Homeಮುಖಪುಟವಾಟ್ಸಾಪ್ ಹಿಂದಿಕ್ಕಿ ನಂ.1 ಸ್ಥಾನಕ್ಕೇರಿದ ಸಿಗ್ನಲ್: ಭಾರತ ಸೇರಿ 7 ದೇಶಗಳಲ್ಲಿ ಸಿಗ್ನಲ್ ಪಾರುಪತ್ಯ ಶುರು

ವಾಟ್ಸಾಪ್ ಹಿಂದಿಕ್ಕಿ ನಂ.1 ಸ್ಥಾನಕ್ಕೇರಿದ ಸಿಗ್ನಲ್: ಭಾರತ ಸೇರಿ 7 ದೇಶಗಳಲ್ಲಿ ಸಿಗ್ನಲ್ ಪಾರುಪತ್ಯ ಶುರು

ಕೇವಲ ಮೂರು ದಿನಗಳ ಅವಧಿಯಲ್ಲಿ ಹೆಚ್ಚು ಸುರಕ್ಷಿತ ಎಂದು ಹೇಳಲಾದ ಸಿಗ್ನಲ್‌ ಆಪ್‌, ಅತಿ ಹೆಚ್ಚು ಡೌನ್‌ಲೋಡ್‌ ಆಗುವ ಮೂಲಕ ಉಚಿತ ಮೆಸೇಜಿಂಗ್‌ ಆಪ್‌ಗಳ ಪಟ್ಟಿಯಲ್ಲಿ ವಾಟ್ಸಾಪ್‌‌ ಅನ್ನು ಎರಡನೆಯ ಸ್ಥಾನಕ್ಕೆ ತಳ್ಳಿದೆ.

- Advertisement -
- Advertisement -

ಎರಡು ವರ್ಷಗಳ ಹಿಂದೆ 40 ಕೋಟಿ ಬಳಕೆದಾರರನ್ನು ಹೊಂದಿದ್ದ ವಾಟ್ಸಾಪ್ ಕಳೆದ ವರ್ಷ ಡಿಸೆಂಬರ್‌ ಅಂತ್ಯದ ಹೊತ್ತಿಗೆ 6 ಕೋಟಿ ಬಳಕೆದಾರರನ್ನು ಕಳೆದುಕೊಂಡಿತ್ತು. ಆದರೆ ಈಗ ಬಳಕೆದಾರರ ಸಂದೇಶಗಳನ್ನು ಓದುತ್ತೇವೆ ಮತ್ತು ಫೇಸ್‌ಬುಕ್ ಸೇರಿದಂತೆ ಹಲವು ಕಂಪನಿಗಳಿಗೆ ಡೇಟಾ ಮಾರುತ್ತೇವೆ ಎಂದು ಘೋಷಿಸಿದ ಕೂಡಲೇ ಜನ ವಾಟ್ಸಾಪ್ ತೊರೆದು ಸಿಗ್ನಲ್ ಆಪ್ ಸೇರುತ್ತಿದ್ದಾರೆ. ಹಾಗಾಗಿ ಭಾರತ ಸೇರಿದಂತೆ ಆರು ರಾಷ್ಟ್ರಗಳಲ್ಲಿ ಅತಿ ಹೆಚ್ಚು ಡೌನ್‌ಲೋಡ್‌ ಆಪ್‌ಗಳ ಪಟ್ಟಿಯಲ್ಲಿ ಸಿಗ್ನಲ್ ನಂಬರ್‍ ಒನ್ ಸ್ಥಾನಕ್ಕೇರಿದೆ.

ಕಳೆದವಾರ ವಾಟ್ಸಾಪ್‌ ತನ್ನ ಖಾಸಗಿ ನಿಯಮಗಳನ್ನು ಬದಲಿಸುತ್ತಿರುವ ಹೇಳಿಕೆ ನೀಡಿದ ಬಳಿಕ ಕೇವಲ ಮೂರು ದಿನಗಳ ಅವಧಿಯಲ್ಲಿ ಹೆಚ್ಚು ಸುರಕ್ಷಿತ ಎಂದು ಹೇಳಲಾದ ಸಿಗ್ನಲ್‌ ಆಪ್‌ ಜನಪ್ರಿಯವಾಗಿದ್ದಷ್ಟೇ ಅಲ್ಲ, ಅತಿ ಹೆಚ್ಚು ಡೌನ್‌ಲೋಡ್‌ ಆಗುವ ಮೂಲಕ ಉಚಿತ ಮೆಸೇಜಿಂಗ್‌ ಆಪ್‌ಗಳ ಪಟ್ಟಿಯಲ್ಲಿ ವಾಟ್ಸ್‌ ಆಪ್‌ ಅನ್ನು ಎರಡನೆಯ ಸ್ಥಾನಕ್ಕೆ ತಳ್ಳಿದೆ.

ಭಾರತ ಅಷ್ಟೇ ಅಲ್ಲದೆ ಜರ್ಮನಿ, ಫ್ರಾನ್ಸ್, ಆಸ್ಟ್ರಿಯಾ, ಫಿನ್‌ಲ್ಯಾಂಡ್‌, ಹಾಂಕಾಂಗ್‌ ಮತ್ತು ಸ್ವಿಟ್ಜರ್‌ಲ್ಯಾಂಡ್‌ಗಳಲ್ಲೂ ಇದೇ ಬೆಳವಣಿಗೆ. ಸಿಗ್ನಲ್‌ ತನ್ನ ಅಧಿಕೃತ ಟ್ವಿಟರ್‌ ಹ್ಯಾಂಡಲ್‌ನಲ್ಲಿ ”ನೋಡು ನೀನೇನು ಮಾಡಿಬಿಟ್ಟೆ” ಎಂದು ಟ್ವೀಟ್ ಮಾಡುವ ಮೂಲಕ ವಾಟ್ಸಾಪ್‌ನ ಕಾಲೆಳೆದಿದೆ.

ಅತಿ ದೊಡ್ಡ ಬಳಕೆದಾರರ ಮಾರುಕಟ್ಟೆಯನ್ನು ಹೊಂದಿದ್ದ ವಾಟ್ಸಾಪ್‌ ಯಾವುದೇ ಹೊಸ ಫೀಚರ್‌ ಪರಿಚಯಿಸುವ ಉದ್ದೇಶವಿದ್ದರೆ ಅದನ್ನು ಮೊದಲು ಮಾಡುತ್ತಿದುದೇ ಭಾರತೀಯ ಮಾರುಕಟ್ಟೆಯಲ್ಲಿ. ಏಕೆಂದರೆ ಅತಿ ದೊಡ್ಡ ಸಂಖ್ಯೆಯ ಬಳಕೆದಾರರು ಇಲ್ಲಿದ್ದರು.

ವಾಟ್ಸಾಪ್‌ನ ಡಾರ್ಕ್‌ಮೋಡ್‌ ಫೀಚರ್‌ ಆಗಲಿ, ಪೇಮೆಂಟ್ ಆಪ್ಶನ್‌ ಆಗಲಿ ಎಲ್ಲವೂ ಪ್ರಯೋಗವಾಗಿದ್ದು ಮೊದಲ ಭಾರತದಲ್ಲಿ. ಸುಲಭವಾಗಿ ಸೆಳೆಯಬಹುದಾದ ಮಾರುಕಟ್ಟೆ ಎಂದು ಭಾವಿಸಿದ್ದ ವಾಟ್ಸಾಪ್‌ ತನ್ನೆಲ್ಲಾ ಮಾರುಕಟ್ಟೆಯ ತಂತ್ರಗಳನ್ನು ಸಲೀಸಾಗಿ ಇಲ್ಲಿ ಬಳಸುತ್ತಿತ್ತು.

ಫೇಸ್‌ಬುಕ್‌, ವಾಟ್ಸ್‌ಆಪ್‌ ಮತ್ತು ಇನ್‌ಸ್ಟಾಗ್ರಾಮ್‌ ಮೂಲಕ ಅತಿದೊಡ್ಡ ಬಳಕೆದಾರರ ಜಾಲವನ್ನು ಹೊಂದಿರುವ ಧಾಷ್ಟ್ಯದಿಂದ ಕಳೆದ ಬಳಕೆದಾರರ ಮಾಹಿತಿ ಬಳಸಿಕೊಳ್ಳುವ ಹೊಸ ಖಾಸಗಿನಿಯಮವನ್ನು ಫೆಬ್ರವರಿ 8 ಒಳಗೆ ಒಪ್ಪಿಕೊಳ್ಳಿ ಇಲ್ಲವೇ ನಿಮ್ಮ ವಾಟ್ಸಾಪ್ ಅಕೌಂಟ್‌ ಕಳೆದುಕೊಳ್ಳಿ ಎಂದು ಹೇಳಿತ್ತು.

ವಾಟ್ಸ್‌ಆಪ್‌ನ ಈ ನಿಯಮದಿಂದ ಆಕ್ರೋಶಗೊಂಡ ಬಳಕೆದಾರರು ಪರ್ಯಾಯ ಆಪ್‌ ಹುಡುಕಾಟದಲ್ಲಿ ಗುರುತಿಸಿದ್ದು ಸಿಗ್ನಲ್‌ ಅನ್ನು.

ಸಿಗ್ನಲ್‌ ಸಂಪೂರ್ಣ ಮಾಹಿತಿ ಸುರಕ್ಷತೆಯ ವಾಗ್ದಾನ ನೀಡುತ್ತದೆ. ಬಳಕೆಯಲ್ಲೂ ಅತ್ಯಂತ ಸರಳ. ಇದೇ ಕಾರಣಕ್ಕೆ ಖಾಸಗಿತನದ ಬಗ್ಗೆ ಅಪಾರ ಕಾಳಜಿ ಇರುವ ಎಡ್ವರ್ಡ್‌ ಸ್ನೋ ಡೆನ್‌ ಐದು ವರ್ಷಗಳ ಹಿಂದೆಯೇ ನಾನು ಸಿಗ್ನಲ್‌ ಆಪ್‌ ಬಳಸುತ್ತೇನೆ ಎಂದು ಹೇಳಿಕೊಂಡಿದ್ದರು.

ಇತ್ತೀಚೆಗೆ, ಟೆಸ್ಲಾ, ಸ್ಪೇಸ್‌ಎಕ್ಸ್‌ ಮಾಲಿಕ ಎಲಾನ್‌ ಮಸ್ಕ್‌ ಕೂಡ ‘ ಸಿಗ್ನಲ್‌ ಬಳಸಿ’ ಎಂದು ಟ್ವೀಟ್‌ ಮಾಡಿ ಸಲಹೆ ನೀಡಿದ್ದರು.

ಕಳೆದ ವಾರ ಫೋರ್ಬ್ಸ್‌ ಪಟ್ಟಿದಂತೆ ವಾಟ್ಸ್‌ಆಪ್‌ ತನ್ನ ಬಳಕೆದಾರರಿಂದ ಎರಡು ರೀತಿಯಲ್ಲಿ ಮಾಹಿತಿ ಸಂಗ್ರಹಿಸುತ್ತದೆ. ಒಂದು ಆಪ್‌ ಚಟುವಟಿಕೆಗಳನ್ನು ಮತ್ತು ಆಪ್‌ನ ಒಟ್ಟು ನಾಲಿಟಿಕ್ಸ್‌ ಅನ್ನು. ಅಂದರೆ ನಿರಂತರವಾಗಿ ಬಳಕೆದಾರರ ಗೂಢಚಾರಿಕೆ ಮಾಡುವುದಲ್ಲದೆ, ಅದರ ಅನಾಲಿಟಿಕ್ಸ್‌ ಸಂಗ್ರಹಿಸುವುದು (ಇದು ನೀವು ಹೆಚ್ಚು ಭೇಟಿ ನೀಡುವ, ಹೆಚ್ಚು ಮಾತನಾಡುವ, ಹೆಚ್ಚು ಖರೀದಿಸುವ ವಿವರಗಳನ್ನು ಕಲೆಹಾಕುವ ವಿಧಾನ). ಅಂದರೆ ನಿಮ್ಮ ಖರೀದಿ, ನೀವಿರುವ/ಓಡಾಡುವ ಸ್ಥಳಗಳು, ಕಾಂಟ್ಯಾಕ್ಟ್‌ಗಳು, ಬಳಕೆದಾರರ ಎಲ್ಲ ಮಾಹಿತಿ, ಯೂಸರ್‌ ಐಡಿಗಳು, ಡಿವೈಸ್‌ ಮಾಹಿತಿ, ಬಳಕೆಯ ಪ್ರಮಾಣ, ಹಣಕಾಸಿನ ಮಾಹಿತಿ.

ಈ ವಿಷಯ ಬಹಿರಂಗಗೊಳ್ಳುತ್ತಿದ್ದಂತೆ ಭಾರತೀಯರು, ಮಾಹಿತಿ ಸುರಕ್ಷತೆ, ಖಾಸಗಿತನಕ್ಕೆ ಹೆಚ್ಚು ಆದ್ಯತೆ ನೀಡುವ ಸಿಗ್ನಲ್‌ ಆಪ್‌ನ ಕಡೆ ವಾಲಿದ್ದಾರೆ.

ಎಲಾನ್‌ ಮಸ್ಕ್‌ ಟ್ವೀಟ್‌ ಬಳಿಕ ಶೇರು ಮಾರುಕಟ್ಟೆಯಲ್ಲೂ ಹೆಚ್ಚಿನ ಮೌಲ್ಯ ಗಳಿಸಿದೆ. ಕಳೆದ ವರ್ಷಾಂತ್ಯದವರೆಗೆ 1 ಡಾಲರ್‌ ಕೂಡ ದಾಟದ ಸಿಗ್ನಲ್‌ ಬೆಲೆ ಈಗ 7.19 ಡಾಲರ್‌! ಜ.8ರಂದು 10 ಡಾಲರ್‌ವರೆಗೆ ಇದರ ಶೇರು ಮೌಲ್ಯ ಹೆಚ್ಚಿತ್ತು. ವಾಟ್ಸ್‌ ಆಪ್‌ ಸಿಗ್ನಲ್‌ ಅತಿ ದೊಡ್ಡ ಹೊಡೆತ ನೀಡುತ್ತಿರುವ ಲಕ್ಷಣ ಇದು ಎಂದು ಮಾರುಕಟ್ಟೆ ತಜ್ಞರು ವಿಶ್ಲೇಷಿಸುತ್ತಿದ್ದಾರೆ.

ಕೃಪೆ: ಟೆಕ್‌ಕನ್ನಡ


ಇದನ್ನೂ ಓದಿ: ವಾಟ್ಸಾಪ್‌ಗೆ ಗುಡ್‌ಬೈ ಹೇಳಿ, ಸಿಗ್ನಲ್‌ಗೆ ಹೆಲೋ ಹೇಳಿ: ಏನಿದು ಸಿಗ್ನಲ್ ಆಪ್?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...