Homeಮುಖಪುಟಸಿದ್ದೀಕ್ ಕಪ್ಪನ್ ಮುಸ್ಲಿಮರನ್ನು ಸಂತ್ರಸ್ತ್ರರಂತೆ ಚಿತ್ರಿಸಿ, ಪ್ರಚೋದಿಸುತ್ತಿದ್ದರು: ಅವರ ಲೇಖನಗಳೆ ಚಾರ್ಜ್‌ಶೀಟ್‌ಗೆ ಆಧಾರ!

ಸಿದ್ದೀಕ್ ಕಪ್ಪನ್ ಮುಸ್ಲಿಮರನ್ನು ಸಂತ್ರಸ್ತ್ರರಂತೆ ಚಿತ್ರಿಸಿ, ಪ್ರಚೋದಿಸುತ್ತಿದ್ದರು: ಅವರ ಲೇಖನಗಳೆ ಚಾರ್ಜ್‌ಶೀಟ್‌ಗೆ ಆಧಾರ!

- Advertisement -
- Advertisement -

ಕಳೆದ ವರ್ಷ ಅಕ್ಟೋಬರ್‌ 5 ರಂದು ಉತ್ತರ ಪ್ರದೇಶದ ಹತ್ರಾಸ್‌‌ ದಲಿತ ಬಾಲಕಿಯ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ವರದಿ ಮಾಡಲು ತೆರಳಿದ್ದ ಕೇರಳ ಮೂಲದ ಪತ್ರಕರ್ತ ಸಿದ್ದೀಕ್ ಕಪ್ಪನ್‌ ರವರನ್ನು ದೇಶದ್ರೋಹದ ಮೇಲೆ ಬಂಧಿಸಿ ಯುಎಪಿಎ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಕಳೆದ ಒಂದು ವರ್ಷದಿಂದ ಅವರು ಜೈಲಿನಲ್ಲಿದ್ದಾರೆ. ಅವರ ವಿರುದ್ಧ ಸಲ್ಲಿಸಿರುವ ಚಾರ್ಜ್‌ಶೀಟ್‌ನಲ್ಲಿ ಅವರು ‘ಮುಸ್ಲಿಮರನ್ನು ಸಂತ್ರಸ್ತ್ರರಂತೆ ಚಿತ್ರಿಸಿ, ಪ್ರಚೋದಿಸುತ್ತಿದ್ದರು’ ಎಂಬುದೇ ಅವರ ವಿರುದ್ಧ ಸಾಕ್ಷ್ಯ ಎಂದು ಪರಿಗಣಿಸಲಾಗಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

“ಸಿದ್ದೀಕ್ ಕಪ್ಪನ್‌ ಜವಾಬ್ದಾರಿಯುತ ಪತ್ರಕರ್ತನಂತೆ ಬರೆದಿಲ್ಲ. ಅವರು ಕೇವಲ ಮುಸ್ಲಿಮರನ್ನು ಪ್ರಚೋದಿಸುವ, ಮಾವೋವಾದಿಗಳು ಮತ್ತು ಕಮ್ಯುನಿಷ್ಟರ ಬಗ್ಗೆ ಸಿಂಪಥಿ ತೋರುವ ಲೇಖನಗಳನ್ನು ಮಾತ್ರ ಬರೆದರು ಎಂದು ಅವರು ವಿರುದ್ಧ ಉತ್ತರ ಪ್ರದೇಶದ ವಿಶೇಷ ಕಾರ್ಯಪಡೆ ಚಾರ್ಜ್ ಶೀಟ್‌ನಲ್ಲಿ ಉಲ್ಲೇಖಿಸಿದೆ.

ಒಟ್ಟು 5000 ಪುಟಗಳ ಚಾರ್ಜ್‌ ಶೀಟ್ ಕೇಸ್‌ ಡೈರಿಯನ್ನು ಸಹ ಒಳಗೊಂಡಿದ್ದು, ಅವರು ಮಲೆಯಾಳಂ ಮಾಧ್ಯಮಗಳಿಗೆ ಬರೆದ 36 ಲೇಖನಗಳನ್ನು ಸಾಕ್ಷ್ಯಗಳಾಗಿ ಬಳಸಲಾಗಿದೆ. ಅವುಗಳಲ್ಲಿ ಕೋವಿಡ್ ಸಂದರ್ಭದಲ್ಲಿ ನಡೆದ ನಿಜಾಮುದ್ದೀನ್ ಮರ್ಕಜ್ ಸಭೆ, ಸಿಎಎ ವಿರೋಧಿ ಹೋರಾಟಗಳು, ದೆಹಲಿ ಗಲಭೆ, ರಾಮಜನ್ಮಭೂಮಿ ವಿವಾದ ಮತ್ತು ಶಾರ್ಜಿಲ್ ಇಮಾಮ್ ವಿರುದ್ಧ ಚಾರ್ಜ್‌ಶೀಟ್‌ ಕುರಿತ ಲೇಖನಗಳು ಮುಖ್ಯವಾದವುಗಳಾಗಿವೆ.

“ಅಲಿಘರ್ ಮುಸ್ಲಿಂ ವಿವಿಯಲ್ಲಿ ನಡೆದ ಸಿಎಎ ವಿರುದ್ಧದ ಪ್ರತಿಭಟನೆ ಕುರಿತು, ಮುಸ್ಲಿಮರನ್ನು ಪೊಲೀಸರು ಥಳಿಸಿದರು, ಪಾಕಿಸ್ತಾನಕ್ಕೆ ಹೋಗುವಂತೆ ನಿಂದಿಸಲಾಯಿತು” ಎಂದು ಬರೆದಿದ್ದಾರೆ. ಅಲ್ಲದೆ ದೆಹಲಿ ಗಲಭೆ ಸಂದರ್ಭದಲ್ಲಿ ಮುಸ್ಲಿಮರನ್ನು ಹೆಸರನ್ನು ಬಳಸಿ ಅವರು ಪ್ರಚೋದನೆಗೊಳ್ಳುವಂತೆ ಮಾಡಿದ್ದಾರೆ. ಒಟ್ಟಿನಲ್ಲಿ ಇವರು ಕೇವಲ ಮುಸ್ಲಿಮರನ್ನು ಪ್ರಚೋದಿಸುವ ಲೇಖನಗಳನ್ನೆ ಬರೆದಿದ್ದಾರೆ. ಇದು ಪಿಎಫ್ಐ ಸಂಘಟನೆಯ ಅಜೆಂಡಾವಾಗಿದೆ ಎಂದು ಚಾರ್ಜ್ ಶೀಟ್‌ನಲ್ಲಿ ದೂರಲಾಗಿದೆ. ಇದನ್ನು ಏಪ್ರಿಲ್‌ನಲ್ಲಿ ಸಲ್ಲಿಸಲಾಗಿದೆ.

ಹತ್ರಾಸ್ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಘಟನೆಯನ್ನು ಬಳಸಿಕೊಂಡು ಗಲಭೆ ಸೃಷ್ಟಿಸಲು ಪಿಎಫ್‌ಐ ಬಯಸಿತ್ತು. ಸಿದ್ದೀಕ್ ಕಪ್ಪನ್ ಆ ಸಂಘಟನೆಯ ಥಿಂಕ್ ಟ್ಯಾಂಕ್ ಥರ ಕೆಲಸ ಮಾಡುತ್ತಿದ್ದರು. ಅವರು ನಿಷೇಧಿತ ಸಂಘಟನೆ ಸಿಮಿ ನಡೆಸಿದ ಭಯೋತ್ಪಾದನೆಯನ್ನು ನಿರಾಕರಿಸಲು ಪ್ರಯತ್ನಿಸಿದ್ದಾನೆ ಎಂದು ತನಿಖಾ ಸಂಸ್ಥೆ ಆರೋಪಿಸಿದೆ. ಕಪ್ಪನ್ ಪ್ರಚೋದಿಸಿದ್ದಾರೆ ಎಂಬುದಕ್ಕೆ ಇಬ್ಬರು ಸಾಕ್ಷಿಗಳನ್ನು ಸಹ ಒದಗಿಸಲಾಗಿದೆ.

ಇದನ್ನು ಕಪ್ಪನ್ ವಕೀಲರು ತೀವ್ರವಾಗಿ ವಿರೋಧಿಸಿದ್ದಾರೆ. ಘಟನೆ ನಡೆದ ಉತ್ತರ ಪ್ರದೇಶ ಹತ್ರಾಸ್ ಸ್ಥಳದಲ್ಲಿ ಸಿದ್ದೀಕ್ ಕಪ್ಪನ್ ಇರಲೇ ಇಲ್ಲ. ಘಟನೆ ನಡೆದ ಎರಡು ದಿನಗಳ ನಂತರ ಹತ್ರಾಸ್‌ಗೆ ಹೋಗುವ ದಾರಿಯಲ್ಲಿ ಅವರನ್ನು ಬಂಧಿಸಲಾಯಿತು. ಹೀಗಿದ್ದಾಗ ಅವರು ಅಲ್ಲಿ ಗಲಭೇ ಪ್ರಚೋದಿಸಲು ಸಾಧ್ಯವೇ ಇಲ್ಲ. ಅವರು ಸ್ಥಳಕ್ಕೆ ಹೋಗದಿದ್ದರೆ ಅವರ ವಿರುದ್ಧ ಸಾಕ್ಷಿಗಳು ಹೇಗೆ ಇರಲು ಸಾಧ್ಯ ಎಂದು ಪ್ರಶ್ನಿಸಿದ್ದಾರೆ.

ಪತ್ರಕರ್ತ ಸಿದ್ದೀಕ್ ಕಪ್ಪನ್ ಮತ್ತು ಇತರ ಮೂವರ ವಿರುದ್ಧ ದಾಖಲಾದ, ‘ಶಾಂತಿ ಕದಡುವ ಭೀತಿ’ಯ ಆರೋಪದ ವಿಚಾರಣೆಯನ್ನು ಉತ್ತರ ಪ್ರದೇಶದ ಮಥುರಾದ ನ್ಯಾಯಾಲಯವು ಜೂನ್ 16 ರಂದು ಕೈಬಿಟ್ಟಿದೆ. ನಿಗದಿತ ಆರು ತಿಂಗಳೊಳಗೆ ಅವರ ವಿರುದ್ಧದ ವಿಚಾರಣೆಯನ್ನು ಪೂರ್ಣಗೊಳಿಸಲು ಪೊಲೀಸರು ವಿಫಲರಾಗಿದ್ದಾರೆ ಎಂದು ಪ್ರತಿವಾದಿ ವಕೀಲರು ತಿಳಿಸಿದ್ದಾರೆ.ನ ಯುಎಪಿಎ ಅಡಿಯಲ್ಲಿನ ಪ್ರಕರಣದ ವಿಚಾರಣೆ ನಡೆಯುತ್ತಿದೆ.


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...