Homeಕರ್ನಾಟಕಸಿದ್ದು ಸರ್ಕಾರ: ಎರಡೂವರೆ ವರ್ಷಗಳ ಅಧಿಕಾರ ಹಂಚಿಕೆಯ ಸೂತ್ರಕ್ಕೆ ಸ್ಪಷ್ಟ ಭರವಸೆ ನೀಡದ ವರಿಷ್ಠರು

ಸಿದ್ದು ಸರ್ಕಾರ: ಎರಡೂವರೆ ವರ್ಷಗಳ ಅಧಿಕಾರ ಹಂಚಿಕೆಯ ಸೂತ್ರಕ್ಕೆ ಸ್ಪಷ್ಟ ಭರವಸೆ ನೀಡದ ವರಿಷ್ಠರು

- Advertisement -
- Advertisement -

ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕಾಗಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಇಬ್ಬರೂ ಪಟ್ಟು ಹಿಡಿದಿದ್ದರು. ಕೊನೆಗೆ ಕಾಂಗ್ರೆಸ್ ಹೈಕಮಾಂಡ್ ಅಂಗಳದಲ್ಲಿ ಸಂಧಾನ ಸಭೆ ಯಶಸ್ವಿಯಾಗಿದೆ. ಈ ವೇಳೆ ಎರಡೂವರೆ ವರ್ಷಗಳ ಅಧಿಕಾರ ಹಂಚಿಕೆಯ ಸೂತ್ರ ಅನುಸರಿಸಲಾಗುತ್ತದೆಯೇ ಎನ್ನುವ ಪ್ರಶ್ನೆ ಎಲ್ಲರಿಗೂ ಮೂಡಿತ್ತು ಆದರೆ ಕಾಂಗ್ರೆಸ್ ಪಕ್ಷದ ವರಿಷ್ಠರು ಆ ಬಗ್ಗೆ ಸ್ಪಷ್ಟ ಭರವಸೆ ನೀಡಿಲ್ಲ.

ಹಿರಿಯ ನಾಯಕ ಸಿದ್ದರಾಮಯ್ಯ ಅವರ ಕೈಮೇಲಾಗಿದ್ದು, ಅವರಿಗೆ ಎರಡನೇ ಬಾರಿಗೆ ಕರ್ನಾಟಕದ ಮುಖ್ಯಮಂತ್ರಿ ಹುದ್ದೆ ಅರಸಿಕೊಂಡು ಬಂದಿದೆ. ಉಪಮುಖ್ಯಮಂತ್ರಿ ಸ್ಥಾನವನ್ನು ಡಿಕೆ ಶಿವಕುಮಾರ್ ಅವರಿಗೆ ನೀಡಲಾಗಿದೆ.

ಸಿಎಂ ಸ್ಥಾನಕ್ಕೆ ಪಟ್ಟು ಹಿಡಿದಿದ್ದ ಡಿಕೆ ಶಿವಕುಮಾರ್ ಅವರು, ”ಫಲಿತಾಂಶ ಪ್ರಕಟಗೊಂಡ ದಿನದಿಂದಲೇ ಅತ್ತು ಕರೆದ, ಹೊಣೆ ವಹಿಸುವ ಸಂದರ್ಭದಲ್ಲಿ ನೀಡಿರುವ ವಾಗ್ದಾನದಂತೆ ಕೂಲಿ ಕೊಡುವ ಭರವಸೆ ನೆನಪಿಸಿದ, ವರಿಷ್ಠರನ್ನು ಬೆದರಿಸುವ ತಂತ್ರ ಪ್ರಯೋಗಿಸಿದರು. ಹಲವು ಭಾವನಾತ್ಮಕ ಬಾಣಗಳನ್ನು ಎಸೆದರು. ಅವರ ಬೇಡಿಕೆ ಹಾಗೂ ಷರತ್ತುಗಳಿಗೆ ಭಾಗಶಃ ಮಣಿದ ಹೈಕಮಾಂಡ್, ಮುಂದಿನ ದಿನಗಳಲ್ಲಿ ಉಡುಗೊರೆ ನೀಡುವ ಭರವಸೆ ನೀಡಿ ಸಮಾಧಾನಪಡಿಸಿದೆ. ರಾಜ್ಯ ಕಾಂಗ್ರೆಸ್‌ನ ಸಾರಥಿ ಉಪಮುಖ್ಯಮಂತ್ರಿ ಸ್ಥಾನವನ್ನು ಒಪ್ಪಿಕೊಂಡಿದ್ದಾರೆ.

ಎರಡೂವರೆ ವರ್ಷಗಳ ಅಧಿಕಾರ ಹಂಚಿಕೆ ಬಗ್ಗೆ ವರಿಷ್ಟರು ಹೇಳಿದ್ದೇನು?

”ಒಗ್ಗಟ್ಟಿನಿಂದ ಕೆಲಸ ಮಾಡಿ ಮುಂಬರುವ ಚುನಾವಣೆಗಳು, ಲೋಕಸಭಾ ಚುನಾವಣೆಯಲ್ಲಿ ಪಕ್ಷವನ್ನು ಗೆಲ್ಲಿಸಿಕೊಂಡು ಬನ್ನಿ, ಮುಂದೆ ನೋಡೋಣ” ಎಂಬ ಅಡ್ಡಗೋಡೆಯ ಮೇಲೆ ದೀಪ ಇಟ್ಟಿದ್ದಾರೆ. ಈಗಲೇ ಎರಡೂವರೆ ವರ್ಷಗಳ ಅಧಿಕಾರ ಹಂಚಿಕೆಯ ಸೂತ್ರ ಹೆಣೆದರೆ ಆಡಳಿತ ಯಂತ್ರದ ಮೇಲೆ ಕೆಟ್ಟ ಪರಿಣಾಮ ಬೀರಲಿದೆ ಎಂದು ಭಾವಿಸಿದ ಹೈಕಮಾಂಡ್, ಜಾಳ್ಮೆಯ ಹೆಜ್ಜೆ ಇಟ್ಟಿದೆ.

ಎಐಸಿಸಿ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ.ಸಿ.ವೇಣುಗೋಪಾಲ್ ಅವರು ಆರಂಭದಿಂದಲೂ ಸಿದ್ದರಾಮಯ್ಯ ಪರವಾಗಿ ಪ್ರಬಲವಾಗಿ ನಿಂತರು. ವೇಣುಗೋಪಾಲ್ ಹೆಣೆದ ‘ಸಿದ್ಧ’ ಸೂತ್ರವೇ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿಯಾಗಲು ಕಾರಣವಾಯಿತು.

ಇದನ್ನೂ ಓದಿ: ಸಿದ್ದರಾಮಯ್ಯ ಸರ್ಕಾರದ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ..

ಶನಿವಾರ ರಾಜ್ಯ ವಿಧಾನಸಭೆ ಚುನಾವಣೆಯ ಫಲಿತಾಂಶ ಹೊರಬಿದ್ದಿತು. ಕಾಂಗ್ರೆಸ್ ಪಕ್ಷ ಭರ್ಜರಿ ಗೆಲುವು ಸಾಧಿಸಿತು. ಮರುದಿನವೇ ಅಂದರೆ ರವಿವಾರ ಬೆಂಗಳೂರಿನಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಮುಖ್ಯಮಂತ್ರಿ ಆಯ್ಕೆ ಹೊಣೆಯನ್ನು ಹೈಕಮಾಂಡ್‌ಗೆ ಬಿಡುವ ತೀರ್ಮಾನಕ್ಕೆ ಬರಲಾಯಿತು. ಅದಕ್ಕೆ ಬಲವಾಗಿ ಆಕ್ಷೇಪ ವ್ಯಕ್ತಪಡಿಸಿದ ವೇಣುಗೋಪಾಲ್, ”ಈ ಪ್ರಕ್ರಿಯೆ ಪ್ರಜಾಸತ್ತಾತ್ಮಕವಾಗಿ ನಡೆಯಬೇಕು ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಪ್ರತಿಯೊಬ್ಬ ಶಾಸಕರು ತಮ್ಮ ಅಭಿಪ್ರಾಯ ನೀಡಬೇಕು” ಎಂದು ಹೇಳಿದರು.

ವೇಣುಗೋಪಾಲ್ ಅವರ ಮಾತಿಗೆ ಆರಂಭದಲ್ಲಿ ಡಿ.ಕೆ.ಶಿವಕುಮಾರ್ ಹಾಗೂ ರಣದೀಪ್ ಸಿಂಗ್ ಸುರ್ಜೆವಾಲಾ ಒಪ್ಪಲಿಲ್ಲ. ಆಗ ವೇಣುಗೋಪಾಲ್ ಮನವೊಲಿಸಿದರು. ಆ ಬಳಿಕ ಪ್ರತಿಯೊಬ್ಬ ಶಾಸಕರಿಂದ ಅಭಿಪ್ರಾಯ ಸಂಗ್ರಹಿಸಲಾಯಿತು. ಹೆಚ್ಚಿನ ಶಾಸಕರು ಸಿದ್ದರಾಮಯ್ಯ ಕಡೆಗೆ ಒಲವು ವ್ಯಕ್ತಪಡಿಸಿದರು. ಹೆಚ್ಚು ಶಾಸಕರ ಒಲವಿರುವ ಸಿದ್ದರಾಮಯ್ಯ ಅವರನ್ನೇ ಮುಖ್ಯಮಂತ್ರಿಯನ್ನಾಗಿ ಮಾಡಬೇಕು. ಅದಕ್ಕೂ ಮುನ್ನ ಶಿವಕುಮಾರ್ ಅವರನ್ನು ಮನವೊಲಿಸಬೇಕು. ಪಕ್ಷ ಬಹುಮತ ಗಳಿಸುವಲ್ಲಿ ಅವರ ಪರಿಶ್ರಮವೂ ಅಪಾರ ಎಂದು ರಾಹುಲ್ ಸಲಹೆ ನೀಡಿದರು.

ಶಿವಕುಮಾರ್ ಅವರು ಎರಡು ದಿನ ಹಿಡಿದ ಪಟ್ಟನ್ನು ಸಡಿಲಿಸಲೇ ಇಲ್ಲ. ಬುಧವಾರ ರಾತ್ರಿ ಶಿವಕುಮಾರ್ ಅವರನ್ನು ಕರೆಸಿಕೊಂಡ ವೇಣುಗೋಪಾಲ್ ಸುದೀರ್ಘವಾಗಿ ಸಮಾಲೋಚಿಸಿದರು ಎಂದು ಪಕ್ಷದ ಮೂಲಗಳು ತಿಳಿಸಿವೆ.

ಒಂದು ಹಂತದಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಮಾತಿಗೂ ಶಿವಕುಮಾರ್ ಸೊಪ್ಪು ಹಾಕಲಿಲ್ಲ. ಮೂರು ದಿನಗಳ ಕಾಲ ನಡೆಸಿದ ಮನವೊಲಿಕೆಗೂ ಅವರು ಬಗ್ಗಲಿಲ್ಲ. ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರ ನಿರ್ದೇಶನದ ಮೇರೆಗೆ ಕೆ.ಸಿ.ವೇಣುಗೋಪಾಲ್‌ ಅವರು ಬುಧವಾರ ರಾತ್ರಿ ಸಿದ್ದರಾಮಯ್ಯ ಹಾಗೂ ಶಿವಕುಮಾರ್ ಅವರೊಂದಿಗೆ ಮಾತುಕತೆ ನಡೆಸಿದರು. ಶಿವಕುಮಾರ್‌ ಅವರೊಂದಿಗೆ ಸುಮಾರು ಮೂರು ಗಂಟೆ ಸಮಾಲೋಚಿಸಿದರು. ಅವರ ಎಲ್ಲ ಷರತ್ತುಗಳನ್ನು ಆಲಿಸಿದರು. ಹೈಕಮಾಂಡ್ ಮುಂದಿರುವ ಸೂತ್ರಗಳನ್ನು ಮುಂದಿಟ್ಟರು.

ಆಗ ಡಿಕೆ ಶಿವಕುಮಾರ್ ಅವರು, ”ನನಗೆ ಸೋನಿಯಾ ಅವರೇ ವಾಗ್ದಾನ ನೀಡಿದ್ದಾರೆ. ಅವರ ಜತೆಗೆ ಈಗ ಮಾತನಾಡಬೇಕು” ಎಂದು ಶಿವಕುಮಾರ್ ಹೇಳಿಕೊಂಡರು. ಮಧ್ಯರಾತ್ರಿಯಲ್ಲಿ ಸೋನಿಯಾ ಅವರೊಂದಿಗೆ ದೂರವಾಣಿ ಮೂಲಕ ಮಾತುಕತೆಗೂ ವ್ಯವಸ್ಥೆ ಮಾಡಲಾಯಿತು. ಮುಂದಿನ ದಿನಗಳಲ್ಲಿ ನಡೆಯಲಿರುವ ಚುನಾವಣೆಗಳು, ಲೋಕಸಭಾ ಚುನಾವಣೆಯಲ್ಲಿ ಉತ್ತಮ ಸಾಧನೆ ಮಾಡುವ ಅನಿವಾರ್ಯತೆಗಳ ಕುರಿತು ಈ ವೇಳೆ ಚರ್ಚೆಯಾಯಿತು. ಮುಖ್ಯಮಂತ್ರಿ ಹುದ್ದೆ ಬಿಟ್ಟು ಎಲ್ಲಭರವಸೆಗಳನ್ನು ಈಡೇರಿಸಲು ಪಕ್ಷವು ಒಪ್ಪಿತು. ಪಕ್ಷ ನಿಷ್ಠ’ ಶಿವಕುಮಾರ್ ಅವರು ನಡು ರಾತ್ರಿಯಲ್ಲಿ ವರಿಷ್ಠ ನಾಯಕರ ಮಾತಿಗೆ ಒಪ್ಪಿದರು. ನಾಲ್ಕು ಉಪಮುಖ್ಯಮಂತ್ರಿಯ ಹೈಕಮಾಂಡ್‌ ಸೂತ್ರಕ್ಕೆ ಶಿವಕುಮಾರ್‌ ಸುತಾರಂ ಒಪ್ಪಲಿಲ್ಲ. ನಾನೊಬ್ಬನೇ ಉಪಮುಖ್ಯಮಂತ್ರಿ ಇರಬೇಕು ಎಂದು ಕೊನೆಯ ಅಸ್ತ್ರ ಎಸೆದರು. ಇದಕ್ಕೆ ಹೈಕಮಾಂಡ್ ಒಪ್ಪಿಗೆ ಸೂಚಿಸಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...