Homeಮುಖಪುಟಪಂಜಾಬ್‌ ಕಾಂಗ್ರೆಸ್‌ ಭಿನ್ನಮತ ಶಮನದತ್ತ; ರಾಜ್ಯಾಧ್ಯಕ್ಷರಾಗಿ ಸಿಧು ನೇಮಕ

ಪಂಜಾಬ್‌ ಕಾಂಗ್ರೆಸ್‌ ಭಿನ್ನಮತ ಶಮನದತ್ತ; ರಾಜ್ಯಾಧ್ಯಕ್ಷರಾಗಿ ಸಿಧು ನೇಮಕ

- Advertisement -
- Advertisement -

ಪಂಜಾಬ್‌ನ ಕಾಂಗ್ರೆಸ್‌ನಲ್ಲಿ ಪ್ರಾರಂಭವಾಗಿದ್ದ ಆಂತರಿಕ ಕಲಹ ನಿಲುಗಡೆಯಾಗುವ ಹಂತಕ್ಕೆ ತಲುಪಿದೆ. ಪಕ್ಷದ ಮುಖಂಡ ನವಜೋತ್ ಸಿಂಗ್ ಸಿಧು ಕಾಂಗ್ರೆಸ್‌ ರಾಜ್ಯಾಧ್ಯಕ್ಷನಾಗಿ ಭಾನುವಾರ ನೇಮಕಗೊಂಡಿದ್ದಾರೆ. ಈ ಬಗ್ಗೆ ಅವರು ಟ್ವಿಟರ್‌ನಲ್ಲಿ ಪಕ್ಷದ ರಾಷ್ಟ್ರೀಯ ನಾಯಕರುಗಳಾದ ಸೋನಿಯಾ, ರಾಹುಲ್ ಮತ್ತು ಪ್ರಿಯಾಂಕಾ ಗಾಂಧಿ ಅವರಿಗೆ ಧನ್ಯವಾದ ಹೇಳಿದ್ದಾರೆ.

ಮುಂದಿನ ವರ್ಷ ವಿಧಾನಸಭಾ ಚುನಾವಣೆ ನಡೆಯಲಿರುವ ಪಂಜಾಬ್‌‌ನಲ್ಲಿ ಕಾಂಗ್ರೆಸ್‌ ಆಡಳಿತ ನಡೆಸುತ್ತಿದೆ. ಆದರೆ ಮುಖ್ಯಮಂತ್ರಿ ಅಮರಿಂದರ್‌ ಸಿಂಗ್ ಮತ್ತು ರಾಜ್ಯದ ಮತ್ತೊಬ್ಬ ನಾಯಕ ನವಜೋತ್ ಸಿಂಗ್ ಸಿಧು ನಡುವೆ ವೈಮಸ್ಸು ಏರ್ಪಟ್ಟಿತ್ತು. ಇದು ಕೇಂದ್ರ ನಾಯಕತ್ವಕ್ಕೆ ತಲೆನೋವಾಗಿ ಪರಿಣಮಿಸಿತ್ತು.

ಇದನ್ನೂ ಓದಿ: ಪಂಜಾಬ್ ಕಾಂಗ್ರೆಸ್‌ ಭಿನ್ನಮತ ಶಮನ: ಕೇಜ್ರಿವಾಲ್ ವಿರುದ್ಧ ಸಿಧು ಟ್ವೀಟ್‌ ವಾರ್

ಟ್ವಿಟರ್‌ನಲ್ಲಿ ಸಿಧು, ತಮ್ಮ ಮೇಲೆ ನಂಬಿಕೆ ಇಟ್ಟು ಪ್ರಮುಖ ಜವಾಬ್ದಾರಿಯನ್ನು ನೀಡಿದ್ದಕ್ಕಾಗಿ ಮೂವರಿಗೆ ಕೃತಜ್ಞತೆಯನ್ನು ಸಲ್ಲಿಸಿದ್ದಾರೆ. “ಜನರ ಅಧಿಕಾರವನ್ನು ಜನರಿಗೆ ಮರಳಿ ನೀಡುವ ಧ್ಯೇಯವನ್ನು ಪೂರೈಸಲು ಪಂಜಾಬ್‌ ಕಾಂಗ್ರೆಸ್‌ನ ಪ್ರತಿಯೊಬ್ಬ ಸದಸ್ಯರೊಂದಿಗೆ ಕೆಲಸ ಮಾಡುತ್ತೇನೆ” ಎಂದು ಹೇಳಿದ್ದಾರೆ.

“ನನ್ನ ಪ್ರಯಾಣವು ಇದೀಗ ಪ್ರಾರಂಭವಾಗಿದೆ” ಎಂದು ಅವರು ಹೇಳಿದ್ದಾರೆ.

ಪಂಜಾಬ್ ಕಾಂಗ್ರೆಸ್‌‌ನಲ್ಲಿ ಬಿಕ್ಕಟ್ಟು ತಲೆದೂರಿದಾಗಿನಿಂದ ಕಾಂಗ್ರೆಸ್‌ನ ಕೇಂದ್ರ ನಾಯಕತ್ವವು ಹಲವಾರು ಸಭೆಗಳನ್ನು ಮಾಡಿದ್ದು, ಬಿಕ್ಕಟ್ಟನ್ನು ಪರಿಹರಿಸುವ ಪ್ರಯತ್ನವಾಗಿ ಇದೀಗ ಅವರನ್ನು ರಾಜ್ಯ ಕಾಂಗ್ರೆಸ್‌ ಅಧ್ಯಕ್ಷರಾಗಿ ನೇಮಿಸಲಾಗಿದೆ.

ಸಿಧು ಅವರನ್ನು ಹೊರತುಪಡಿಸಿ, ಸಂಗತ್ ಸಿಂಗ್ ಗಿಲ್ಜಿಯಾನ್, ಸುಖ್ವಿಂದರ್ ಸಿಂಗ್ ಡ್ಯಾನಿ, ಪವನ್ ಗೋಯೆಲ್ ಮತ್ತು ಕುಲ್ಜಿತ್ ಸಿಂಗ್ ನಗ್ರಾ ಅವರನ್ನು ಪಂಜಾಬ್ ಕಾಂಗ್ರೆಸ್ ಘಟಕದ ಕಾರ್ಯಕಾರಿ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.

ಪಕ್ಷದ ಹೈಕಮಾಂಡ್‌ನ ನಿರ್ಧಾರವನ್ನು ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ಸ್ವಾಗತಿಸಿದ್ದಾರೆ. “ಹೈಕಮಾಂಡ್ ನಿರ್ಧಾರ 100% ಸರಿಯಾಗಿದ್ದು, ಇದರ ಬಗ್ಗೆ ಯಾರೂ ಅಸಮಾಧಾನ ಹೊಂದಿಲ್ಲ, ಎಲ್ಲವೂ ಸರಿಯಾಗಲಿದೆ” ಎಂದು ಕಾಂಗ್ರೆಸ್ ಶಾಸಕ ನಿರ್ಮಲ್ ಸಿಂಗ್ ಶೂತ್ರಾನಾ ತಿಳಿಸಿದ್ದಾರೆ ಎಂದು ಎಎನ್‌ಐ ವರದಿ ಮಾಡಿದೆ.

ಇದನ್ನೂ ಓದಿ: ಪಂಜಾಬ್‌: ಶಾಸಕನ ವಿರುದ್ಧ ಅತ್ಯಾಚಾರ ಪ್ರಕರಣ-ಬಂಧನಕ್ಕೆ ಆಗ್ರಹಿಸಿ ಅಕಾಲಿ ದಳ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...