Homeಮುಖಪುಟಸಿದ್ದು ಜನಪ್ರಿಯ ನಾಯಕರು, ಜನಾಭಿಪ್ರಾಯದಿಂದ ಬಿಜೆಪಿ ಅಧಿಕಾರಕ್ಕೆ ಬರುವುದಿಲ್ಲ: ವೈರಲ್ ಆಡಿಯೋದಲ್ಲಿರುವುದೇನು?

ಸಿದ್ದು ಜನಪ್ರಿಯ ನಾಯಕರು, ಜನಾಭಿಪ್ರಾಯದಿಂದ ಬಿಜೆಪಿ ಅಧಿಕಾರಕ್ಕೆ ಬರುವುದಿಲ್ಲ: ವೈರಲ್ ಆಡಿಯೋದಲ್ಲಿರುವುದೇನು?

ಅಮಿತ್ ಶಾ ಅವರದು ಒಂಥರಾ ರೌಡಿಸಂ, ಯಾರನ್ನೂ ಬಿಡೋಲ್ಲ. ಅಂದ್ರೆ ಯಾರಾದ್ರೂ ಇತರ ಪಕ್ಷಗಳೊಂದಿಗೆ ಒಪ್ಪಂದ ಮಾಡಿಕೊಂಡಿದ್ದರೆ ಅದನ್ನು ಸಹಿಸೋಲ್ಲ. ಅವರ ಬುಡ ಬಿಡೋಲ್ಲ

- Advertisement -
- Advertisement -

ಮಾಜಿ ಸಚಿವ, ವಿಧಾನ ಪರಿಷತ್‌ ಸದಸ್ಯ ಸಿ.ಪಿ.ಯೋಗೇಶ್ವರ್ ಅವರು ಬಿಜೆಪಿಯ ಕಾರ್ಯಕರ್ತರ ಜೊತೆ ರಾಜ್ಯ ರಾಜಕೀಯದ ಆಗುಹೋಗುಗಳ ಬಗ್ಗೆ ಮಾತನಾಡಿದ್ದಾರೆ ಎನ್ನಲಾದ ಸಂಭಾಷಣೆಯ ಆಡಿಯೋ ಒಂದು ಎಲ್ಲೆಡೆ ವೈರಲ್ ಆಗುತ್ತಿದೆ. ಆದರೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಸಂಭಾಷಣೆ ತಮ್ಮದಲ್ಲ ಎಂದು ಯೋಗೇಶ್ವರ್ ಹೇಳಿದ್ದಾರೆ. ಆದರೆ ಅದರಲ್ಲಿ ಇರು ಮಾತುಗಳು ಗಮನ ಸೆಳೆಯುತ್ತಿವೆ. ವೈರಲ್ ಆಡಿಯೋದಲ್ಲೇನಿದೆ ಎಂಬುದನ್ನು ಇಲ್ಲಿ ನೀಡುವ ಪ್ರಯತ್ನ ಮಾಡಿದ್ದೇವೆ.

ಗುಬ್ಬಿ ಶ್ರೀನಿವಾಸ್, ಶಿವಲಿಂಗೇಗೌಡ, ಎ.ಟಿ ರಾಮಸ್ವಾಮಿ, ಗನ್ ಮಂಜು, ಡಾ.ಶ್ರೀನಿವಾಸಮೂರ್ತಿ, ಅನ್ನದಾನಿ, ಡಿ.ಸಿ ತಮ್ಮಣ್ಣ, ಎಂ.ಶ್ರೀನಿವಾಸ್, ಸಾ.ರಾ ಮಹೇಶ್, ಟಿ.ನರಸೀಪುರದ ಶಾಸಕ, ರಾಮನಗರದಲ್ಲಿ ಒಬ್ಬರು ಸೋಲುತ್ತಾರೆ. ಚನ್ನಪಟ್ಟಣ ಅಂತಲೇ ಅಲ್ಲ, ಅಲ್ಲಿ ಕುಮಾರಸ್ವಾಮಿಯವರು ಗೆಲ್ಲಬಹುದು. ಆದರೆ ರಾಮನಗರದ ಮೂವರು ಶಾಸಕರಲ್ಲಿ ಒಬ್ಬರು ಸೋಲುತ್ತಾರೆ. ಒಟ್ಟಿನಲ್ಲಿ ಹಳೆ ಮೈಸೂರು ಪ್ರಾಂತ್ಯದಲ್ಲಿ 12 ಜನ ಹಾಲಿ ಶಾಸಕರು ಸೋಲುತ್ತಾರೆ. ಉತ್ತರ ಕರ್ನಾಟಕದಲ್ಲಿ 5 ಜನರಲ್ಲಿ 3 ಜನ ಸೋಲುತ್ತಾರೆ. ಅದೇ ರೀತಿ ಮಧುಗಿರಿಯ ವೀರಭದ್ರಯ್ಯ, ಬೇಲೂರು ಲಿಂಗೇಶ್, ಚಿಂತಾಮಣಿಯಲ್ಲಿ ಕೃಷ್ಣಾ ರೆಡ್ಡಿ, ಸಕಲೇಶಪುರದಲ್ಲಿ ಕುಮಾರಸ್ವಾಮಿ ಸೇರಿದಂತೆ ಒಟ್ಟು 19 ಜನ ಶಾಸಕರು ಸೋಲುತ್ತಾರೆ ಎಂದು ಹೇಳಲಾಗಿದೆ.

ಸಾ.ರಾ ಮಹೇಶ್ ಯಾಕೆ ಸೋಲುತ್ತಾರೆಂದರೆ ಕಳೆದ ಬಾರಿ ಅವರು ಕಡಿಮೆ ಅಂತರದಲ್ಲಿ ಸೋತಿದ್ದರು. ಈ ಬಾರಿ ಇಬ್ಬರೂ ಒಕ್ಕಲಿಗ ಕ್ಯಾಂಡಿಡೇಟ್ ಇದ್ದು ಕಾಂಗ್ರೆಸ್‌ ಅಲ್ಲಿ ಗೆಲ್ಲುತ್ತದೆ. ಬಿಜೆಪಿಯಿಂದ ನಾವು ಕಳೆದ ಬಾರಿ ಜೆಡಿಎಸ್ ಹೊಂದಾಣಿಕೆ ಮಾಡಿಕೊಂಡಿದ್ದೆವು. ದೇವೇಗೌಡರ ಜೊತೆ ಮಾತನಾಡಿದ್ದೆವು. ಎಂದು ಹೇಳುವುದು ದಾಖಲಾಗಿದೆ.

ಈ ಬಾರಿ ಜನಾಭಿಪ್ರಾಯದಿಂದ ಬಿಜೆಪಿ ಅಧಿಕಾರಕ್ಕೆ ಬರುವುದಿಲ್ಲ. ಆದರೆ, ನಾವು ಬಿಜೆಪಿ ಸರ್ಕಾರ ರಚಿಸುತ್ತೇವೆ. ಮಾವಿನ ಹಣ್ಣು ಮರದಲ್ಲಿಯೇ ಹಣ್ಣು ಆಗುವುದಕ್ಕೂ, ತಂದು ಕೆಮಿಕಲ್ ಹಾಕಿ ಹಣ್ಣು ಮಾಡುವುದಕ್ಕೂ ವ್ಯತ್ಯಾಸವಿದೆ. ಕಾಂಗ್ರೆಸ್ ಸ್ಟ್ರಾಂಗ್ ಇಲ್ಲ. ಸಿದ್ದರಾಮಯ್ಯನವರಿಗೆ ಪಟ್ಟ ಕಟ್ಟಲು ಹಿರಿಯ ನಾಯಕರಿಗೆ ಇಷ್ಟವಿಲ್ಲ. ಸಂಕ್ರಾಂತಿ ನಂತರ ಹಳೆ ಮೈಸೂರು ಭಾಗದಲ್ಲಿ ದೊಡ್ಡ ಬದಲಾವಣೆ ಮಾಡುತ್ತೀವಿ. ಹಿರಿಯ ಕಾಂಗ್ರೆಸ್ ನಾಯಕರೊಬ್ಬರು ಬಿಜೆಪಿಗೆ ಬರುತ್ತಾರೆ. ಅದರಿಂದ ನಾಲ್ಕೈದು ಕ್ಷೇತ್ರಗಳಲ್ಲಿ ಬಿಜೆಪಿಗೆ 2-3 ಮತಗಳು ಪ್ಲಸ್ ಆಗುತ್ತವೆ. ಮಂಡ್ಯದಲ್ಲಿ ಒಬ್ಬರು ಬರುತ್ತಾರೆ. ಕೋಲಾರದಲ್ಲಿ ಒಬ್ಬರು ದಲಿತ ಲೀಡರ್ ಬರುತ್ತಾರೆ. ಅವರು 7-8 ಬಾರಿ ಸಂಸದರಾಗಿದ್ದರು. ಆದರೆ ನಮ್ಮವರೆ ಇನ್ನು ಒಪ್ಪುತ್ತಿಲ್ಲ.

25 ಜನರನ್ನು ಬಿಜೆಪಿಗೆ ತರುವ ಯೋಚನೆಯಲ್ಲಿದ್ದೇವೆ. ಚುನಾವಣೆ ಗೆದ್ದಮೇಲೆ ಆಪರೇಷನ್ ಕಮಲ ಮಾಡುವುದಿಲ್ಲ ನಾವು. ಮೊದಲೆ ಮಾಡಿಬಿಡುತ್ತೇವೆ. ಸುಮ್ಮನೆ ಯಾಕೆ ಆಪರೇಷನ್ ಕಮಲದ ಕೆಟ್ಟ ಹೆಸರು ಎಂದರು.

ಸಿದ್ದರಾಮಯ್ಯ ಅವರು ಜನಪ್ರಿಯ ನಾಯಕರು. ಅದರಲ್ಲಿ ಡೌಟ್ ಇಲ್ಲ. ಅವರು ಕೋಲಾರದಲ್ಲಿ ಗೆಲ್ಲುತ್ತಾರೆ. ಅವರಂತಹ ರಾಜಕಾರಣಿಗಳು ಇರಬೇಕು. ಆದರೆ ಅವರು ಎಷ್ಟು ಜನಪ್ರಿಯರು, 120 ಗೆಲ್ಲಿಸಿ, ಪಕ್ಷ ಬಹುಮತ ಪಡೆದು ಸರ್ಕಾರ ರಚಿಸುವಷ್ಟು ಜನಪ್ರಿಯರೆ ಎನ್ನುವುದು ಗೊತ್ತಿಲ್ಲ. ಅವರು ಕೋಲಾರದಲ್ಲಿ ಗೆಲ್ಲುತ್ತಾರೆ, ಅವರು ಗೆದ್ದ ಬಳಿಕವೇ ನಿಜವಾದ ರಾಜಕೀಯ ಶುರುವಾಗುತ್ತೆ. ಗೆದ್ದ ಮೇಲೆ ಅವರು ಮುಖ್ಯಮಂತ್ರಿ ಆಗದೇ ಬಿಡ್ತಾರಾ? ಇದು ಅವರ ಕೊನೆಯ ಪ್ರಯತ್ನ. ಆಗಲೇ ರಾಜಕೀಯ ಶುರುವಾಗುವುದು ಎಂದಿದ್ದಾರೆ.

ನಾನು ಕುಮಾರಸ್ವಾಮಿ ಅವರ ವಿರುದ್ಧ ಚನ್ನಪಟ್ಟದಲ್ಲಿ ಸ್ಪರ್ಧಿಸಲು ಒಪ್ಪಿಕೊಂಡಿದ್ದೇನೆ. ಅದೇ ರೀತಿ ಸಚಿವ ಅಶೋಕ್‌ ಅವರು ಕನಕಪುರದಲ್ಲಿ ಡಿ.ಕೆ.ಶಿವಕುಮಾರ್ ಅವರ ಎದುರು, ಸಚಿವ ಅಶ್ವತ್ಥನಾರಾಯಣ ಅವರು ರಾಮನಗರದಲ್ಲಿ  ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್‌ ಕುಮಾರ ಸ್ವಾಮಿ ಅವರ ಎದುರು ಸ್ಪರ್ಧಿಸಬೇಕು. ಹಾಗೆ ಕಟ್ಟಿ ಹಾಕಬೇಕು. ಹೇಗಿದ್ದರೂ ಪಕ್ಷವು ನಮ್ಮ ಬೆಂಬಲಕ್ಕೆ ಬರಲಿದೆ. ಸೋತರೆ ಎಂಎಲ್‌ಸಿ ಮಾಡಿ ಮಂತ್ರಿ ಮಾಡುತ್ತಾರೆ ಎಂದು ಹೇಳಲಾಗಿದೆ.

ಅಮಿತ್‌ ಶಾ ಹೇಳಿದ್ದಾರೆ ಹೊಂದಾಣಿಕೆ ಮಾಡಿಕೊಳ್ಳಬೇಡಿ ಅಂತ. ಬಹಳ ಕೆಟ್ಟದಾಗಿ ಹೇಳಿದರು. ಹೊಂದಾಣಿಕೆ ತಾಯಿಗೆ ದ್ರೋಹ ಬಗೆದ ಹಾಗೆ ಅಂತ. ಅಮಿತ್ ಶಾ ಅವರದು ಒಂಥರಾ ರೌಡಿಸಂ, ಯಾರನ್ನೂ ಬಿಡೋಲ್ಲ. ಅಂದ್ರೆ ಯಾರಾದ್ರೂ ಇತರ ಪಕ್ಷಗಳೊಂದಿಗೆ ಒಪ್ಪಂದ ಮಾಡಿಕೊಂಡಿದ್ದರೆ ಅದನ್ನು ಸಹಿಸೋಲ್ಲ. ಅವರ ಬುಡ ಬಿಡೋಲ್ಲ ಎಂದರು.

ʼಮೂವತ್ತು ಜನರನ್ನೂ ಅಮಿತ್‌ ಶಾ ಕರೆದಿದ್ದರು. ನನಗೆ ಗೊತ್ತು ಯಾರು ಪಕ್ಷಕ್ಕೆ ದ್ರೋಹ ಮಾಡ್ತಿದ್ದೀರಾ, ಇತರ ಪಕ್ಷಗಳ ಜೊತೆ ಅಂಡರ್ ಸ್ಟಾಂಡಿಂಗ್‌ ಮಾಡಿಕೊಂಡಿದ್ದೀರಾ ಎನ್ನುವುದು ಗೊತ್ತು ಎಂದು ಭಾರಿ ಕೆಟ್ಟದಾಗ್‌ ಮಾತನಾಡಿದ್ರು, ನೀಟಾಗಿ ಹೇಳಿದ್ರು, ಮೂರು ಗಂಟೆ ತಗೊಂಡ್ರು. ಪುನಃ ಕ್ಲಾಸ್ ತಗೋತ್ತಾರೆ ಅಂತೆ. ಆಗ ನಾನು ನೇರವಾಗಿ ಹೇಳಿಬಿಡ್ತೀನಿ. ನಾನು ಕುಮಾರಸ್ವಾಮಿ ಅವರ ವಿರುದ್ಧ ಚನ್ನಪಟ್ಟದಲ್ಲಿ ಸ್ಪರ್ಧಿಸಲು ಒಪ್ಪಿಕೊಂಡಿದ್ದೇನೆ. ಅದೇ ರೀತಿ ಸಚಿವ ಅಶೋಕ್‌ ಅವರು ಕನಕಪುರದಲ್ಲಿ ಡಿ.ಕೆ.ಶಿವಕುಮಾರ್ ಅವರ ಎದುರು, ಸಚಿವ ಅಶ್ವತ್ಥನಾರಾಯಣ ಅವರು ರಾಮನಗರದಲ್ಲಿ  ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್‌ ಕುಮಾರ ಸ್ವಾಮಿ ವಿರುದ್ಧ ಸ್ಪರ್ಧಿಸುತ್ತಾರೆ ಅಂತ 8-10 ಪಟ್ಟಿ ಮಾಡಿ ಹೇಳಿಬಿಡ್ತೀನಿ. ಆಗ ಚರ್ಚೆಯಾಗಲಿ. ಫೆಬ್ರವರಿ ಮಾರ್ಚ್‌ ನಲ್ಲಿ ಗೊತ್ತಾಗುತ್ತದೆ ಎಂದಿದ್ದಾರೆ. ಕೊನೆಯಲ್ಲಿ ಸಂಕ್ರಾಂತಿಯ ಶುಭಾಷಯಗಳನ್ನು ತಿಳಿಸಿರುವುದು ನೋಡಿದರೆ ಅದು ಇತ್ತೀಚಿನ ಆಡಿಯೋ ಎಂದು ದೃಢವಾಗುತ್ತದೆ.

ಇದನ್ನೂ ಓದಿ: ಪಂಚಮಸಾಲಿಯೊಳಗೆ ಯತ್ನಾಳ್- ನಿರಾಣಿ ಕುಸ್ತಿ: ಸಭ್ಯತೆ ಮೀರಿದ ಟೀಕಾಪ್ರಹಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...