Homeಮುಖಪುಟಶತಮಾನಕ್ಕೊಮ್ಮೆ ಬರುವ ಸಾಂಕ್ರಾಮಿಕದ ಅಡ್ಡ ಪರಿಣಾಮ 100 ದಿನಗಳಲ್ಲಿ ಮಾಯವಾಗುವುದಿಲ್ಲ: ಉದ್ಯೋಗ ಮೇಳದಲ್ಲಿ ಪ್ರಧಾನಿ ಮೋದಿ

ಶತಮಾನಕ್ಕೊಮ್ಮೆ ಬರುವ ಸಾಂಕ್ರಾಮಿಕದ ಅಡ್ಡ ಪರಿಣಾಮ 100 ದಿನಗಳಲ್ಲಿ ಮಾಯವಾಗುವುದಿಲ್ಲ: ಉದ್ಯೋಗ ಮೇಳದಲ್ಲಿ ಪ್ರಧಾನಿ ಮೋದಿ

- Advertisement -
- Advertisement -

ಕೊರೊನಾ ಸಾಂಕ್ರಾಮಿಕದ ನಂತರ ವಿಶ್ವದಾದ್ಯಂತ ಹಲವಾರು ದೇಶಗಳು ಎದುರಿಸುತ್ತಿರುವ ಆರ್ಥಿಕ ಸಮಸ್ಯೆಗಳ ಹೊಡೆತವನ್ನು ಎದುರಿಸುವ ನಿಟ್ಟಿನಲ್ಲಿ ಸರ್ಕಾರ ಕೆಲಸ ಮಾಡುತ್ತಿದೆ ಎಂದು ಶನಿವಾರ ಪ್ರತಿಪಾದಿಸಿರುವ ಪ್ರಧಾನಿ ನರೇಂದ್ರ ಮೋದಿ, “ಶತಮಾನಕ್ಕೊಮ್ಮೆ ಬರುವ ಸಾಂಕ್ರಾಮಿಕ ರೋಗದ ಅಡ್ಡ ಪರಿಣಾಮಗಳು 100 ದಿನಗಳಲ್ಲಿ ಮಾಯವಾಗುವುದಿಲ್ಲ” ಎಂದು ತಿಳಿಸಿದ್ದಾರೆ.

ಸರ್ಕಾರಿ ಉದ್ಯೋಗ ಆಕಾಂಕ್ಷಿಗಳಿಗೆ 75,000 ನೇಮಕಾತಿ ಪತ್ರಗಳನ್ನು ವಿತರಿಸಿದ ನಂತರ “ರೋಜ್ಗಾರ್ ಮೇಳ”ವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಯುವಜನರಿಗೆ ಗರಿಷ್ಠ ಉದ್ಯೋಗಾವಕಾಶಗಳನ್ನು ಸೃಷ್ಟಿಸಲು ಒಕ್ಕೂಟ ಸರ್ಕಾರವು ಅನೇಕ ರಂಗಗಳಲ್ಲಿ ಕೆಲಸ ಮಾಡುತ್ತಿದೆ ಎಂದು ಪ್ರತಿಪಾದಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಜಾಗತಿಕ ಪರಿಸ್ಥಿತಿ ಉತ್ತಮವಾಗಿಲ್ಲ ಎಂಬುದು ಸತ್ಯ. ಹಲವಾರು ದೊಡ್ಡ ಆರ್ಥಿಕತೆಗಳು ಹೆಣಗಾಡುತ್ತಿವೆ. ಹಲವಾರು ದೇಶಗಳಲ್ಲಿ, ಹೆಚ್ಚಿನ ಹಣದುಬ್ಬರ ಮತ್ತು ನಿರುದ್ಯೋಗದಂತಹ ಸಮಸ್ಯೆಗಳು ಉತ್ತುಂಗದಲ್ಲಿದೆ” ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಇದನ್ನೂ ಓದಿ: ಬಿಲ್ಕಿಸ್‌ ಬಾನೋ ಅತ್ಯಾಚಾರಿಗಳ ಬಿಡುಗಡೆಗೆ ಒಪ್ಪಿದ ಮೋದಿ ಸರ್ಕಾರ; ಏನೇನಾಯ್ತು ಈ ವರೆಗೆ? | ಸಂಕ್ಷಿಪ್ತ ವರದಿ

ಶತಮಾನಕ್ಕೊಮ್ಮೆ ಬರುವ ಸಾಂಕ್ರಾಮಿಕ ರೋಗದ ಅಡ್ಡ ಪರಿಣಾಮಗಳು 100 ದಿನಗಳಲ್ಲಿ ಮಾಯವಾಗುವುದಿಲ್ಲ ಎಂದು ಅವರು ತಿಳಿಸಿದ್ದಾರೆ.

“ಈ ಬಿಕ್ಕಟ್ಟು ಪ್ರಪಂಚದಾದ್ಯಂತ ಎದುರಿಸಲಾಗುತ್ತಿದೆ. ಇದರ ಪರಿಣಾಮವು ಎಲ್ಲಾ ಕಡೆ ಅನುಭವಕ್ಕೆ ಬರುತ್ತಿದೆ. ಭಾರತವು ಈ ಸಮಸ್ಯೆಗಳಿಂದ ನಮ್ಮ ದೇಶವನ್ನು ರಕ್ಷಿಸಲು ಹೊಸ ಉಪಕ್ರಮಗಳು ಮತ್ತು ಕೆಲವು ಅಪಾಯಗಳಿಗೆ ಒಡ್ಡಿಕೊಳ್ಳುತ್ತಿದೆ” ಎಂದು ಅವರು ಹೇಳಿದ್ದಾರೆ.

“ನಮ್ಮ ದೇಶದ ಮೇಲೆ ಬೀಡುವ ಈ ಪರಿಣಾಮವನ್ನು ಮೃದುಗೊಳಿಸಲು ನಾವು ಕೆಲಸ ಮಾಡುತ್ತಿದ್ದೇವೆ. ಇದು ಸವಾಲಿನ ಕೆಲಸ, ಆದರೆ ನಿಮ್ಮ ಆಶೀರ್ವಾದದಿಂದ ನಾವು ಇಲ್ಲಿಯವರೆಗೆ ರಕ್ಷಿಸಲ್ಪಟ್ಟಿದ್ದೇವೆ” ಎಂದು ಪ್ರಧಾನಿ ಮೋದಿ ಹೇಳಿದ್ದಾರೆ

ಇದಕ್ಕೂ ಮುನ್ನ ಪ್ರಧಾನಿಯವರು 75,000 ಉದ್ಯೋಗಾಕಾಂಕ್ಷಿಗಳಿಗೆ ವಿದ್ಯುನ್ಮಾನವಾಗಿ ನೇಮಕಾತಿ ಪತ್ರಗಳನ್ನು ಕಳುಹಿಸಿದ್ದರು.

ಇದನ್ನೂ ಓದಿ: ಗುಜರಾತ್ ಬಿಜೆಪಿಗೆ ಮೋದಿ ಬಿಟ್ಟರೆ ಗತಿಯಿಲ್ಲ!

ದೇಶದಾದ್ಯಂತ ಆಯ್ಕೆಯಾದ ಹೊಸ ಉದ್ಯೋಗಾಕಾಂಕ್ಷಿಗಳು ಭಾರತ ಸರ್ಕಾರದ 38 ಸಚಿವಾಲಯಗಳು ಅಥವಾ ಇಲಾಖೆಗಳಿಗೆ ಸೇರಿಕೊಳ್ಳುತ್ತಾರೆ. ಅವರು ಗ್ರೂಪ್ ಎ ಮತ್ತು ಬಿ (ಗೆಜೆಟೆಡ್), ಗ್ರೂಪ್ ಬಿ (ನಾನ್ ಗೆಜೆಟೆಡ್) ಮತ್ತು ಸಿ ಗುಂಪಿನಲ್ಲಿ ವಿವಿಧ ಹಂತಗಳಲ್ಲಿ ಸರ್ಕಾರದ ಕೆಲಸಕ್ಕೆ ಸೇರಲಿದ್ದಾರೆ.

ಕೇಂದ್ರ ಸಶಸ್ತ್ರ ಪಡೆಗಳ ಸಿಬ್ಬಂದಿ, ಸಬ್ ಇನ್‌ಸ್ಪೆಕ್ಟರ್‌ಗಳು, ಕಾನ್‌ಸ್ಟೆಬಲ್‌ಗಳು, ಎಲ್‌ಡಿಸಿಗಳು, ಸ್ಟೆನೋಗ್ರಾಫರ್‌ಗಳು, ಪಿಎಗಳು, ಆದಾಯ ತೆರಿಗೆ ಇನ್ಸ್‌ಪೆಕ್ಟರ್‌ಗಳು ಮತ್ತು ಎಂಟಿಎಸ್ ಹುದ್ದೆಗಳನ್ನು ನೇಮಕ ಮಾಡಲಾಗುತ್ತಿದೆ ಎಂದು ಸರ್ಕಾರ ಹೊರಡಿಸಿದ ಹೇಳಿಕೆಯಲ್ಲಿ ತಿಳಿಸಿದೆ.

ಈ ನೇಮಕಾತಿಗಳನ್ನು ಸಚಿವಾಲಯಗಳು ಮತ್ತು ಇಲಾಖೆಗಳು ಸ್ವತಃ ಅಥವಾ UPSC, SSC ಮತ್ತು ರೈಲ್ವೇ ನೇಮಕಾತಿ ಮಂಡಳಿಯಂತಹ ನೇಮಕಾತಿ ಏಜೆನ್ಸಿಗಳ ಮೂಲಕ ಮಾಡುತ್ತಿವೆ. ತ್ವರಿತ ನೇಮಕಾತಿಗಾಗಿ, ಆಯ್ಕೆ ಪ್ರಕ್ರಿಯೆಗಳನ್ನು ಸರಳೀಕರಿಸಲಾಗಿದೆ ಮತ್ತು ತಂತ್ರಜ್ಞಾನವನ್ನು ಸಕ್ರಿಯಗೊಳಿಸಲಾಗಿದೆ ಎಂದು ಒಕ್ಕೂಟ ಸರ್ಕಾರ ಹೇಳಿದೆ.

ಇದನ್ನೂ ಓದಿ: ಪ್ರಧಾನಿ ಮೋದಿ ಕಾರ್ಯಕ್ರಮದ ವರದಿಗೆ ಬರುವ ಪತ್ರಕರ್ತರಿಗೆ ‘ನಡತೆ ಪ್ರಮಾಣಪತ್ರ’ ಕೇಳಿದ ಸರ್ಕಾರ

ಮುಂದಿನ ಒಂದೂವರೆ ವರ್ಷದಲ್ಲಿ 10 ಲಕ್ಷ ಜನರನ್ನು “ಮಿಷನ್ ಮೋಡ್” ನಲ್ಲಿ ನೇಮಿಸಿಕೊಳ್ಳುವಂತೆ ಪ್ರಧಾನಿ ಜೂನ್‌ನಲ್ಲಿ ವಿವಿಧ ಸರ್ಕಾರಿ ಇಲಾಖೆಗಳು ಮತ್ತು ಸಚಿವಾಲಯಗಳಿಗೆ ಕೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...