Homeಮುಖಪುಟದಲಿತನೆಂಬ ಕಾರಣಕ್ಕೆ ಮೂಲೆಗೆ ತಳ್ಳಲಾಗಿದೆ: ಯೋಗಿ ಸರ್ಕಾರದ ಮೊದಲ ವಿಕೆಟ್ ಪತನ

ದಲಿತನೆಂಬ ಕಾರಣಕ್ಕೆ ಮೂಲೆಗೆ ತಳ್ಳಲಾಗಿದೆ: ಯೋಗಿ ಸರ್ಕಾರದ ಮೊದಲ ವಿಕೆಟ್ ಪತನ

ಮತ್ತೊಬ್ಬ ಸಚಿವ ಜಿತಿನ್ ಪ್ರಸಾದ ಅವರು ಮುಖ್ಯಮಂತ್ರಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ ದೆಹಲಿ ನಾಯಕರನ್ನು ಭೇಟಿಯಾಗಿದ್ದಾರೆ.

- Advertisement -
- Advertisement -

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಪ್ರಚಂಡ ಬಹುಮತದಿಂದ ಪುನರಾಯ್ಕೆಯಾದ ಕೆಲವೇ ತಿಂಗಳುಗಳಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಭಾರಿ ಹಿನ್ನಡೆಯಾಗಿದೆ.

“ನಾನು ದಲಿತ ಎಂಬ ಕಾರಣದಿಂದ ಸೈಡ್‌ಲೈನ್ ಮಾಡಲಾಗಿದೆ” ಎಂದು ದೂರಿ ಉತ್ತರ ಪ್ರದೇಶದ ಸಚಿವರೊಬ್ಬರು ರಾಜೀನಾಮೆ ನೀಡಿದ್ದಾರೆ. ಸಚಿವ ದಿನೇಶ್ ಖಟಿಕ್ ಅವರು ತಮ್ಮ ರಾಜೀನಾಮೆ ಪತ್ರವನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಕಳುಹಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮತ್ತೊಬ್ಬ ಸಚಿವ ಜಿತಿನ್ ಪ್ರಸಾದ ಅವರು ಮುಖ್ಯಮಂತ್ರಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಬಹಿರಂಗವಾಗಿ ಅಸಮಾಧಾನ ಹೊರಹಾಕಿ ದೆಹಲಿ ನಾಯಕರನ್ನು ಭೇಟಿಯಾಗಿರುವುದು ಚರ್ಚೆಗೆ ಗ್ರಾಸವಾಗಿದೆ.

ಉತ್ತರ ಪ್ರದೇಶದ ಜಲಸಂಪನ್ಮೂಲ ಸಚಿವ ಖಟಿಕ್ ಅವರು ತಮ್ಮ ಪತ್ರದಲ್ಲಿ, “100 ದಿನಗಳ ಕಾಲ ಯಾವುದೇ ಕೆಲಸವನ್ನು ನಿಯೋಜಿಸಿಲ್ಲ” ಎಂದು ಹೇಳಿದ್ದಾರೆ. “ಇಲಾಖಾ ವರ್ಗಾವಣೆಯಲ್ಲಿ ಅವ್ಯವಹಾರ ನಡೆದಿದೆ. ನನಗೆ ನೋವಾಗಿದೆ” ಎಂದು ಕಾರಣ ರಾಜೀನಾಮೆಗೆ ಕಾರಣ ನೀಡಿದ್ದಾರೆ.

“ನಾನು ದಲಿತ ಎಂಬ ಕಾರಣಕ್ಕೆ ನನಗೆ ಯಾವುದೇ ಪ್ರಾಮುಖ್ಯತೆ ನೀಡಿಲ್ಲ, ನನಗೆ ಸಚಿವನಾಗಿ ಅಧಿಕಾರವಿಲ್ಲ, ನಾನು ರಾಜ್ಯ ಸಚಿವನಾಗಿ ಕೆಲಸ ಮಾಡುತ್ತಿದ್ದು, ದಲಿತ ಸಮುದಾಯಕ್ಕೆ ಯಾವುದೇ ಪ್ರಯೋಜನವಾಗಿಲ್ಲ. ನನ್ನನ್ನು ಯಾವುದೇ ಸಭೆಗೆ ಕರೆಯುತ್ತಿಲ್ಲ. ನನ್ನ ಸಚಿವಾಲಯದ ಬಗ್ಗೆ ಏನನ್ನೂ ಹೇಳುತ್ತಿಲ್ಲ. ಇದು ದಲಿತ ಸಮುದಾಯಕ್ಕೆ ಮಾಡಿದ ಅವಮಾನ” ಎಂದು ಖಟಿಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜೀನಾಮೆಯನ್ನು ಹಿಂಪಡೆಯುವಂತೆ  ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಮೂಲಗಳು ತಿಳಿಸಿರುವಾಗಿ ಎನ್‌ಡಿಟಿವಿ ವರದಿ ಮಾಡಿದೆ.

ತಮ್ಮ ತಂಡದ ಅಧಿಕಾರಿಯೊಬ್ಬರನ್ನು ಮುಖ್ಯಮಂತ್ರಿ ಅಮಾನತು ಮಾಡಿರುವ ಬಗ್ಗೆ ಜಿತಿನ್ ಪ್ರಸಾದ ಕೋಪಗೊಂಡಿದ್ದಾರೆ. ಪ್ರಸಾದ ಅವರು ಕಳೆದ ವರ್ಷ ಯುಪಿ ಚುನಾವಣೆಯ ಮೊದಲು ಕಾಂಗ್ರೆಸ್‌ನಿಂದ ಬಿಜೆಪಿಗೆ ಬಂದಿದ್ದರು.

ಪ್ರಸಾದ ಅವರಿಗೆ ಲೋಕೋಪಯೋಗಿ ಇಲಾಖೆ (PWD) ನೀಡಲಾಯಿತು. ಆದರೆ ಇಲಾಖೆಯು ಭ್ರಷ್ಟಾಚಾರದ ಆರೋಪಗಳನ್ನು ಎದುರಿಸುತ್ತಿದೆ. ಮುಖ್ಯಮಂತ್ರಿ ಕಚೇರಿಯು ತನಿಖೆಗೆ ಆದೇಶಿಸಿದೆ ಎಂದು ವರದಿಯಾಗಿದೆ. ಹಲವಾರು ಅಧಿಕಾರಿಗಳು ಲಂಚದಲ್ಲಿ ಭಾಗಿಯಾಗಿದ್ದಾರೆ ಎನ್ನಲಾಗುತ್ತಿದೆ.

ಯುಪಿ ಸರ್ಕಾರವು ಇಲಾಖಾ ವರ್ಗಾವಣೆಯಲ್ಲಿ ಗಂಭೀರ ಅಕ್ರಮಗಳ ಮೇಲೆ ಐವರು ಹಿರಿಯ ಪಿಡಬ್ಲ್ಯೂಡಿ ಅಧಿಕಾರಿಗಳನ್ನು ಅಮಾನತುಗೊಳಿಸಿದೆ.

ಇದನ್ನೂ ಓದಿರಿ: ಕರಾವಳಿ ಕರ್ನಾಟಕದ ರಕ್ತಸಿಕ್ತ ಚರಿತ್ರೆಯ ನಿಜ ಕಥನ ‘ನೇತ್ರಾವತಿಯಲ್ಲಿ ನೆತ್ತರು’

ವಿಶೇಷ ಕರ್ತವ್ಯದಲ್ಲಿರುವ ಐಎಎಸ್ ಅಧಿಕಾರಿ ಅನಿಲ್ ಕುಮಾರ್ ಪಾಂಡೆ ಅವರು ವರ್ಗಾವಣೆ ಮತ್ತು ಪೋಸ್ಟಿಂಗ್‌ಗಾಗಿ ಲಂಚ ಪಡೆದ ಆರೋಪ ಹೊತ್ತಿದ್ದಾರೆ. ಪಾಂಡೆ ಅವರನ್ನು ತೆರವುಗೊಳಿಸಿ, ಅವರ ವಿರುದ್ಧ ವಿಜಿಲೆನ್ಸ್ ವಿಚಾರಣೆಯನ್ನು ಪ್ರಾರಂಭಿಸಲಾಗಿದೆ.

ಪಾಂಡೆಯವರ ತೆರವಿನ ಬಳಿಕ ಸಚಿವ ಪ್ರಸಾದ ಅವರೂ ವಿಚಾರಣೆಯನ್ನು ಎದುರಿಸುವಂತಾಗಿದೆ. ಮೂಲಗಳ ಪ್ರಕಾರ ಯೋಗಿ ಆದಿತ್ಯನಾಥ್ ಸಚಿವರನ್ನು ಕರೆಸಿ, ಅನಿಲ್‌ ಪಾಂಡೆ ವಿರುದ್ಧದ ಆರೋಪಗಳಿಗೆ ಸಂಬಂಧಿಸಿದಂತೆ ಗರಂ ಆಗಿದ್ದಾರೆ ಎನ್ನಲಾಗುತ್ತಿದೆ.

ನಂತರ ಪ್ರಸಾದ ಅವರು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ದೂರು ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಈ ಸಚಿವ ಸರಿಯಾಗಿ ಜನ ಪರ ಕೆಲಸ ಮಾಡಿಲ್ಲ ಅಂತ ಸಂಪುಟದಿಂದ ತೆಗೆದಿದ್ದಾರೆ,ಆದರೆ ಈ ಸಚಿವ ದಲಿತ ಅನ್ನೋ ಟ್ರಂಪ್ ಕಾರ್ಡ್ ಬಳಸಿ ಬೇಳೆ ಬೇಯಿಸಿ ಕೊಳ್ಳೋ ಪ್ರಯತ್ನ ಮಾಡ್ತಿದ್ದಾನೇ ಈ ಅಸಮರ್ಥ ಸಚಿವ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...