷಣೆ: ಉದ್ವಿಗ್ನತೆ  

ಸೋಮವಾರ ಮುಂಜಾನೆ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ಎಡಪಂಥೀಯ ಮತ್ತು ಬಲಪಂಥೀಯ ವಿದ್ಯಾರ್ಥಿ ಗುಂಪುಗಳು ಪರಸ್ಪರ ಹಿಂಸಾಚಾರವನ್ನು ಬಿಚ್ಚಿಟ್ಟಿದ್ದಾರೆ ಎಂದು ಆರೋಪಿಸಿದ ನಂತರ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ (ಜೆಎನ್‌ಯು) ಆವರಣದಲ್ಲಿ ಉದ್ವಿಗ್ನತೆ ಉಂಟಾಗಿದೆ.  ಸೋಮವಾರ ಬೆಳಗಿನ...

ಡ್ರಗ್ ದೊರೆ ‘ಎಲ್ ಮೆಂಚೊ’ ಹತ್ಯೆ : ಮೆಕ್ಸಿಕೋದಲ್ಲಿ ಭುಗಿಲೆದ್ದ ಹಿಂಸಾಚಾರ

'ಎಲ್ ಮೆಂಚೊ' ಎಂದೇ ಪರಿಚಿತನಾಗಿದ್ದ ಡ್ರಗ್ ದೊರೆ ನೆಮೆಸಿಯೊ ಒಸೆಗುಯೆರಾನನ್ನು ಕಾರ್ಯಾಚರಣೆಯೊಂದರಲ್ಲಿ ಕೊಂದಿರುವುದಾಗಿ ಮೆಕ್ಸಿಕನ್ ಸೇನೆ ಭಾನುವಾರ (ಫೆ.22) ಘೋಷಿಸಿದೆ. ಆ ಬಳಿಕ ದೇಶದ ವಿವಿಧ ಭಾಗಗಳಲ್ಲಿ ಭಾರೀ ಹಿಂಸಾಚಾರ ಭುಗಿಲೆದ್ದಿದೆ ಎಂದು...

ನೇಪಾಳ ಬಸ್ ಅಪಘಾತ: ಧಾಡಿಂಗ್‌ನಲ್ಲಿ ತ್ರಿಶೂಲಿ ನದಿಗೆ ಬಸ್ ಬಿದ್ದು 18 ಮಂದಿ ಸಾವು; ಮುಂದುವರಿದ ರಕ್ಷಣಾ ಕಾರ್ಯಾಚರಣೆ

ಧಾಡಿಂಗ್ (ನೇಪಾಳ): ಸೋಮವಾರ ಮುಂಜಾನೆ ನೇಪಾಳದ ಧಾಡಿಂಗ್‌ನಲ್ಲಿ ಪ್ರಯಾಣಿಕರ ಬಸ್ ತ್ರಿಶೂಲಿ ನದಿಗೆ ಉರುಳಿಬಿದ್ದ ಪರಿಣಾಮ ಕನಿಷ್ಠ 18 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದಲ್ಲಿ 24 ಕ್ಕೂ ಹೆಚ್ಚು ಪ್ರಯಾಣಿಕರು...

ಅಜಿತ್ ಪವಾರ್ ಸಾವು | ಪತನಗೊಂಡ ವಿಮಾನದ ನಿರ್ವಹಣಾ ಸಂಸ್ಥೆಗೂ ಟಿಡಿಪಿಗೂ ನಂಟು : ರೋಹಿತ್ ಪವಾರ್

ಅಜಿತ್ ಪವಾರ್ ಸಾವಿಗೆ ಕಾರಣವಾದ ಪತನಗೊಂಡ ವಿಮಾನದ ನಿರ್ವಾಹಕ ಸಂಸ್ಥೆ ವಿಎಸ್ಆರ್ ವೆಂಚರ್ಸ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಡುವೆ ಸಂಬಂಧವಿದೆ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಶರದ್ ಪವಾರ್ ಬಣದ)...

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...