Homeಮುಖಪುಟಸಿದ್ದು ಜನಪ್ರಿಯ ನಾಯಕರು, ಜನಾಭಿಪ್ರಾಯದಿಂದ ಬಿಜೆಪಿ ಅಧಿಕಾರಕ್ಕೆ ಬರುವುದಿಲ್ಲ: ವೈರಲ್ ಆಡಿಯೋದಲ್ಲಿರುವುದೇನು?

ಸಿದ್ದು ಜನಪ್ರಿಯ ನಾಯಕರು, ಜನಾಭಿಪ್ರಾಯದಿಂದ ಬಿಜೆಪಿ ಅಧಿಕಾರಕ್ಕೆ ಬರುವುದಿಲ್ಲ: ವೈರಲ್ ಆಡಿಯೋದಲ್ಲಿರುವುದೇನು?

ಅಮಿತ್ ಶಾ ಅವರದು ಒಂಥರಾ ರೌಡಿಸಂ, ಯಾರನ್ನೂ ಬಿಡೋಲ್ಲ. ಅಂದ್ರೆ ಯಾರಾದ್ರೂ ಇತರ ಪಕ್ಷಗಳೊಂದಿಗೆ ಒಪ್ಪಂದ ಮಾಡಿಕೊಂಡಿದ್ದರೆ ಅದನ್ನು ಸಹಿಸೋಲ್ಲ. ಅವರ ಬುಡ ಬಿಡೋಲ್ಲ

- Advertisement -
- Advertisement -

ಮಾಜಿ ಸಚಿವ, ವಿಧಾನ ಪರಿಷತ್‌ ಸದಸ್ಯ ಸಿ.ಪಿ.ಯೋಗೇಶ್ವರ್ ಅವರು ಬಿಜೆಪಿಯ ಕಾರ್ಯಕರ್ತರ ಜೊತೆ ರಾಜ್ಯ ರಾಜಕೀಯದ ಆಗುಹೋಗುಗಳ ಬಗ್ಗೆ ಮಾತನಾಡಿದ್ದಾರೆ ಎನ್ನಲಾದ ಸಂಭಾಷಣೆಯ ಆಡಿಯೋ ಒಂದು ಎಲ್ಲೆಡೆ ವೈರಲ್ ಆಗುತ್ತಿದೆ. ಆದರೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಸಂಭಾಷಣೆ ತಮ್ಮದಲ್ಲ ಎಂದು ಯೋಗೇಶ್ವರ್ ಹೇಳಿದ್ದಾರೆ. ಆದರೆ ಅದರಲ್ಲಿ ಇರು ಮಾತುಗಳು ಗಮನ ಸೆಳೆಯುತ್ತಿವೆ. ವೈರಲ್ ಆಡಿಯೋದಲ್ಲೇನಿದೆ ಎಂಬುದನ್ನು ಇಲ್ಲಿ ನೀಡುವ ಪ್ರಯತ್ನ ಮಾಡಿದ್ದೇವೆ.

ಗುಬ್ಬಿ ಶ್ರೀನಿವಾಸ್, ಶಿವಲಿಂಗೇಗೌಡ, ಎ.ಟಿ ರಾಮಸ್ವಾಮಿ, ಗನ್ ಮಂಜು, ಡಾ.ಶ್ರೀನಿವಾಸಮೂರ್ತಿ, ಅನ್ನದಾನಿ, ಡಿ.ಸಿ ತಮ್ಮಣ್ಣ, ಎಂ.ಶ್ರೀನಿವಾಸ್, ಸಾ.ರಾ ಮಹೇಶ್, ಟಿ.ನರಸೀಪುರದ ಶಾಸಕ, ರಾಮನಗರದಲ್ಲಿ ಒಬ್ಬರು ಸೋಲುತ್ತಾರೆ. ಚನ್ನಪಟ್ಟಣ ಅಂತಲೇ ಅಲ್ಲ, ಅಲ್ಲಿ ಕುಮಾರಸ್ವಾಮಿಯವರು ಗೆಲ್ಲಬಹುದು. ಆದರೆ ರಾಮನಗರದ ಮೂವರು ಶಾಸಕರಲ್ಲಿ ಒಬ್ಬರು ಸೋಲುತ್ತಾರೆ. ಒಟ್ಟಿನಲ್ಲಿ ಹಳೆ ಮೈಸೂರು ಪ್ರಾಂತ್ಯದಲ್ಲಿ 12 ಜನ ಹಾಲಿ ಶಾಸಕರು ಸೋಲುತ್ತಾರೆ. ಉತ್ತರ ಕರ್ನಾಟಕದಲ್ಲಿ 5 ಜನರಲ್ಲಿ 3 ಜನ ಸೋಲುತ್ತಾರೆ. ಅದೇ ರೀತಿ ಮಧುಗಿರಿಯ ವೀರಭದ್ರಯ್ಯ, ಬೇಲೂರು ಲಿಂಗೇಶ್, ಚಿಂತಾಮಣಿಯಲ್ಲಿ ಕೃಷ್ಣಾ ರೆಡ್ಡಿ, ಸಕಲೇಶಪುರದಲ್ಲಿ ಕುಮಾರಸ್ವಾಮಿ ಸೇರಿದಂತೆ ಒಟ್ಟು 19 ಜನ ಶಾಸಕರು ಸೋಲುತ್ತಾರೆ ಎಂದು ಹೇಳಲಾಗಿದೆ.

ಸಾ.ರಾ ಮಹೇಶ್ ಯಾಕೆ ಸೋಲುತ್ತಾರೆಂದರೆ ಕಳೆದ ಬಾರಿ ಅವರು ಕಡಿಮೆ ಅಂತರದಲ್ಲಿ ಸೋತಿದ್ದರು. ಈ ಬಾರಿ ಇಬ್ಬರೂ ಒಕ್ಕಲಿಗ ಕ್ಯಾಂಡಿಡೇಟ್ ಇದ್ದು ಕಾಂಗ್ರೆಸ್‌ ಅಲ್ಲಿ ಗೆಲ್ಲುತ್ತದೆ. ಬಿಜೆಪಿಯಿಂದ ನಾವು ಕಳೆದ ಬಾರಿ ಜೆಡಿಎಸ್ ಹೊಂದಾಣಿಕೆ ಮಾಡಿಕೊಂಡಿದ್ದೆವು. ದೇವೇಗೌಡರ ಜೊತೆ ಮಾತನಾಡಿದ್ದೆವು. ಎಂದು ಹೇಳುವುದು ದಾಖಲಾಗಿದೆ.

ಈ ಬಾರಿ ಜನಾಭಿಪ್ರಾಯದಿಂದ ಬಿಜೆಪಿ ಅಧಿಕಾರಕ್ಕೆ ಬರುವುದಿಲ್ಲ. ಆದರೆ, ನಾವು ಬಿಜೆಪಿ ಸರ್ಕಾರ ರಚಿಸುತ್ತೇವೆ. ಮಾವಿನ ಹಣ್ಣು ಮರದಲ್ಲಿಯೇ ಹಣ್ಣು ಆಗುವುದಕ್ಕೂ, ತಂದು ಕೆಮಿಕಲ್ ಹಾಕಿ ಹಣ್ಣು ಮಾಡುವುದಕ್ಕೂ ವ್ಯತ್ಯಾಸವಿದೆ. ಕಾಂಗ್ರೆಸ್ ಸ್ಟ್ರಾಂಗ್ ಇಲ್ಲ. ಸಿದ್ದರಾಮಯ್ಯನವರಿಗೆ ಪಟ್ಟ ಕಟ್ಟಲು ಹಿರಿಯ ನಾಯಕರಿಗೆ ಇಷ್ಟವಿಲ್ಲ. ಸಂಕ್ರಾಂತಿ ನಂತರ ಹಳೆ ಮೈಸೂರು ಭಾಗದಲ್ಲಿ ದೊಡ್ಡ ಬದಲಾವಣೆ ಮಾಡುತ್ತೀವಿ. ಹಿರಿಯ ಕಾಂಗ್ರೆಸ್ ನಾಯಕರೊಬ್ಬರು ಬಿಜೆಪಿಗೆ ಬರುತ್ತಾರೆ. ಅದರಿಂದ ನಾಲ್ಕೈದು ಕ್ಷೇತ್ರಗಳಲ್ಲಿ ಬಿಜೆಪಿಗೆ 2-3 ಮತಗಳು ಪ್ಲಸ್ ಆಗುತ್ತವೆ. ಮಂಡ್ಯದಲ್ಲಿ ಒಬ್ಬರು ಬರುತ್ತಾರೆ. ಕೋಲಾರದಲ್ಲಿ ಒಬ್ಬರು ದಲಿತ ಲೀಡರ್ ಬರುತ್ತಾರೆ. ಅವರು 7-8 ಬಾರಿ ಸಂಸದರಾಗಿದ್ದರು. ಆದರೆ ನಮ್ಮವರೆ ಇನ್ನು ಒಪ್ಪುತ್ತಿಲ್ಲ.

25 ಜನರನ್ನು ಬಿಜೆಪಿಗೆ ತರುವ ಯೋಚನೆಯಲ್ಲಿದ್ದೇವೆ. ಚುನಾವಣೆ ಗೆದ್ದಮೇಲೆ ಆಪರೇಷನ್ ಕಮಲ ಮಾಡುವುದಿಲ್ಲ ನಾವು. ಮೊದಲೆ ಮಾಡಿಬಿಡುತ್ತೇವೆ. ಸುಮ್ಮನೆ ಯಾಕೆ ಆಪರೇಷನ್ ಕಮಲದ ಕೆಟ್ಟ ಹೆಸರು ಎಂದರು.

ಸಿದ್ದರಾಮಯ್ಯ ಅವರು ಜನಪ್ರಿಯ ನಾಯಕರು. ಅದರಲ್ಲಿ ಡೌಟ್ ಇಲ್ಲ. ಅವರು ಕೋಲಾರದಲ್ಲಿ ಗೆಲ್ಲುತ್ತಾರೆ. ಅವರಂತಹ ರಾಜಕಾರಣಿಗಳು ಇರಬೇಕು. ಆದರೆ ಅವರು ಎಷ್ಟು ಜನಪ್ರಿಯರು, 120 ಗೆಲ್ಲಿಸಿ, ಪಕ್ಷ ಬಹುಮತ ಪಡೆದು ಸರ್ಕಾರ ರಚಿಸುವಷ್ಟು ಜನಪ್ರಿಯರೆ ಎನ್ನುವುದು ಗೊತ್ತಿಲ್ಲ. ಅವರು ಕೋಲಾರದಲ್ಲಿ ಗೆಲ್ಲುತ್ತಾರೆ, ಅವರು ಗೆದ್ದ ಬಳಿಕವೇ ನಿಜವಾದ ರಾಜಕೀಯ ಶುರುವಾಗುತ್ತೆ. ಗೆದ್ದ ಮೇಲೆ ಅವರು ಮುಖ್ಯಮಂತ್ರಿ ಆಗದೇ ಬಿಡ್ತಾರಾ? ಇದು ಅವರ ಕೊನೆಯ ಪ್ರಯತ್ನ. ಆಗಲೇ ರಾಜಕೀಯ ಶುರುವಾಗುವುದು ಎಂದಿದ್ದಾರೆ.

ನಾನು ಕುಮಾರಸ್ವಾಮಿ ಅವರ ವಿರುದ್ಧ ಚನ್ನಪಟ್ಟದಲ್ಲಿ ಸ್ಪರ್ಧಿಸಲು ಒಪ್ಪಿಕೊಂಡಿದ್ದೇನೆ. ಅದೇ ರೀತಿ ಸಚಿವ ಅಶೋಕ್‌ ಅವರು ಕನಕಪುರದಲ್ಲಿ ಡಿ.ಕೆ.ಶಿವಕುಮಾರ್ ಅವರ ಎದುರು, ಸಚಿವ ಅಶ್ವತ್ಥನಾರಾಯಣ ಅವರು ರಾಮನಗರದಲ್ಲಿ  ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್‌ ಕುಮಾರ ಸ್ವಾಮಿ ಅವರ ಎದುರು ಸ್ಪರ್ಧಿಸಬೇಕು. ಹಾಗೆ ಕಟ್ಟಿ ಹಾಕಬೇಕು. ಹೇಗಿದ್ದರೂ ಪಕ್ಷವು ನಮ್ಮ ಬೆಂಬಲಕ್ಕೆ ಬರಲಿದೆ. ಸೋತರೆ ಎಂಎಲ್‌ಸಿ ಮಾಡಿ ಮಂತ್ರಿ ಮಾಡುತ್ತಾರೆ ಎಂದು ಹೇಳಲಾಗಿದೆ.

ಅಮಿತ್‌ ಶಾ ಹೇಳಿದ್ದಾರೆ ಹೊಂದಾಣಿಕೆ ಮಾಡಿಕೊಳ್ಳಬೇಡಿ ಅಂತ. ಬಹಳ ಕೆಟ್ಟದಾಗಿ ಹೇಳಿದರು. ಹೊಂದಾಣಿಕೆ ತಾಯಿಗೆ ದ್ರೋಹ ಬಗೆದ ಹಾಗೆ ಅಂತ. ಅಮಿತ್ ಶಾ ಅವರದು ಒಂಥರಾ ರೌಡಿಸಂ, ಯಾರನ್ನೂ ಬಿಡೋಲ್ಲ. ಅಂದ್ರೆ ಯಾರಾದ್ರೂ ಇತರ ಪಕ್ಷಗಳೊಂದಿಗೆ ಒಪ್ಪಂದ ಮಾಡಿಕೊಂಡಿದ್ದರೆ ಅದನ್ನು ಸಹಿಸೋಲ್ಲ. ಅವರ ಬುಡ ಬಿಡೋಲ್ಲ ಎಂದರು.

ʼಮೂವತ್ತು ಜನರನ್ನೂ ಅಮಿತ್‌ ಶಾ ಕರೆದಿದ್ದರು. ನನಗೆ ಗೊತ್ತು ಯಾರು ಪಕ್ಷಕ್ಕೆ ದ್ರೋಹ ಮಾಡ್ತಿದ್ದೀರಾ, ಇತರ ಪಕ್ಷಗಳ ಜೊತೆ ಅಂಡರ್ ಸ್ಟಾಂಡಿಂಗ್‌ ಮಾಡಿಕೊಂಡಿದ್ದೀರಾ ಎನ್ನುವುದು ಗೊತ್ತು ಎಂದು ಭಾರಿ ಕೆಟ್ಟದಾಗ್‌ ಮಾತನಾಡಿದ್ರು, ನೀಟಾಗಿ ಹೇಳಿದ್ರು, ಮೂರು ಗಂಟೆ ತಗೊಂಡ್ರು. ಪುನಃ ಕ್ಲಾಸ್ ತಗೋತ್ತಾರೆ ಅಂತೆ. ಆಗ ನಾನು ನೇರವಾಗಿ ಹೇಳಿಬಿಡ್ತೀನಿ. ನಾನು ಕುಮಾರಸ್ವಾಮಿ ಅವರ ವಿರುದ್ಧ ಚನ್ನಪಟ್ಟದಲ್ಲಿ ಸ್ಪರ್ಧಿಸಲು ಒಪ್ಪಿಕೊಂಡಿದ್ದೇನೆ. ಅದೇ ರೀತಿ ಸಚಿವ ಅಶೋಕ್‌ ಅವರು ಕನಕಪುರದಲ್ಲಿ ಡಿ.ಕೆ.ಶಿವಕುಮಾರ್ ಅವರ ಎದುರು, ಸಚಿವ ಅಶ್ವತ್ಥನಾರಾಯಣ ಅವರು ರಾಮನಗರದಲ್ಲಿ  ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್‌ ಕುಮಾರ ಸ್ವಾಮಿ ವಿರುದ್ಧ ಸ್ಪರ್ಧಿಸುತ್ತಾರೆ ಅಂತ 8-10 ಪಟ್ಟಿ ಮಾಡಿ ಹೇಳಿಬಿಡ್ತೀನಿ. ಆಗ ಚರ್ಚೆಯಾಗಲಿ. ಫೆಬ್ರವರಿ ಮಾರ್ಚ್‌ ನಲ್ಲಿ ಗೊತ್ತಾಗುತ್ತದೆ ಎಂದಿದ್ದಾರೆ. ಕೊನೆಯಲ್ಲಿ ಸಂಕ್ರಾಂತಿಯ ಶುಭಾಷಯಗಳನ್ನು ತಿಳಿಸಿರುವುದು ನೋಡಿದರೆ ಅದು ಇತ್ತೀಚಿನ ಆಡಿಯೋ ಎಂದು ದೃಢವಾಗುತ್ತದೆ.

ಇದನ್ನೂ ಓದಿ: ಪಂಚಮಸಾಲಿಯೊಳಗೆ ಯತ್ನಾಳ್- ನಿರಾಣಿ ಕುಸ್ತಿ: ಸಭ್ಯತೆ ಮೀರಿದ ಟೀಕಾಪ್ರಹಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...