Homeಚಳವಳಿಕೃಷಿ ಕಾನೂನು ವಿರೋಧಿಸಿ ರಾಜ ಭವನಕ್ಕೆ ಮುತ್ತಿಗೆ: ಬಿಹಾರದ ರೈತರ ಮೇಲೆ ಲಾಠಿ ಚಾರ್ಜ್!

ಕೃಷಿ ಕಾನೂನು ವಿರೋಧಿಸಿ ರಾಜ ಭವನಕ್ಕೆ ಮುತ್ತಿಗೆ: ಬಿಹಾರದ ರೈತರ ಮೇಲೆ ಲಾಠಿ ಚಾರ್ಜ್!

ಕಾರ್ಪೋರೇಟ್ ಪರವಿರುವ ಕಾನೂನನ್ನು ರದ್ದುಮಾಡಬೇಕು ಎಂದು ಹೋರಾಟಗಾರರು ಪಟ್ಟು ಹಿಡಿದಿದ್ದು, ಕೇಂದ್ರ ಸರ್ಕಾರ ಮಾತ್ರ ಇದುವರೆಗೂ ಈ ಕಾನೂನುಗಳನ್ನು ಸಮರ್ಥನೆ ಮಾಡುತ್ತಲೇ ಇದೆ.

- Advertisement -
- Advertisement -

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹೊಸ ಕೃಷಿ ಕಾನೂನನ್ನು ರದ್ದುಪಡಿಸಬೇಕು ಎಂದು ಸಾವಿರಾರು ಪ್ರತಿಭಟನಾಕಾರರು ಬಿಹಾರ ರಾಜಧಾನಿ ಪಾಟ್ನಾದ ರಾಜ ಭವನಕ್ಕೆ ಮಂಗಳವಾರ ಮುತ್ತಿಗೆ ಹಾಕಿದ್ದಾರೆ. ಅಲ್ಲದೆ ಕಾನೂನಿನ ವಿರುದ್ದ ದೇಶದಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳಿಗೆ ಬೃಹತ್‌ ಪ್ರಮಾಣದಲ್ಲಿ ಬೆಂಬಲಿಸುವಂತೆ ಕರೆ ನೀಡಿದ್ದಾರೆ.

ಪಾಟ್ನಾದ ಪ್ರಸಿದ್ದ ಗಾಂಧಿ ಮೈದಾನದಿಂದ ಪ್ರಾರಂಭವಾದ ಪ್ರತಿಭಟನಾ ಜಾಥಾವನ್ನು ಪೊಲೀಸರು ಬ್ಯಾರಿಕೇಡ್‌ಗಳನ್ನು ಬಳಸಿ ಡಾಕ್‌ ಬಂಗಲೆ ಚೌಕ್‌ನಲ್ಲಿ ತಡೆದ್ದಾರೆ. ಇದರಿಂದ ಆಕ್ರೋಶಗೊಂಡ ಪ್ರತಿಭಟನಾಕಾರರು ಪೊಲೀಸರೊಂದಿಗೆ ಘರ್ಷಣೆಗೆ ಇಳಿದಿದ್ದು ಲಾಠಿ ಚಾರ್ಜ್‌ಗೆ ಕಾರಣವಾಯಿತು.

ಈ ಬೃಹತ್‌ ಪ್ರತಿಭಟನೆಯನ್ನು ರೈತ ಸಂಘಟನೆಗಳು ಹಾಗೂ ಎಡಪಕ್ಷಗಳು ಮುನ್ನಡೆಸಿದ್ದವು.

ಇದನ್ನೂ ಓದಿ: ಪಂಜಾಬ್: 1500 ಕ್ಕೂ ಹೆಚ್ಚು ಜಿಯೋ ಟವರ್‌ಗಳಿಗೆ ಹಾನಿ ಮಾಡಿದ ರೈತ ಹೋರಾಟಗಾರರು

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನೂತನ ಕೃಷಿ ಕಾನೂನನ್ನು ವಿರೋಧಿಸಿ ದೆಹಲಿಯ ಗಡಿಗಳಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ 33 ನೇ ದಿನಕ್ಕೆ ಕಾಲಿಟ್ಟಿದೆ. ಪ್ರತಿಭಟನಾ ನಿರತರೊಂದಿಗೆ ಕೇಂದ್ರ ಸರ್ಕಾರ ಇದುವರೆಗೂ ಆರು ಭಾರಿ ಮಾತುಕತೆ ನಡೆಸಿದ್ದರೂ ಅವುಗಳೆಲ್ಲವೂ ಮುರಿದು ಬಿದ್ದಿದೆ. ಕೇಂದ್ರವು ಪದೇ ಪದೇ ಒಂದೇ ರೀತಿಯ ಪ್ರಸ್ತಾಪವನ್ನು ಇಡುತ್ತಿದೆ ಎಂದು ಹೋರಾಟಗಾರರು ಆರೋಪಿಸಿದ್ದಾರೆ.

ಕಾರ್ಪೋರೇಟ್ ಪರವಿರುವ ಕಾನೂನನ್ನು ರದ್ದುಮಾಡಬೇಕು ಎಂದು ಹೋರಾಟಗಾರರು ಪಟ್ಟು ಹಿಡಿದಿದ್ದು, ಕೇಂದ್ರ ಸರ್ಕಾರ ಮಾತ್ರ ಇದುವರೆಗೂ ಈ ಕಾನೂನುಗಳನ್ನು ಸಮರ್ಥನೆ ಮಾಡುತ್ತಲೇ ಇದೆ. ಪ್ರಧಾನಿ ಮೋದಿ ಕೂಡಾ ಇತ್ತಿಚೆಗೆ ಕಾನೂನನ್ನು ಸಮರ್ಥಿಸಿಕೊಂಡಿದ್ದಾರೆ. ಈ ನಡುವೆ ಕೇಂದ್ರ ಕೃಷಿ ಇಲಾಖೆ, ಹೋರಾಟ ನಿರತ ರೈತರನ್ನು ಏಳನೇ ಸುತ್ತಿನ ಮಾತುಕತೆಗೆ ಡಿಸೆಂಬರ್‌ 30 ರಂದು ಬರುವಂತೆ ಕರೆದಿದೆ.

ಇದನ್ನೂ ಓದಿ: ರೈತ ಹೋರಾಟ: ಡಿಸೆಂಬರ್ ‌30 ರಂದು ಮತ್ತೊಂದು ಸುತ್ತಿನ ಮಾತುಕತೆಗೆ ಕರೆದ ಕೇಂದ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...