Homeಮುಖಪುಟಸಿದ್ದೀಕ್ ಕಪ್ಪನ್ ಮುಸ್ಲಿಮರನ್ನು ಸಂತ್ರಸ್ತ್ರರಂತೆ ಚಿತ್ರಿಸಿ, ಪ್ರಚೋದಿಸುತ್ತಿದ್ದರು: ಅವರ ಲೇಖನಗಳೆ ಚಾರ್ಜ್‌ಶೀಟ್‌ಗೆ ಆಧಾರ!

ಸಿದ್ದೀಕ್ ಕಪ್ಪನ್ ಮುಸ್ಲಿಮರನ್ನು ಸಂತ್ರಸ್ತ್ರರಂತೆ ಚಿತ್ರಿಸಿ, ಪ್ರಚೋದಿಸುತ್ತಿದ್ದರು: ಅವರ ಲೇಖನಗಳೆ ಚಾರ್ಜ್‌ಶೀಟ್‌ಗೆ ಆಧಾರ!

- Advertisement -
- Advertisement -

ಕಳೆದ ವರ್ಷ ಅಕ್ಟೋಬರ್‌ 5 ರಂದು ಉತ್ತರ ಪ್ರದೇಶದ ಹತ್ರಾಸ್‌‌ ದಲಿತ ಬಾಲಕಿಯ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ವರದಿ ಮಾಡಲು ತೆರಳಿದ್ದ ಕೇರಳ ಮೂಲದ ಪತ್ರಕರ್ತ ಸಿದ್ದೀಕ್ ಕಪ್ಪನ್‌ ರವರನ್ನು ದೇಶದ್ರೋಹದ ಮೇಲೆ ಬಂಧಿಸಿ ಯುಎಪಿಎ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಕಳೆದ ಒಂದು ವರ್ಷದಿಂದ ಅವರು ಜೈಲಿನಲ್ಲಿದ್ದಾರೆ. ಅವರ ವಿರುದ್ಧ ಸಲ್ಲಿಸಿರುವ ಚಾರ್ಜ್‌ಶೀಟ್‌ನಲ್ಲಿ ಅವರು ‘ಮುಸ್ಲಿಮರನ್ನು ಸಂತ್ರಸ್ತ್ರರಂತೆ ಚಿತ್ರಿಸಿ, ಪ್ರಚೋದಿಸುತ್ತಿದ್ದರು’ ಎಂಬುದೇ ಅವರ ವಿರುದ್ಧ ಸಾಕ್ಷ್ಯ ಎಂದು ಪರಿಗಣಿಸಲಾಗಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

“ಸಿದ್ದೀಕ್ ಕಪ್ಪನ್‌ ಜವಾಬ್ದಾರಿಯುತ ಪತ್ರಕರ್ತನಂತೆ ಬರೆದಿಲ್ಲ. ಅವರು ಕೇವಲ ಮುಸ್ಲಿಮರನ್ನು ಪ್ರಚೋದಿಸುವ, ಮಾವೋವಾದಿಗಳು ಮತ್ತು ಕಮ್ಯುನಿಷ್ಟರ ಬಗ್ಗೆ ಸಿಂಪಥಿ ತೋರುವ ಲೇಖನಗಳನ್ನು ಮಾತ್ರ ಬರೆದರು ಎಂದು ಅವರು ವಿರುದ್ಧ ಉತ್ತರ ಪ್ರದೇಶದ ವಿಶೇಷ ಕಾರ್ಯಪಡೆ ಚಾರ್ಜ್ ಶೀಟ್‌ನಲ್ಲಿ ಉಲ್ಲೇಖಿಸಿದೆ.

ಒಟ್ಟು 5000 ಪುಟಗಳ ಚಾರ್ಜ್‌ ಶೀಟ್ ಕೇಸ್‌ ಡೈರಿಯನ್ನು ಸಹ ಒಳಗೊಂಡಿದ್ದು, ಅವರು ಮಲೆಯಾಳಂ ಮಾಧ್ಯಮಗಳಿಗೆ ಬರೆದ 36 ಲೇಖನಗಳನ್ನು ಸಾಕ್ಷ್ಯಗಳಾಗಿ ಬಳಸಲಾಗಿದೆ. ಅವುಗಳಲ್ಲಿ ಕೋವಿಡ್ ಸಂದರ್ಭದಲ್ಲಿ ನಡೆದ ನಿಜಾಮುದ್ದೀನ್ ಮರ್ಕಜ್ ಸಭೆ, ಸಿಎಎ ವಿರೋಧಿ ಹೋರಾಟಗಳು, ದೆಹಲಿ ಗಲಭೆ, ರಾಮಜನ್ಮಭೂಮಿ ವಿವಾದ ಮತ್ತು ಶಾರ್ಜಿಲ್ ಇಮಾಮ್ ವಿರುದ್ಧ ಚಾರ್ಜ್‌ಶೀಟ್‌ ಕುರಿತ ಲೇಖನಗಳು ಮುಖ್ಯವಾದವುಗಳಾಗಿವೆ.

“ಅಲಿಘರ್ ಮುಸ್ಲಿಂ ವಿವಿಯಲ್ಲಿ ನಡೆದ ಸಿಎಎ ವಿರುದ್ಧದ ಪ್ರತಿಭಟನೆ ಕುರಿತು, ಮುಸ್ಲಿಮರನ್ನು ಪೊಲೀಸರು ಥಳಿಸಿದರು, ಪಾಕಿಸ್ತಾನಕ್ಕೆ ಹೋಗುವಂತೆ ನಿಂದಿಸಲಾಯಿತು” ಎಂದು ಬರೆದಿದ್ದಾರೆ. ಅಲ್ಲದೆ ದೆಹಲಿ ಗಲಭೆ ಸಂದರ್ಭದಲ್ಲಿ ಮುಸ್ಲಿಮರನ್ನು ಹೆಸರನ್ನು ಬಳಸಿ ಅವರು ಪ್ರಚೋದನೆಗೊಳ್ಳುವಂತೆ ಮಾಡಿದ್ದಾರೆ. ಒಟ್ಟಿನಲ್ಲಿ ಇವರು ಕೇವಲ ಮುಸ್ಲಿಮರನ್ನು ಪ್ರಚೋದಿಸುವ ಲೇಖನಗಳನ್ನೆ ಬರೆದಿದ್ದಾರೆ. ಇದು ಪಿಎಫ್ಐ ಸಂಘಟನೆಯ ಅಜೆಂಡಾವಾಗಿದೆ ಎಂದು ಚಾರ್ಜ್ ಶೀಟ್‌ನಲ್ಲಿ ದೂರಲಾಗಿದೆ. ಇದನ್ನು ಏಪ್ರಿಲ್‌ನಲ್ಲಿ ಸಲ್ಲಿಸಲಾಗಿದೆ.

ಹತ್ರಾಸ್ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಘಟನೆಯನ್ನು ಬಳಸಿಕೊಂಡು ಗಲಭೆ ಸೃಷ್ಟಿಸಲು ಪಿಎಫ್‌ಐ ಬಯಸಿತ್ತು. ಸಿದ್ದೀಕ್ ಕಪ್ಪನ್ ಆ ಸಂಘಟನೆಯ ಥಿಂಕ್ ಟ್ಯಾಂಕ್ ಥರ ಕೆಲಸ ಮಾಡುತ್ತಿದ್ದರು. ಅವರು ನಿಷೇಧಿತ ಸಂಘಟನೆ ಸಿಮಿ ನಡೆಸಿದ ಭಯೋತ್ಪಾದನೆಯನ್ನು ನಿರಾಕರಿಸಲು ಪ್ರಯತ್ನಿಸಿದ್ದಾನೆ ಎಂದು ತನಿಖಾ ಸಂಸ್ಥೆ ಆರೋಪಿಸಿದೆ. ಕಪ್ಪನ್ ಪ್ರಚೋದಿಸಿದ್ದಾರೆ ಎಂಬುದಕ್ಕೆ ಇಬ್ಬರು ಸಾಕ್ಷಿಗಳನ್ನು ಸಹ ಒದಗಿಸಲಾಗಿದೆ.

ಇದನ್ನು ಕಪ್ಪನ್ ವಕೀಲರು ತೀವ್ರವಾಗಿ ವಿರೋಧಿಸಿದ್ದಾರೆ. ಘಟನೆ ನಡೆದ ಉತ್ತರ ಪ್ರದೇಶ ಹತ್ರಾಸ್ ಸ್ಥಳದಲ್ಲಿ ಸಿದ್ದೀಕ್ ಕಪ್ಪನ್ ಇರಲೇ ಇಲ್ಲ. ಘಟನೆ ನಡೆದ ಎರಡು ದಿನಗಳ ನಂತರ ಹತ್ರಾಸ್‌ಗೆ ಹೋಗುವ ದಾರಿಯಲ್ಲಿ ಅವರನ್ನು ಬಂಧಿಸಲಾಯಿತು. ಹೀಗಿದ್ದಾಗ ಅವರು ಅಲ್ಲಿ ಗಲಭೇ ಪ್ರಚೋದಿಸಲು ಸಾಧ್ಯವೇ ಇಲ್ಲ. ಅವರು ಸ್ಥಳಕ್ಕೆ ಹೋಗದಿದ್ದರೆ ಅವರ ವಿರುದ್ಧ ಸಾಕ್ಷಿಗಳು ಹೇಗೆ ಇರಲು ಸಾಧ್ಯ ಎಂದು ಪ್ರಶ್ನಿಸಿದ್ದಾರೆ.

ಪತ್ರಕರ್ತ ಸಿದ್ದೀಕ್ ಕಪ್ಪನ್ ಮತ್ತು ಇತರ ಮೂವರ ವಿರುದ್ಧ ದಾಖಲಾದ, ‘ಶಾಂತಿ ಕದಡುವ ಭೀತಿ’ಯ ಆರೋಪದ ವಿಚಾರಣೆಯನ್ನು ಉತ್ತರ ಪ್ರದೇಶದ ಮಥುರಾದ ನ್ಯಾಯಾಲಯವು ಜೂನ್ 16 ರಂದು ಕೈಬಿಟ್ಟಿದೆ. ನಿಗದಿತ ಆರು ತಿಂಗಳೊಳಗೆ ಅವರ ವಿರುದ್ಧದ ವಿಚಾರಣೆಯನ್ನು ಪೂರ್ಣಗೊಳಿಸಲು ಪೊಲೀಸರು ವಿಫಲರಾಗಿದ್ದಾರೆ ಎಂದು ಪ್ರತಿವಾದಿ ವಕೀಲರು ತಿಳಿಸಿದ್ದಾರೆ.ನ ಯುಎಪಿಎ ಅಡಿಯಲ್ಲಿನ ಪ್ರಕರಣದ ವಿಚಾರಣೆ ನಡೆಯುತ್ತಿದೆ.


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...