Homeಮುಖಪುಟಪಕ್ಷದ ಶಾಸಕರಲ್ಲಿ ಸಿಧು ಮತ್ತು ಚನ್ನಿಗೆ ಕಡಿಮೆ ಬೆಂಬಲವಿದೆ: ಕಾಂಗ್ರೆಸ್‌ ನಾಯಕ ಸುನೀಲ್ ಜಾಖರ್

ಪಕ್ಷದ ಶಾಸಕರಲ್ಲಿ ಸಿಧು ಮತ್ತು ಚನ್ನಿಗೆ ಕಡಿಮೆ ಬೆಂಬಲವಿದೆ: ಕಾಂಗ್ರೆಸ್‌ ನಾಯಕ ಸುನೀಲ್ ಜಾಖರ್

- Advertisement -
- Advertisement -

ಪಂಜಾಬ್‌‌ ಕಾಂಗ್ರೆಸ್‌ನಿಂದ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಆಯ್ಕೆಯಾಗಲಿದ್ದಾರೆ ಎನ್ನಲಾಗಿರುವ ಚರಂಜಿತ್ ಸಿಂಗ್ ಚನ್ನಿ ಅಥವಾ ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ನವಜೋತ್ ಸಿಂಗ್ ಸಿಧು ಅವರಿಗೆ ತುಂಬಾ ಕಡಿಮೆ ಬೆಂಬಲ ಇದೆ ಎಂದು ರಾಜ್ಯದ ಕಾಂಗ್ರೆಸ್ ನಾಯಕ ಸುನೀಲ್ ಜಾಖರ್ ಹೇಳಿದ್ದಾರೆ.

ಮುಂಬರುವ ಪಂಜಾಬ್ ವಿಧಾನಸಭೆ ಚುನಾವಣೆಗೆ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಆಯ್ಕೆ ಮಾಡಲು ಕಾಂಗ್ರೆಸ್ ಆಂತರಿಕ ಸಮಾಲೋಚನೆಗಳನ್ನು ನಡೆಸುತ್ತಿದ್ದು, ಈ ವೇಳೆ ಜಾಖರ್‌ ಅವರು ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹೊರಹೊಮ್ಮಿದೆ.

ಇದನ್ನೂ ಓದಿ: ಪಂಜಾಬ್ ಚುನಾವಣೆ; ಎರಡು ಕ್ಷೇತ್ರಗಳಿಂದ ಕಣಕ್ಕಿಳಿಯಲಿರುವ ಸಿಎಂ ಚರಣ್‌ ಜಿತ್ ಚನ್ನಿ

“ಕಳೆದ ವರ್ಷ ಮಾಜಿ ಸಿಎಂ ಕ್ಯಾಪ್ಟನ್ ಅಮರಿಂದರ್ ಸಿಂಗ್ ರಾಜೀನಾಮೆ ನೀಡಿದ ನಂತರ ಮುಖ್ಯಮಂತ್ರಿ ಸ್ಥಾನಕ್ಕೆ ಆಯ್ಕೆ ಮಾಡುವಂತೆ ಪಕ್ಷವು ತನ್ನ ಎಲ್ಲಾ 79 ಶಾಸಕರನ್ನು ಕೇಳಿತ್ತು. ಆದರೆ ಈ ವೇಳೆ ಚನ್ನಿ ಮತ್ತು ನವಜೋತ್‌ ಸಿಧುಗೆ ಅತ್ಯಂತ ಕಡಿಮೆ ಮತಗಳು ಸಿಕ್ಕಿವೆ” ಎಂದು ಅವರು ವಿಡಿಯೊದಲ್ಲಿ ಹೇಳಿದ್ದಾರೆ.

ಈ ವೇಳೆ, ತನ್ನ ಪರವಾಗಿ 42 ಕಾಂಗ್ರೆಸ್‌ ಶಾಸಕರು ಮತನೀಡಿದ್ದಾಗಿ ಸುನಿಲ್ ಜಾಖರ್‌ ವಿಡಿಯೊದಲ್ಲಿ ಪ್ರತಿಪಾದಿಸಿದ್ದಾರೆ. ಉಳಿದಂತೆ ಸುಖಜಿಂದರ್ ರಾಂಧವಾ ಅವರಿಗೆ 16 ಮತಗಳು ಮತ್ತು ಪ್ರಣೀತ್ ಕೌರ್ ಅವರಿಗೆ 12 ಶಾಸಕರು ಮತ ಸಿಕ್ಕಿದ್ದು, ನವಜೋತ್ ಸಿಧು ಮತ್ತು ಚರಂಜಿತ್ ಸಿಂಗ್ ಚನ್ನಿ ಅವರನ್ನು ಕ್ರಮವಾಗಿ ಆರು ಮತ್ತು ಇಬ್ಬರು ಶಾಸಕರು ಮಾತ್ರ ಇಷ್ಟಪಟ್ಟಿದ್ದಾರೆ ಎಂದು ಸುನೀಲ್ ಜಾಖರ್ ಅವರು ಅಬೋಹರ್ ಕ್ಷೇತ್ರದಲ್ಲಿ ತಮ್ಮ ಸಂಬಂಧಿ ಪರ ಪ್ರಚಾರ ಮಾಡುವಾಗ ಹೇಳಿದ್ದಾರೆ.

ಇದನ್ನೂ ಓದಿ: ಪಂಜಾಬ್‌: ಅಧಿಕಾರದ ಕಿತ್ತಾಟಕ್ಕೆ ಅಂತ್ಯ; ಸಿಎಂ ಅಭ್ಯರ್ಥಿ ಘೋಷಿಸಲು ನಿರ್ಧರಿಸಿದ ಕಾಂಗ್ರೆಸ್‌

ತನಗೆ ಉನ್ನತ ಹುದ್ದೆಯನ್ನು ನಿರಾಕರಿಸಲಾಗಿದ್ದರೂ, ಹೆಚ್ಚಿನ ಶಾಸಕರು ನನ್ನ ಮೇಲೆ ವಿಶ್ವಾಸವಿಟ್ಟಿದ್ದಕ್ಕೆ ನನಗೆ ತುಂಬಾ ಸಂತೋಷವಾಗಿದೆ ಎಂದು ಅವರು ವಿಡಿಯೊದಲ್ಲಿ ಹೇಳಿದ್ದಾರೆ. ಅತಿ ಹೆಚ್ಚು ಮತ ಪಡೆದರೂ ಉಪಮುಖ್ಯಮಂತ್ರಿ ಸ್ಥಾನ ನೀಡಿವುದಾಗಿ ಹೇಳಿದ್ದು ನನಗೆ ಅಸಮಾಧಾನ ತಂದಿತ್ತು ಎಂದು ಅವರು ತಿಳಿಸಿದ್ದಾರೆ.

“ನನ್ನ ವೃತ್ತಿ ಜೀವನದಲ್ಲಿ ನಾನು ಗಳಿಸಿದ್ದು ಇದನ್ನೇ. ನಾನು ಯಾವುದೆ ಹುದ್ದೆಯಲ್ಲಿ ಇಲ್ಲದಿದ್ದರೂ ಶಾಸಕರು ನನ್ನ ಪರವಾಗಿದ್ದಾರೆ” ಎಂದು ಅವರು ಹೇಳಿದ್ದಾರೆ. ಈ ವರ್ಷ ವಿಧಾನಸಭೆ ಚುನಾವಣೆಯಲ್ಲಿ ಸುನೀಲ್ ಜಾಖರ್ ಸ್ಪರ್ಧಿಸಿಲ್ಲ.

ಪಂಜಾಬ್ ವಿಧಾನಸಭೆ ಚುನಾವಣೆ ಫೆಬ್ರವರಿ 20 ರಂದು ಒಂದೇ ಹಂತದಲ್ಲಿ ನಡೆಯಲಿದೆ. ಮಾರ್ಚ್ 10 ರಂದು ಮತಗಳ ಎಣಿಕೆ ನಡೆಯಲಿದೆ.

ಇದನ್ನೂ ಓದಿ:ಪಂಜಾಬ್‌: ಸಿಎಂ ಅಭ್ಯರ್ಥಿ ಆಯ್ಕೆಗಾಗಿ ಫೋನ್‌ ಕರೆ: ತಾನೇ ತೋಡಿದ ಖೆಡ್ಡಾದೊಳಗೆ ಬೀಳುತ್ತಿದೆಯೇ ಎಎಪಿ? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...