Homeಮುಖಪುಟಸಿದ್ದು ಜನಪ್ರಿಯ ನಾಯಕರು, ಜನಾಭಿಪ್ರಾಯದಿಂದ ಬಿಜೆಪಿ ಅಧಿಕಾರಕ್ಕೆ ಬರುವುದಿಲ್ಲ: ವೈರಲ್ ಆಡಿಯೋದಲ್ಲಿರುವುದೇನು?

ಸಿದ್ದು ಜನಪ್ರಿಯ ನಾಯಕರು, ಜನಾಭಿಪ್ರಾಯದಿಂದ ಬಿಜೆಪಿ ಅಧಿಕಾರಕ್ಕೆ ಬರುವುದಿಲ್ಲ: ವೈರಲ್ ಆಡಿಯೋದಲ್ಲಿರುವುದೇನು?

ಅಮಿತ್ ಶಾ ಅವರದು ಒಂಥರಾ ರೌಡಿಸಂ, ಯಾರನ್ನೂ ಬಿಡೋಲ್ಲ. ಅಂದ್ರೆ ಯಾರಾದ್ರೂ ಇತರ ಪಕ್ಷಗಳೊಂದಿಗೆ ಒಪ್ಪಂದ ಮಾಡಿಕೊಂಡಿದ್ದರೆ ಅದನ್ನು ಸಹಿಸೋಲ್ಲ. ಅವರ ಬುಡ ಬಿಡೋಲ್ಲ

- Advertisement -
- Advertisement -

ಮಾಜಿ ಸಚಿವ, ವಿಧಾನ ಪರಿಷತ್‌ ಸದಸ್ಯ ಸಿ.ಪಿ.ಯೋಗೇಶ್ವರ್ ಅವರು ಬಿಜೆಪಿಯ ಕಾರ್ಯಕರ್ತರ ಜೊತೆ ರಾಜ್ಯ ರಾಜಕೀಯದ ಆಗುಹೋಗುಗಳ ಬಗ್ಗೆ ಮಾತನಾಡಿದ್ದಾರೆ ಎನ್ನಲಾದ ಸಂಭಾಷಣೆಯ ಆಡಿಯೋ ಒಂದು ಎಲ್ಲೆಡೆ ವೈರಲ್ ಆಗುತ್ತಿದೆ. ಆದರೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಸಂಭಾಷಣೆ ತಮ್ಮದಲ್ಲ ಎಂದು ಯೋಗೇಶ್ವರ್ ಹೇಳಿದ್ದಾರೆ. ಆದರೆ ಅದರಲ್ಲಿ ಇರು ಮಾತುಗಳು ಗಮನ ಸೆಳೆಯುತ್ತಿವೆ. ವೈರಲ್ ಆಡಿಯೋದಲ್ಲೇನಿದೆ ಎಂಬುದನ್ನು ಇಲ್ಲಿ ನೀಡುವ ಪ್ರಯತ್ನ ಮಾಡಿದ್ದೇವೆ.

ಗುಬ್ಬಿ ಶ್ರೀನಿವಾಸ್, ಶಿವಲಿಂಗೇಗೌಡ, ಎ.ಟಿ ರಾಮಸ್ವಾಮಿ, ಗನ್ ಮಂಜು, ಡಾ.ಶ್ರೀನಿವಾಸಮೂರ್ತಿ, ಅನ್ನದಾನಿ, ಡಿ.ಸಿ ತಮ್ಮಣ್ಣ, ಎಂ.ಶ್ರೀನಿವಾಸ್, ಸಾ.ರಾ ಮಹೇಶ್, ಟಿ.ನರಸೀಪುರದ ಶಾಸಕ, ರಾಮನಗರದಲ್ಲಿ ಒಬ್ಬರು ಸೋಲುತ್ತಾರೆ. ಚನ್ನಪಟ್ಟಣ ಅಂತಲೇ ಅಲ್ಲ, ಅಲ್ಲಿ ಕುಮಾರಸ್ವಾಮಿಯವರು ಗೆಲ್ಲಬಹುದು. ಆದರೆ ರಾಮನಗರದ ಮೂವರು ಶಾಸಕರಲ್ಲಿ ಒಬ್ಬರು ಸೋಲುತ್ತಾರೆ. ಒಟ್ಟಿನಲ್ಲಿ ಹಳೆ ಮೈಸೂರು ಪ್ರಾಂತ್ಯದಲ್ಲಿ 12 ಜನ ಹಾಲಿ ಶಾಸಕರು ಸೋಲುತ್ತಾರೆ. ಉತ್ತರ ಕರ್ನಾಟಕದಲ್ಲಿ 5 ಜನರಲ್ಲಿ 3 ಜನ ಸೋಲುತ್ತಾರೆ. ಅದೇ ರೀತಿ ಮಧುಗಿರಿಯ ವೀರಭದ್ರಯ್ಯ, ಬೇಲೂರು ಲಿಂಗೇಶ್, ಚಿಂತಾಮಣಿಯಲ್ಲಿ ಕೃಷ್ಣಾ ರೆಡ್ಡಿ, ಸಕಲೇಶಪುರದಲ್ಲಿ ಕುಮಾರಸ್ವಾಮಿ ಸೇರಿದಂತೆ ಒಟ್ಟು 19 ಜನ ಶಾಸಕರು ಸೋಲುತ್ತಾರೆ ಎಂದು ಹೇಳಲಾಗಿದೆ.

ಸಾ.ರಾ ಮಹೇಶ್ ಯಾಕೆ ಸೋಲುತ್ತಾರೆಂದರೆ ಕಳೆದ ಬಾರಿ ಅವರು ಕಡಿಮೆ ಅಂತರದಲ್ಲಿ ಸೋತಿದ್ದರು. ಈ ಬಾರಿ ಇಬ್ಬರೂ ಒಕ್ಕಲಿಗ ಕ್ಯಾಂಡಿಡೇಟ್ ಇದ್ದು ಕಾಂಗ್ರೆಸ್‌ ಅಲ್ಲಿ ಗೆಲ್ಲುತ್ತದೆ. ಬಿಜೆಪಿಯಿಂದ ನಾವು ಕಳೆದ ಬಾರಿ ಜೆಡಿಎಸ್ ಹೊಂದಾಣಿಕೆ ಮಾಡಿಕೊಂಡಿದ್ದೆವು. ದೇವೇಗೌಡರ ಜೊತೆ ಮಾತನಾಡಿದ್ದೆವು. ಎಂದು ಹೇಳುವುದು ದಾಖಲಾಗಿದೆ.

ಈ ಬಾರಿ ಜನಾಭಿಪ್ರಾಯದಿಂದ ಬಿಜೆಪಿ ಅಧಿಕಾರಕ್ಕೆ ಬರುವುದಿಲ್ಲ. ಆದರೆ, ನಾವು ಬಿಜೆಪಿ ಸರ್ಕಾರ ರಚಿಸುತ್ತೇವೆ. ಮಾವಿನ ಹಣ್ಣು ಮರದಲ್ಲಿಯೇ ಹಣ್ಣು ಆಗುವುದಕ್ಕೂ, ತಂದು ಕೆಮಿಕಲ್ ಹಾಕಿ ಹಣ್ಣು ಮಾಡುವುದಕ್ಕೂ ವ್ಯತ್ಯಾಸವಿದೆ. ಕಾಂಗ್ರೆಸ್ ಸ್ಟ್ರಾಂಗ್ ಇಲ್ಲ. ಸಿದ್ದರಾಮಯ್ಯನವರಿಗೆ ಪಟ್ಟ ಕಟ್ಟಲು ಹಿರಿಯ ನಾಯಕರಿಗೆ ಇಷ್ಟವಿಲ್ಲ. ಸಂಕ್ರಾಂತಿ ನಂತರ ಹಳೆ ಮೈಸೂರು ಭಾಗದಲ್ಲಿ ದೊಡ್ಡ ಬದಲಾವಣೆ ಮಾಡುತ್ತೀವಿ. ಹಿರಿಯ ಕಾಂಗ್ರೆಸ್ ನಾಯಕರೊಬ್ಬರು ಬಿಜೆಪಿಗೆ ಬರುತ್ತಾರೆ. ಅದರಿಂದ ನಾಲ್ಕೈದು ಕ್ಷೇತ್ರಗಳಲ್ಲಿ ಬಿಜೆಪಿಗೆ 2-3 ಮತಗಳು ಪ್ಲಸ್ ಆಗುತ್ತವೆ. ಮಂಡ್ಯದಲ್ಲಿ ಒಬ್ಬರು ಬರುತ್ತಾರೆ. ಕೋಲಾರದಲ್ಲಿ ಒಬ್ಬರು ದಲಿತ ಲೀಡರ್ ಬರುತ್ತಾರೆ. ಅವರು 7-8 ಬಾರಿ ಸಂಸದರಾಗಿದ್ದರು. ಆದರೆ ನಮ್ಮವರೆ ಇನ್ನು ಒಪ್ಪುತ್ತಿಲ್ಲ.

25 ಜನರನ್ನು ಬಿಜೆಪಿಗೆ ತರುವ ಯೋಚನೆಯಲ್ಲಿದ್ದೇವೆ. ಚುನಾವಣೆ ಗೆದ್ದಮೇಲೆ ಆಪರೇಷನ್ ಕಮಲ ಮಾಡುವುದಿಲ್ಲ ನಾವು. ಮೊದಲೆ ಮಾಡಿಬಿಡುತ್ತೇವೆ. ಸುಮ್ಮನೆ ಯಾಕೆ ಆಪರೇಷನ್ ಕಮಲದ ಕೆಟ್ಟ ಹೆಸರು ಎಂದರು.

ಸಿದ್ದರಾಮಯ್ಯ ಅವರು ಜನಪ್ರಿಯ ನಾಯಕರು. ಅದರಲ್ಲಿ ಡೌಟ್ ಇಲ್ಲ. ಅವರು ಕೋಲಾರದಲ್ಲಿ ಗೆಲ್ಲುತ್ತಾರೆ. ಅವರಂತಹ ರಾಜಕಾರಣಿಗಳು ಇರಬೇಕು. ಆದರೆ ಅವರು ಎಷ್ಟು ಜನಪ್ರಿಯರು, 120 ಗೆಲ್ಲಿಸಿ, ಪಕ್ಷ ಬಹುಮತ ಪಡೆದು ಸರ್ಕಾರ ರಚಿಸುವಷ್ಟು ಜನಪ್ರಿಯರೆ ಎನ್ನುವುದು ಗೊತ್ತಿಲ್ಲ. ಅವರು ಕೋಲಾರದಲ್ಲಿ ಗೆಲ್ಲುತ್ತಾರೆ, ಅವರು ಗೆದ್ದ ಬಳಿಕವೇ ನಿಜವಾದ ರಾಜಕೀಯ ಶುರುವಾಗುತ್ತೆ. ಗೆದ್ದ ಮೇಲೆ ಅವರು ಮುಖ್ಯಮಂತ್ರಿ ಆಗದೇ ಬಿಡ್ತಾರಾ? ಇದು ಅವರ ಕೊನೆಯ ಪ್ರಯತ್ನ. ಆಗಲೇ ರಾಜಕೀಯ ಶುರುವಾಗುವುದು ಎಂದಿದ್ದಾರೆ.

ನಾನು ಕುಮಾರಸ್ವಾಮಿ ಅವರ ವಿರುದ್ಧ ಚನ್ನಪಟ್ಟದಲ್ಲಿ ಸ್ಪರ್ಧಿಸಲು ಒಪ್ಪಿಕೊಂಡಿದ್ದೇನೆ. ಅದೇ ರೀತಿ ಸಚಿವ ಅಶೋಕ್‌ ಅವರು ಕನಕಪುರದಲ್ಲಿ ಡಿ.ಕೆ.ಶಿವಕುಮಾರ್ ಅವರ ಎದುರು, ಸಚಿವ ಅಶ್ವತ್ಥನಾರಾಯಣ ಅವರು ರಾಮನಗರದಲ್ಲಿ  ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್‌ ಕುಮಾರ ಸ್ವಾಮಿ ಅವರ ಎದುರು ಸ್ಪರ್ಧಿಸಬೇಕು. ಹಾಗೆ ಕಟ್ಟಿ ಹಾಕಬೇಕು. ಹೇಗಿದ್ದರೂ ಪಕ್ಷವು ನಮ್ಮ ಬೆಂಬಲಕ್ಕೆ ಬರಲಿದೆ. ಸೋತರೆ ಎಂಎಲ್‌ಸಿ ಮಾಡಿ ಮಂತ್ರಿ ಮಾಡುತ್ತಾರೆ ಎಂದು ಹೇಳಲಾಗಿದೆ.

ಅಮಿತ್‌ ಶಾ ಹೇಳಿದ್ದಾರೆ ಹೊಂದಾಣಿಕೆ ಮಾಡಿಕೊಳ್ಳಬೇಡಿ ಅಂತ. ಬಹಳ ಕೆಟ್ಟದಾಗಿ ಹೇಳಿದರು. ಹೊಂದಾಣಿಕೆ ತಾಯಿಗೆ ದ್ರೋಹ ಬಗೆದ ಹಾಗೆ ಅಂತ. ಅಮಿತ್ ಶಾ ಅವರದು ಒಂಥರಾ ರೌಡಿಸಂ, ಯಾರನ್ನೂ ಬಿಡೋಲ್ಲ. ಅಂದ್ರೆ ಯಾರಾದ್ರೂ ಇತರ ಪಕ್ಷಗಳೊಂದಿಗೆ ಒಪ್ಪಂದ ಮಾಡಿಕೊಂಡಿದ್ದರೆ ಅದನ್ನು ಸಹಿಸೋಲ್ಲ. ಅವರ ಬುಡ ಬಿಡೋಲ್ಲ ಎಂದರು.

ʼಮೂವತ್ತು ಜನರನ್ನೂ ಅಮಿತ್‌ ಶಾ ಕರೆದಿದ್ದರು. ನನಗೆ ಗೊತ್ತು ಯಾರು ಪಕ್ಷಕ್ಕೆ ದ್ರೋಹ ಮಾಡ್ತಿದ್ದೀರಾ, ಇತರ ಪಕ್ಷಗಳ ಜೊತೆ ಅಂಡರ್ ಸ್ಟಾಂಡಿಂಗ್‌ ಮಾಡಿಕೊಂಡಿದ್ದೀರಾ ಎನ್ನುವುದು ಗೊತ್ತು ಎಂದು ಭಾರಿ ಕೆಟ್ಟದಾಗ್‌ ಮಾತನಾಡಿದ್ರು, ನೀಟಾಗಿ ಹೇಳಿದ್ರು, ಮೂರು ಗಂಟೆ ತಗೊಂಡ್ರು. ಪುನಃ ಕ್ಲಾಸ್ ತಗೋತ್ತಾರೆ ಅಂತೆ. ಆಗ ನಾನು ನೇರವಾಗಿ ಹೇಳಿಬಿಡ್ತೀನಿ. ನಾನು ಕುಮಾರಸ್ವಾಮಿ ಅವರ ವಿರುದ್ಧ ಚನ್ನಪಟ್ಟದಲ್ಲಿ ಸ್ಪರ್ಧಿಸಲು ಒಪ್ಪಿಕೊಂಡಿದ್ದೇನೆ. ಅದೇ ರೀತಿ ಸಚಿವ ಅಶೋಕ್‌ ಅವರು ಕನಕಪುರದಲ್ಲಿ ಡಿ.ಕೆ.ಶಿವಕುಮಾರ್ ಅವರ ಎದುರು, ಸಚಿವ ಅಶ್ವತ್ಥನಾರಾಯಣ ಅವರು ರಾಮನಗರದಲ್ಲಿ  ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್‌ ಕುಮಾರ ಸ್ವಾಮಿ ವಿರುದ್ಧ ಸ್ಪರ್ಧಿಸುತ್ತಾರೆ ಅಂತ 8-10 ಪಟ್ಟಿ ಮಾಡಿ ಹೇಳಿಬಿಡ್ತೀನಿ. ಆಗ ಚರ್ಚೆಯಾಗಲಿ. ಫೆಬ್ರವರಿ ಮಾರ್ಚ್‌ ನಲ್ಲಿ ಗೊತ್ತಾಗುತ್ತದೆ ಎಂದಿದ್ದಾರೆ. ಕೊನೆಯಲ್ಲಿ ಸಂಕ್ರಾಂತಿಯ ಶುಭಾಷಯಗಳನ್ನು ತಿಳಿಸಿರುವುದು ನೋಡಿದರೆ ಅದು ಇತ್ತೀಚಿನ ಆಡಿಯೋ ಎಂದು ದೃಢವಾಗುತ್ತದೆ.

ಇದನ್ನೂ ಓದಿ: ಪಂಚಮಸಾಲಿಯೊಳಗೆ ಯತ್ನಾಳ್- ನಿರಾಣಿ ಕುಸ್ತಿ: ಸಭ್ಯತೆ ಮೀರಿದ ಟೀಕಾಪ್ರಹಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...

ಕ್ಷುಲ್ಲಕ ಕಾರಣಕ್ಕೆ ಮೂವರು ಮುಸ್ಲಿಮರ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿ

ಕ್ಷುಲ್ಲಕ ಕಾರಣಕ್ಕೆ ಇಬ್ಬರು ಹಿರಿಯ ವಯಸ್ಕರು ಸೇರಿದಂತೆ ಮೂವರು ಮುಸ್ಲಿಂ ವ್ಯಕ್ತಿಗಳ ಮೇಲೆ ದುಷ್ಕರ್ಮಿಯೊಬ್ಬ ಅಮಾನವೀಯವಾಗಿ ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ನಡೆದಿದೆ. ಫೆಬ್ರವರಿ 15ರಂದು ಜಿಲ್ಲೆಯ ರುದಾಯನ್ ಪಟ್ಟಣದಲ್ಲಿ...

ಎಸ್‌ಐಆರ್ ಬಳಿಕ 9 ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಮತದಾರರ ಸಂಖ್ಯೆ 1.70 ಕೋಟಿ ಇಳಿಕೆ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ 9 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮತದಾರರ ಒಟ್ಟು ಸಂಖ್ಯೆಯಲ್ಲಿ 1.70 ಕೋಟಿ ಇಳಿಕೆ ಕಂಡಿದೆ. ಗುಜರಾತ್, ಪುದುಚೇರಿ, ಲಕ್ಷದ್ವೀಪ, ರಾಜಸ್ಥಾನ, ಛತ್ತೀಸ್‌ಗಢ, ಅಂಡಮಾನ್...

ಅಫ್ಘಾನ್ ಗಡಿಯಲ್ಲಿ ಪಾಕಿಸ್ತಾನ ವೈಮಾನಿಕ ದಾಳಿ : 20ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಶಂಕೆ

ಅಫ್ಘಾನಿಸ್ತಾನದ ಗಡಿ ಪ್ರದೇಶಗಳಲ್ಲಿ ಪಾಕಿಸ್ತಾನ ಭಾನುವಾರ (ಫೆ.22) ಭಾರೀ ವೈಮಾನಿಕ ದಾಳಿ ನಡೆಸಿರುವುದಾಗಿ ವರದಿಯಾಗಿದೆ. ಪಾಕಿಸ್ತಾನದ ವಾಯುಪಡೆಯು ಅಫ್ಘಾನಿಸ್ತಾನದ ಪಕ್ತಿಕಾ ಮತ್ತು ನಂಗರ್ಹಾರ್ ಪ್ರಾಂತ್ಯಗಳಲ್ಲಿರುವ ಏಳು ಸಶಸ್ತ್ರ ಗುಂಪುಗಳ ಅಡಗುತಾಣಗಳ ಮೇಲೆ ದಾಳಿ ನಡೆಸಿದೆ...

ಹೊಸ ಜಾಗತಿಕ ಸುಂಕವನ್ನು ಶೇ.15ಕ್ಕೆ ಏರಿಸಿದ ಟ್ರಂಪ್

ಪ್ರತಿ ಸುಂಕ ನೀತಿಯನ್ನು ರದ್ದುಗೊಳಿಸಿದ್ದ ಸುಪ್ರೀಂ ಕೋರ್ಟ್ ಆದೇಶಕ್ಕೆ ಸೆಡ್ಡು ಹೊಡೆದು, ಎಲ್ಲಾ ದೇಶಗಳ ಆಮದಿನ ಮೇಲೆ ಹೊಸದಾಗಿ 10 ಶೇಕಡ ಜಾಗತಿಕ ಸುಂಕ ಘೋಷಿಸಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಶನಿವಾರ...

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...