Homeಕರ್ನಾಟಕಬೆಂಗಳೂರು ಸುತ್ತಮುತ್ತ ಚಿರತೆಗಳ ಪ್ರತ್ಯಕ್ಷ; ಮುಂಜಾಗ್ರತೆ ವಹಿಸಲು ಸೂಚನೆ

ಬೆಂಗಳೂರು ಸುತ್ತಮುತ್ತ ಚಿರತೆಗಳ ಪ್ರತ್ಯಕ್ಷ; ಮುಂಜಾಗ್ರತೆ ವಹಿಸಲು ಸೂಚನೆ

- Advertisement -
- Advertisement -

ಡಿಸೆಂಬರ್ 2ರ ಶುಕ್ರವಾರದಂದು ಕೆಂಗೇರಿ ಮತ್ತು ಬೆಂಗಳೂರು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸ್ಥಳೀಯರು ಚಿರತೆಗಳನ್ನು ಗುರುತಿಸಿದ ನಂತರ ಮುಂಜಾಗೃತೆ ಕ್ರಮಗಳನ್ನು ಸೂಚಿಸಲಾಗಿದೆ.

ಇತ್ತೀಚೆಗಷ್ಟೇ ಕೆಂಗೇರಿ, ಕುಂಬಳಗೋಡು, ದೇವನಹಳ್ಳಿ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ನಾಲ್ಕು ಚಿರತೆಗಳು ಕಾಣಿಸಿಕೊಂಡಿದ್ದವು. ಬೆಂಗಳೂರು ಹೊರವಲಯದ ಕನಕಪುರ ಬಳಿಯ ಕೋಡಿಪಾಳ್ಯದಲ್ಲಿ ಚಿರತೆ ದಾಳಿಗೆ ತುತ್ತಾದ ಜಿಂಕೆಯ ಕಳೇಬರವನ್ನು ಅಧಿಕಾರಿಗಳು ಪತ್ತೆ ಮಾಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ದೇವನಹಳ್ಳಿಯ ಚಿಕ್ಕಜಾಲದ ಬಳಿ ಐಟಿಸಿ ಕಂಪನಿ ಆವರಣದಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕರ್ನಾಟಕ ಅರಣ್ಯ ಇಲಾಖೆಯ ಐವರು ಅಧಿಕಾರಿಗಳ ತಂಡವು ಈ ಪ್ರದೇಶದಲ್ಲಿ ಹುಡುಕಾಟ ನಡೆಸಿದೆ. ಆದರೆ ಚಿರತೆ ಪತ್ತೆಯಾಗಿಲ್ಲ ಎಂದು ವರದಿಯಾಗಿದೆ.

ಬೆಂಗಳೂರಿಗೆ ಸಮೀಪದಲ್ಲಿರುವ ತುರಹಳ್ಳಿ ಮೀಸಲು ಅರಣ್ಯದಿಂದ ಚಿರತೆಗಳು ಜನವಸತಿ ಪ್ರದೇಶಗಳಿಗೆ ಕಾಲಿಡುತ್ತಿರುವ ಆತಂಕ ಎದುರಾಗಿದೆ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು (ಬಿಡಿಎ) ಈ ಪ್ರದೇಶದಲ್ಲಿ ಹೊಸ ಬಡಾವಣೆ ನಿರ್ಮಿಸಿದ್ದು, ಬೆಳಗಿನ ವಾಕಿಂಗ್ ಮಾಡುವವರು ಮತ್ತು ಸ್ಥಳೀಯ ನಿವಾಸಿಗಳಲ್ಲಿ ಭಯ ಆವರಿಸಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ತರಬನಹಳ್ಳಿಯಲ್ಲಿರುವ ಖಾಸಗಿ ಕಾರ್ಖಾನೆಯೊಂದರ ಆವರಣದಲ್ಲಿ ಬೀಡು ಬಿಟ್ಟಿರುವ ಚಿರತೆಗಳನ್ನು ಹಿಡಿಯಲು ಬೋನು ಇರಿಸಲಾಗಿದೆ.

ಕಳೆದೆರಡು ದಿನಗಳಿಂದ ಹಲವಾರು ಬಾರಿ ಚಿರತೆ ಕಾಣಿಸಿಕೊಂಡಿದೆ. ಆದಾಗ್ಯೂ, ಈ ಪ್ರದೇಶದಲ್ಲಿ ಚಿರತೆಗಳು ನೈಸರ್ಗಿಕವಾಗಿ ಕಂಡುಬರುತ್ತವೆ. ಹೀಗಾಗಿ ಭಯಪಡುವ ಅಗತ್ಯವಿಲ್ಲ ಎಂದು ವನ್ಯಜೀವಿ ತಜ್ಞರು ಹೇಳುತ್ತಿದ್ದಾರೆ.

ರಾತ್ರಿ ವೇಳೆ ಒಂಟಿಯಾಗಿ ಹೊರಗೆ ಹೋಗದಂತೆ ಅಧಿಕಾರಿಗಳು ಮತ್ತು ವನ್ಯಜೀವಿ ತಜ್ಞರು ಜನರಿಗೆ ಸಲಹೆ ನೀಡಿದ್ದಾರೆ. ಮೀಸಲು ಅರಣ್ಯದಿಂದ ದೂರವಿರಲು, ಮೊಬೈಲ್‌ನಲ್ಲಿ ಹಾಡುಗಳನ್ನು ಪ್ಲೇ ಮಾಡದಿರಲು ಮತ್ತು ರಾತ್ರಿ ವೇಳೆ ಪ್ರಯಾಣಿಸುವಾಗ ಜೋರಾಗಿ ಮಾತನಾಡಿಕೊಂಡು ತೆರಳಲು ಸೂಚಿಸಲಾಗಿದೆ.

ಚಿರತೆ ದಾಳಿಗೆ ಯುವತಿ ಬಲಿ

ಚಿರತೆ ದಾಳಿಗೆ ಒಳಗಾಗಿದ್ದ ಮೈಸೂರು ಜಿಲ್ಲೆಯ ಟಿ.ನರಸೀಪುರ ಸಮೀಪದ ಸಾಕೆಬ್ಬೆಹುಂಡಿ ನಿವಾಸಿ, 22 ವರ್ಷದ ಮೇಘನಾ ಕೊನೆಯುಸಿರೆಳೆದಿದ್ದಾರೆ. ಗುರುವಾರ ತನ್ನ ನಿವಾಸದ ಬಳಿ ವಿಶ್ರಾಂತಿ ಪಡೆಯಲು ತೆರಳಿದ್ದ ಮೇಘನಾ ಮೇಲೆ ಚಿರತೆ ದಾಳಿ ನಡೆಸಿತ್ತು. ಮುಖ ಮತ್ತು ಕುತ್ತಿಗೆ ಭಾಗಕ್ಕೆ ಗಾಯ ಮಾಡಿ ಪರಾರಿಯಾಗಿತ್ತು. ಈಗ ಯುವತಿ ಸಾವಿಗೀಡಾಗಿರುವ ಘಟನೆಯಿಂದ ಗ್ರಾಮದ ಜನತೆ ಆತಂಕಗೊಂಡಿದ್ದಾರೆ.

ಗ್ರಾಮದ ನಿವಾಸಿ ರಮೇಶ್ ನಾಯಕ ಅವರು ಊರಿನ ಹೊರಗೆ ಅಂದರೆ, ಗ್ರಾಮದೇವತೆ ದೇವಸ್ಥಾನದ ಬಳಿ ಮನೆ ಮಾಡಿಕೊಂಡಿದ್ದರು. ಗುರುವಾರ ಸಂಜೆ 6.30ರ ವೇಳೆ ಗ್ರಾಮಕ್ಕೆ ಬಂದಿದ್ದ ಯುವತಿ ಮೇಲೆ ಚಿರತೆ ದಾಳಿ ಮಾಡಿತ್ತು. ಮೇಘನಾರನ್ನು ತಿ.ನರಸೀಪುರ ಪಟ್ಟಣ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸಾವಿಗೀಡಾಗಿದ್ದಾರೆ. ಶಾಸಕ ಎಂ.ಅಶ್ವಿನ್ ಕುಮಾರ್ ಆಸ್ಪತ್ರೆಗೆ ಆಗಮಿಸಿ ಪೋಷಕರಿಗ ಸಾಂತ್ವನ ಹೇಳಿದ್ದಾರೆ. ಗ್ರಾಮಸ್ಥರು ಅರಣ್ಯ ಇಲಾಖೆಯ ಸಿಬ್ಬಂದಿ ವಿರುದ್ಧ ಪ್ರತಿಭಟನೆ ನಡೆಸಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...