Homeಮುಖಪುಟಸಿದ್ದು ಜನಪ್ರಿಯ ನಾಯಕರು, ಜನಾಭಿಪ್ರಾಯದಿಂದ ಬಿಜೆಪಿ ಅಧಿಕಾರಕ್ಕೆ ಬರುವುದಿಲ್ಲ: ವೈರಲ್ ಆಡಿಯೋದಲ್ಲಿರುವುದೇನು?

ಸಿದ್ದು ಜನಪ್ರಿಯ ನಾಯಕರು, ಜನಾಭಿಪ್ರಾಯದಿಂದ ಬಿಜೆಪಿ ಅಧಿಕಾರಕ್ಕೆ ಬರುವುದಿಲ್ಲ: ವೈರಲ್ ಆಡಿಯೋದಲ್ಲಿರುವುದೇನು?

ಅಮಿತ್ ಶಾ ಅವರದು ಒಂಥರಾ ರೌಡಿಸಂ, ಯಾರನ್ನೂ ಬಿಡೋಲ್ಲ. ಅಂದ್ರೆ ಯಾರಾದ್ರೂ ಇತರ ಪಕ್ಷಗಳೊಂದಿಗೆ ಒಪ್ಪಂದ ಮಾಡಿಕೊಂಡಿದ್ದರೆ ಅದನ್ನು ಸಹಿಸೋಲ್ಲ. ಅವರ ಬುಡ ಬಿಡೋಲ್ಲ

- Advertisement -
- Advertisement -

ಮಾಜಿ ಸಚಿವ, ವಿಧಾನ ಪರಿಷತ್‌ ಸದಸ್ಯ ಸಿ.ಪಿ.ಯೋಗೇಶ್ವರ್ ಅವರು ಬಿಜೆಪಿಯ ಕಾರ್ಯಕರ್ತರ ಜೊತೆ ರಾಜ್ಯ ರಾಜಕೀಯದ ಆಗುಹೋಗುಗಳ ಬಗ್ಗೆ ಮಾತನಾಡಿದ್ದಾರೆ ಎನ್ನಲಾದ ಸಂಭಾಷಣೆಯ ಆಡಿಯೋ ಒಂದು ಎಲ್ಲೆಡೆ ವೈರಲ್ ಆಗುತ್ತಿದೆ. ಆದರೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಸಂಭಾಷಣೆ ತಮ್ಮದಲ್ಲ ಎಂದು ಯೋಗೇಶ್ವರ್ ಹೇಳಿದ್ದಾರೆ. ಆದರೆ ಅದರಲ್ಲಿ ಇರು ಮಾತುಗಳು ಗಮನ ಸೆಳೆಯುತ್ತಿವೆ. ವೈರಲ್ ಆಡಿಯೋದಲ್ಲೇನಿದೆ ಎಂಬುದನ್ನು ಇಲ್ಲಿ ನೀಡುವ ಪ್ರಯತ್ನ ಮಾಡಿದ್ದೇವೆ.

ಗುಬ್ಬಿ ಶ್ರೀನಿವಾಸ್, ಶಿವಲಿಂಗೇಗೌಡ, ಎ.ಟಿ ರಾಮಸ್ವಾಮಿ, ಗನ್ ಮಂಜು, ಡಾ.ಶ್ರೀನಿವಾಸಮೂರ್ತಿ, ಅನ್ನದಾನಿ, ಡಿ.ಸಿ ತಮ್ಮಣ್ಣ, ಎಂ.ಶ್ರೀನಿವಾಸ್, ಸಾ.ರಾ ಮಹೇಶ್, ಟಿ.ನರಸೀಪುರದ ಶಾಸಕ, ರಾಮನಗರದಲ್ಲಿ ಒಬ್ಬರು ಸೋಲುತ್ತಾರೆ. ಚನ್ನಪಟ್ಟಣ ಅಂತಲೇ ಅಲ್ಲ, ಅಲ್ಲಿ ಕುಮಾರಸ್ವಾಮಿಯವರು ಗೆಲ್ಲಬಹುದು. ಆದರೆ ರಾಮನಗರದ ಮೂವರು ಶಾಸಕರಲ್ಲಿ ಒಬ್ಬರು ಸೋಲುತ್ತಾರೆ. ಒಟ್ಟಿನಲ್ಲಿ ಹಳೆ ಮೈಸೂರು ಪ್ರಾಂತ್ಯದಲ್ಲಿ 12 ಜನ ಹಾಲಿ ಶಾಸಕರು ಸೋಲುತ್ತಾರೆ. ಉತ್ತರ ಕರ್ನಾಟಕದಲ್ಲಿ 5 ಜನರಲ್ಲಿ 3 ಜನ ಸೋಲುತ್ತಾರೆ. ಅದೇ ರೀತಿ ಮಧುಗಿರಿಯ ವೀರಭದ್ರಯ್ಯ, ಬೇಲೂರು ಲಿಂಗೇಶ್, ಚಿಂತಾಮಣಿಯಲ್ಲಿ ಕೃಷ್ಣಾ ರೆಡ್ಡಿ, ಸಕಲೇಶಪುರದಲ್ಲಿ ಕುಮಾರಸ್ವಾಮಿ ಸೇರಿದಂತೆ ಒಟ್ಟು 19 ಜನ ಶಾಸಕರು ಸೋಲುತ್ತಾರೆ ಎಂದು ಹೇಳಲಾಗಿದೆ.

ಸಾ.ರಾ ಮಹೇಶ್ ಯಾಕೆ ಸೋಲುತ್ತಾರೆಂದರೆ ಕಳೆದ ಬಾರಿ ಅವರು ಕಡಿಮೆ ಅಂತರದಲ್ಲಿ ಸೋತಿದ್ದರು. ಈ ಬಾರಿ ಇಬ್ಬರೂ ಒಕ್ಕಲಿಗ ಕ್ಯಾಂಡಿಡೇಟ್ ಇದ್ದು ಕಾಂಗ್ರೆಸ್‌ ಅಲ್ಲಿ ಗೆಲ್ಲುತ್ತದೆ. ಬಿಜೆಪಿಯಿಂದ ನಾವು ಕಳೆದ ಬಾರಿ ಜೆಡಿಎಸ್ ಹೊಂದಾಣಿಕೆ ಮಾಡಿಕೊಂಡಿದ್ದೆವು. ದೇವೇಗೌಡರ ಜೊತೆ ಮಾತನಾಡಿದ್ದೆವು. ಎಂದು ಹೇಳುವುದು ದಾಖಲಾಗಿದೆ.

ಈ ಬಾರಿ ಜನಾಭಿಪ್ರಾಯದಿಂದ ಬಿಜೆಪಿ ಅಧಿಕಾರಕ್ಕೆ ಬರುವುದಿಲ್ಲ. ಆದರೆ, ನಾವು ಬಿಜೆಪಿ ಸರ್ಕಾರ ರಚಿಸುತ್ತೇವೆ. ಮಾವಿನ ಹಣ್ಣು ಮರದಲ್ಲಿಯೇ ಹಣ್ಣು ಆಗುವುದಕ್ಕೂ, ತಂದು ಕೆಮಿಕಲ್ ಹಾಕಿ ಹಣ್ಣು ಮಾಡುವುದಕ್ಕೂ ವ್ಯತ್ಯಾಸವಿದೆ. ಕಾಂಗ್ರೆಸ್ ಸ್ಟ್ರಾಂಗ್ ಇಲ್ಲ. ಸಿದ್ದರಾಮಯ್ಯನವರಿಗೆ ಪಟ್ಟ ಕಟ್ಟಲು ಹಿರಿಯ ನಾಯಕರಿಗೆ ಇಷ್ಟವಿಲ್ಲ. ಸಂಕ್ರಾಂತಿ ನಂತರ ಹಳೆ ಮೈಸೂರು ಭಾಗದಲ್ಲಿ ದೊಡ್ಡ ಬದಲಾವಣೆ ಮಾಡುತ್ತೀವಿ. ಹಿರಿಯ ಕಾಂಗ್ರೆಸ್ ನಾಯಕರೊಬ್ಬರು ಬಿಜೆಪಿಗೆ ಬರುತ್ತಾರೆ. ಅದರಿಂದ ನಾಲ್ಕೈದು ಕ್ಷೇತ್ರಗಳಲ್ಲಿ ಬಿಜೆಪಿಗೆ 2-3 ಮತಗಳು ಪ್ಲಸ್ ಆಗುತ್ತವೆ. ಮಂಡ್ಯದಲ್ಲಿ ಒಬ್ಬರು ಬರುತ್ತಾರೆ. ಕೋಲಾರದಲ್ಲಿ ಒಬ್ಬರು ದಲಿತ ಲೀಡರ್ ಬರುತ್ತಾರೆ. ಅವರು 7-8 ಬಾರಿ ಸಂಸದರಾಗಿದ್ದರು. ಆದರೆ ನಮ್ಮವರೆ ಇನ್ನು ಒಪ್ಪುತ್ತಿಲ್ಲ.

25 ಜನರನ್ನು ಬಿಜೆಪಿಗೆ ತರುವ ಯೋಚನೆಯಲ್ಲಿದ್ದೇವೆ. ಚುನಾವಣೆ ಗೆದ್ದಮೇಲೆ ಆಪರೇಷನ್ ಕಮಲ ಮಾಡುವುದಿಲ್ಲ ನಾವು. ಮೊದಲೆ ಮಾಡಿಬಿಡುತ್ತೇವೆ. ಸುಮ್ಮನೆ ಯಾಕೆ ಆಪರೇಷನ್ ಕಮಲದ ಕೆಟ್ಟ ಹೆಸರು ಎಂದರು.

ಸಿದ್ದರಾಮಯ್ಯ ಅವರು ಜನಪ್ರಿಯ ನಾಯಕರು. ಅದರಲ್ಲಿ ಡೌಟ್ ಇಲ್ಲ. ಅವರು ಕೋಲಾರದಲ್ಲಿ ಗೆಲ್ಲುತ್ತಾರೆ. ಅವರಂತಹ ರಾಜಕಾರಣಿಗಳು ಇರಬೇಕು. ಆದರೆ ಅವರು ಎಷ್ಟು ಜನಪ್ರಿಯರು, 120 ಗೆಲ್ಲಿಸಿ, ಪಕ್ಷ ಬಹುಮತ ಪಡೆದು ಸರ್ಕಾರ ರಚಿಸುವಷ್ಟು ಜನಪ್ರಿಯರೆ ಎನ್ನುವುದು ಗೊತ್ತಿಲ್ಲ. ಅವರು ಕೋಲಾರದಲ್ಲಿ ಗೆಲ್ಲುತ್ತಾರೆ, ಅವರು ಗೆದ್ದ ಬಳಿಕವೇ ನಿಜವಾದ ರಾಜಕೀಯ ಶುರುವಾಗುತ್ತೆ. ಗೆದ್ದ ಮೇಲೆ ಅವರು ಮುಖ್ಯಮಂತ್ರಿ ಆಗದೇ ಬಿಡ್ತಾರಾ? ಇದು ಅವರ ಕೊನೆಯ ಪ್ರಯತ್ನ. ಆಗಲೇ ರಾಜಕೀಯ ಶುರುವಾಗುವುದು ಎಂದಿದ್ದಾರೆ.

ನಾನು ಕುಮಾರಸ್ವಾಮಿ ಅವರ ವಿರುದ್ಧ ಚನ್ನಪಟ್ಟದಲ್ಲಿ ಸ್ಪರ್ಧಿಸಲು ಒಪ್ಪಿಕೊಂಡಿದ್ದೇನೆ. ಅದೇ ರೀತಿ ಸಚಿವ ಅಶೋಕ್‌ ಅವರು ಕನಕಪುರದಲ್ಲಿ ಡಿ.ಕೆ.ಶಿವಕುಮಾರ್ ಅವರ ಎದುರು, ಸಚಿವ ಅಶ್ವತ್ಥನಾರಾಯಣ ಅವರು ರಾಮನಗರದಲ್ಲಿ  ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್‌ ಕುಮಾರ ಸ್ವಾಮಿ ಅವರ ಎದುರು ಸ್ಪರ್ಧಿಸಬೇಕು. ಹಾಗೆ ಕಟ್ಟಿ ಹಾಕಬೇಕು. ಹೇಗಿದ್ದರೂ ಪಕ್ಷವು ನಮ್ಮ ಬೆಂಬಲಕ್ಕೆ ಬರಲಿದೆ. ಸೋತರೆ ಎಂಎಲ್‌ಸಿ ಮಾಡಿ ಮಂತ್ರಿ ಮಾಡುತ್ತಾರೆ ಎಂದು ಹೇಳಲಾಗಿದೆ.

ಅಮಿತ್‌ ಶಾ ಹೇಳಿದ್ದಾರೆ ಹೊಂದಾಣಿಕೆ ಮಾಡಿಕೊಳ್ಳಬೇಡಿ ಅಂತ. ಬಹಳ ಕೆಟ್ಟದಾಗಿ ಹೇಳಿದರು. ಹೊಂದಾಣಿಕೆ ತಾಯಿಗೆ ದ್ರೋಹ ಬಗೆದ ಹಾಗೆ ಅಂತ. ಅಮಿತ್ ಶಾ ಅವರದು ಒಂಥರಾ ರೌಡಿಸಂ, ಯಾರನ್ನೂ ಬಿಡೋಲ್ಲ. ಅಂದ್ರೆ ಯಾರಾದ್ರೂ ಇತರ ಪಕ್ಷಗಳೊಂದಿಗೆ ಒಪ್ಪಂದ ಮಾಡಿಕೊಂಡಿದ್ದರೆ ಅದನ್ನು ಸಹಿಸೋಲ್ಲ. ಅವರ ಬುಡ ಬಿಡೋಲ್ಲ ಎಂದರು.

ʼಮೂವತ್ತು ಜನರನ್ನೂ ಅಮಿತ್‌ ಶಾ ಕರೆದಿದ್ದರು. ನನಗೆ ಗೊತ್ತು ಯಾರು ಪಕ್ಷಕ್ಕೆ ದ್ರೋಹ ಮಾಡ್ತಿದ್ದೀರಾ, ಇತರ ಪಕ್ಷಗಳ ಜೊತೆ ಅಂಡರ್ ಸ್ಟಾಂಡಿಂಗ್‌ ಮಾಡಿಕೊಂಡಿದ್ದೀರಾ ಎನ್ನುವುದು ಗೊತ್ತು ಎಂದು ಭಾರಿ ಕೆಟ್ಟದಾಗ್‌ ಮಾತನಾಡಿದ್ರು, ನೀಟಾಗಿ ಹೇಳಿದ್ರು, ಮೂರು ಗಂಟೆ ತಗೊಂಡ್ರು. ಪುನಃ ಕ್ಲಾಸ್ ತಗೋತ್ತಾರೆ ಅಂತೆ. ಆಗ ನಾನು ನೇರವಾಗಿ ಹೇಳಿಬಿಡ್ತೀನಿ. ನಾನು ಕುಮಾರಸ್ವಾಮಿ ಅವರ ವಿರುದ್ಧ ಚನ್ನಪಟ್ಟದಲ್ಲಿ ಸ್ಪರ್ಧಿಸಲು ಒಪ್ಪಿಕೊಂಡಿದ್ದೇನೆ. ಅದೇ ರೀತಿ ಸಚಿವ ಅಶೋಕ್‌ ಅವರು ಕನಕಪುರದಲ್ಲಿ ಡಿ.ಕೆ.ಶಿವಕುಮಾರ್ ಅವರ ಎದುರು, ಸಚಿವ ಅಶ್ವತ್ಥನಾರಾಯಣ ಅವರು ರಾಮನಗರದಲ್ಲಿ  ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್‌ ಕುಮಾರ ಸ್ವಾಮಿ ವಿರುದ್ಧ ಸ್ಪರ್ಧಿಸುತ್ತಾರೆ ಅಂತ 8-10 ಪಟ್ಟಿ ಮಾಡಿ ಹೇಳಿಬಿಡ್ತೀನಿ. ಆಗ ಚರ್ಚೆಯಾಗಲಿ. ಫೆಬ್ರವರಿ ಮಾರ್ಚ್‌ ನಲ್ಲಿ ಗೊತ್ತಾಗುತ್ತದೆ ಎಂದಿದ್ದಾರೆ. ಕೊನೆಯಲ್ಲಿ ಸಂಕ್ರಾಂತಿಯ ಶುಭಾಷಯಗಳನ್ನು ತಿಳಿಸಿರುವುದು ನೋಡಿದರೆ ಅದು ಇತ್ತೀಚಿನ ಆಡಿಯೋ ಎಂದು ದೃಢವಾಗುತ್ತದೆ.

ಇದನ್ನೂ ಓದಿ: ಪಂಚಮಸಾಲಿಯೊಳಗೆ ಯತ್ನಾಳ್- ನಿರಾಣಿ ಕುಸ್ತಿ: ಸಭ್ಯತೆ ಮೀರಿದ ಟೀಕಾಪ್ರಹಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...