Homeಕರ್ನಾಟಕಬೆಂಗಳೂರು ಸುತ್ತಮುತ್ತ ಚಿರತೆಗಳ ಪ್ರತ್ಯಕ್ಷ; ಮುಂಜಾಗ್ರತೆ ವಹಿಸಲು ಸೂಚನೆ

ಬೆಂಗಳೂರು ಸುತ್ತಮುತ್ತ ಚಿರತೆಗಳ ಪ್ರತ್ಯಕ್ಷ; ಮುಂಜಾಗ್ರತೆ ವಹಿಸಲು ಸೂಚನೆ

- Advertisement -
- Advertisement -

ಡಿಸೆಂಬರ್ 2ರ ಶುಕ್ರವಾರದಂದು ಕೆಂಗೇರಿ ಮತ್ತು ಬೆಂಗಳೂರು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸ್ಥಳೀಯರು ಚಿರತೆಗಳನ್ನು ಗುರುತಿಸಿದ ನಂತರ ಮುಂಜಾಗೃತೆ ಕ್ರಮಗಳನ್ನು ಸೂಚಿಸಲಾಗಿದೆ.

ಇತ್ತೀಚೆಗಷ್ಟೇ ಕೆಂಗೇರಿ, ಕುಂಬಳಗೋಡು, ದೇವನಹಳ್ಳಿ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ನಾಲ್ಕು ಚಿರತೆಗಳು ಕಾಣಿಸಿಕೊಂಡಿದ್ದವು. ಬೆಂಗಳೂರು ಹೊರವಲಯದ ಕನಕಪುರ ಬಳಿಯ ಕೋಡಿಪಾಳ್ಯದಲ್ಲಿ ಚಿರತೆ ದಾಳಿಗೆ ತುತ್ತಾದ ಜಿಂಕೆಯ ಕಳೇಬರವನ್ನು ಅಧಿಕಾರಿಗಳು ಪತ್ತೆ ಮಾಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ದೇವನಹಳ್ಳಿಯ ಚಿಕ್ಕಜಾಲದ ಬಳಿ ಐಟಿಸಿ ಕಂಪನಿ ಆವರಣದಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕರ್ನಾಟಕ ಅರಣ್ಯ ಇಲಾಖೆಯ ಐವರು ಅಧಿಕಾರಿಗಳ ತಂಡವು ಈ ಪ್ರದೇಶದಲ್ಲಿ ಹುಡುಕಾಟ ನಡೆಸಿದೆ. ಆದರೆ ಚಿರತೆ ಪತ್ತೆಯಾಗಿಲ್ಲ ಎಂದು ವರದಿಯಾಗಿದೆ.

ಬೆಂಗಳೂರಿಗೆ ಸಮೀಪದಲ್ಲಿರುವ ತುರಹಳ್ಳಿ ಮೀಸಲು ಅರಣ್ಯದಿಂದ ಚಿರತೆಗಳು ಜನವಸತಿ ಪ್ರದೇಶಗಳಿಗೆ ಕಾಲಿಡುತ್ತಿರುವ ಆತಂಕ ಎದುರಾಗಿದೆ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು (ಬಿಡಿಎ) ಈ ಪ್ರದೇಶದಲ್ಲಿ ಹೊಸ ಬಡಾವಣೆ ನಿರ್ಮಿಸಿದ್ದು, ಬೆಳಗಿನ ವಾಕಿಂಗ್ ಮಾಡುವವರು ಮತ್ತು ಸ್ಥಳೀಯ ನಿವಾಸಿಗಳಲ್ಲಿ ಭಯ ಆವರಿಸಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ತರಬನಹಳ್ಳಿಯಲ್ಲಿರುವ ಖಾಸಗಿ ಕಾರ್ಖಾನೆಯೊಂದರ ಆವರಣದಲ್ಲಿ ಬೀಡು ಬಿಟ್ಟಿರುವ ಚಿರತೆಗಳನ್ನು ಹಿಡಿಯಲು ಬೋನು ಇರಿಸಲಾಗಿದೆ.

ಕಳೆದೆರಡು ದಿನಗಳಿಂದ ಹಲವಾರು ಬಾರಿ ಚಿರತೆ ಕಾಣಿಸಿಕೊಂಡಿದೆ. ಆದಾಗ್ಯೂ, ಈ ಪ್ರದೇಶದಲ್ಲಿ ಚಿರತೆಗಳು ನೈಸರ್ಗಿಕವಾಗಿ ಕಂಡುಬರುತ್ತವೆ. ಹೀಗಾಗಿ ಭಯಪಡುವ ಅಗತ್ಯವಿಲ್ಲ ಎಂದು ವನ್ಯಜೀವಿ ತಜ್ಞರು ಹೇಳುತ್ತಿದ್ದಾರೆ.

ರಾತ್ರಿ ವೇಳೆ ಒಂಟಿಯಾಗಿ ಹೊರಗೆ ಹೋಗದಂತೆ ಅಧಿಕಾರಿಗಳು ಮತ್ತು ವನ್ಯಜೀವಿ ತಜ್ಞರು ಜನರಿಗೆ ಸಲಹೆ ನೀಡಿದ್ದಾರೆ. ಮೀಸಲು ಅರಣ್ಯದಿಂದ ದೂರವಿರಲು, ಮೊಬೈಲ್‌ನಲ್ಲಿ ಹಾಡುಗಳನ್ನು ಪ್ಲೇ ಮಾಡದಿರಲು ಮತ್ತು ರಾತ್ರಿ ವೇಳೆ ಪ್ರಯಾಣಿಸುವಾಗ ಜೋರಾಗಿ ಮಾತನಾಡಿಕೊಂಡು ತೆರಳಲು ಸೂಚಿಸಲಾಗಿದೆ.

ಚಿರತೆ ದಾಳಿಗೆ ಯುವತಿ ಬಲಿ

ಚಿರತೆ ದಾಳಿಗೆ ಒಳಗಾಗಿದ್ದ ಮೈಸೂರು ಜಿಲ್ಲೆಯ ಟಿ.ನರಸೀಪುರ ಸಮೀಪದ ಸಾಕೆಬ್ಬೆಹುಂಡಿ ನಿವಾಸಿ, 22 ವರ್ಷದ ಮೇಘನಾ ಕೊನೆಯುಸಿರೆಳೆದಿದ್ದಾರೆ. ಗುರುವಾರ ತನ್ನ ನಿವಾಸದ ಬಳಿ ವಿಶ್ರಾಂತಿ ಪಡೆಯಲು ತೆರಳಿದ್ದ ಮೇಘನಾ ಮೇಲೆ ಚಿರತೆ ದಾಳಿ ನಡೆಸಿತ್ತು. ಮುಖ ಮತ್ತು ಕುತ್ತಿಗೆ ಭಾಗಕ್ಕೆ ಗಾಯ ಮಾಡಿ ಪರಾರಿಯಾಗಿತ್ತು. ಈಗ ಯುವತಿ ಸಾವಿಗೀಡಾಗಿರುವ ಘಟನೆಯಿಂದ ಗ್ರಾಮದ ಜನತೆ ಆತಂಕಗೊಂಡಿದ್ದಾರೆ.

ಗ್ರಾಮದ ನಿವಾಸಿ ರಮೇಶ್ ನಾಯಕ ಅವರು ಊರಿನ ಹೊರಗೆ ಅಂದರೆ, ಗ್ರಾಮದೇವತೆ ದೇವಸ್ಥಾನದ ಬಳಿ ಮನೆ ಮಾಡಿಕೊಂಡಿದ್ದರು. ಗುರುವಾರ ಸಂಜೆ 6.30ರ ವೇಳೆ ಗ್ರಾಮಕ್ಕೆ ಬಂದಿದ್ದ ಯುವತಿ ಮೇಲೆ ಚಿರತೆ ದಾಳಿ ಮಾಡಿತ್ತು. ಮೇಘನಾರನ್ನು ತಿ.ನರಸೀಪುರ ಪಟ್ಟಣ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸಾವಿಗೀಡಾಗಿದ್ದಾರೆ. ಶಾಸಕ ಎಂ.ಅಶ್ವಿನ್ ಕುಮಾರ್ ಆಸ್ಪತ್ರೆಗೆ ಆಗಮಿಸಿ ಪೋಷಕರಿಗ ಸಾಂತ್ವನ ಹೇಳಿದ್ದಾರೆ. ಗ್ರಾಮಸ್ಥರು ಅರಣ್ಯ ಇಲಾಖೆಯ ಸಿಬ್ಬಂದಿ ವಿರುದ್ಧ ಪ್ರತಿಭಟನೆ ನಡೆಸಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...