Homeಮುಖಪುಟದಲಿತನೆಂಬ ಕಾರಣಕ್ಕೆ ಮೂಲೆಗೆ ತಳ್ಳಲಾಗಿದೆ: ಯೋಗಿ ಸರ್ಕಾರದ ಮೊದಲ ವಿಕೆಟ್ ಪತನ

ದಲಿತನೆಂಬ ಕಾರಣಕ್ಕೆ ಮೂಲೆಗೆ ತಳ್ಳಲಾಗಿದೆ: ಯೋಗಿ ಸರ್ಕಾರದ ಮೊದಲ ವಿಕೆಟ್ ಪತನ

ಮತ್ತೊಬ್ಬ ಸಚಿವ ಜಿತಿನ್ ಪ್ರಸಾದ ಅವರು ಮುಖ್ಯಮಂತ್ರಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ ದೆಹಲಿ ನಾಯಕರನ್ನು ಭೇಟಿಯಾಗಿದ್ದಾರೆ.

- Advertisement -
- Advertisement -

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಪ್ರಚಂಡ ಬಹುಮತದಿಂದ ಪುನರಾಯ್ಕೆಯಾದ ಕೆಲವೇ ತಿಂಗಳುಗಳಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಭಾರಿ ಹಿನ್ನಡೆಯಾಗಿದೆ.

“ನಾನು ದಲಿತ ಎಂಬ ಕಾರಣದಿಂದ ಸೈಡ್‌ಲೈನ್ ಮಾಡಲಾಗಿದೆ” ಎಂದು ದೂರಿ ಉತ್ತರ ಪ್ರದೇಶದ ಸಚಿವರೊಬ್ಬರು ರಾಜೀನಾಮೆ ನೀಡಿದ್ದಾರೆ. ಸಚಿವ ದಿನೇಶ್ ಖಟಿಕ್ ಅವರು ತಮ್ಮ ರಾಜೀನಾಮೆ ಪತ್ರವನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಕಳುಹಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮತ್ತೊಬ್ಬ ಸಚಿವ ಜಿತಿನ್ ಪ್ರಸಾದ ಅವರು ಮುಖ್ಯಮಂತ್ರಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಬಹಿರಂಗವಾಗಿ ಅಸಮಾಧಾನ ಹೊರಹಾಕಿ ದೆಹಲಿ ನಾಯಕರನ್ನು ಭೇಟಿಯಾಗಿರುವುದು ಚರ್ಚೆಗೆ ಗ್ರಾಸವಾಗಿದೆ.

ಉತ್ತರ ಪ್ರದೇಶದ ಜಲಸಂಪನ್ಮೂಲ ಸಚಿವ ಖಟಿಕ್ ಅವರು ತಮ್ಮ ಪತ್ರದಲ್ಲಿ, “100 ದಿನಗಳ ಕಾಲ ಯಾವುದೇ ಕೆಲಸವನ್ನು ನಿಯೋಜಿಸಿಲ್ಲ” ಎಂದು ಹೇಳಿದ್ದಾರೆ. “ಇಲಾಖಾ ವರ್ಗಾವಣೆಯಲ್ಲಿ ಅವ್ಯವಹಾರ ನಡೆದಿದೆ. ನನಗೆ ನೋವಾಗಿದೆ” ಎಂದು ಕಾರಣ ರಾಜೀನಾಮೆಗೆ ಕಾರಣ ನೀಡಿದ್ದಾರೆ.

“ನಾನು ದಲಿತ ಎಂಬ ಕಾರಣಕ್ಕೆ ನನಗೆ ಯಾವುದೇ ಪ್ರಾಮುಖ್ಯತೆ ನೀಡಿಲ್ಲ, ನನಗೆ ಸಚಿವನಾಗಿ ಅಧಿಕಾರವಿಲ್ಲ, ನಾನು ರಾಜ್ಯ ಸಚಿವನಾಗಿ ಕೆಲಸ ಮಾಡುತ್ತಿದ್ದು, ದಲಿತ ಸಮುದಾಯಕ್ಕೆ ಯಾವುದೇ ಪ್ರಯೋಜನವಾಗಿಲ್ಲ. ನನ್ನನ್ನು ಯಾವುದೇ ಸಭೆಗೆ ಕರೆಯುತ್ತಿಲ್ಲ. ನನ್ನ ಸಚಿವಾಲಯದ ಬಗ್ಗೆ ಏನನ್ನೂ ಹೇಳುತ್ತಿಲ್ಲ. ಇದು ದಲಿತ ಸಮುದಾಯಕ್ಕೆ ಮಾಡಿದ ಅವಮಾನ” ಎಂದು ಖಟಿಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜೀನಾಮೆಯನ್ನು ಹಿಂಪಡೆಯುವಂತೆ  ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಮೂಲಗಳು ತಿಳಿಸಿರುವಾಗಿ ಎನ್‌ಡಿಟಿವಿ ವರದಿ ಮಾಡಿದೆ.

ತಮ್ಮ ತಂಡದ ಅಧಿಕಾರಿಯೊಬ್ಬರನ್ನು ಮುಖ್ಯಮಂತ್ರಿ ಅಮಾನತು ಮಾಡಿರುವ ಬಗ್ಗೆ ಜಿತಿನ್ ಪ್ರಸಾದ ಕೋಪಗೊಂಡಿದ್ದಾರೆ. ಪ್ರಸಾದ ಅವರು ಕಳೆದ ವರ್ಷ ಯುಪಿ ಚುನಾವಣೆಯ ಮೊದಲು ಕಾಂಗ್ರೆಸ್‌ನಿಂದ ಬಿಜೆಪಿಗೆ ಬಂದಿದ್ದರು.

ಪ್ರಸಾದ ಅವರಿಗೆ ಲೋಕೋಪಯೋಗಿ ಇಲಾಖೆ (PWD) ನೀಡಲಾಯಿತು. ಆದರೆ ಇಲಾಖೆಯು ಭ್ರಷ್ಟಾಚಾರದ ಆರೋಪಗಳನ್ನು ಎದುರಿಸುತ್ತಿದೆ. ಮುಖ್ಯಮಂತ್ರಿ ಕಚೇರಿಯು ತನಿಖೆಗೆ ಆದೇಶಿಸಿದೆ ಎಂದು ವರದಿಯಾಗಿದೆ. ಹಲವಾರು ಅಧಿಕಾರಿಗಳು ಲಂಚದಲ್ಲಿ ಭಾಗಿಯಾಗಿದ್ದಾರೆ ಎನ್ನಲಾಗುತ್ತಿದೆ.

ಯುಪಿ ಸರ್ಕಾರವು ಇಲಾಖಾ ವರ್ಗಾವಣೆಯಲ್ಲಿ ಗಂಭೀರ ಅಕ್ರಮಗಳ ಮೇಲೆ ಐವರು ಹಿರಿಯ ಪಿಡಬ್ಲ್ಯೂಡಿ ಅಧಿಕಾರಿಗಳನ್ನು ಅಮಾನತುಗೊಳಿಸಿದೆ.

ಇದನ್ನೂ ಓದಿರಿ: ಕರಾವಳಿ ಕರ್ನಾಟಕದ ರಕ್ತಸಿಕ್ತ ಚರಿತ್ರೆಯ ನಿಜ ಕಥನ ‘ನೇತ್ರಾವತಿಯಲ್ಲಿ ನೆತ್ತರು’

ವಿಶೇಷ ಕರ್ತವ್ಯದಲ್ಲಿರುವ ಐಎಎಸ್ ಅಧಿಕಾರಿ ಅನಿಲ್ ಕುಮಾರ್ ಪಾಂಡೆ ಅವರು ವರ್ಗಾವಣೆ ಮತ್ತು ಪೋಸ್ಟಿಂಗ್‌ಗಾಗಿ ಲಂಚ ಪಡೆದ ಆರೋಪ ಹೊತ್ತಿದ್ದಾರೆ. ಪಾಂಡೆ ಅವರನ್ನು ತೆರವುಗೊಳಿಸಿ, ಅವರ ವಿರುದ್ಧ ವಿಜಿಲೆನ್ಸ್ ವಿಚಾರಣೆಯನ್ನು ಪ್ರಾರಂಭಿಸಲಾಗಿದೆ.

ಪಾಂಡೆಯವರ ತೆರವಿನ ಬಳಿಕ ಸಚಿವ ಪ್ರಸಾದ ಅವರೂ ವಿಚಾರಣೆಯನ್ನು ಎದುರಿಸುವಂತಾಗಿದೆ. ಮೂಲಗಳ ಪ್ರಕಾರ ಯೋಗಿ ಆದಿತ್ಯನಾಥ್ ಸಚಿವರನ್ನು ಕರೆಸಿ, ಅನಿಲ್‌ ಪಾಂಡೆ ವಿರುದ್ಧದ ಆರೋಪಗಳಿಗೆ ಸಂಬಂಧಿಸಿದಂತೆ ಗರಂ ಆಗಿದ್ದಾರೆ ಎನ್ನಲಾಗುತ್ತಿದೆ.

ನಂತರ ಪ್ರಸಾದ ಅವರು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ದೂರು ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಈ ಸಚಿವ ಸರಿಯಾಗಿ ಜನ ಪರ ಕೆಲಸ ಮಾಡಿಲ್ಲ ಅಂತ ಸಂಪುಟದಿಂದ ತೆಗೆದಿದ್ದಾರೆ,ಆದರೆ ಈ ಸಚಿವ ದಲಿತ ಅನ್ನೋ ಟ್ರಂಪ್ ಕಾರ್ಡ್ ಬಳಸಿ ಬೇಳೆ ಬೇಯಿಸಿ ಕೊಳ್ಳೋ ಪ್ರಯತ್ನ ಮಾಡ್ತಿದ್ದಾನೇ ಈ ಅಸಮರ್ಥ ಸಚಿವ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...