Homeಮುಖಪುಟವಾಟ್ಸಾಪ್ ಹಿಂದಿಕ್ಕಿ ನಂ.1 ಸ್ಥಾನಕ್ಕೇರಿದ ಸಿಗ್ನಲ್: ಭಾರತ ಸೇರಿ 7 ದೇಶಗಳಲ್ಲಿ ಸಿಗ್ನಲ್ ಪಾರುಪತ್ಯ ಶುರು

ವಾಟ್ಸಾಪ್ ಹಿಂದಿಕ್ಕಿ ನಂ.1 ಸ್ಥಾನಕ್ಕೇರಿದ ಸಿಗ್ನಲ್: ಭಾರತ ಸೇರಿ 7 ದೇಶಗಳಲ್ಲಿ ಸಿಗ್ನಲ್ ಪಾರುಪತ್ಯ ಶುರು

ಕೇವಲ ಮೂರು ದಿನಗಳ ಅವಧಿಯಲ್ಲಿ ಹೆಚ್ಚು ಸುರಕ್ಷಿತ ಎಂದು ಹೇಳಲಾದ ಸಿಗ್ನಲ್‌ ಆಪ್‌, ಅತಿ ಹೆಚ್ಚು ಡೌನ್‌ಲೋಡ್‌ ಆಗುವ ಮೂಲಕ ಉಚಿತ ಮೆಸೇಜಿಂಗ್‌ ಆಪ್‌ಗಳ ಪಟ್ಟಿಯಲ್ಲಿ ವಾಟ್ಸಾಪ್‌‌ ಅನ್ನು ಎರಡನೆಯ ಸ್ಥಾನಕ್ಕೆ ತಳ್ಳಿದೆ.

- Advertisement -
- Advertisement -

ಎರಡು ವರ್ಷಗಳ ಹಿಂದೆ 40 ಕೋಟಿ ಬಳಕೆದಾರರನ್ನು ಹೊಂದಿದ್ದ ವಾಟ್ಸಾಪ್ ಕಳೆದ ವರ್ಷ ಡಿಸೆಂಬರ್‌ ಅಂತ್ಯದ ಹೊತ್ತಿಗೆ 6 ಕೋಟಿ ಬಳಕೆದಾರರನ್ನು ಕಳೆದುಕೊಂಡಿತ್ತು. ಆದರೆ ಈಗ ಬಳಕೆದಾರರ ಸಂದೇಶಗಳನ್ನು ಓದುತ್ತೇವೆ ಮತ್ತು ಫೇಸ್‌ಬುಕ್ ಸೇರಿದಂತೆ ಹಲವು ಕಂಪನಿಗಳಿಗೆ ಡೇಟಾ ಮಾರುತ್ತೇವೆ ಎಂದು ಘೋಷಿಸಿದ ಕೂಡಲೇ ಜನ ವಾಟ್ಸಾಪ್ ತೊರೆದು ಸಿಗ್ನಲ್ ಆಪ್ ಸೇರುತ್ತಿದ್ದಾರೆ. ಹಾಗಾಗಿ ಭಾರತ ಸೇರಿದಂತೆ ಆರು ರಾಷ್ಟ್ರಗಳಲ್ಲಿ ಅತಿ ಹೆಚ್ಚು ಡೌನ್‌ಲೋಡ್‌ ಆಪ್‌ಗಳ ಪಟ್ಟಿಯಲ್ಲಿ ಸಿಗ್ನಲ್ ನಂಬರ್‍ ಒನ್ ಸ್ಥಾನಕ್ಕೇರಿದೆ.

ಕಳೆದವಾರ ವಾಟ್ಸಾಪ್‌ ತನ್ನ ಖಾಸಗಿ ನಿಯಮಗಳನ್ನು ಬದಲಿಸುತ್ತಿರುವ ಹೇಳಿಕೆ ನೀಡಿದ ಬಳಿಕ ಕೇವಲ ಮೂರು ದಿನಗಳ ಅವಧಿಯಲ್ಲಿ ಹೆಚ್ಚು ಸುರಕ್ಷಿತ ಎಂದು ಹೇಳಲಾದ ಸಿಗ್ನಲ್‌ ಆಪ್‌ ಜನಪ್ರಿಯವಾಗಿದ್ದಷ್ಟೇ ಅಲ್ಲ, ಅತಿ ಹೆಚ್ಚು ಡೌನ್‌ಲೋಡ್‌ ಆಗುವ ಮೂಲಕ ಉಚಿತ ಮೆಸೇಜಿಂಗ್‌ ಆಪ್‌ಗಳ ಪಟ್ಟಿಯಲ್ಲಿ ವಾಟ್ಸ್‌ ಆಪ್‌ ಅನ್ನು ಎರಡನೆಯ ಸ್ಥಾನಕ್ಕೆ ತಳ್ಳಿದೆ.

ಭಾರತ ಅಷ್ಟೇ ಅಲ್ಲದೆ ಜರ್ಮನಿ, ಫ್ರಾನ್ಸ್, ಆಸ್ಟ್ರಿಯಾ, ಫಿನ್‌ಲ್ಯಾಂಡ್‌, ಹಾಂಕಾಂಗ್‌ ಮತ್ತು ಸ್ವಿಟ್ಜರ್‌ಲ್ಯಾಂಡ್‌ಗಳಲ್ಲೂ ಇದೇ ಬೆಳವಣಿಗೆ. ಸಿಗ್ನಲ್‌ ತನ್ನ ಅಧಿಕೃತ ಟ್ವಿಟರ್‌ ಹ್ಯಾಂಡಲ್‌ನಲ್ಲಿ ”ನೋಡು ನೀನೇನು ಮಾಡಿಬಿಟ್ಟೆ” ಎಂದು ಟ್ವೀಟ್ ಮಾಡುವ ಮೂಲಕ ವಾಟ್ಸಾಪ್‌ನ ಕಾಲೆಳೆದಿದೆ.

ಅತಿ ದೊಡ್ಡ ಬಳಕೆದಾರರ ಮಾರುಕಟ್ಟೆಯನ್ನು ಹೊಂದಿದ್ದ ವಾಟ್ಸಾಪ್‌ ಯಾವುದೇ ಹೊಸ ಫೀಚರ್‌ ಪರಿಚಯಿಸುವ ಉದ್ದೇಶವಿದ್ದರೆ ಅದನ್ನು ಮೊದಲು ಮಾಡುತ್ತಿದುದೇ ಭಾರತೀಯ ಮಾರುಕಟ್ಟೆಯಲ್ಲಿ. ಏಕೆಂದರೆ ಅತಿ ದೊಡ್ಡ ಸಂಖ್ಯೆಯ ಬಳಕೆದಾರರು ಇಲ್ಲಿದ್ದರು.

ವಾಟ್ಸಾಪ್‌ನ ಡಾರ್ಕ್‌ಮೋಡ್‌ ಫೀಚರ್‌ ಆಗಲಿ, ಪೇಮೆಂಟ್ ಆಪ್ಶನ್‌ ಆಗಲಿ ಎಲ್ಲವೂ ಪ್ರಯೋಗವಾಗಿದ್ದು ಮೊದಲ ಭಾರತದಲ್ಲಿ. ಸುಲಭವಾಗಿ ಸೆಳೆಯಬಹುದಾದ ಮಾರುಕಟ್ಟೆ ಎಂದು ಭಾವಿಸಿದ್ದ ವಾಟ್ಸಾಪ್‌ ತನ್ನೆಲ್ಲಾ ಮಾರುಕಟ್ಟೆಯ ತಂತ್ರಗಳನ್ನು ಸಲೀಸಾಗಿ ಇಲ್ಲಿ ಬಳಸುತ್ತಿತ್ತು.

ಫೇಸ್‌ಬುಕ್‌, ವಾಟ್ಸ್‌ಆಪ್‌ ಮತ್ತು ಇನ್‌ಸ್ಟಾಗ್ರಾಮ್‌ ಮೂಲಕ ಅತಿದೊಡ್ಡ ಬಳಕೆದಾರರ ಜಾಲವನ್ನು ಹೊಂದಿರುವ ಧಾಷ್ಟ್ಯದಿಂದ ಕಳೆದ ಬಳಕೆದಾರರ ಮಾಹಿತಿ ಬಳಸಿಕೊಳ್ಳುವ ಹೊಸ ಖಾಸಗಿನಿಯಮವನ್ನು ಫೆಬ್ರವರಿ 8 ಒಳಗೆ ಒಪ್ಪಿಕೊಳ್ಳಿ ಇಲ್ಲವೇ ನಿಮ್ಮ ವಾಟ್ಸಾಪ್ ಅಕೌಂಟ್‌ ಕಳೆದುಕೊಳ್ಳಿ ಎಂದು ಹೇಳಿತ್ತು.

ವಾಟ್ಸ್‌ಆಪ್‌ನ ಈ ನಿಯಮದಿಂದ ಆಕ್ರೋಶಗೊಂಡ ಬಳಕೆದಾರರು ಪರ್ಯಾಯ ಆಪ್‌ ಹುಡುಕಾಟದಲ್ಲಿ ಗುರುತಿಸಿದ್ದು ಸಿಗ್ನಲ್‌ ಅನ್ನು.

ಸಿಗ್ನಲ್‌ ಸಂಪೂರ್ಣ ಮಾಹಿತಿ ಸುರಕ್ಷತೆಯ ವಾಗ್ದಾನ ನೀಡುತ್ತದೆ. ಬಳಕೆಯಲ್ಲೂ ಅತ್ಯಂತ ಸರಳ. ಇದೇ ಕಾರಣಕ್ಕೆ ಖಾಸಗಿತನದ ಬಗ್ಗೆ ಅಪಾರ ಕಾಳಜಿ ಇರುವ ಎಡ್ವರ್ಡ್‌ ಸ್ನೋ ಡೆನ್‌ ಐದು ವರ್ಷಗಳ ಹಿಂದೆಯೇ ನಾನು ಸಿಗ್ನಲ್‌ ಆಪ್‌ ಬಳಸುತ್ತೇನೆ ಎಂದು ಹೇಳಿಕೊಂಡಿದ್ದರು.

ಇತ್ತೀಚೆಗೆ, ಟೆಸ್ಲಾ, ಸ್ಪೇಸ್‌ಎಕ್ಸ್‌ ಮಾಲಿಕ ಎಲಾನ್‌ ಮಸ್ಕ್‌ ಕೂಡ ‘ ಸಿಗ್ನಲ್‌ ಬಳಸಿ’ ಎಂದು ಟ್ವೀಟ್‌ ಮಾಡಿ ಸಲಹೆ ನೀಡಿದ್ದರು.

ಕಳೆದ ವಾರ ಫೋರ್ಬ್ಸ್‌ ಪಟ್ಟಿದಂತೆ ವಾಟ್ಸ್‌ಆಪ್‌ ತನ್ನ ಬಳಕೆದಾರರಿಂದ ಎರಡು ರೀತಿಯಲ್ಲಿ ಮಾಹಿತಿ ಸಂಗ್ರಹಿಸುತ್ತದೆ. ಒಂದು ಆಪ್‌ ಚಟುವಟಿಕೆಗಳನ್ನು ಮತ್ತು ಆಪ್‌ನ ಒಟ್ಟು ನಾಲಿಟಿಕ್ಸ್‌ ಅನ್ನು. ಅಂದರೆ ನಿರಂತರವಾಗಿ ಬಳಕೆದಾರರ ಗೂಢಚಾರಿಕೆ ಮಾಡುವುದಲ್ಲದೆ, ಅದರ ಅನಾಲಿಟಿಕ್ಸ್‌ ಸಂಗ್ರಹಿಸುವುದು (ಇದು ನೀವು ಹೆಚ್ಚು ಭೇಟಿ ನೀಡುವ, ಹೆಚ್ಚು ಮಾತನಾಡುವ, ಹೆಚ್ಚು ಖರೀದಿಸುವ ವಿವರಗಳನ್ನು ಕಲೆಹಾಕುವ ವಿಧಾನ). ಅಂದರೆ ನಿಮ್ಮ ಖರೀದಿ, ನೀವಿರುವ/ಓಡಾಡುವ ಸ್ಥಳಗಳು, ಕಾಂಟ್ಯಾಕ್ಟ್‌ಗಳು, ಬಳಕೆದಾರರ ಎಲ್ಲ ಮಾಹಿತಿ, ಯೂಸರ್‌ ಐಡಿಗಳು, ಡಿವೈಸ್‌ ಮಾಹಿತಿ, ಬಳಕೆಯ ಪ್ರಮಾಣ, ಹಣಕಾಸಿನ ಮಾಹಿತಿ.

ಈ ವಿಷಯ ಬಹಿರಂಗಗೊಳ್ಳುತ್ತಿದ್ದಂತೆ ಭಾರತೀಯರು, ಮಾಹಿತಿ ಸುರಕ್ಷತೆ, ಖಾಸಗಿತನಕ್ಕೆ ಹೆಚ್ಚು ಆದ್ಯತೆ ನೀಡುವ ಸಿಗ್ನಲ್‌ ಆಪ್‌ನ ಕಡೆ ವಾಲಿದ್ದಾರೆ.

ಎಲಾನ್‌ ಮಸ್ಕ್‌ ಟ್ವೀಟ್‌ ಬಳಿಕ ಶೇರು ಮಾರುಕಟ್ಟೆಯಲ್ಲೂ ಹೆಚ್ಚಿನ ಮೌಲ್ಯ ಗಳಿಸಿದೆ. ಕಳೆದ ವರ್ಷಾಂತ್ಯದವರೆಗೆ 1 ಡಾಲರ್‌ ಕೂಡ ದಾಟದ ಸಿಗ್ನಲ್‌ ಬೆಲೆ ಈಗ 7.19 ಡಾಲರ್‌! ಜ.8ರಂದು 10 ಡಾಲರ್‌ವರೆಗೆ ಇದರ ಶೇರು ಮೌಲ್ಯ ಹೆಚ್ಚಿತ್ತು. ವಾಟ್ಸ್‌ ಆಪ್‌ ಸಿಗ್ನಲ್‌ ಅತಿ ದೊಡ್ಡ ಹೊಡೆತ ನೀಡುತ್ತಿರುವ ಲಕ್ಷಣ ಇದು ಎಂದು ಮಾರುಕಟ್ಟೆ ತಜ್ಞರು ವಿಶ್ಲೇಷಿಸುತ್ತಿದ್ದಾರೆ.

ಕೃಪೆ: ಟೆಕ್‌ಕನ್ನಡ


ಇದನ್ನೂ ಓದಿ: ವಾಟ್ಸಾಪ್‌ಗೆ ಗುಡ್‌ಬೈ ಹೇಳಿ, ಸಿಗ್ನಲ್‌ಗೆ ಹೆಲೋ ಹೇಳಿ: ಏನಿದು ಸಿಗ್ನಲ್ ಆಪ್?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...