Homeಮುಖಪುಟದಲಿತನೆಂಬ ಕಾರಣಕ್ಕೆ ಮೂಲೆಗೆ ತಳ್ಳಲಾಗಿದೆ: ಯೋಗಿ ಸರ್ಕಾರದ ಮೊದಲ ವಿಕೆಟ್ ಪತನ

ದಲಿತನೆಂಬ ಕಾರಣಕ್ಕೆ ಮೂಲೆಗೆ ತಳ್ಳಲಾಗಿದೆ: ಯೋಗಿ ಸರ್ಕಾರದ ಮೊದಲ ವಿಕೆಟ್ ಪತನ

ಮತ್ತೊಬ್ಬ ಸಚಿವ ಜಿತಿನ್ ಪ್ರಸಾದ ಅವರು ಮುಖ್ಯಮಂತ್ರಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ ದೆಹಲಿ ನಾಯಕರನ್ನು ಭೇಟಿಯಾಗಿದ್ದಾರೆ.

- Advertisement -
- Advertisement -

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಪ್ರಚಂಡ ಬಹುಮತದಿಂದ ಪುನರಾಯ್ಕೆಯಾದ ಕೆಲವೇ ತಿಂಗಳುಗಳಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಭಾರಿ ಹಿನ್ನಡೆಯಾಗಿದೆ.

“ನಾನು ದಲಿತ ಎಂಬ ಕಾರಣದಿಂದ ಸೈಡ್‌ಲೈನ್ ಮಾಡಲಾಗಿದೆ” ಎಂದು ದೂರಿ ಉತ್ತರ ಪ್ರದೇಶದ ಸಚಿವರೊಬ್ಬರು ರಾಜೀನಾಮೆ ನೀಡಿದ್ದಾರೆ. ಸಚಿವ ದಿನೇಶ್ ಖಟಿಕ್ ಅವರು ತಮ್ಮ ರಾಜೀನಾಮೆ ಪತ್ರವನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಕಳುಹಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮತ್ತೊಬ್ಬ ಸಚಿವ ಜಿತಿನ್ ಪ್ರಸಾದ ಅವರು ಮುಖ್ಯಮಂತ್ರಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಬಹಿರಂಗವಾಗಿ ಅಸಮಾಧಾನ ಹೊರಹಾಕಿ ದೆಹಲಿ ನಾಯಕರನ್ನು ಭೇಟಿಯಾಗಿರುವುದು ಚರ್ಚೆಗೆ ಗ್ರಾಸವಾಗಿದೆ.

ಉತ್ತರ ಪ್ರದೇಶದ ಜಲಸಂಪನ್ಮೂಲ ಸಚಿವ ಖಟಿಕ್ ಅವರು ತಮ್ಮ ಪತ್ರದಲ್ಲಿ, “100 ದಿನಗಳ ಕಾಲ ಯಾವುದೇ ಕೆಲಸವನ್ನು ನಿಯೋಜಿಸಿಲ್ಲ” ಎಂದು ಹೇಳಿದ್ದಾರೆ. “ಇಲಾಖಾ ವರ್ಗಾವಣೆಯಲ್ಲಿ ಅವ್ಯವಹಾರ ನಡೆದಿದೆ. ನನಗೆ ನೋವಾಗಿದೆ” ಎಂದು ಕಾರಣ ರಾಜೀನಾಮೆಗೆ ಕಾರಣ ನೀಡಿದ್ದಾರೆ.

“ನಾನು ದಲಿತ ಎಂಬ ಕಾರಣಕ್ಕೆ ನನಗೆ ಯಾವುದೇ ಪ್ರಾಮುಖ್ಯತೆ ನೀಡಿಲ್ಲ, ನನಗೆ ಸಚಿವನಾಗಿ ಅಧಿಕಾರವಿಲ್ಲ, ನಾನು ರಾಜ್ಯ ಸಚಿವನಾಗಿ ಕೆಲಸ ಮಾಡುತ್ತಿದ್ದು, ದಲಿತ ಸಮುದಾಯಕ್ಕೆ ಯಾವುದೇ ಪ್ರಯೋಜನವಾಗಿಲ್ಲ. ನನ್ನನ್ನು ಯಾವುದೇ ಸಭೆಗೆ ಕರೆಯುತ್ತಿಲ್ಲ. ನನ್ನ ಸಚಿವಾಲಯದ ಬಗ್ಗೆ ಏನನ್ನೂ ಹೇಳುತ್ತಿಲ್ಲ. ಇದು ದಲಿತ ಸಮುದಾಯಕ್ಕೆ ಮಾಡಿದ ಅವಮಾನ” ಎಂದು ಖಟಿಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜೀನಾಮೆಯನ್ನು ಹಿಂಪಡೆಯುವಂತೆ  ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಮೂಲಗಳು ತಿಳಿಸಿರುವಾಗಿ ಎನ್‌ಡಿಟಿವಿ ವರದಿ ಮಾಡಿದೆ.

ತಮ್ಮ ತಂಡದ ಅಧಿಕಾರಿಯೊಬ್ಬರನ್ನು ಮುಖ್ಯಮಂತ್ರಿ ಅಮಾನತು ಮಾಡಿರುವ ಬಗ್ಗೆ ಜಿತಿನ್ ಪ್ರಸಾದ ಕೋಪಗೊಂಡಿದ್ದಾರೆ. ಪ್ರಸಾದ ಅವರು ಕಳೆದ ವರ್ಷ ಯುಪಿ ಚುನಾವಣೆಯ ಮೊದಲು ಕಾಂಗ್ರೆಸ್‌ನಿಂದ ಬಿಜೆಪಿಗೆ ಬಂದಿದ್ದರು.

ಪ್ರಸಾದ ಅವರಿಗೆ ಲೋಕೋಪಯೋಗಿ ಇಲಾಖೆ (PWD) ನೀಡಲಾಯಿತು. ಆದರೆ ಇಲಾಖೆಯು ಭ್ರಷ್ಟಾಚಾರದ ಆರೋಪಗಳನ್ನು ಎದುರಿಸುತ್ತಿದೆ. ಮುಖ್ಯಮಂತ್ರಿ ಕಚೇರಿಯು ತನಿಖೆಗೆ ಆದೇಶಿಸಿದೆ ಎಂದು ವರದಿಯಾಗಿದೆ. ಹಲವಾರು ಅಧಿಕಾರಿಗಳು ಲಂಚದಲ್ಲಿ ಭಾಗಿಯಾಗಿದ್ದಾರೆ ಎನ್ನಲಾಗುತ್ತಿದೆ.

ಯುಪಿ ಸರ್ಕಾರವು ಇಲಾಖಾ ವರ್ಗಾವಣೆಯಲ್ಲಿ ಗಂಭೀರ ಅಕ್ರಮಗಳ ಮೇಲೆ ಐವರು ಹಿರಿಯ ಪಿಡಬ್ಲ್ಯೂಡಿ ಅಧಿಕಾರಿಗಳನ್ನು ಅಮಾನತುಗೊಳಿಸಿದೆ.

ಇದನ್ನೂ ಓದಿರಿ: ಕರಾವಳಿ ಕರ್ನಾಟಕದ ರಕ್ತಸಿಕ್ತ ಚರಿತ್ರೆಯ ನಿಜ ಕಥನ ‘ನೇತ್ರಾವತಿಯಲ್ಲಿ ನೆತ್ತರು’

ವಿಶೇಷ ಕರ್ತವ್ಯದಲ್ಲಿರುವ ಐಎಎಸ್ ಅಧಿಕಾರಿ ಅನಿಲ್ ಕುಮಾರ್ ಪಾಂಡೆ ಅವರು ವರ್ಗಾವಣೆ ಮತ್ತು ಪೋಸ್ಟಿಂಗ್‌ಗಾಗಿ ಲಂಚ ಪಡೆದ ಆರೋಪ ಹೊತ್ತಿದ್ದಾರೆ. ಪಾಂಡೆ ಅವರನ್ನು ತೆರವುಗೊಳಿಸಿ, ಅವರ ವಿರುದ್ಧ ವಿಜಿಲೆನ್ಸ್ ವಿಚಾರಣೆಯನ್ನು ಪ್ರಾರಂಭಿಸಲಾಗಿದೆ.

ಪಾಂಡೆಯವರ ತೆರವಿನ ಬಳಿಕ ಸಚಿವ ಪ್ರಸಾದ ಅವರೂ ವಿಚಾರಣೆಯನ್ನು ಎದುರಿಸುವಂತಾಗಿದೆ. ಮೂಲಗಳ ಪ್ರಕಾರ ಯೋಗಿ ಆದಿತ್ಯನಾಥ್ ಸಚಿವರನ್ನು ಕರೆಸಿ, ಅನಿಲ್‌ ಪಾಂಡೆ ವಿರುದ್ಧದ ಆರೋಪಗಳಿಗೆ ಸಂಬಂಧಿಸಿದಂತೆ ಗರಂ ಆಗಿದ್ದಾರೆ ಎನ್ನಲಾಗುತ್ತಿದೆ.

ನಂತರ ಪ್ರಸಾದ ಅವರು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ದೂರು ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಈ ಸಚಿವ ಸರಿಯಾಗಿ ಜನ ಪರ ಕೆಲಸ ಮಾಡಿಲ್ಲ ಅಂತ ಸಂಪುಟದಿಂದ ತೆಗೆದಿದ್ದಾರೆ,ಆದರೆ ಈ ಸಚಿವ ದಲಿತ ಅನ್ನೋ ಟ್ರಂಪ್ ಕಾರ್ಡ್ ಬಳಸಿ ಬೇಳೆ ಬೇಯಿಸಿ ಕೊಳ್ಳೋ ಪ್ರಯತ್ನ ಮಾಡ್ತಿದ್ದಾನೇ ಈ ಅಸಮರ್ಥ ಸಚಿವ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...