Homeಕರ್ನಾಟಕಸಿದ್ದು ಸರ್ಕಾರ: ಎರಡೂವರೆ ವರ್ಷಗಳ ಅಧಿಕಾರ ಹಂಚಿಕೆಯ ಸೂತ್ರಕ್ಕೆ ಸ್ಪಷ್ಟ ಭರವಸೆ ನೀಡದ ವರಿಷ್ಠರು

ಸಿದ್ದು ಸರ್ಕಾರ: ಎರಡೂವರೆ ವರ್ಷಗಳ ಅಧಿಕಾರ ಹಂಚಿಕೆಯ ಸೂತ್ರಕ್ಕೆ ಸ್ಪಷ್ಟ ಭರವಸೆ ನೀಡದ ವರಿಷ್ಠರು

- Advertisement -
- Advertisement -

ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕಾಗಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಇಬ್ಬರೂ ಪಟ್ಟು ಹಿಡಿದಿದ್ದರು. ಕೊನೆಗೆ ಕಾಂಗ್ರೆಸ್ ಹೈಕಮಾಂಡ್ ಅಂಗಳದಲ್ಲಿ ಸಂಧಾನ ಸಭೆ ಯಶಸ್ವಿಯಾಗಿದೆ. ಈ ವೇಳೆ ಎರಡೂವರೆ ವರ್ಷಗಳ ಅಧಿಕಾರ ಹಂಚಿಕೆಯ ಸೂತ್ರ ಅನುಸರಿಸಲಾಗುತ್ತದೆಯೇ ಎನ್ನುವ ಪ್ರಶ್ನೆ ಎಲ್ಲರಿಗೂ ಮೂಡಿತ್ತು ಆದರೆ ಕಾಂಗ್ರೆಸ್ ಪಕ್ಷದ ವರಿಷ್ಠರು ಆ ಬಗ್ಗೆ ಸ್ಪಷ್ಟ ಭರವಸೆ ನೀಡಿಲ್ಲ.

ಹಿರಿಯ ನಾಯಕ ಸಿದ್ದರಾಮಯ್ಯ ಅವರ ಕೈಮೇಲಾಗಿದ್ದು, ಅವರಿಗೆ ಎರಡನೇ ಬಾರಿಗೆ ಕರ್ನಾಟಕದ ಮುಖ್ಯಮಂತ್ರಿ ಹುದ್ದೆ ಅರಸಿಕೊಂಡು ಬಂದಿದೆ. ಉಪಮುಖ್ಯಮಂತ್ರಿ ಸ್ಥಾನವನ್ನು ಡಿಕೆ ಶಿವಕುಮಾರ್ ಅವರಿಗೆ ನೀಡಲಾಗಿದೆ.

ಸಿಎಂ ಸ್ಥಾನಕ್ಕೆ ಪಟ್ಟು ಹಿಡಿದಿದ್ದ ಡಿಕೆ ಶಿವಕುಮಾರ್ ಅವರು, ”ಫಲಿತಾಂಶ ಪ್ರಕಟಗೊಂಡ ದಿನದಿಂದಲೇ ಅತ್ತು ಕರೆದ, ಹೊಣೆ ವಹಿಸುವ ಸಂದರ್ಭದಲ್ಲಿ ನೀಡಿರುವ ವಾಗ್ದಾನದಂತೆ ಕೂಲಿ ಕೊಡುವ ಭರವಸೆ ನೆನಪಿಸಿದ, ವರಿಷ್ಠರನ್ನು ಬೆದರಿಸುವ ತಂತ್ರ ಪ್ರಯೋಗಿಸಿದರು. ಹಲವು ಭಾವನಾತ್ಮಕ ಬಾಣಗಳನ್ನು ಎಸೆದರು. ಅವರ ಬೇಡಿಕೆ ಹಾಗೂ ಷರತ್ತುಗಳಿಗೆ ಭಾಗಶಃ ಮಣಿದ ಹೈಕಮಾಂಡ್, ಮುಂದಿನ ದಿನಗಳಲ್ಲಿ ಉಡುಗೊರೆ ನೀಡುವ ಭರವಸೆ ನೀಡಿ ಸಮಾಧಾನಪಡಿಸಿದೆ. ರಾಜ್ಯ ಕಾಂಗ್ರೆಸ್‌ನ ಸಾರಥಿ ಉಪಮುಖ್ಯಮಂತ್ರಿ ಸ್ಥಾನವನ್ನು ಒಪ್ಪಿಕೊಂಡಿದ್ದಾರೆ.

ಎರಡೂವರೆ ವರ್ಷಗಳ ಅಧಿಕಾರ ಹಂಚಿಕೆ ಬಗ್ಗೆ ವರಿಷ್ಟರು ಹೇಳಿದ್ದೇನು?

”ಒಗ್ಗಟ್ಟಿನಿಂದ ಕೆಲಸ ಮಾಡಿ ಮುಂಬರುವ ಚುನಾವಣೆಗಳು, ಲೋಕಸಭಾ ಚುನಾವಣೆಯಲ್ಲಿ ಪಕ್ಷವನ್ನು ಗೆಲ್ಲಿಸಿಕೊಂಡು ಬನ್ನಿ, ಮುಂದೆ ನೋಡೋಣ” ಎಂಬ ಅಡ್ಡಗೋಡೆಯ ಮೇಲೆ ದೀಪ ಇಟ್ಟಿದ್ದಾರೆ. ಈಗಲೇ ಎರಡೂವರೆ ವರ್ಷಗಳ ಅಧಿಕಾರ ಹಂಚಿಕೆಯ ಸೂತ್ರ ಹೆಣೆದರೆ ಆಡಳಿತ ಯಂತ್ರದ ಮೇಲೆ ಕೆಟ್ಟ ಪರಿಣಾಮ ಬೀರಲಿದೆ ಎಂದು ಭಾವಿಸಿದ ಹೈಕಮಾಂಡ್, ಜಾಳ್ಮೆಯ ಹೆಜ್ಜೆ ಇಟ್ಟಿದೆ.

ಎಐಸಿಸಿ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ.ಸಿ.ವೇಣುಗೋಪಾಲ್ ಅವರು ಆರಂಭದಿಂದಲೂ ಸಿದ್ದರಾಮಯ್ಯ ಪರವಾಗಿ ಪ್ರಬಲವಾಗಿ ನಿಂತರು. ವೇಣುಗೋಪಾಲ್ ಹೆಣೆದ ‘ಸಿದ್ಧ’ ಸೂತ್ರವೇ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿಯಾಗಲು ಕಾರಣವಾಯಿತು.

ಇದನ್ನೂ ಓದಿ: ಸಿದ್ದರಾಮಯ್ಯ ಸರ್ಕಾರದ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ..

ಶನಿವಾರ ರಾಜ್ಯ ವಿಧಾನಸಭೆ ಚುನಾವಣೆಯ ಫಲಿತಾಂಶ ಹೊರಬಿದ್ದಿತು. ಕಾಂಗ್ರೆಸ್ ಪಕ್ಷ ಭರ್ಜರಿ ಗೆಲುವು ಸಾಧಿಸಿತು. ಮರುದಿನವೇ ಅಂದರೆ ರವಿವಾರ ಬೆಂಗಳೂರಿನಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಮುಖ್ಯಮಂತ್ರಿ ಆಯ್ಕೆ ಹೊಣೆಯನ್ನು ಹೈಕಮಾಂಡ್‌ಗೆ ಬಿಡುವ ತೀರ್ಮಾನಕ್ಕೆ ಬರಲಾಯಿತು. ಅದಕ್ಕೆ ಬಲವಾಗಿ ಆಕ್ಷೇಪ ವ್ಯಕ್ತಪಡಿಸಿದ ವೇಣುಗೋಪಾಲ್, ”ಈ ಪ್ರಕ್ರಿಯೆ ಪ್ರಜಾಸತ್ತಾತ್ಮಕವಾಗಿ ನಡೆಯಬೇಕು ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಪ್ರತಿಯೊಬ್ಬ ಶಾಸಕರು ತಮ್ಮ ಅಭಿಪ್ರಾಯ ನೀಡಬೇಕು” ಎಂದು ಹೇಳಿದರು.

ವೇಣುಗೋಪಾಲ್ ಅವರ ಮಾತಿಗೆ ಆರಂಭದಲ್ಲಿ ಡಿ.ಕೆ.ಶಿವಕುಮಾರ್ ಹಾಗೂ ರಣದೀಪ್ ಸಿಂಗ್ ಸುರ್ಜೆವಾಲಾ ಒಪ್ಪಲಿಲ್ಲ. ಆಗ ವೇಣುಗೋಪಾಲ್ ಮನವೊಲಿಸಿದರು. ಆ ಬಳಿಕ ಪ್ರತಿಯೊಬ್ಬ ಶಾಸಕರಿಂದ ಅಭಿಪ್ರಾಯ ಸಂಗ್ರಹಿಸಲಾಯಿತು. ಹೆಚ್ಚಿನ ಶಾಸಕರು ಸಿದ್ದರಾಮಯ್ಯ ಕಡೆಗೆ ಒಲವು ವ್ಯಕ್ತಪಡಿಸಿದರು. ಹೆಚ್ಚು ಶಾಸಕರ ಒಲವಿರುವ ಸಿದ್ದರಾಮಯ್ಯ ಅವರನ್ನೇ ಮುಖ್ಯಮಂತ್ರಿಯನ್ನಾಗಿ ಮಾಡಬೇಕು. ಅದಕ್ಕೂ ಮುನ್ನ ಶಿವಕುಮಾರ್ ಅವರನ್ನು ಮನವೊಲಿಸಬೇಕು. ಪಕ್ಷ ಬಹುಮತ ಗಳಿಸುವಲ್ಲಿ ಅವರ ಪರಿಶ್ರಮವೂ ಅಪಾರ ಎಂದು ರಾಹುಲ್ ಸಲಹೆ ನೀಡಿದರು.

ಶಿವಕುಮಾರ್ ಅವರು ಎರಡು ದಿನ ಹಿಡಿದ ಪಟ್ಟನ್ನು ಸಡಿಲಿಸಲೇ ಇಲ್ಲ. ಬುಧವಾರ ರಾತ್ರಿ ಶಿವಕುಮಾರ್ ಅವರನ್ನು ಕರೆಸಿಕೊಂಡ ವೇಣುಗೋಪಾಲ್ ಸುದೀರ್ಘವಾಗಿ ಸಮಾಲೋಚಿಸಿದರು ಎಂದು ಪಕ್ಷದ ಮೂಲಗಳು ತಿಳಿಸಿವೆ.

ಒಂದು ಹಂತದಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಮಾತಿಗೂ ಶಿವಕುಮಾರ್ ಸೊಪ್ಪು ಹಾಕಲಿಲ್ಲ. ಮೂರು ದಿನಗಳ ಕಾಲ ನಡೆಸಿದ ಮನವೊಲಿಕೆಗೂ ಅವರು ಬಗ್ಗಲಿಲ್ಲ. ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರ ನಿರ್ದೇಶನದ ಮೇರೆಗೆ ಕೆ.ಸಿ.ವೇಣುಗೋಪಾಲ್‌ ಅವರು ಬುಧವಾರ ರಾತ್ರಿ ಸಿದ್ದರಾಮಯ್ಯ ಹಾಗೂ ಶಿವಕುಮಾರ್ ಅವರೊಂದಿಗೆ ಮಾತುಕತೆ ನಡೆಸಿದರು. ಶಿವಕುಮಾರ್‌ ಅವರೊಂದಿಗೆ ಸುಮಾರು ಮೂರು ಗಂಟೆ ಸಮಾಲೋಚಿಸಿದರು. ಅವರ ಎಲ್ಲ ಷರತ್ತುಗಳನ್ನು ಆಲಿಸಿದರು. ಹೈಕಮಾಂಡ್ ಮುಂದಿರುವ ಸೂತ್ರಗಳನ್ನು ಮುಂದಿಟ್ಟರು.

ಆಗ ಡಿಕೆ ಶಿವಕುಮಾರ್ ಅವರು, ”ನನಗೆ ಸೋನಿಯಾ ಅವರೇ ವಾಗ್ದಾನ ನೀಡಿದ್ದಾರೆ. ಅವರ ಜತೆಗೆ ಈಗ ಮಾತನಾಡಬೇಕು” ಎಂದು ಶಿವಕುಮಾರ್ ಹೇಳಿಕೊಂಡರು. ಮಧ್ಯರಾತ್ರಿಯಲ್ಲಿ ಸೋನಿಯಾ ಅವರೊಂದಿಗೆ ದೂರವಾಣಿ ಮೂಲಕ ಮಾತುಕತೆಗೂ ವ್ಯವಸ್ಥೆ ಮಾಡಲಾಯಿತು. ಮುಂದಿನ ದಿನಗಳಲ್ಲಿ ನಡೆಯಲಿರುವ ಚುನಾವಣೆಗಳು, ಲೋಕಸಭಾ ಚುನಾವಣೆಯಲ್ಲಿ ಉತ್ತಮ ಸಾಧನೆ ಮಾಡುವ ಅನಿವಾರ್ಯತೆಗಳ ಕುರಿತು ಈ ವೇಳೆ ಚರ್ಚೆಯಾಯಿತು. ಮುಖ್ಯಮಂತ್ರಿ ಹುದ್ದೆ ಬಿಟ್ಟು ಎಲ್ಲಭರವಸೆಗಳನ್ನು ಈಡೇರಿಸಲು ಪಕ್ಷವು ಒಪ್ಪಿತು. ಪಕ್ಷ ನಿಷ್ಠ’ ಶಿವಕುಮಾರ್ ಅವರು ನಡು ರಾತ್ರಿಯಲ್ಲಿ ವರಿಷ್ಠ ನಾಯಕರ ಮಾತಿಗೆ ಒಪ್ಪಿದರು. ನಾಲ್ಕು ಉಪಮುಖ್ಯಮಂತ್ರಿಯ ಹೈಕಮಾಂಡ್‌ ಸೂತ್ರಕ್ಕೆ ಶಿವಕುಮಾರ್‌ ಸುತಾರಂ ಒಪ್ಪಲಿಲ್ಲ. ನಾನೊಬ್ಬನೇ ಉಪಮುಖ್ಯಮಂತ್ರಿ ಇರಬೇಕು ಎಂದು ಕೊನೆಯ ಅಸ್ತ್ರ ಎಸೆದರು. ಇದಕ್ಕೆ ಹೈಕಮಾಂಡ್ ಒಪ್ಪಿಗೆ ಸೂಚಿಸಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...