Homeಕರ್ನಾಟಕವೈರಲ್ ವೀಡಿಯೋದ ಒಳಸುಳಿಗಳೇನು? ಸಿದ್ದು-ಡೀಕೆ ನಡುವೆ ಗೌಡರ ದಾಳ!

ವೈರಲ್ ವೀಡಿಯೋದ ಒಳಸುಳಿಗಳೇನು? ಸಿದ್ದು-ಡೀಕೆ ನಡುವೆ ಗೌಡರ ದಾಳ!

- Advertisement -
- Advertisement -

| ಗಿರೀಶ್ ತಾಳಿಕಟ್ಟೆ |

ಕುಮಾರಸ್ವಾಮಿಯವರು ಡೀಕೆ ಮನೆಗೆ ಹೋಗಿ ಅವರ ತಾಯಿಗೆ ಸಾಂತ್ವನ ಹೇಳಿದ್ದಾಗಲಿ, ತಿಹಾರ್ ಜೈಲಿಗೆ ಹೋಗಿ ಮುಖತಃ ಭೇಟಿ ಮಾಡಿದ್ದಾಗಲಿ, ಡೀಕೆ ಬೆಂಗಳೂರಿಗೆ ಬಂದಿಳಿಯುತ್ತಿದ್ದಂತೆ ಕುಮಾರಸ್ವಾಮಿಯವರೇ ಹೋಗಿ ಸ್ವಾಗತಿಸಿದ್ದಾಗಲಿ, `ವೆಲ್‍ಕಂ’ ಮೆರವಣಿಗೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಪಕ್ಷದ ಬಾವುಟದ ಸಮೇತ ಹಾಜರಿರುವಂತೆ ನೋಡಿಕೊಂಡಿದ್ದಾಗಲಿ ಎಲ್ಲವೂ ಗೌಡರ ಲೆಕ್ಕಾಚಾರಗಳೇ ಆಗಿವೆ.

ಇದು ದೇವೇಗೌಡರ ಪಾಲಿಗೆ ಬಯಸದೇ ಬಂದ ಭಾಗ್ಯ. ಹಾಗಂತ ಇದರಲ್ಲಿ ಅವರ ಶ್ರಮ ಏನೇನೂ ಇಲ್ಲ ಅಂತಲ್ಲ. ಆದರೆ ಅವರು ಒಂದು ಹಣ್ಣಿಗೆ ಗುರಿಯಿಟ್ಟು ಎಸೆದ ಕಲ್ಲು, ಎರಡು ಹಣ್ಣುಗಳನ್ನು ತಂದು ಬುಟ್ಟಿಗೆ ಬೀಳಿಸಿದಂತಾಗಿದೆ ಈಗಿನ ರಾಜಕೀಯ ಸನ್ನಿವೇಶ. ಗೌಡರ ನಸೀಬು ಅದೆಷ್ಟು ಹದವಾಗಿದೆಯೆಂದರೆ, ಒಕ್ಕಲಿಗರ ಮೇಲಿನ ಅವರ ಕುಟುಂಬದ ಅಧಿಪತ್ಯವನ್ನು ಕೊನೆಗಾಣಿಸಬೇಕೆಂದು ಟೊಂಕಕಟ್ಟಿದ್ದ ಬಿಜೆಪಿ ಮತ್ತು ಹೆಜ್ಜೆಹೆಜ್ಜೆಗೂ `ಗೌಡರ ಗೌರ್ಮೆಂಟಿ’ಗೆ ಕಾಟ ಕೊಡುತ್ತಲೇ ಬಂದ ಕನ್ನಡ ನ್ಯೂಸ್ ಚಾನೆಲ್‍ಗಳೂ ಅವರಿಗೆ ಅನುಕೂಲವಾಗುವಂತೆ ವರ್ತಿಸಲು ಶುರು ಮಾಡಿವೆ.

ಹೌದು, ಇದು ಡೀಕೆಶಿ ಸುತ್ತ ಹೆಣೆದುಕೊಂಡ ರಾಜಕೀಯ ಕಥನದ ಪೀಠಿಕೆ. ನೋ ಡೌಟ್, ಡೀಕೆ ಈಗ ಕಾಂಗ್ರೆಸ್ ಪಾಲಿನ ದೊಡ್ಡ ಹೀರೊ, ಅದು ಸಹಜವೂ ಕೂಡಾ. ಬಿಜೆಪಿಯ ಸೇಡಿನ ರಾಜಕಾರಣಕ್ಕೆ ಶರಣಾಗದೆ ತಿಹಾರ್ ಜೈಲಿನಲ್ಲಿ ಅಜಮಾಸು ಐವತ್ತು ದಿನ ಕಳೆದುಬಂದ ಡೀಕೆ ಮೇಲೆ ಸಾಮಾನ್ಯ ಕಾರ್ಯಕರ್ತರಿಗಿರಲಿ, ಖುದ್ದು ಹೈಕಮಾಂಡ್‍ಗೇ ವಿಶೇಷ ಅಭಿಮಾನ ಉಕ್ಕಿದೆ. ಇಲ್ಲದೇ ಹೋಗಿದ್ದಲ್ಲಿ ಸ್ವತಃ ಸೋನಿಯಾ ತಿಹಾರ್ ಜೈಲಿಗೆ ಹೋಗಿ ಭೇಟಿ ಮಾಡುತ್ತಿರಲಿಲ್ಲ, ಬಿಡುಗಡೆಯಾದ ಕೂಡಲೇ ತಮ್ಮ ಮನೆಗೇ ಕರೆಸಿಕೊಂಡು ಧೈರ್ಯ ತುಂಬಿ ಕಳಿಸುತ್ತಿರಲಿಲ್ಲ. ಇನ್ನು ಬೆಂಗಳೂರಿಗೆ ಕಾಲಿಟ್ಟ ಡೀಕೆಗೆ ಸಿಕ್ಕ ಅದ್ಭುತ ಸ್ವಾಗತ, ಭಾರೀ ಮೆರವಣಿಗೆಗಳೇನು ನಡೆದವಲ್ಲ, ಅದಕ್ಕೆಲ್ಲ ಪರ್ಮೀಷನ್ ಕೊಟ್ಟದ್ದೇ ಹೈಕಮಾಂಡ್. ಅಷ್ಟೇ ಅಲ್ಲ ಬೆಂಗಳೂರಿಗೆ ಬಂದ ತಕ್ಷಣ ಮನೆಗೆ ಹೋಗದೆ ಸೀದಾ ಕೆಪಿಸಿಸಿ ಕಚೇರಿಗೆ ಹೋಗಿ ಸುದ್ದಿಗೋಷ್ಠಿ ನಡೆಸುವಂತೆ ಸಲಹೆ ಕೊಟ್ಟದ್ದೂ ಹೈಕಮಾಂಡ್! `ಜೈಲಿಗೆ ಹೋಗಿ ಬಂದವ’ ಎಂಬ ಸಣ್ಣ ಅಳುಕು ಹೈಕಮಾಂಡ್‍ಗೆ ಇದ್ದಿದ್ದರೂ ಕೆಪಿಸಿಸಿ ಕಚೇರಿಯ ಹೆಬ್ಬಾಗಿಲು ಅಷ್ಟು ಸಲೀಸಾಗಿ ತೆರೆದುಕೊಳ್ಳುತ್ತಿರಲಿಲ್ಲ.

ಡೀಕೆ ಪರ ನಿಲ್ಲಲು ಗೌಡರಿಗಿರುವ ಕಾರಣವೇನು?

ಕಾಂಗ್ರೆಸ್‍ಗೇನೊ ಡೀಕೆಯನ್ನು `ಹೀರೊ’ ಆಗಿಸುವುದು ಅನಿವಾರ್ಯ. ಆದರೆ ಜೆಡಿಎಸ್‍ಗೆ, ಅರ್ಥಾತ್ ಗೌಡರ ಫ್ಯಾಮಿಲಿಗೆ ಇದ್ದಕ್ಕಿದ್ದಂತೆ ಡೀಕೆ ಮೇಲೆ ಇಂಥಾ ಮಮಕಾರ ಉಕ್ಕಲು ಕಾರಣವೇನು? ಜೀವನಪರ್ಯಂತ ತಮಗೆ ನಿಷ್ಠರಿದ್ದ ನಾಯಕರನ್ನೇ ರಾಜಕೀಯ ಸಮಾಧಿ ಮಾಡಿದ ಗೌಡರಿಗೆ, ನಿನ್ನೆ-ಮೊನ್ನೆವರೆಗೂ ತಮ್ಮ ವಿರುದ್ಧವೇ ಸೆಟೆದು ನಿಂತಿದ್ದ ಡೀಕೆಯನ್ನು ಹೀರೊ ಆಗಿಸುವಂತ ದರ್ದೇನು ಬಂತು?

ದೇವೇಗೌಡರ ರಾಜಕಾರಣದ ಅಡಿಪಾಯವೇ ಜಾತಿ. ಬಾಯಲ್ಲಿ ಹೇಳದೇ ಸಮುದಾಯಕ್ಕೆ ಸಂದೇಶ ರವಾನಿಸುವ ವಿಶೇಷ ಚಾಕಚಕ್ಯತೆ ಅವರದ್ದು. ಗೌಡರ ಈ ರಾಜಕೀಯ ಸಮೀಕರಣವನ್ನು ಬುಡಮೇಲು ಮಾಡಿದ್ದು 2019ರ ಲೋಕಸಭಾ ಚುನಾವಣೆ. ಮಂಡ್ಯ ಒಕ್ಕಲಿಗರ ಸೆಂಟಿಮೆಂಟು, ಸ್ವಾಭಿಮಾನಗಳು ನುಚ್ಚು ನೂರಾಗುವಂತೆ ಅವರ ಮೇಲೆ ತಮ್ಮ ಮೊಮ್ಮಗ ನಿಖಿಲ್ ಕುಮಾರಸ್ವಾಮಿಯನ್ನು ಹೇರಲು ಹೊರಟದ್ದು ದೇವೇಗೌಡರು ಮಾಡಿದ ಬಹುದೊಡ್ಡ ಪ್ರಮಾದ. ಅದು ಮಂಡ್ಯ ರಾಜಕಾರಣಕ್ಕಷ್ಟೇ ಸೀಮಿತವಾಗಲಿಲ್ಲ, ಇಡೀ ಒಕ್ಕಲಿಗ ಸಮುದಾಯದಲ್ಲೆ `ಗೌಡರ ಫ್ಯಾಮಿಲಿ ರಾಜಕಾರಣ’ ಅತಿಯಾಯ್ತು ಎಂಬ ಭಾವನೆಯನ್ನು ಬಿತ್ತಿತ್ತು. ದೇವೇಗೌಡರು ತಮ್ಮ ಕುಟುಂಬದ ಹಿತಾಸಕ್ತಿಗಾಗಿ ಯಾವೆಲ್ಲ ಒಕ್ಕಲಿಗ ನಾಯಕರನ್ನು ಹೇಗೆಲ್ಲ ಬಲಿಕೊಡುತ್ತಾ ಬಂದರು ಅನ್ನೋ ಚರ್ಚೆ ಒಕ್ಕಲಿಗರಲ್ಲೇ ಹರಿದಾಡಲು ಶುರುವಾಯ್ತು. ಅದರ ಪರಿಣಾಮವೇ ಮಂಡ್ಯದಲ್ಲಿ ನಿಖಿಲ್ ಸೋತದ್ದು ಮಾತ್ರವಲ್ಲ, ಒಕ್ಕಲಿಗರ ಪ್ರಾಬಲ್ಯವಿರುವ ತುಮಕೂರಿನಲ್ಲಿ ಸ್ವತಃ ದೇವೇಗೌಡರು ಸೋತುಹೋದರು!

ಹಾಗೆ ನೋಡಿದರೆ, ಗೌಡರ ಕುಟುಂಬಕ್ಕೆ ಸೋಲುಗಳೇನು ಹೊಸದಲ್ಲ. ಆದರೆ ತಮ್ಮದೇ ಕುಟುಂಬ ಮುಖ್ಯಮಂತ್ರಿ ಹುದ್ದೆಯನ್ನು ಆವರಿಸಿದ್ದರೂ, ತಮ್ಮ ಕುಟುಂಬಕ್ಕೆ ನಿಷ್ಠರಾದ ಮಂತ್ರಿವರ್ಯರು ಅನೇಕರಿದ್ದರು ಎರಗಿದ ಈ ಸೋಲು ದೇವೇಗೌಡರಂತಹ ಬಲು ನಾಜೂಕಿನ ರಾಜಕಾರಣಿಯನ್ನು ಕಂಗೆಡಿಸದೇ ಇರಲು ಸಾಧ್ಯವೇ!? ಒಕ್ಕಲಿಗರ ವಿಶ್ವಾಸ ಕಳೆದುಕೊಳ್ಳಲು ಶುರು ಮಾಡಿದ್ದೇವೆ ಎಂದು ದೇವೇಗೌಡರಿಗೆ ಅನಿಸಿದ್ದೇ ಆಗ. ಹೇಗಾದರು ಮಾಡಿ ಅದನ್ನು ಸರಿಪಡಿಸಿಕೊಳ್ಳಬೇಕೆಂದು ಅವರು ರಾಜಕೀಯ ಪಂಚಾಂಗ ಬಿಚ್ಚಿ ಕೂತಿದ್ದಾಗ ಘಟಿಸಿದ್ದೇ ಈ ಡೀಕೆ ಪ್ರಕರಣ!

ಗೌಡರ ಒಕ್ಕಲಿಗ ಸೆಂಟಿಮೆಂಟ್; ಎಚ್‍ಡಿಕೆಯ ಬಿಜೆಪಿ ಸ್ಟೇಟ್‍ಮೆಂಟ್

ಕುಮಾರಸ್ವಾಮಿಯವರು ಡೀಕೆ ಮನೆಗೆ ಹೋಗಿ ಅವರ ತಾಯಿಗೆ ಸಾಂತ್ವನ ಹೇಳಿದ್ದಾಗಲಿ, ತಿಹಾರ್ ಜೈಲಿಗೆ ಹೋಗಿ ಮುಖತಃ ಭೇಟಿ ಮಾಡಿದ್ದಾಗಲಿ ಎಲ್ಲದರ ಹಿಂದೆ ಗೌಡರ ಸ್ಪಷ್ಟ ನೀಲನಕ್ಷೆಗಳಿದ್ದವು. ಅಷ್ಟೇ ಅಲ್ಲ ಕುಮಾರಸ್ವಾಮಿ ತಿಹಾರ್ ಜೈಲಿಗೆ ಹೋಗುವುದಕ್ಕೂ ಇಪ್ಪತ್ತು ದಿನ ಮೊದಲೇ ಖುದ್ದು ದೇವೇಗೌಡರೆ ಹಿರಿಮಗ ರೇವಣ್ಣನವರ ಜೊತೆಗೆ ತಿಹಾರ್ ಜೈಲಿಗೆ ಹೋಗಿ ಡೀಕೆಯನ್ನು ಭೇಟಿ ಮಾಡಬೇಕು ಅಂದುಕೊಂಡಿದ್ದರು. ಆದರೆ ಭೇಟಿಗೆ ಎರಡು ದಿನ ಮೊದಲೇ ಪರ್ಮೀಷನ್ನಿಗೆ ಅರ್ಜಿ ಹಾಕಬೇಕಿತ್ತು. ಆದರೆ ಗೌಡರು ನೇರವಾಗಿ ಭೇಟಿಗೆ ಅನುಮತಿ ಕೇಳಿದ್ದರಿಂದ ಜೈಲಿನ ಅಧಿಕಾರಿಗಳು ತಲೆ ಅಡ್ಡಡ್ಡ ಆಡಿಸಿದ್ದರು. ಭೇಟಿ ಸಾಧ್ಯವಾಗದಿದ್ದರೂ, ದಿಲ್ಲಿಯ ತಮ್ಮ ನಿವಾಸಕ್ಕೆ ಡಿ.ಕೆ.ಸುರೇಶ್‍ರನ್ನು ಕರೆಸಿಕೊಂಡ ಗೌಡರು `ಡೀಕೆಗೆ ಒಳ್ಳೆಯದಾಗಲಿ ಅಂತ ದೇವರ ಬಳಿ ವಿಶೇಷ ಪೂಜೆ ಮಾಡಿಸಿಕೊಂಡು ಬಂದಿದ್ದೇನೆ’ ಅಂತ ಸಂತೈಸಿ ಕಳಿಸಿದ್ದರು. ಇನ್ನು ಡೀಕೆ ಬೆಂಗಳೂರಿಗೆ ಬಂದಿಳಿಯುತ್ತಿದ್ದಂತೆ ಕುಮಾರಸ್ವಾಮಿಯವರೇ ಹೋಗಿ ಸ್ವಾಗತಿಸಿದ್ದಾಗಲಿ, `ವೆಲ್‍ಕಂ’ ಮೆರವಣಿಗೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಪಕ್ಷದ ಬಾವುಟದ ಸಮೇತ ಹಾಜರಿರುವಂತೆ ನೋಡಿಕೊಂಡಿದ್ದಾಗಲಿ ಎಲ್ಲವೂ ಗೌಡರ ಲೆಕ್ಕಾಚಾರಗಳೇ ಆಗಿವೆ. `ಪಕ್ಷ ಯಾವುದಾದರೇನು ನಮಗೆ ಒಕ್ಕಲಿಗರ ಹಿತ ಕಾಯುವುದೇ ಮುಖ್ಯ’ ಎಂಬ ಸಂದೇಶ ರವಾನೆಯಾಗಿ ಕಳೆದುಹೋಗಿರುವ ಒಕ್ಕಲಿಗರ ವಿಶ್ವಾಸವನ್ನು ಮತ್ತೆ ಗಳಿಸಿಕೊಳ್ಳುವ ಸಿಂಗಲ್ ಅಜೆಂಡಾ ಗೌಡರದ್ದು.

ಇಲ್ಲೊಂದು ಇಂಟರೆಸ್ಟಿಂಗ್ ಸಂಗತಿಯಿದೆ. ಡೀಕೆ ಪರವಾಗಿ ಹೀಗೆ ನಿಲ್ಲುತ್ತಾ ಹೋಗಿ ತಮ್ಮ ಕುಟುಂಬ ಬಿಜೆಪಿಯ ಕೆಂಗಣ್ಣಿಗೆ ಗುರಿಯಾದರೇನು ಗತಿ? ಸಿಬಿಐ, ಇಡಿ, ಐಟಿ ಅಸ್ತ್ರಗಳು ತಮ್ಮ ಮೇಲೂ ಮುಗಿಬಿದ್ದರೆ ಏನು ಕತೆ? ಇಲ್ಲೂ ಗೌಡರು ಬ್ಯಾಲೆನ್ಸ್ ಮಾಡುತ್ತಲೇ ಬಂದರು. ಒಂದು ಕಡೆ ಕೇಂದ್ರದ ಅಧಿಕಾರ ದುರ್ಬಳಕೆಯ ವಿರುದ್ಧ ಮಾತಾಡುತ್ತಲೆ, ಮತ್ತೊಂದು ಕಡೆ ಪ್ರಧಾನಿ ಮೋದಿಯವರ `ದುಬಾರಿ ಹೆಮ್ಮೆ’ಯಾದ ಸ್ಟ್ಯಾಚ್ಯೂ ಆಫ್ ಯೂನಿಟಿ ಮುಂದೆ ಫೋಜು ಕೊಟ್ಟು, ಹೊಗಳಿ ಮೋದಿಯವರಿಂದ ಖುಷಿಯ ಟ್ವೀಟು ಗಿಟ್ಟಿಸಿಕೊಂಡರು. ಅತ್ತ ಕುಮಾರಸ್ವಾಮಿಯವರ ಮೂಲಕ `ಉತ್ತರ ಕರ್ನಾಟಕ ನೆರೆ ಸಂಕಷ್ಟಕ್ಕೆ ಸಿಲುಕಿರೋದ್ರಿಂದ ಈ ಬಿಜೆಪಿ (ರಾಜ್ಯ) ಸರ್ಕಾರ ಬೀಳದಂತೆ ನಾವು ನೋಡಿಕೊಳ್ಳುತ್ತೇವೆ’ ಎಂಬ ಹೇಳಿಕೆ ಹೇಳಿಸಿ ಬಿಜೆಪಿ ಜೊತೆಗೆ ಒಂದು ಬಾಂಧವ್ಯವನ್ನೂ ಗಟ್ಟಿ ಮಾಡಿಕೊಳ್ಳುತ್ತಿದ್ದಾರೆ.

ಸಿದ್ದು ಬೇಸರದ ಮೂಲ ಇದು

ದೇವೇಗೌಡರ ಇಂಥಾ ಸ್ಟ್ರಾಟಜಿಗಳನ್ನು ಬಹಳ ಹತ್ತಿರದಿಂದ ನೋಡಿ, ಸಿಟ್ಟಿಗೆದ್ದು ದೂರ ಬಂದ ಸಿದ್ರಾಮಯ್ಯನಂತಹ ರಾಜಕಾರಣಿಗೆ ಈಗ ಡೀಕೆಯನ್ನು ಅವರು ದಾಳವಾಗಿ ಬಳಸಿಕೊಳ್ಳುತ್ತಿರೋದರ ವಿರುದ್ಧ ಸಹಜವಾಗಿಯೇ ಬೇಸರವಿದೆ. ಅದು ದೇವೇಗೌಡರ ಇಡೀ ಷಡ್ಯಂತ್ರದ ಮೇಲಿನ ಬೇಸರವೇ ವಿನಾಃ ಡೀಕೆ ಮೇಲಿನ ವೈಯಕ್ತಿಕ ಹಗೆತನವಲ್ಲ. ಖಾಸಗಿ ವೀಡಿಯೊದಲ್ಲಿ ಸಿದ್ದು ಹೊರಹಾಕಿದ ಅಸಮಾಧಾನ ಕೂಡಾ ಡಿಕೆಶಿಯ ಜೆಡಿಎಸ್ ವಾಲಿಕೆಯ ವಿರುದ್ಧವಾಗಿತ್ತೆ ವಿನಾಃ ಡಿಕೆಶಿಗೆ ಸಿಕ್ಕ ಅದ್ಭುತ ಸ್ವಾಗತದ ವಿರುದ್ಧವಲ್ಲ. ಆದರೆ ಮೊದಲಿನಿಂದಲೂ ಸಿದ್ದು ಎಂದರೆ ಒಂದು ಬಗೆಯ ಅಸಿಡಿಟಿಯನ್ನು ಅದುಮಿಟ್ಟುಕೊಂಡೇ ಬಂದಿರುವ ಕೆಲ ಮೀಡಿಯಾಗಳು ಸಿದ್ದು-ಡಿಕೆ ನಡುವೆ ಶೀತಲಸಮರವನ್ನಾಗಿ ಅದನ್ನು ಬಿಂಬಿಸುತ್ತಿವೆ. ಅಸಲಿಗೆ, ಡಿಕೆ ಬಿಡುಗಡೆಯ ನಂತರ ಒಕ್ಕಲಿಗರ ಆಕ್ರೋಶ, ಅವರನ್ನು ಬಂಧಿಸಿ ಜೈಲಿನಲ್ಲಿಟ್ಟಿದ್ದ ಬಿಜೆಪಿ ವಿರುದ್ಧ ಆಸ್ಫೋಟಿಸುತ್ತಿದ್ದುದನ್ನು ಸಿದ್ದು ಕಡೆಗೆ ಡೈವರ್ಟ್ ಮಾಡಲು ಮೀಡಿಯಾಗಳು ಹೆಣಗಾಡುತ್ತಿವೆಯಷ್ಟೆ. ಇದು ಗೌಡರ ಪಾಲಿಗೆ ಬೋನಸ್ ಪ್ರತಿಫಲ.

ಡಿಕೆಗಿದೆ ಸರ್ವೈವಲ್ ಸ್ಟ್ರಾಟಜಿ!

ಸರಿ, ದೇವೇಗೌಡರಿಗೇನೊ ಅನಿವಾರ್ಯತೆ ಇದೆ, ಡಿಕೆ ಪರವಾಗಿ ಮಮಕಾರ ಹರಿಸುತ್ತಿದ್ದಾರೆ. ಆದರೆ ಅವರನ್ನು ವಿರೋಧಿಸಿಕೊಂಡೇ ಬಂದ ಡಿಕೆಗೆ, ದೇವೇಗೌಡರ ದಾಳವಾಗುವ ಅನಿವಾರ್ಯತೆಯೇನು? ಅಷ್ಟೂ ಅರ್ಥವಾಗದ ದಡ್ಡರೇ ಅವರು? ಖಂಡಿತ ಇಲ್ಲ. ಈ ವಿಚಾರದಲ್ಲಿ ಸಿದ್ದುಗೆ ಒಂದು ಐಡಿಯಾಲಜಿಕಲ್ ವ್ಯೂ ಇರುವಂತೆ, ದೇವೇಗೌಡರಿಗೆ ಸ್ಪಷ್ಟ ಗೇಮ್‍ಪ್ಲ್ಯಾನ್ ಇರುವಂತೆ, ಡಿಕೆಶಿಗೂ ಒಂದು ವಿಶಿಷ್ಟ ಸರ್ವೈವಲ್ ಸ್ಟ್ರಾಟಜಿ ಇದರ ಹಿಂದಿದೆ.

ಬಿಜೆಪಿ ಸರ್ಕಾರದ ಇನ್‍ಕಂಟ್ಯಾಕ್ಸ್ ಡಿಪಾರ್ಟ್‍ಮೆಂಟು ರೇಡ್ ಮಾಡಿದ ತರುವಾಯ ಡಿಕೆಶಿ ಒಂದಷ್ಟು ಬದಲಾಗಲೇಬೇಕಿತ್ತು, ಅದು ಜೆಡಿಎಸ್ ಮತ್ತು ದೇವೇಗೌಡರ ವಿಚಾರದಲ್ಲು ಕೂಡಾ. ಯಾಕೆಂದರೆ ಬಿಜೆಪಿಯಂತಹ ಬೃಹತ್ ಅಧಿಕಾರ ಶಕ್ತಿಯನ್ನು ಎದುರುಹಾಕಿಕೊಂಡಿದ್ದ ಡಿಕೆ ಏಕಕಾಲದಲ್ಲಿ ಇಬ್ಬರು ವೈರಿಗಳ ಸಂಗಡ ಕಾದಾಡು ವಂತಿರಲಿಲ್ಲ. ಎಲ್ಲಕ್ಕಿಂತ ಮುಖ್ಯವಾಗಿ ಅಧಿಕಾರ ಇದ್ದಷ್ಟು ದಿನ ಮಾತ್ರ ತಾನು ಸೇಫ್, ಅಧಿಕಾರ ಕೈತಪ್ಪುತ್ತಿದ್ದಂತೆಯೇ ಬಿಜೆಪಿ ತನ್ನ ಜೊತೆ ಭೀಕರವಾಗಿ ನಡೆದುಕೊಳ್ಳಲಿದೆ ಎಂಬುದನ್ನು ಡಿಕೆ ಮೊದಲೇ ಊಹಿಸಿದ್ದರು. ಆದದ್ದು ಕೂಡಾ ಹಾಗೆಯೇ.

2018ರಲ್ಲಿ ಅತಂತ್ರ ವಿಧಾನಸಭೆ ಏರ್ಪಟ್ಟಾಗ ಜೆಡಿಎಸ್-ಕಾಂಗ್ರೆಸ್ ನಡುವೆ ಮೈತ್ರಿ ಕುದುರಿಸಲು ಡಿಕೆಶಿ ಹಳೆಯದನ್ನೆಲ್ಲ ಮರೆತು ವಿಪರೀತ ಮುತುವರ್ಜಿ ವಹಿಸಿದ್ದು ಮತ್ತು ಆ ಮೈತ್ರಿಯನ್ನು ಉಳಿಸಿಕೊಳ್ಳಲು ಶತಾಯಗತಾಯ ಹೋರಾಡಿದ್ದು, ಎಲ್ಲವೂ ಇದೇ ಕಾರಣಕ್ಕೆ. ಜೆಡಿಎಸ್ ಜೊತೆಗಿನ ಮೈತ್ರಿ ಎಂದರೆ, ಗೌಡರ ಕುಟುಂಬದ ಜೊತೆಗಿನ ಮೈತ್ರಿ ಎಂದರಿತಿದ್ದ ಡಿಕೆಶಿ ಸಹಜವಾಗಿಯೇ ಆ ಕುಟುಂಬದ ಜೊತೆ ಉತ್ತಮ ಒಡನಾಟವಿರುವಂತೆ ವರ್ತಿಸುತ್ತಿದ್ದಾರೆ. ಈಗಂತೂ ಅವರ ಸುತ್ತ ಕ್ರೋಢೀಕರಣಗೊಳ್ಳುತ್ತಿರುವ `ಒಕ್ಕಲಿಗ ಜಾತಿಪ್ರಜ್ಞೆ’ಯ ರಾಜಕಾರಣ ದೇವೇಗೌಡರಿಗೆಷ್ಟು ಅನಿವಾರ್ಯವಿದೆಯೋ ಡಿಕೆಗೂ ಅಷ್ಟೇ ಅಗತ್ಯವಿದೆ. ಅಧಿಕಾರವಂತೂ ಇಲ್ಲ, ಇಂಥಾ ಸಮಯದಲ್ಲಿ ಜಾತಿರಾಜಕಾರಣವನ್ನೂ ಗುರಾಣಿಯಾಗಿ ಬಳಸಿಕೊಳ್ಳದಿದ್ದರೆ ಬಿಜೆಪಿ ಜೊತೆ ಸೆಣೆಸಾಡಲು ಸಾಧ್ಯವೇ? ಇದು ಡೀಕೆ ತರ್ಕ. ಅವತ್ತು ಜೆಡಿಎಸ್ ಬಾವುಟ ಡಿಕೆ ಕೈ ಏರುವಂತೆ ಮಾಡಿದ್ದು ಇದೇ ತರ್ಕ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....