Homeಮುಖಪುಟಶತಮಾನಕ್ಕೊಮ್ಮೆ ಬರುವ ಸಾಂಕ್ರಾಮಿಕದ ಅಡ್ಡ ಪರಿಣಾಮ 100 ದಿನಗಳಲ್ಲಿ ಮಾಯವಾಗುವುದಿಲ್ಲ: ಉದ್ಯೋಗ ಮೇಳದಲ್ಲಿ ಪ್ರಧಾನಿ ಮೋದಿ

ಶತಮಾನಕ್ಕೊಮ್ಮೆ ಬರುವ ಸಾಂಕ್ರಾಮಿಕದ ಅಡ್ಡ ಪರಿಣಾಮ 100 ದಿನಗಳಲ್ಲಿ ಮಾಯವಾಗುವುದಿಲ್ಲ: ಉದ್ಯೋಗ ಮೇಳದಲ್ಲಿ ಪ್ರಧಾನಿ ಮೋದಿ

- Advertisement -
- Advertisement -

ಕೊರೊನಾ ಸಾಂಕ್ರಾಮಿಕದ ನಂತರ ವಿಶ್ವದಾದ್ಯಂತ ಹಲವಾರು ದೇಶಗಳು ಎದುರಿಸುತ್ತಿರುವ ಆರ್ಥಿಕ ಸಮಸ್ಯೆಗಳ ಹೊಡೆತವನ್ನು ಎದುರಿಸುವ ನಿಟ್ಟಿನಲ್ಲಿ ಸರ್ಕಾರ ಕೆಲಸ ಮಾಡುತ್ತಿದೆ ಎಂದು ಶನಿವಾರ ಪ್ರತಿಪಾದಿಸಿರುವ ಪ್ರಧಾನಿ ನರೇಂದ್ರ ಮೋದಿ, “ಶತಮಾನಕ್ಕೊಮ್ಮೆ ಬರುವ ಸಾಂಕ್ರಾಮಿಕ ರೋಗದ ಅಡ್ಡ ಪರಿಣಾಮಗಳು 100 ದಿನಗಳಲ್ಲಿ ಮಾಯವಾಗುವುದಿಲ್ಲ” ಎಂದು ತಿಳಿಸಿದ್ದಾರೆ.

ಸರ್ಕಾರಿ ಉದ್ಯೋಗ ಆಕಾಂಕ್ಷಿಗಳಿಗೆ 75,000 ನೇಮಕಾತಿ ಪತ್ರಗಳನ್ನು ವಿತರಿಸಿದ ನಂತರ “ರೋಜ್ಗಾರ್ ಮೇಳ”ವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಯುವಜನರಿಗೆ ಗರಿಷ್ಠ ಉದ್ಯೋಗಾವಕಾಶಗಳನ್ನು ಸೃಷ್ಟಿಸಲು ಒಕ್ಕೂಟ ಸರ್ಕಾರವು ಅನೇಕ ರಂಗಗಳಲ್ಲಿ ಕೆಲಸ ಮಾಡುತ್ತಿದೆ ಎಂದು ಪ್ರತಿಪಾದಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಜಾಗತಿಕ ಪರಿಸ್ಥಿತಿ ಉತ್ತಮವಾಗಿಲ್ಲ ಎಂಬುದು ಸತ್ಯ. ಹಲವಾರು ದೊಡ್ಡ ಆರ್ಥಿಕತೆಗಳು ಹೆಣಗಾಡುತ್ತಿವೆ. ಹಲವಾರು ದೇಶಗಳಲ್ಲಿ, ಹೆಚ್ಚಿನ ಹಣದುಬ್ಬರ ಮತ್ತು ನಿರುದ್ಯೋಗದಂತಹ ಸಮಸ್ಯೆಗಳು ಉತ್ತುಂಗದಲ್ಲಿದೆ” ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಇದನ್ನೂ ಓದಿ: ಬಿಲ್ಕಿಸ್‌ ಬಾನೋ ಅತ್ಯಾಚಾರಿಗಳ ಬಿಡುಗಡೆಗೆ ಒಪ್ಪಿದ ಮೋದಿ ಸರ್ಕಾರ; ಏನೇನಾಯ್ತು ಈ ವರೆಗೆ? | ಸಂಕ್ಷಿಪ್ತ ವರದಿ

ಶತಮಾನಕ್ಕೊಮ್ಮೆ ಬರುವ ಸಾಂಕ್ರಾಮಿಕ ರೋಗದ ಅಡ್ಡ ಪರಿಣಾಮಗಳು 100 ದಿನಗಳಲ್ಲಿ ಮಾಯವಾಗುವುದಿಲ್ಲ ಎಂದು ಅವರು ತಿಳಿಸಿದ್ದಾರೆ.

“ಈ ಬಿಕ್ಕಟ್ಟು ಪ್ರಪಂಚದಾದ್ಯಂತ ಎದುರಿಸಲಾಗುತ್ತಿದೆ. ಇದರ ಪರಿಣಾಮವು ಎಲ್ಲಾ ಕಡೆ ಅನುಭವಕ್ಕೆ ಬರುತ್ತಿದೆ. ಭಾರತವು ಈ ಸಮಸ್ಯೆಗಳಿಂದ ನಮ್ಮ ದೇಶವನ್ನು ರಕ್ಷಿಸಲು ಹೊಸ ಉಪಕ್ರಮಗಳು ಮತ್ತು ಕೆಲವು ಅಪಾಯಗಳಿಗೆ ಒಡ್ಡಿಕೊಳ್ಳುತ್ತಿದೆ” ಎಂದು ಅವರು ಹೇಳಿದ್ದಾರೆ.

“ನಮ್ಮ ದೇಶದ ಮೇಲೆ ಬೀಡುವ ಈ ಪರಿಣಾಮವನ್ನು ಮೃದುಗೊಳಿಸಲು ನಾವು ಕೆಲಸ ಮಾಡುತ್ತಿದ್ದೇವೆ. ಇದು ಸವಾಲಿನ ಕೆಲಸ, ಆದರೆ ನಿಮ್ಮ ಆಶೀರ್ವಾದದಿಂದ ನಾವು ಇಲ್ಲಿಯವರೆಗೆ ರಕ್ಷಿಸಲ್ಪಟ್ಟಿದ್ದೇವೆ” ಎಂದು ಪ್ರಧಾನಿ ಮೋದಿ ಹೇಳಿದ್ದಾರೆ

ಇದಕ್ಕೂ ಮುನ್ನ ಪ್ರಧಾನಿಯವರು 75,000 ಉದ್ಯೋಗಾಕಾಂಕ್ಷಿಗಳಿಗೆ ವಿದ್ಯುನ್ಮಾನವಾಗಿ ನೇಮಕಾತಿ ಪತ್ರಗಳನ್ನು ಕಳುಹಿಸಿದ್ದರು.

ಇದನ್ನೂ ಓದಿ: ಗುಜರಾತ್ ಬಿಜೆಪಿಗೆ ಮೋದಿ ಬಿಟ್ಟರೆ ಗತಿಯಿಲ್ಲ!

ದೇಶದಾದ್ಯಂತ ಆಯ್ಕೆಯಾದ ಹೊಸ ಉದ್ಯೋಗಾಕಾಂಕ್ಷಿಗಳು ಭಾರತ ಸರ್ಕಾರದ 38 ಸಚಿವಾಲಯಗಳು ಅಥವಾ ಇಲಾಖೆಗಳಿಗೆ ಸೇರಿಕೊಳ್ಳುತ್ತಾರೆ. ಅವರು ಗ್ರೂಪ್ ಎ ಮತ್ತು ಬಿ (ಗೆಜೆಟೆಡ್), ಗ್ರೂಪ್ ಬಿ (ನಾನ್ ಗೆಜೆಟೆಡ್) ಮತ್ತು ಸಿ ಗುಂಪಿನಲ್ಲಿ ವಿವಿಧ ಹಂತಗಳಲ್ಲಿ ಸರ್ಕಾರದ ಕೆಲಸಕ್ಕೆ ಸೇರಲಿದ್ದಾರೆ.

ಕೇಂದ್ರ ಸಶಸ್ತ್ರ ಪಡೆಗಳ ಸಿಬ್ಬಂದಿ, ಸಬ್ ಇನ್‌ಸ್ಪೆಕ್ಟರ್‌ಗಳು, ಕಾನ್‌ಸ್ಟೆಬಲ್‌ಗಳು, ಎಲ್‌ಡಿಸಿಗಳು, ಸ್ಟೆನೋಗ್ರಾಫರ್‌ಗಳು, ಪಿಎಗಳು, ಆದಾಯ ತೆರಿಗೆ ಇನ್ಸ್‌ಪೆಕ್ಟರ್‌ಗಳು ಮತ್ತು ಎಂಟಿಎಸ್ ಹುದ್ದೆಗಳನ್ನು ನೇಮಕ ಮಾಡಲಾಗುತ್ತಿದೆ ಎಂದು ಸರ್ಕಾರ ಹೊರಡಿಸಿದ ಹೇಳಿಕೆಯಲ್ಲಿ ತಿಳಿಸಿದೆ.

ಈ ನೇಮಕಾತಿಗಳನ್ನು ಸಚಿವಾಲಯಗಳು ಮತ್ತು ಇಲಾಖೆಗಳು ಸ್ವತಃ ಅಥವಾ UPSC, SSC ಮತ್ತು ರೈಲ್ವೇ ನೇಮಕಾತಿ ಮಂಡಳಿಯಂತಹ ನೇಮಕಾತಿ ಏಜೆನ್ಸಿಗಳ ಮೂಲಕ ಮಾಡುತ್ತಿವೆ. ತ್ವರಿತ ನೇಮಕಾತಿಗಾಗಿ, ಆಯ್ಕೆ ಪ್ರಕ್ರಿಯೆಗಳನ್ನು ಸರಳೀಕರಿಸಲಾಗಿದೆ ಮತ್ತು ತಂತ್ರಜ್ಞಾನವನ್ನು ಸಕ್ರಿಯಗೊಳಿಸಲಾಗಿದೆ ಎಂದು ಒಕ್ಕೂಟ ಸರ್ಕಾರ ಹೇಳಿದೆ.

ಇದನ್ನೂ ಓದಿ: ಪ್ರಧಾನಿ ಮೋದಿ ಕಾರ್ಯಕ್ರಮದ ವರದಿಗೆ ಬರುವ ಪತ್ರಕರ್ತರಿಗೆ ‘ನಡತೆ ಪ್ರಮಾಣಪತ್ರ’ ಕೇಳಿದ ಸರ್ಕಾರ

ಮುಂದಿನ ಒಂದೂವರೆ ವರ್ಷದಲ್ಲಿ 10 ಲಕ್ಷ ಜನರನ್ನು “ಮಿಷನ್ ಮೋಡ್” ನಲ್ಲಿ ನೇಮಿಸಿಕೊಳ್ಳುವಂತೆ ಪ್ರಧಾನಿ ಜೂನ್‌ನಲ್ಲಿ ವಿವಿಧ ಸರ್ಕಾರಿ ಇಲಾಖೆಗಳು ಮತ್ತು ಸಚಿವಾಲಯಗಳಿಗೆ ಕೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....