Homeಮುಖಪುಟವಾಟ್ಸಾಪ್ ಹಿಂದಿಕ್ಕಿ ನಂ.1 ಸ್ಥಾನಕ್ಕೇರಿದ ಸಿಗ್ನಲ್: ಭಾರತ ಸೇರಿ 7 ದೇಶಗಳಲ್ಲಿ ಸಿಗ್ನಲ್ ಪಾರುಪತ್ಯ ಶುರು

ವಾಟ್ಸಾಪ್ ಹಿಂದಿಕ್ಕಿ ನಂ.1 ಸ್ಥಾನಕ್ಕೇರಿದ ಸಿಗ್ನಲ್: ಭಾರತ ಸೇರಿ 7 ದೇಶಗಳಲ್ಲಿ ಸಿಗ್ನಲ್ ಪಾರುಪತ್ಯ ಶುರು

ಕೇವಲ ಮೂರು ದಿನಗಳ ಅವಧಿಯಲ್ಲಿ ಹೆಚ್ಚು ಸುರಕ್ಷಿತ ಎಂದು ಹೇಳಲಾದ ಸಿಗ್ನಲ್‌ ಆಪ್‌, ಅತಿ ಹೆಚ್ಚು ಡೌನ್‌ಲೋಡ್‌ ಆಗುವ ಮೂಲಕ ಉಚಿತ ಮೆಸೇಜಿಂಗ್‌ ಆಪ್‌ಗಳ ಪಟ್ಟಿಯಲ್ಲಿ ವಾಟ್ಸಾಪ್‌‌ ಅನ್ನು ಎರಡನೆಯ ಸ್ಥಾನಕ್ಕೆ ತಳ್ಳಿದೆ.

- Advertisement -
- Advertisement -

ಎರಡು ವರ್ಷಗಳ ಹಿಂದೆ 40 ಕೋಟಿ ಬಳಕೆದಾರರನ್ನು ಹೊಂದಿದ್ದ ವಾಟ್ಸಾಪ್ ಕಳೆದ ವರ್ಷ ಡಿಸೆಂಬರ್‌ ಅಂತ್ಯದ ಹೊತ್ತಿಗೆ 6 ಕೋಟಿ ಬಳಕೆದಾರರನ್ನು ಕಳೆದುಕೊಂಡಿತ್ತು. ಆದರೆ ಈಗ ಬಳಕೆದಾರರ ಸಂದೇಶಗಳನ್ನು ಓದುತ್ತೇವೆ ಮತ್ತು ಫೇಸ್‌ಬುಕ್ ಸೇರಿದಂತೆ ಹಲವು ಕಂಪನಿಗಳಿಗೆ ಡೇಟಾ ಮಾರುತ್ತೇವೆ ಎಂದು ಘೋಷಿಸಿದ ಕೂಡಲೇ ಜನ ವಾಟ್ಸಾಪ್ ತೊರೆದು ಸಿಗ್ನಲ್ ಆಪ್ ಸೇರುತ್ತಿದ್ದಾರೆ. ಹಾಗಾಗಿ ಭಾರತ ಸೇರಿದಂತೆ ಆರು ರಾಷ್ಟ್ರಗಳಲ್ಲಿ ಅತಿ ಹೆಚ್ಚು ಡೌನ್‌ಲೋಡ್‌ ಆಪ್‌ಗಳ ಪಟ್ಟಿಯಲ್ಲಿ ಸಿಗ್ನಲ್ ನಂಬರ್‍ ಒನ್ ಸ್ಥಾನಕ್ಕೇರಿದೆ.

ಕಳೆದವಾರ ವಾಟ್ಸಾಪ್‌ ತನ್ನ ಖಾಸಗಿ ನಿಯಮಗಳನ್ನು ಬದಲಿಸುತ್ತಿರುವ ಹೇಳಿಕೆ ನೀಡಿದ ಬಳಿಕ ಕೇವಲ ಮೂರು ದಿನಗಳ ಅವಧಿಯಲ್ಲಿ ಹೆಚ್ಚು ಸುರಕ್ಷಿತ ಎಂದು ಹೇಳಲಾದ ಸಿಗ್ನಲ್‌ ಆಪ್‌ ಜನಪ್ರಿಯವಾಗಿದ್ದಷ್ಟೇ ಅಲ್ಲ, ಅತಿ ಹೆಚ್ಚು ಡೌನ್‌ಲೋಡ್‌ ಆಗುವ ಮೂಲಕ ಉಚಿತ ಮೆಸೇಜಿಂಗ್‌ ಆಪ್‌ಗಳ ಪಟ್ಟಿಯಲ್ಲಿ ವಾಟ್ಸ್‌ ಆಪ್‌ ಅನ್ನು ಎರಡನೆಯ ಸ್ಥಾನಕ್ಕೆ ತಳ್ಳಿದೆ.

ಭಾರತ ಅಷ್ಟೇ ಅಲ್ಲದೆ ಜರ್ಮನಿ, ಫ್ರಾನ್ಸ್, ಆಸ್ಟ್ರಿಯಾ, ಫಿನ್‌ಲ್ಯಾಂಡ್‌, ಹಾಂಕಾಂಗ್‌ ಮತ್ತು ಸ್ವಿಟ್ಜರ್‌ಲ್ಯಾಂಡ್‌ಗಳಲ್ಲೂ ಇದೇ ಬೆಳವಣಿಗೆ. ಸಿಗ್ನಲ್‌ ತನ್ನ ಅಧಿಕೃತ ಟ್ವಿಟರ್‌ ಹ್ಯಾಂಡಲ್‌ನಲ್ಲಿ ”ನೋಡು ನೀನೇನು ಮಾಡಿಬಿಟ್ಟೆ” ಎಂದು ಟ್ವೀಟ್ ಮಾಡುವ ಮೂಲಕ ವಾಟ್ಸಾಪ್‌ನ ಕಾಲೆಳೆದಿದೆ.

ಅತಿ ದೊಡ್ಡ ಬಳಕೆದಾರರ ಮಾರುಕಟ್ಟೆಯನ್ನು ಹೊಂದಿದ್ದ ವಾಟ್ಸಾಪ್‌ ಯಾವುದೇ ಹೊಸ ಫೀಚರ್‌ ಪರಿಚಯಿಸುವ ಉದ್ದೇಶವಿದ್ದರೆ ಅದನ್ನು ಮೊದಲು ಮಾಡುತ್ತಿದುದೇ ಭಾರತೀಯ ಮಾರುಕಟ್ಟೆಯಲ್ಲಿ. ಏಕೆಂದರೆ ಅತಿ ದೊಡ್ಡ ಸಂಖ್ಯೆಯ ಬಳಕೆದಾರರು ಇಲ್ಲಿದ್ದರು.

ವಾಟ್ಸಾಪ್‌ನ ಡಾರ್ಕ್‌ಮೋಡ್‌ ಫೀಚರ್‌ ಆಗಲಿ, ಪೇಮೆಂಟ್ ಆಪ್ಶನ್‌ ಆಗಲಿ ಎಲ್ಲವೂ ಪ್ರಯೋಗವಾಗಿದ್ದು ಮೊದಲ ಭಾರತದಲ್ಲಿ. ಸುಲಭವಾಗಿ ಸೆಳೆಯಬಹುದಾದ ಮಾರುಕಟ್ಟೆ ಎಂದು ಭಾವಿಸಿದ್ದ ವಾಟ್ಸಾಪ್‌ ತನ್ನೆಲ್ಲಾ ಮಾರುಕಟ್ಟೆಯ ತಂತ್ರಗಳನ್ನು ಸಲೀಸಾಗಿ ಇಲ್ಲಿ ಬಳಸುತ್ತಿತ್ತು.

ಫೇಸ್‌ಬುಕ್‌, ವಾಟ್ಸ್‌ಆಪ್‌ ಮತ್ತು ಇನ್‌ಸ್ಟಾಗ್ರಾಮ್‌ ಮೂಲಕ ಅತಿದೊಡ್ಡ ಬಳಕೆದಾರರ ಜಾಲವನ್ನು ಹೊಂದಿರುವ ಧಾಷ್ಟ್ಯದಿಂದ ಕಳೆದ ಬಳಕೆದಾರರ ಮಾಹಿತಿ ಬಳಸಿಕೊಳ್ಳುವ ಹೊಸ ಖಾಸಗಿನಿಯಮವನ್ನು ಫೆಬ್ರವರಿ 8 ಒಳಗೆ ಒಪ್ಪಿಕೊಳ್ಳಿ ಇಲ್ಲವೇ ನಿಮ್ಮ ವಾಟ್ಸಾಪ್ ಅಕೌಂಟ್‌ ಕಳೆದುಕೊಳ್ಳಿ ಎಂದು ಹೇಳಿತ್ತು.

ವಾಟ್ಸ್‌ಆಪ್‌ನ ಈ ನಿಯಮದಿಂದ ಆಕ್ರೋಶಗೊಂಡ ಬಳಕೆದಾರರು ಪರ್ಯಾಯ ಆಪ್‌ ಹುಡುಕಾಟದಲ್ಲಿ ಗುರುತಿಸಿದ್ದು ಸಿಗ್ನಲ್‌ ಅನ್ನು.

ಸಿಗ್ನಲ್‌ ಸಂಪೂರ್ಣ ಮಾಹಿತಿ ಸುರಕ್ಷತೆಯ ವಾಗ್ದಾನ ನೀಡುತ್ತದೆ. ಬಳಕೆಯಲ್ಲೂ ಅತ್ಯಂತ ಸರಳ. ಇದೇ ಕಾರಣಕ್ಕೆ ಖಾಸಗಿತನದ ಬಗ್ಗೆ ಅಪಾರ ಕಾಳಜಿ ಇರುವ ಎಡ್ವರ್ಡ್‌ ಸ್ನೋ ಡೆನ್‌ ಐದು ವರ್ಷಗಳ ಹಿಂದೆಯೇ ನಾನು ಸಿಗ್ನಲ್‌ ಆಪ್‌ ಬಳಸುತ್ತೇನೆ ಎಂದು ಹೇಳಿಕೊಂಡಿದ್ದರು.

ಇತ್ತೀಚೆಗೆ, ಟೆಸ್ಲಾ, ಸ್ಪೇಸ್‌ಎಕ್ಸ್‌ ಮಾಲಿಕ ಎಲಾನ್‌ ಮಸ್ಕ್‌ ಕೂಡ ‘ ಸಿಗ್ನಲ್‌ ಬಳಸಿ’ ಎಂದು ಟ್ವೀಟ್‌ ಮಾಡಿ ಸಲಹೆ ನೀಡಿದ್ದರು.

ಕಳೆದ ವಾರ ಫೋರ್ಬ್ಸ್‌ ಪಟ್ಟಿದಂತೆ ವಾಟ್ಸ್‌ಆಪ್‌ ತನ್ನ ಬಳಕೆದಾರರಿಂದ ಎರಡು ರೀತಿಯಲ್ಲಿ ಮಾಹಿತಿ ಸಂಗ್ರಹಿಸುತ್ತದೆ. ಒಂದು ಆಪ್‌ ಚಟುವಟಿಕೆಗಳನ್ನು ಮತ್ತು ಆಪ್‌ನ ಒಟ್ಟು ನಾಲಿಟಿಕ್ಸ್‌ ಅನ್ನು. ಅಂದರೆ ನಿರಂತರವಾಗಿ ಬಳಕೆದಾರರ ಗೂಢಚಾರಿಕೆ ಮಾಡುವುದಲ್ಲದೆ, ಅದರ ಅನಾಲಿಟಿಕ್ಸ್‌ ಸಂಗ್ರಹಿಸುವುದು (ಇದು ನೀವು ಹೆಚ್ಚು ಭೇಟಿ ನೀಡುವ, ಹೆಚ್ಚು ಮಾತನಾಡುವ, ಹೆಚ್ಚು ಖರೀದಿಸುವ ವಿವರಗಳನ್ನು ಕಲೆಹಾಕುವ ವಿಧಾನ). ಅಂದರೆ ನಿಮ್ಮ ಖರೀದಿ, ನೀವಿರುವ/ಓಡಾಡುವ ಸ್ಥಳಗಳು, ಕಾಂಟ್ಯಾಕ್ಟ್‌ಗಳು, ಬಳಕೆದಾರರ ಎಲ್ಲ ಮಾಹಿತಿ, ಯೂಸರ್‌ ಐಡಿಗಳು, ಡಿವೈಸ್‌ ಮಾಹಿತಿ, ಬಳಕೆಯ ಪ್ರಮಾಣ, ಹಣಕಾಸಿನ ಮಾಹಿತಿ.

ಈ ವಿಷಯ ಬಹಿರಂಗಗೊಳ್ಳುತ್ತಿದ್ದಂತೆ ಭಾರತೀಯರು, ಮಾಹಿತಿ ಸುರಕ್ಷತೆ, ಖಾಸಗಿತನಕ್ಕೆ ಹೆಚ್ಚು ಆದ್ಯತೆ ನೀಡುವ ಸಿಗ್ನಲ್‌ ಆಪ್‌ನ ಕಡೆ ವಾಲಿದ್ದಾರೆ.

ಎಲಾನ್‌ ಮಸ್ಕ್‌ ಟ್ವೀಟ್‌ ಬಳಿಕ ಶೇರು ಮಾರುಕಟ್ಟೆಯಲ್ಲೂ ಹೆಚ್ಚಿನ ಮೌಲ್ಯ ಗಳಿಸಿದೆ. ಕಳೆದ ವರ್ಷಾಂತ್ಯದವರೆಗೆ 1 ಡಾಲರ್‌ ಕೂಡ ದಾಟದ ಸಿಗ್ನಲ್‌ ಬೆಲೆ ಈಗ 7.19 ಡಾಲರ್‌! ಜ.8ರಂದು 10 ಡಾಲರ್‌ವರೆಗೆ ಇದರ ಶೇರು ಮೌಲ್ಯ ಹೆಚ್ಚಿತ್ತು. ವಾಟ್ಸ್‌ ಆಪ್‌ ಸಿಗ್ನಲ್‌ ಅತಿ ದೊಡ್ಡ ಹೊಡೆತ ನೀಡುತ್ತಿರುವ ಲಕ್ಷಣ ಇದು ಎಂದು ಮಾರುಕಟ್ಟೆ ತಜ್ಞರು ವಿಶ್ಲೇಷಿಸುತ್ತಿದ್ದಾರೆ.

ಕೃಪೆ: ಟೆಕ್‌ಕನ್ನಡ


ಇದನ್ನೂ ಓದಿ: ವಾಟ್ಸಾಪ್‌ಗೆ ಗುಡ್‌ಬೈ ಹೇಳಿ, ಸಿಗ್ನಲ್‌ಗೆ ಹೆಲೋ ಹೇಳಿ: ಏನಿದು ಸಿಗ್ನಲ್ ಆಪ್?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....