Homeಮುಖಪುಟವಾಟ್ಸಾಪ್ ಹಿಂದಿಕ್ಕಿ ನಂ.1 ಸ್ಥಾನಕ್ಕೇರಿದ ಸಿಗ್ನಲ್: ಭಾರತ ಸೇರಿ 7 ದೇಶಗಳಲ್ಲಿ ಸಿಗ್ನಲ್ ಪಾರುಪತ್ಯ ಶುರು

ವಾಟ್ಸಾಪ್ ಹಿಂದಿಕ್ಕಿ ನಂ.1 ಸ್ಥಾನಕ್ಕೇರಿದ ಸಿಗ್ನಲ್: ಭಾರತ ಸೇರಿ 7 ದೇಶಗಳಲ್ಲಿ ಸಿಗ್ನಲ್ ಪಾರುಪತ್ಯ ಶುರು

ಕೇವಲ ಮೂರು ದಿನಗಳ ಅವಧಿಯಲ್ಲಿ ಹೆಚ್ಚು ಸುರಕ್ಷಿತ ಎಂದು ಹೇಳಲಾದ ಸಿಗ್ನಲ್‌ ಆಪ್‌, ಅತಿ ಹೆಚ್ಚು ಡೌನ್‌ಲೋಡ್‌ ಆಗುವ ಮೂಲಕ ಉಚಿತ ಮೆಸೇಜಿಂಗ್‌ ಆಪ್‌ಗಳ ಪಟ್ಟಿಯಲ್ಲಿ ವಾಟ್ಸಾಪ್‌‌ ಅನ್ನು ಎರಡನೆಯ ಸ್ಥಾನಕ್ಕೆ ತಳ್ಳಿದೆ.

- Advertisement -
- Advertisement -

ಎರಡು ವರ್ಷಗಳ ಹಿಂದೆ 40 ಕೋಟಿ ಬಳಕೆದಾರರನ್ನು ಹೊಂದಿದ್ದ ವಾಟ್ಸಾಪ್ ಕಳೆದ ವರ್ಷ ಡಿಸೆಂಬರ್‌ ಅಂತ್ಯದ ಹೊತ್ತಿಗೆ 6 ಕೋಟಿ ಬಳಕೆದಾರರನ್ನು ಕಳೆದುಕೊಂಡಿತ್ತು. ಆದರೆ ಈಗ ಬಳಕೆದಾರರ ಸಂದೇಶಗಳನ್ನು ಓದುತ್ತೇವೆ ಮತ್ತು ಫೇಸ್‌ಬುಕ್ ಸೇರಿದಂತೆ ಹಲವು ಕಂಪನಿಗಳಿಗೆ ಡೇಟಾ ಮಾರುತ್ತೇವೆ ಎಂದು ಘೋಷಿಸಿದ ಕೂಡಲೇ ಜನ ವಾಟ್ಸಾಪ್ ತೊರೆದು ಸಿಗ್ನಲ್ ಆಪ್ ಸೇರುತ್ತಿದ್ದಾರೆ. ಹಾಗಾಗಿ ಭಾರತ ಸೇರಿದಂತೆ ಆರು ರಾಷ್ಟ್ರಗಳಲ್ಲಿ ಅತಿ ಹೆಚ್ಚು ಡೌನ್‌ಲೋಡ್‌ ಆಪ್‌ಗಳ ಪಟ್ಟಿಯಲ್ಲಿ ಸಿಗ್ನಲ್ ನಂಬರ್‍ ಒನ್ ಸ್ಥಾನಕ್ಕೇರಿದೆ.

ಕಳೆದವಾರ ವಾಟ್ಸಾಪ್‌ ತನ್ನ ಖಾಸಗಿ ನಿಯಮಗಳನ್ನು ಬದಲಿಸುತ್ತಿರುವ ಹೇಳಿಕೆ ನೀಡಿದ ಬಳಿಕ ಕೇವಲ ಮೂರು ದಿನಗಳ ಅವಧಿಯಲ್ಲಿ ಹೆಚ್ಚು ಸುರಕ್ಷಿತ ಎಂದು ಹೇಳಲಾದ ಸಿಗ್ನಲ್‌ ಆಪ್‌ ಜನಪ್ರಿಯವಾಗಿದ್ದಷ್ಟೇ ಅಲ್ಲ, ಅತಿ ಹೆಚ್ಚು ಡೌನ್‌ಲೋಡ್‌ ಆಗುವ ಮೂಲಕ ಉಚಿತ ಮೆಸೇಜಿಂಗ್‌ ಆಪ್‌ಗಳ ಪಟ್ಟಿಯಲ್ಲಿ ವಾಟ್ಸ್‌ ಆಪ್‌ ಅನ್ನು ಎರಡನೆಯ ಸ್ಥಾನಕ್ಕೆ ತಳ್ಳಿದೆ.

ಭಾರತ ಅಷ್ಟೇ ಅಲ್ಲದೆ ಜರ್ಮನಿ, ಫ್ರಾನ್ಸ್, ಆಸ್ಟ್ರಿಯಾ, ಫಿನ್‌ಲ್ಯಾಂಡ್‌, ಹಾಂಕಾಂಗ್‌ ಮತ್ತು ಸ್ವಿಟ್ಜರ್‌ಲ್ಯಾಂಡ್‌ಗಳಲ್ಲೂ ಇದೇ ಬೆಳವಣಿಗೆ. ಸಿಗ್ನಲ್‌ ತನ್ನ ಅಧಿಕೃತ ಟ್ವಿಟರ್‌ ಹ್ಯಾಂಡಲ್‌ನಲ್ಲಿ ”ನೋಡು ನೀನೇನು ಮಾಡಿಬಿಟ್ಟೆ” ಎಂದು ಟ್ವೀಟ್ ಮಾಡುವ ಮೂಲಕ ವಾಟ್ಸಾಪ್‌ನ ಕಾಲೆಳೆದಿದೆ.

ಅತಿ ದೊಡ್ಡ ಬಳಕೆದಾರರ ಮಾರುಕಟ್ಟೆಯನ್ನು ಹೊಂದಿದ್ದ ವಾಟ್ಸಾಪ್‌ ಯಾವುದೇ ಹೊಸ ಫೀಚರ್‌ ಪರಿಚಯಿಸುವ ಉದ್ದೇಶವಿದ್ದರೆ ಅದನ್ನು ಮೊದಲು ಮಾಡುತ್ತಿದುದೇ ಭಾರತೀಯ ಮಾರುಕಟ್ಟೆಯಲ್ಲಿ. ಏಕೆಂದರೆ ಅತಿ ದೊಡ್ಡ ಸಂಖ್ಯೆಯ ಬಳಕೆದಾರರು ಇಲ್ಲಿದ್ದರು.

ವಾಟ್ಸಾಪ್‌ನ ಡಾರ್ಕ್‌ಮೋಡ್‌ ಫೀಚರ್‌ ಆಗಲಿ, ಪೇಮೆಂಟ್ ಆಪ್ಶನ್‌ ಆಗಲಿ ಎಲ್ಲವೂ ಪ್ರಯೋಗವಾಗಿದ್ದು ಮೊದಲ ಭಾರತದಲ್ಲಿ. ಸುಲಭವಾಗಿ ಸೆಳೆಯಬಹುದಾದ ಮಾರುಕಟ್ಟೆ ಎಂದು ಭಾವಿಸಿದ್ದ ವಾಟ್ಸಾಪ್‌ ತನ್ನೆಲ್ಲಾ ಮಾರುಕಟ್ಟೆಯ ತಂತ್ರಗಳನ್ನು ಸಲೀಸಾಗಿ ಇಲ್ಲಿ ಬಳಸುತ್ತಿತ್ತು.

ಫೇಸ್‌ಬುಕ್‌, ವಾಟ್ಸ್‌ಆಪ್‌ ಮತ್ತು ಇನ್‌ಸ್ಟಾಗ್ರಾಮ್‌ ಮೂಲಕ ಅತಿದೊಡ್ಡ ಬಳಕೆದಾರರ ಜಾಲವನ್ನು ಹೊಂದಿರುವ ಧಾಷ್ಟ್ಯದಿಂದ ಕಳೆದ ಬಳಕೆದಾರರ ಮಾಹಿತಿ ಬಳಸಿಕೊಳ್ಳುವ ಹೊಸ ಖಾಸಗಿನಿಯಮವನ್ನು ಫೆಬ್ರವರಿ 8 ಒಳಗೆ ಒಪ್ಪಿಕೊಳ್ಳಿ ಇಲ್ಲವೇ ನಿಮ್ಮ ವಾಟ್ಸಾಪ್ ಅಕೌಂಟ್‌ ಕಳೆದುಕೊಳ್ಳಿ ಎಂದು ಹೇಳಿತ್ತು.

ವಾಟ್ಸ್‌ಆಪ್‌ನ ಈ ನಿಯಮದಿಂದ ಆಕ್ರೋಶಗೊಂಡ ಬಳಕೆದಾರರು ಪರ್ಯಾಯ ಆಪ್‌ ಹುಡುಕಾಟದಲ್ಲಿ ಗುರುತಿಸಿದ್ದು ಸಿಗ್ನಲ್‌ ಅನ್ನು.

ಸಿಗ್ನಲ್‌ ಸಂಪೂರ್ಣ ಮಾಹಿತಿ ಸುರಕ್ಷತೆಯ ವಾಗ್ದಾನ ನೀಡುತ್ತದೆ. ಬಳಕೆಯಲ್ಲೂ ಅತ್ಯಂತ ಸರಳ. ಇದೇ ಕಾರಣಕ್ಕೆ ಖಾಸಗಿತನದ ಬಗ್ಗೆ ಅಪಾರ ಕಾಳಜಿ ಇರುವ ಎಡ್ವರ್ಡ್‌ ಸ್ನೋ ಡೆನ್‌ ಐದು ವರ್ಷಗಳ ಹಿಂದೆಯೇ ನಾನು ಸಿಗ್ನಲ್‌ ಆಪ್‌ ಬಳಸುತ್ತೇನೆ ಎಂದು ಹೇಳಿಕೊಂಡಿದ್ದರು.

ಇತ್ತೀಚೆಗೆ, ಟೆಸ್ಲಾ, ಸ್ಪೇಸ್‌ಎಕ್ಸ್‌ ಮಾಲಿಕ ಎಲಾನ್‌ ಮಸ್ಕ್‌ ಕೂಡ ‘ ಸಿಗ್ನಲ್‌ ಬಳಸಿ’ ಎಂದು ಟ್ವೀಟ್‌ ಮಾಡಿ ಸಲಹೆ ನೀಡಿದ್ದರು.

ಕಳೆದ ವಾರ ಫೋರ್ಬ್ಸ್‌ ಪಟ್ಟಿದಂತೆ ವಾಟ್ಸ್‌ಆಪ್‌ ತನ್ನ ಬಳಕೆದಾರರಿಂದ ಎರಡು ರೀತಿಯಲ್ಲಿ ಮಾಹಿತಿ ಸಂಗ್ರಹಿಸುತ್ತದೆ. ಒಂದು ಆಪ್‌ ಚಟುವಟಿಕೆಗಳನ್ನು ಮತ್ತು ಆಪ್‌ನ ಒಟ್ಟು ನಾಲಿಟಿಕ್ಸ್‌ ಅನ್ನು. ಅಂದರೆ ನಿರಂತರವಾಗಿ ಬಳಕೆದಾರರ ಗೂಢಚಾರಿಕೆ ಮಾಡುವುದಲ್ಲದೆ, ಅದರ ಅನಾಲಿಟಿಕ್ಸ್‌ ಸಂಗ್ರಹಿಸುವುದು (ಇದು ನೀವು ಹೆಚ್ಚು ಭೇಟಿ ನೀಡುವ, ಹೆಚ್ಚು ಮಾತನಾಡುವ, ಹೆಚ್ಚು ಖರೀದಿಸುವ ವಿವರಗಳನ್ನು ಕಲೆಹಾಕುವ ವಿಧಾನ). ಅಂದರೆ ನಿಮ್ಮ ಖರೀದಿ, ನೀವಿರುವ/ಓಡಾಡುವ ಸ್ಥಳಗಳು, ಕಾಂಟ್ಯಾಕ್ಟ್‌ಗಳು, ಬಳಕೆದಾರರ ಎಲ್ಲ ಮಾಹಿತಿ, ಯೂಸರ್‌ ಐಡಿಗಳು, ಡಿವೈಸ್‌ ಮಾಹಿತಿ, ಬಳಕೆಯ ಪ್ರಮಾಣ, ಹಣಕಾಸಿನ ಮಾಹಿತಿ.

ಈ ವಿಷಯ ಬಹಿರಂಗಗೊಳ್ಳುತ್ತಿದ್ದಂತೆ ಭಾರತೀಯರು, ಮಾಹಿತಿ ಸುರಕ್ಷತೆ, ಖಾಸಗಿತನಕ್ಕೆ ಹೆಚ್ಚು ಆದ್ಯತೆ ನೀಡುವ ಸಿಗ್ನಲ್‌ ಆಪ್‌ನ ಕಡೆ ವಾಲಿದ್ದಾರೆ.

ಎಲಾನ್‌ ಮಸ್ಕ್‌ ಟ್ವೀಟ್‌ ಬಳಿಕ ಶೇರು ಮಾರುಕಟ್ಟೆಯಲ್ಲೂ ಹೆಚ್ಚಿನ ಮೌಲ್ಯ ಗಳಿಸಿದೆ. ಕಳೆದ ವರ್ಷಾಂತ್ಯದವರೆಗೆ 1 ಡಾಲರ್‌ ಕೂಡ ದಾಟದ ಸಿಗ್ನಲ್‌ ಬೆಲೆ ಈಗ 7.19 ಡಾಲರ್‌! ಜ.8ರಂದು 10 ಡಾಲರ್‌ವರೆಗೆ ಇದರ ಶೇರು ಮೌಲ್ಯ ಹೆಚ್ಚಿತ್ತು. ವಾಟ್ಸ್‌ ಆಪ್‌ ಸಿಗ್ನಲ್‌ ಅತಿ ದೊಡ್ಡ ಹೊಡೆತ ನೀಡುತ್ತಿರುವ ಲಕ್ಷಣ ಇದು ಎಂದು ಮಾರುಕಟ್ಟೆ ತಜ್ಞರು ವಿಶ್ಲೇಷಿಸುತ್ತಿದ್ದಾರೆ.

ಕೃಪೆ: ಟೆಕ್‌ಕನ್ನಡ


ಇದನ್ನೂ ಓದಿ: ವಾಟ್ಸಾಪ್‌ಗೆ ಗುಡ್‌ಬೈ ಹೇಳಿ, ಸಿಗ್ನಲ್‌ಗೆ ಹೆಲೋ ಹೇಳಿ: ಏನಿದು ಸಿಗ್ನಲ್ ಆಪ್?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...