Homeಮುಖಪುಟವಾಟ್ಸಾಪ್ ಹಿಂದಿಕ್ಕಿ ನಂ.1 ಸ್ಥಾನಕ್ಕೇರಿದ ಸಿಗ್ನಲ್: ಭಾರತ ಸೇರಿ 7 ದೇಶಗಳಲ್ಲಿ ಸಿಗ್ನಲ್ ಪಾರುಪತ್ಯ ಶುರು

ವಾಟ್ಸಾಪ್ ಹಿಂದಿಕ್ಕಿ ನಂ.1 ಸ್ಥಾನಕ್ಕೇರಿದ ಸಿಗ್ನಲ್: ಭಾರತ ಸೇರಿ 7 ದೇಶಗಳಲ್ಲಿ ಸಿಗ್ನಲ್ ಪಾರುಪತ್ಯ ಶುರು

ಕೇವಲ ಮೂರು ದಿನಗಳ ಅವಧಿಯಲ್ಲಿ ಹೆಚ್ಚು ಸುರಕ್ಷಿತ ಎಂದು ಹೇಳಲಾದ ಸಿಗ್ನಲ್‌ ಆಪ್‌, ಅತಿ ಹೆಚ್ಚು ಡೌನ್‌ಲೋಡ್‌ ಆಗುವ ಮೂಲಕ ಉಚಿತ ಮೆಸೇಜಿಂಗ್‌ ಆಪ್‌ಗಳ ಪಟ್ಟಿಯಲ್ಲಿ ವಾಟ್ಸಾಪ್‌‌ ಅನ್ನು ಎರಡನೆಯ ಸ್ಥಾನಕ್ಕೆ ತಳ್ಳಿದೆ.

- Advertisement -
- Advertisement -

ಎರಡು ವರ್ಷಗಳ ಹಿಂದೆ 40 ಕೋಟಿ ಬಳಕೆದಾರರನ್ನು ಹೊಂದಿದ್ದ ವಾಟ್ಸಾಪ್ ಕಳೆದ ವರ್ಷ ಡಿಸೆಂಬರ್‌ ಅಂತ್ಯದ ಹೊತ್ತಿಗೆ 6 ಕೋಟಿ ಬಳಕೆದಾರರನ್ನು ಕಳೆದುಕೊಂಡಿತ್ತು. ಆದರೆ ಈಗ ಬಳಕೆದಾರರ ಸಂದೇಶಗಳನ್ನು ಓದುತ್ತೇವೆ ಮತ್ತು ಫೇಸ್‌ಬುಕ್ ಸೇರಿದಂತೆ ಹಲವು ಕಂಪನಿಗಳಿಗೆ ಡೇಟಾ ಮಾರುತ್ತೇವೆ ಎಂದು ಘೋಷಿಸಿದ ಕೂಡಲೇ ಜನ ವಾಟ್ಸಾಪ್ ತೊರೆದು ಸಿಗ್ನಲ್ ಆಪ್ ಸೇರುತ್ತಿದ್ದಾರೆ. ಹಾಗಾಗಿ ಭಾರತ ಸೇರಿದಂತೆ ಆರು ರಾಷ್ಟ್ರಗಳಲ್ಲಿ ಅತಿ ಹೆಚ್ಚು ಡೌನ್‌ಲೋಡ್‌ ಆಪ್‌ಗಳ ಪಟ್ಟಿಯಲ್ಲಿ ಸಿಗ್ನಲ್ ನಂಬರ್‍ ಒನ್ ಸ್ಥಾನಕ್ಕೇರಿದೆ.

ಕಳೆದವಾರ ವಾಟ್ಸಾಪ್‌ ತನ್ನ ಖಾಸಗಿ ನಿಯಮಗಳನ್ನು ಬದಲಿಸುತ್ತಿರುವ ಹೇಳಿಕೆ ನೀಡಿದ ಬಳಿಕ ಕೇವಲ ಮೂರು ದಿನಗಳ ಅವಧಿಯಲ್ಲಿ ಹೆಚ್ಚು ಸುರಕ್ಷಿತ ಎಂದು ಹೇಳಲಾದ ಸಿಗ್ನಲ್‌ ಆಪ್‌ ಜನಪ್ರಿಯವಾಗಿದ್ದಷ್ಟೇ ಅಲ್ಲ, ಅತಿ ಹೆಚ್ಚು ಡೌನ್‌ಲೋಡ್‌ ಆಗುವ ಮೂಲಕ ಉಚಿತ ಮೆಸೇಜಿಂಗ್‌ ಆಪ್‌ಗಳ ಪಟ್ಟಿಯಲ್ಲಿ ವಾಟ್ಸ್‌ ಆಪ್‌ ಅನ್ನು ಎರಡನೆಯ ಸ್ಥಾನಕ್ಕೆ ತಳ್ಳಿದೆ.

ಭಾರತ ಅಷ್ಟೇ ಅಲ್ಲದೆ ಜರ್ಮನಿ, ಫ್ರಾನ್ಸ್, ಆಸ್ಟ್ರಿಯಾ, ಫಿನ್‌ಲ್ಯಾಂಡ್‌, ಹಾಂಕಾಂಗ್‌ ಮತ್ತು ಸ್ವಿಟ್ಜರ್‌ಲ್ಯಾಂಡ್‌ಗಳಲ್ಲೂ ಇದೇ ಬೆಳವಣಿಗೆ. ಸಿಗ್ನಲ್‌ ತನ್ನ ಅಧಿಕೃತ ಟ್ವಿಟರ್‌ ಹ್ಯಾಂಡಲ್‌ನಲ್ಲಿ ”ನೋಡು ನೀನೇನು ಮಾಡಿಬಿಟ್ಟೆ” ಎಂದು ಟ್ವೀಟ್ ಮಾಡುವ ಮೂಲಕ ವಾಟ್ಸಾಪ್‌ನ ಕಾಲೆಳೆದಿದೆ.

ಅತಿ ದೊಡ್ಡ ಬಳಕೆದಾರರ ಮಾರುಕಟ್ಟೆಯನ್ನು ಹೊಂದಿದ್ದ ವಾಟ್ಸಾಪ್‌ ಯಾವುದೇ ಹೊಸ ಫೀಚರ್‌ ಪರಿಚಯಿಸುವ ಉದ್ದೇಶವಿದ್ದರೆ ಅದನ್ನು ಮೊದಲು ಮಾಡುತ್ತಿದುದೇ ಭಾರತೀಯ ಮಾರುಕಟ್ಟೆಯಲ್ಲಿ. ಏಕೆಂದರೆ ಅತಿ ದೊಡ್ಡ ಸಂಖ್ಯೆಯ ಬಳಕೆದಾರರು ಇಲ್ಲಿದ್ದರು.

ವಾಟ್ಸಾಪ್‌ನ ಡಾರ್ಕ್‌ಮೋಡ್‌ ಫೀಚರ್‌ ಆಗಲಿ, ಪೇಮೆಂಟ್ ಆಪ್ಶನ್‌ ಆಗಲಿ ಎಲ್ಲವೂ ಪ್ರಯೋಗವಾಗಿದ್ದು ಮೊದಲ ಭಾರತದಲ್ಲಿ. ಸುಲಭವಾಗಿ ಸೆಳೆಯಬಹುದಾದ ಮಾರುಕಟ್ಟೆ ಎಂದು ಭಾವಿಸಿದ್ದ ವಾಟ್ಸಾಪ್‌ ತನ್ನೆಲ್ಲಾ ಮಾರುಕಟ್ಟೆಯ ತಂತ್ರಗಳನ್ನು ಸಲೀಸಾಗಿ ಇಲ್ಲಿ ಬಳಸುತ್ತಿತ್ತು.

ಫೇಸ್‌ಬುಕ್‌, ವಾಟ್ಸ್‌ಆಪ್‌ ಮತ್ತು ಇನ್‌ಸ್ಟಾಗ್ರಾಮ್‌ ಮೂಲಕ ಅತಿದೊಡ್ಡ ಬಳಕೆದಾರರ ಜಾಲವನ್ನು ಹೊಂದಿರುವ ಧಾಷ್ಟ್ಯದಿಂದ ಕಳೆದ ಬಳಕೆದಾರರ ಮಾಹಿತಿ ಬಳಸಿಕೊಳ್ಳುವ ಹೊಸ ಖಾಸಗಿನಿಯಮವನ್ನು ಫೆಬ್ರವರಿ 8 ಒಳಗೆ ಒಪ್ಪಿಕೊಳ್ಳಿ ಇಲ್ಲವೇ ನಿಮ್ಮ ವಾಟ್ಸಾಪ್ ಅಕೌಂಟ್‌ ಕಳೆದುಕೊಳ್ಳಿ ಎಂದು ಹೇಳಿತ್ತು.

ವಾಟ್ಸ್‌ಆಪ್‌ನ ಈ ನಿಯಮದಿಂದ ಆಕ್ರೋಶಗೊಂಡ ಬಳಕೆದಾರರು ಪರ್ಯಾಯ ಆಪ್‌ ಹುಡುಕಾಟದಲ್ಲಿ ಗುರುತಿಸಿದ್ದು ಸಿಗ್ನಲ್‌ ಅನ್ನು.

ಸಿಗ್ನಲ್‌ ಸಂಪೂರ್ಣ ಮಾಹಿತಿ ಸುರಕ್ಷತೆಯ ವಾಗ್ದಾನ ನೀಡುತ್ತದೆ. ಬಳಕೆಯಲ್ಲೂ ಅತ್ಯಂತ ಸರಳ. ಇದೇ ಕಾರಣಕ್ಕೆ ಖಾಸಗಿತನದ ಬಗ್ಗೆ ಅಪಾರ ಕಾಳಜಿ ಇರುವ ಎಡ್ವರ್ಡ್‌ ಸ್ನೋ ಡೆನ್‌ ಐದು ವರ್ಷಗಳ ಹಿಂದೆಯೇ ನಾನು ಸಿಗ್ನಲ್‌ ಆಪ್‌ ಬಳಸುತ್ತೇನೆ ಎಂದು ಹೇಳಿಕೊಂಡಿದ್ದರು.

ಇತ್ತೀಚೆಗೆ, ಟೆಸ್ಲಾ, ಸ್ಪೇಸ್‌ಎಕ್ಸ್‌ ಮಾಲಿಕ ಎಲಾನ್‌ ಮಸ್ಕ್‌ ಕೂಡ ‘ ಸಿಗ್ನಲ್‌ ಬಳಸಿ’ ಎಂದು ಟ್ವೀಟ್‌ ಮಾಡಿ ಸಲಹೆ ನೀಡಿದ್ದರು.

ಕಳೆದ ವಾರ ಫೋರ್ಬ್ಸ್‌ ಪಟ್ಟಿದಂತೆ ವಾಟ್ಸ್‌ಆಪ್‌ ತನ್ನ ಬಳಕೆದಾರರಿಂದ ಎರಡು ರೀತಿಯಲ್ಲಿ ಮಾಹಿತಿ ಸಂಗ್ರಹಿಸುತ್ತದೆ. ಒಂದು ಆಪ್‌ ಚಟುವಟಿಕೆಗಳನ್ನು ಮತ್ತು ಆಪ್‌ನ ಒಟ್ಟು ನಾಲಿಟಿಕ್ಸ್‌ ಅನ್ನು. ಅಂದರೆ ನಿರಂತರವಾಗಿ ಬಳಕೆದಾರರ ಗೂಢಚಾರಿಕೆ ಮಾಡುವುದಲ್ಲದೆ, ಅದರ ಅನಾಲಿಟಿಕ್ಸ್‌ ಸಂಗ್ರಹಿಸುವುದು (ಇದು ನೀವು ಹೆಚ್ಚು ಭೇಟಿ ನೀಡುವ, ಹೆಚ್ಚು ಮಾತನಾಡುವ, ಹೆಚ್ಚು ಖರೀದಿಸುವ ವಿವರಗಳನ್ನು ಕಲೆಹಾಕುವ ವಿಧಾನ). ಅಂದರೆ ನಿಮ್ಮ ಖರೀದಿ, ನೀವಿರುವ/ಓಡಾಡುವ ಸ್ಥಳಗಳು, ಕಾಂಟ್ಯಾಕ್ಟ್‌ಗಳು, ಬಳಕೆದಾರರ ಎಲ್ಲ ಮಾಹಿತಿ, ಯೂಸರ್‌ ಐಡಿಗಳು, ಡಿವೈಸ್‌ ಮಾಹಿತಿ, ಬಳಕೆಯ ಪ್ರಮಾಣ, ಹಣಕಾಸಿನ ಮಾಹಿತಿ.

ಈ ವಿಷಯ ಬಹಿರಂಗಗೊಳ್ಳುತ್ತಿದ್ದಂತೆ ಭಾರತೀಯರು, ಮಾಹಿತಿ ಸುರಕ್ಷತೆ, ಖಾಸಗಿತನಕ್ಕೆ ಹೆಚ್ಚು ಆದ್ಯತೆ ನೀಡುವ ಸಿಗ್ನಲ್‌ ಆಪ್‌ನ ಕಡೆ ವಾಲಿದ್ದಾರೆ.

ಎಲಾನ್‌ ಮಸ್ಕ್‌ ಟ್ವೀಟ್‌ ಬಳಿಕ ಶೇರು ಮಾರುಕಟ್ಟೆಯಲ್ಲೂ ಹೆಚ್ಚಿನ ಮೌಲ್ಯ ಗಳಿಸಿದೆ. ಕಳೆದ ವರ್ಷಾಂತ್ಯದವರೆಗೆ 1 ಡಾಲರ್‌ ಕೂಡ ದಾಟದ ಸಿಗ್ನಲ್‌ ಬೆಲೆ ಈಗ 7.19 ಡಾಲರ್‌! ಜ.8ರಂದು 10 ಡಾಲರ್‌ವರೆಗೆ ಇದರ ಶೇರು ಮೌಲ್ಯ ಹೆಚ್ಚಿತ್ತು. ವಾಟ್ಸ್‌ ಆಪ್‌ ಸಿಗ್ನಲ್‌ ಅತಿ ದೊಡ್ಡ ಹೊಡೆತ ನೀಡುತ್ತಿರುವ ಲಕ್ಷಣ ಇದು ಎಂದು ಮಾರುಕಟ್ಟೆ ತಜ್ಞರು ವಿಶ್ಲೇಷಿಸುತ್ತಿದ್ದಾರೆ.

ಕೃಪೆ: ಟೆಕ್‌ಕನ್ನಡ


ಇದನ್ನೂ ಓದಿ: ವಾಟ್ಸಾಪ್‌ಗೆ ಗುಡ್‌ಬೈ ಹೇಳಿ, ಸಿಗ್ನಲ್‌ಗೆ ಹೆಲೋ ಹೇಳಿ: ಏನಿದು ಸಿಗ್ನಲ್ ಆಪ್?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...