Homeಮುಖಪುಟಸಿದ್ದು ಜನಪ್ರಿಯ ನಾಯಕರು, ಜನಾಭಿಪ್ರಾಯದಿಂದ ಬಿಜೆಪಿ ಅಧಿಕಾರಕ್ಕೆ ಬರುವುದಿಲ್ಲ: ವೈರಲ್ ಆಡಿಯೋದಲ್ಲಿರುವುದೇನು?

ಸಿದ್ದು ಜನಪ್ರಿಯ ನಾಯಕರು, ಜನಾಭಿಪ್ರಾಯದಿಂದ ಬಿಜೆಪಿ ಅಧಿಕಾರಕ್ಕೆ ಬರುವುದಿಲ್ಲ: ವೈರಲ್ ಆಡಿಯೋದಲ್ಲಿರುವುದೇನು?

ಅಮಿತ್ ಶಾ ಅವರದು ಒಂಥರಾ ರೌಡಿಸಂ, ಯಾರನ್ನೂ ಬಿಡೋಲ್ಲ. ಅಂದ್ರೆ ಯಾರಾದ್ರೂ ಇತರ ಪಕ್ಷಗಳೊಂದಿಗೆ ಒಪ್ಪಂದ ಮಾಡಿಕೊಂಡಿದ್ದರೆ ಅದನ್ನು ಸಹಿಸೋಲ್ಲ. ಅವರ ಬುಡ ಬಿಡೋಲ್ಲ

- Advertisement -
- Advertisement -

ಮಾಜಿ ಸಚಿವ, ವಿಧಾನ ಪರಿಷತ್‌ ಸದಸ್ಯ ಸಿ.ಪಿ.ಯೋಗೇಶ್ವರ್ ಅವರು ಬಿಜೆಪಿಯ ಕಾರ್ಯಕರ್ತರ ಜೊತೆ ರಾಜ್ಯ ರಾಜಕೀಯದ ಆಗುಹೋಗುಗಳ ಬಗ್ಗೆ ಮಾತನಾಡಿದ್ದಾರೆ ಎನ್ನಲಾದ ಸಂಭಾಷಣೆಯ ಆಡಿಯೋ ಒಂದು ಎಲ್ಲೆಡೆ ವೈರಲ್ ಆಗುತ್ತಿದೆ. ಆದರೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಸಂಭಾಷಣೆ ತಮ್ಮದಲ್ಲ ಎಂದು ಯೋಗೇಶ್ವರ್ ಹೇಳಿದ್ದಾರೆ. ಆದರೆ ಅದರಲ್ಲಿ ಇರು ಮಾತುಗಳು ಗಮನ ಸೆಳೆಯುತ್ತಿವೆ. ವೈರಲ್ ಆಡಿಯೋದಲ್ಲೇನಿದೆ ಎಂಬುದನ್ನು ಇಲ್ಲಿ ನೀಡುವ ಪ್ರಯತ್ನ ಮಾಡಿದ್ದೇವೆ.

ಗುಬ್ಬಿ ಶ್ರೀನಿವಾಸ್, ಶಿವಲಿಂಗೇಗೌಡ, ಎ.ಟಿ ರಾಮಸ್ವಾಮಿ, ಗನ್ ಮಂಜು, ಡಾ.ಶ್ರೀನಿವಾಸಮೂರ್ತಿ, ಅನ್ನದಾನಿ, ಡಿ.ಸಿ ತಮ್ಮಣ್ಣ, ಎಂ.ಶ್ರೀನಿವಾಸ್, ಸಾ.ರಾ ಮಹೇಶ್, ಟಿ.ನರಸೀಪುರದ ಶಾಸಕ, ರಾಮನಗರದಲ್ಲಿ ಒಬ್ಬರು ಸೋಲುತ್ತಾರೆ. ಚನ್ನಪಟ್ಟಣ ಅಂತಲೇ ಅಲ್ಲ, ಅಲ್ಲಿ ಕುಮಾರಸ್ವಾಮಿಯವರು ಗೆಲ್ಲಬಹುದು. ಆದರೆ ರಾಮನಗರದ ಮೂವರು ಶಾಸಕರಲ್ಲಿ ಒಬ್ಬರು ಸೋಲುತ್ತಾರೆ. ಒಟ್ಟಿನಲ್ಲಿ ಹಳೆ ಮೈಸೂರು ಪ್ರಾಂತ್ಯದಲ್ಲಿ 12 ಜನ ಹಾಲಿ ಶಾಸಕರು ಸೋಲುತ್ತಾರೆ. ಉತ್ತರ ಕರ್ನಾಟಕದಲ್ಲಿ 5 ಜನರಲ್ಲಿ 3 ಜನ ಸೋಲುತ್ತಾರೆ. ಅದೇ ರೀತಿ ಮಧುಗಿರಿಯ ವೀರಭದ್ರಯ್ಯ, ಬೇಲೂರು ಲಿಂಗೇಶ್, ಚಿಂತಾಮಣಿಯಲ್ಲಿ ಕೃಷ್ಣಾ ರೆಡ್ಡಿ, ಸಕಲೇಶಪುರದಲ್ಲಿ ಕುಮಾರಸ್ವಾಮಿ ಸೇರಿದಂತೆ ಒಟ್ಟು 19 ಜನ ಶಾಸಕರು ಸೋಲುತ್ತಾರೆ ಎಂದು ಹೇಳಲಾಗಿದೆ.

ಸಾ.ರಾ ಮಹೇಶ್ ಯಾಕೆ ಸೋಲುತ್ತಾರೆಂದರೆ ಕಳೆದ ಬಾರಿ ಅವರು ಕಡಿಮೆ ಅಂತರದಲ್ಲಿ ಸೋತಿದ್ದರು. ಈ ಬಾರಿ ಇಬ್ಬರೂ ಒಕ್ಕಲಿಗ ಕ್ಯಾಂಡಿಡೇಟ್ ಇದ್ದು ಕಾಂಗ್ರೆಸ್‌ ಅಲ್ಲಿ ಗೆಲ್ಲುತ್ತದೆ. ಬಿಜೆಪಿಯಿಂದ ನಾವು ಕಳೆದ ಬಾರಿ ಜೆಡಿಎಸ್ ಹೊಂದಾಣಿಕೆ ಮಾಡಿಕೊಂಡಿದ್ದೆವು. ದೇವೇಗೌಡರ ಜೊತೆ ಮಾತನಾಡಿದ್ದೆವು. ಎಂದು ಹೇಳುವುದು ದಾಖಲಾಗಿದೆ.

ಈ ಬಾರಿ ಜನಾಭಿಪ್ರಾಯದಿಂದ ಬಿಜೆಪಿ ಅಧಿಕಾರಕ್ಕೆ ಬರುವುದಿಲ್ಲ. ಆದರೆ, ನಾವು ಬಿಜೆಪಿ ಸರ್ಕಾರ ರಚಿಸುತ್ತೇವೆ. ಮಾವಿನ ಹಣ್ಣು ಮರದಲ್ಲಿಯೇ ಹಣ್ಣು ಆಗುವುದಕ್ಕೂ, ತಂದು ಕೆಮಿಕಲ್ ಹಾಕಿ ಹಣ್ಣು ಮಾಡುವುದಕ್ಕೂ ವ್ಯತ್ಯಾಸವಿದೆ. ಕಾಂಗ್ರೆಸ್ ಸ್ಟ್ರಾಂಗ್ ಇಲ್ಲ. ಸಿದ್ದರಾಮಯ್ಯನವರಿಗೆ ಪಟ್ಟ ಕಟ್ಟಲು ಹಿರಿಯ ನಾಯಕರಿಗೆ ಇಷ್ಟವಿಲ್ಲ. ಸಂಕ್ರಾಂತಿ ನಂತರ ಹಳೆ ಮೈಸೂರು ಭಾಗದಲ್ಲಿ ದೊಡ್ಡ ಬದಲಾವಣೆ ಮಾಡುತ್ತೀವಿ. ಹಿರಿಯ ಕಾಂಗ್ರೆಸ್ ನಾಯಕರೊಬ್ಬರು ಬಿಜೆಪಿಗೆ ಬರುತ್ತಾರೆ. ಅದರಿಂದ ನಾಲ್ಕೈದು ಕ್ಷೇತ್ರಗಳಲ್ಲಿ ಬಿಜೆಪಿಗೆ 2-3 ಮತಗಳು ಪ್ಲಸ್ ಆಗುತ್ತವೆ. ಮಂಡ್ಯದಲ್ಲಿ ಒಬ್ಬರು ಬರುತ್ತಾರೆ. ಕೋಲಾರದಲ್ಲಿ ಒಬ್ಬರು ದಲಿತ ಲೀಡರ್ ಬರುತ್ತಾರೆ. ಅವರು 7-8 ಬಾರಿ ಸಂಸದರಾಗಿದ್ದರು. ಆದರೆ ನಮ್ಮವರೆ ಇನ್ನು ಒಪ್ಪುತ್ತಿಲ್ಲ.

25 ಜನರನ್ನು ಬಿಜೆಪಿಗೆ ತರುವ ಯೋಚನೆಯಲ್ಲಿದ್ದೇವೆ. ಚುನಾವಣೆ ಗೆದ್ದಮೇಲೆ ಆಪರೇಷನ್ ಕಮಲ ಮಾಡುವುದಿಲ್ಲ ನಾವು. ಮೊದಲೆ ಮಾಡಿಬಿಡುತ್ತೇವೆ. ಸುಮ್ಮನೆ ಯಾಕೆ ಆಪರೇಷನ್ ಕಮಲದ ಕೆಟ್ಟ ಹೆಸರು ಎಂದರು.

ಸಿದ್ದರಾಮಯ್ಯ ಅವರು ಜನಪ್ರಿಯ ನಾಯಕರು. ಅದರಲ್ಲಿ ಡೌಟ್ ಇಲ್ಲ. ಅವರು ಕೋಲಾರದಲ್ಲಿ ಗೆಲ್ಲುತ್ತಾರೆ. ಅವರಂತಹ ರಾಜಕಾರಣಿಗಳು ಇರಬೇಕು. ಆದರೆ ಅವರು ಎಷ್ಟು ಜನಪ್ರಿಯರು, 120 ಗೆಲ್ಲಿಸಿ, ಪಕ್ಷ ಬಹುಮತ ಪಡೆದು ಸರ್ಕಾರ ರಚಿಸುವಷ್ಟು ಜನಪ್ರಿಯರೆ ಎನ್ನುವುದು ಗೊತ್ತಿಲ್ಲ. ಅವರು ಕೋಲಾರದಲ್ಲಿ ಗೆಲ್ಲುತ್ತಾರೆ, ಅವರು ಗೆದ್ದ ಬಳಿಕವೇ ನಿಜವಾದ ರಾಜಕೀಯ ಶುರುವಾಗುತ್ತೆ. ಗೆದ್ದ ಮೇಲೆ ಅವರು ಮುಖ್ಯಮಂತ್ರಿ ಆಗದೇ ಬಿಡ್ತಾರಾ? ಇದು ಅವರ ಕೊನೆಯ ಪ್ರಯತ್ನ. ಆಗಲೇ ರಾಜಕೀಯ ಶುರುವಾಗುವುದು ಎಂದಿದ್ದಾರೆ.

ನಾನು ಕುಮಾರಸ್ವಾಮಿ ಅವರ ವಿರುದ್ಧ ಚನ್ನಪಟ್ಟದಲ್ಲಿ ಸ್ಪರ್ಧಿಸಲು ಒಪ್ಪಿಕೊಂಡಿದ್ದೇನೆ. ಅದೇ ರೀತಿ ಸಚಿವ ಅಶೋಕ್‌ ಅವರು ಕನಕಪುರದಲ್ಲಿ ಡಿ.ಕೆ.ಶಿವಕುಮಾರ್ ಅವರ ಎದುರು, ಸಚಿವ ಅಶ್ವತ್ಥನಾರಾಯಣ ಅವರು ರಾಮನಗರದಲ್ಲಿ  ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್‌ ಕುಮಾರ ಸ್ವಾಮಿ ಅವರ ಎದುರು ಸ್ಪರ್ಧಿಸಬೇಕು. ಹಾಗೆ ಕಟ್ಟಿ ಹಾಕಬೇಕು. ಹೇಗಿದ್ದರೂ ಪಕ್ಷವು ನಮ್ಮ ಬೆಂಬಲಕ್ಕೆ ಬರಲಿದೆ. ಸೋತರೆ ಎಂಎಲ್‌ಸಿ ಮಾಡಿ ಮಂತ್ರಿ ಮಾಡುತ್ತಾರೆ ಎಂದು ಹೇಳಲಾಗಿದೆ.

ಅಮಿತ್‌ ಶಾ ಹೇಳಿದ್ದಾರೆ ಹೊಂದಾಣಿಕೆ ಮಾಡಿಕೊಳ್ಳಬೇಡಿ ಅಂತ. ಬಹಳ ಕೆಟ್ಟದಾಗಿ ಹೇಳಿದರು. ಹೊಂದಾಣಿಕೆ ತಾಯಿಗೆ ದ್ರೋಹ ಬಗೆದ ಹಾಗೆ ಅಂತ. ಅಮಿತ್ ಶಾ ಅವರದು ಒಂಥರಾ ರೌಡಿಸಂ, ಯಾರನ್ನೂ ಬಿಡೋಲ್ಲ. ಅಂದ್ರೆ ಯಾರಾದ್ರೂ ಇತರ ಪಕ್ಷಗಳೊಂದಿಗೆ ಒಪ್ಪಂದ ಮಾಡಿಕೊಂಡಿದ್ದರೆ ಅದನ್ನು ಸಹಿಸೋಲ್ಲ. ಅವರ ಬುಡ ಬಿಡೋಲ್ಲ ಎಂದರು.

ʼಮೂವತ್ತು ಜನರನ್ನೂ ಅಮಿತ್‌ ಶಾ ಕರೆದಿದ್ದರು. ನನಗೆ ಗೊತ್ತು ಯಾರು ಪಕ್ಷಕ್ಕೆ ದ್ರೋಹ ಮಾಡ್ತಿದ್ದೀರಾ, ಇತರ ಪಕ್ಷಗಳ ಜೊತೆ ಅಂಡರ್ ಸ್ಟಾಂಡಿಂಗ್‌ ಮಾಡಿಕೊಂಡಿದ್ದೀರಾ ಎನ್ನುವುದು ಗೊತ್ತು ಎಂದು ಭಾರಿ ಕೆಟ್ಟದಾಗ್‌ ಮಾತನಾಡಿದ್ರು, ನೀಟಾಗಿ ಹೇಳಿದ್ರು, ಮೂರು ಗಂಟೆ ತಗೊಂಡ್ರು. ಪುನಃ ಕ್ಲಾಸ್ ತಗೋತ್ತಾರೆ ಅಂತೆ. ಆಗ ನಾನು ನೇರವಾಗಿ ಹೇಳಿಬಿಡ್ತೀನಿ. ನಾನು ಕುಮಾರಸ್ವಾಮಿ ಅವರ ವಿರುದ್ಧ ಚನ್ನಪಟ್ಟದಲ್ಲಿ ಸ್ಪರ್ಧಿಸಲು ಒಪ್ಪಿಕೊಂಡಿದ್ದೇನೆ. ಅದೇ ರೀತಿ ಸಚಿವ ಅಶೋಕ್‌ ಅವರು ಕನಕಪುರದಲ್ಲಿ ಡಿ.ಕೆ.ಶಿವಕುಮಾರ್ ಅವರ ಎದುರು, ಸಚಿವ ಅಶ್ವತ್ಥನಾರಾಯಣ ಅವರು ರಾಮನಗರದಲ್ಲಿ  ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್‌ ಕುಮಾರ ಸ್ವಾಮಿ ವಿರುದ್ಧ ಸ್ಪರ್ಧಿಸುತ್ತಾರೆ ಅಂತ 8-10 ಪಟ್ಟಿ ಮಾಡಿ ಹೇಳಿಬಿಡ್ತೀನಿ. ಆಗ ಚರ್ಚೆಯಾಗಲಿ. ಫೆಬ್ರವರಿ ಮಾರ್ಚ್‌ ನಲ್ಲಿ ಗೊತ್ತಾಗುತ್ತದೆ ಎಂದಿದ್ದಾರೆ. ಕೊನೆಯಲ್ಲಿ ಸಂಕ್ರಾಂತಿಯ ಶುಭಾಷಯಗಳನ್ನು ತಿಳಿಸಿರುವುದು ನೋಡಿದರೆ ಅದು ಇತ್ತೀಚಿನ ಆಡಿಯೋ ಎಂದು ದೃಢವಾಗುತ್ತದೆ.

ಇದನ್ನೂ ಓದಿ: ಪಂಚಮಸಾಲಿಯೊಳಗೆ ಯತ್ನಾಳ್- ನಿರಾಣಿ ಕುಸ್ತಿ: ಸಭ್ಯತೆ ಮೀರಿದ ಟೀಕಾಪ್ರಹಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...