Homeಮುಖಪುಟವಾಟ್ಸಾಪ್ ಹಿಂದಿಕ್ಕಿ ನಂ.1 ಸ್ಥಾನಕ್ಕೇರಿದ ಸಿಗ್ನಲ್: ಭಾರತ ಸೇರಿ 7 ದೇಶಗಳಲ್ಲಿ ಸಿಗ್ನಲ್ ಪಾರುಪತ್ಯ ಶುರು

ವಾಟ್ಸಾಪ್ ಹಿಂದಿಕ್ಕಿ ನಂ.1 ಸ್ಥಾನಕ್ಕೇರಿದ ಸಿಗ್ನಲ್: ಭಾರತ ಸೇರಿ 7 ದೇಶಗಳಲ್ಲಿ ಸಿಗ್ನಲ್ ಪಾರುಪತ್ಯ ಶುರು

ಕೇವಲ ಮೂರು ದಿನಗಳ ಅವಧಿಯಲ್ಲಿ ಹೆಚ್ಚು ಸುರಕ್ಷಿತ ಎಂದು ಹೇಳಲಾದ ಸಿಗ್ನಲ್‌ ಆಪ್‌, ಅತಿ ಹೆಚ್ಚು ಡೌನ್‌ಲೋಡ್‌ ಆಗುವ ಮೂಲಕ ಉಚಿತ ಮೆಸೇಜಿಂಗ್‌ ಆಪ್‌ಗಳ ಪಟ್ಟಿಯಲ್ಲಿ ವಾಟ್ಸಾಪ್‌‌ ಅನ್ನು ಎರಡನೆಯ ಸ್ಥಾನಕ್ಕೆ ತಳ್ಳಿದೆ.

- Advertisement -
- Advertisement -

ಎರಡು ವರ್ಷಗಳ ಹಿಂದೆ 40 ಕೋಟಿ ಬಳಕೆದಾರರನ್ನು ಹೊಂದಿದ್ದ ವಾಟ್ಸಾಪ್ ಕಳೆದ ವರ್ಷ ಡಿಸೆಂಬರ್‌ ಅಂತ್ಯದ ಹೊತ್ತಿಗೆ 6 ಕೋಟಿ ಬಳಕೆದಾರರನ್ನು ಕಳೆದುಕೊಂಡಿತ್ತು. ಆದರೆ ಈಗ ಬಳಕೆದಾರರ ಸಂದೇಶಗಳನ್ನು ಓದುತ್ತೇವೆ ಮತ್ತು ಫೇಸ್‌ಬುಕ್ ಸೇರಿದಂತೆ ಹಲವು ಕಂಪನಿಗಳಿಗೆ ಡೇಟಾ ಮಾರುತ್ತೇವೆ ಎಂದು ಘೋಷಿಸಿದ ಕೂಡಲೇ ಜನ ವಾಟ್ಸಾಪ್ ತೊರೆದು ಸಿಗ್ನಲ್ ಆಪ್ ಸೇರುತ್ತಿದ್ದಾರೆ. ಹಾಗಾಗಿ ಭಾರತ ಸೇರಿದಂತೆ ಆರು ರಾಷ್ಟ್ರಗಳಲ್ಲಿ ಅತಿ ಹೆಚ್ಚು ಡೌನ್‌ಲೋಡ್‌ ಆಪ್‌ಗಳ ಪಟ್ಟಿಯಲ್ಲಿ ಸಿಗ್ನಲ್ ನಂಬರ್‍ ಒನ್ ಸ್ಥಾನಕ್ಕೇರಿದೆ.

ಕಳೆದವಾರ ವಾಟ್ಸಾಪ್‌ ತನ್ನ ಖಾಸಗಿ ನಿಯಮಗಳನ್ನು ಬದಲಿಸುತ್ತಿರುವ ಹೇಳಿಕೆ ನೀಡಿದ ಬಳಿಕ ಕೇವಲ ಮೂರು ದಿನಗಳ ಅವಧಿಯಲ್ಲಿ ಹೆಚ್ಚು ಸುರಕ್ಷಿತ ಎಂದು ಹೇಳಲಾದ ಸಿಗ್ನಲ್‌ ಆಪ್‌ ಜನಪ್ರಿಯವಾಗಿದ್ದಷ್ಟೇ ಅಲ್ಲ, ಅತಿ ಹೆಚ್ಚು ಡೌನ್‌ಲೋಡ್‌ ಆಗುವ ಮೂಲಕ ಉಚಿತ ಮೆಸೇಜಿಂಗ್‌ ಆಪ್‌ಗಳ ಪಟ್ಟಿಯಲ್ಲಿ ವಾಟ್ಸ್‌ ಆಪ್‌ ಅನ್ನು ಎರಡನೆಯ ಸ್ಥಾನಕ್ಕೆ ತಳ್ಳಿದೆ.

ಭಾರತ ಅಷ್ಟೇ ಅಲ್ಲದೆ ಜರ್ಮನಿ, ಫ್ರಾನ್ಸ್, ಆಸ್ಟ್ರಿಯಾ, ಫಿನ್‌ಲ್ಯಾಂಡ್‌, ಹಾಂಕಾಂಗ್‌ ಮತ್ತು ಸ್ವಿಟ್ಜರ್‌ಲ್ಯಾಂಡ್‌ಗಳಲ್ಲೂ ಇದೇ ಬೆಳವಣಿಗೆ. ಸಿಗ್ನಲ್‌ ತನ್ನ ಅಧಿಕೃತ ಟ್ವಿಟರ್‌ ಹ್ಯಾಂಡಲ್‌ನಲ್ಲಿ ”ನೋಡು ನೀನೇನು ಮಾಡಿಬಿಟ್ಟೆ” ಎಂದು ಟ್ವೀಟ್ ಮಾಡುವ ಮೂಲಕ ವಾಟ್ಸಾಪ್‌ನ ಕಾಲೆಳೆದಿದೆ.

ಅತಿ ದೊಡ್ಡ ಬಳಕೆದಾರರ ಮಾರುಕಟ್ಟೆಯನ್ನು ಹೊಂದಿದ್ದ ವಾಟ್ಸಾಪ್‌ ಯಾವುದೇ ಹೊಸ ಫೀಚರ್‌ ಪರಿಚಯಿಸುವ ಉದ್ದೇಶವಿದ್ದರೆ ಅದನ್ನು ಮೊದಲು ಮಾಡುತ್ತಿದುದೇ ಭಾರತೀಯ ಮಾರುಕಟ್ಟೆಯಲ್ಲಿ. ಏಕೆಂದರೆ ಅತಿ ದೊಡ್ಡ ಸಂಖ್ಯೆಯ ಬಳಕೆದಾರರು ಇಲ್ಲಿದ್ದರು.

ವಾಟ್ಸಾಪ್‌ನ ಡಾರ್ಕ್‌ಮೋಡ್‌ ಫೀಚರ್‌ ಆಗಲಿ, ಪೇಮೆಂಟ್ ಆಪ್ಶನ್‌ ಆಗಲಿ ಎಲ್ಲವೂ ಪ್ರಯೋಗವಾಗಿದ್ದು ಮೊದಲ ಭಾರತದಲ್ಲಿ. ಸುಲಭವಾಗಿ ಸೆಳೆಯಬಹುದಾದ ಮಾರುಕಟ್ಟೆ ಎಂದು ಭಾವಿಸಿದ್ದ ವಾಟ್ಸಾಪ್‌ ತನ್ನೆಲ್ಲಾ ಮಾರುಕಟ್ಟೆಯ ತಂತ್ರಗಳನ್ನು ಸಲೀಸಾಗಿ ಇಲ್ಲಿ ಬಳಸುತ್ತಿತ್ತು.

ಫೇಸ್‌ಬುಕ್‌, ವಾಟ್ಸ್‌ಆಪ್‌ ಮತ್ತು ಇನ್‌ಸ್ಟಾಗ್ರಾಮ್‌ ಮೂಲಕ ಅತಿದೊಡ್ಡ ಬಳಕೆದಾರರ ಜಾಲವನ್ನು ಹೊಂದಿರುವ ಧಾಷ್ಟ್ಯದಿಂದ ಕಳೆದ ಬಳಕೆದಾರರ ಮಾಹಿತಿ ಬಳಸಿಕೊಳ್ಳುವ ಹೊಸ ಖಾಸಗಿನಿಯಮವನ್ನು ಫೆಬ್ರವರಿ 8 ಒಳಗೆ ಒಪ್ಪಿಕೊಳ್ಳಿ ಇಲ್ಲವೇ ನಿಮ್ಮ ವಾಟ್ಸಾಪ್ ಅಕೌಂಟ್‌ ಕಳೆದುಕೊಳ್ಳಿ ಎಂದು ಹೇಳಿತ್ತು.

ವಾಟ್ಸ್‌ಆಪ್‌ನ ಈ ನಿಯಮದಿಂದ ಆಕ್ರೋಶಗೊಂಡ ಬಳಕೆದಾರರು ಪರ್ಯಾಯ ಆಪ್‌ ಹುಡುಕಾಟದಲ್ಲಿ ಗುರುತಿಸಿದ್ದು ಸಿಗ್ನಲ್‌ ಅನ್ನು.

ಸಿಗ್ನಲ್‌ ಸಂಪೂರ್ಣ ಮಾಹಿತಿ ಸುರಕ್ಷತೆಯ ವಾಗ್ದಾನ ನೀಡುತ್ತದೆ. ಬಳಕೆಯಲ್ಲೂ ಅತ್ಯಂತ ಸರಳ. ಇದೇ ಕಾರಣಕ್ಕೆ ಖಾಸಗಿತನದ ಬಗ್ಗೆ ಅಪಾರ ಕಾಳಜಿ ಇರುವ ಎಡ್ವರ್ಡ್‌ ಸ್ನೋ ಡೆನ್‌ ಐದು ವರ್ಷಗಳ ಹಿಂದೆಯೇ ನಾನು ಸಿಗ್ನಲ್‌ ಆಪ್‌ ಬಳಸುತ್ತೇನೆ ಎಂದು ಹೇಳಿಕೊಂಡಿದ್ದರು.

ಇತ್ತೀಚೆಗೆ, ಟೆಸ್ಲಾ, ಸ್ಪೇಸ್‌ಎಕ್ಸ್‌ ಮಾಲಿಕ ಎಲಾನ್‌ ಮಸ್ಕ್‌ ಕೂಡ ‘ ಸಿಗ್ನಲ್‌ ಬಳಸಿ’ ಎಂದು ಟ್ವೀಟ್‌ ಮಾಡಿ ಸಲಹೆ ನೀಡಿದ್ದರು.

ಕಳೆದ ವಾರ ಫೋರ್ಬ್ಸ್‌ ಪಟ್ಟಿದಂತೆ ವಾಟ್ಸ್‌ಆಪ್‌ ತನ್ನ ಬಳಕೆದಾರರಿಂದ ಎರಡು ರೀತಿಯಲ್ಲಿ ಮಾಹಿತಿ ಸಂಗ್ರಹಿಸುತ್ತದೆ. ಒಂದು ಆಪ್‌ ಚಟುವಟಿಕೆಗಳನ್ನು ಮತ್ತು ಆಪ್‌ನ ಒಟ್ಟು ನಾಲಿಟಿಕ್ಸ್‌ ಅನ್ನು. ಅಂದರೆ ನಿರಂತರವಾಗಿ ಬಳಕೆದಾರರ ಗೂಢಚಾರಿಕೆ ಮಾಡುವುದಲ್ಲದೆ, ಅದರ ಅನಾಲಿಟಿಕ್ಸ್‌ ಸಂಗ್ರಹಿಸುವುದು (ಇದು ನೀವು ಹೆಚ್ಚು ಭೇಟಿ ನೀಡುವ, ಹೆಚ್ಚು ಮಾತನಾಡುವ, ಹೆಚ್ಚು ಖರೀದಿಸುವ ವಿವರಗಳನ್ನು ಕಲೆಹಾಕುವ ವಿಧಾನ). ಅಂದರೆ ನಿಮ್ಮ ಖರೀದಿ, ನೀವಿರುವ/ಓಡಾಡುವ ಸ್ಥಳಗಳು, ಕಾಂಟ್ಯಾಕ್ಟ್‌ಗಳು, ಬಳಕೆದಾರರ ಎಲ್ಲ ಮಾಹಿತಿ, ಯೂಸರ್‌ ಐಡಿಗಳು, ಡಿವೈಸ್‌ ಮಾಹಿತಿ, ಬಳಕೆಯ ಪ್ರಮಾಣ, ಹಣಕಾಸಿನ ಮಾಹಿತಿ.

ಈ ವಿಷಯ ಬಹಿರಂಗಗೊಳ್ಳುತ್ತಿದ್ದಂತೆ ಭಾರತೀಯರು, ಮಾಹಿತಿ ಸುರಕ್ಷತೆ, ಖಾಸಗಿತನಕ್ಕೆ ಹೆಚ್ಚು ಆದ್ಯತೆ ನೀಡುವ ಸಿಗ್ನಲ್‌ ಆಪ್‌ನ ಕಡೆ ವಾಲಿದ್ದಾರೆ.

ಎಲಾನ್‌ ಮಸ್ಕ್‌ ಟ್ವೀಟ್‌ ಬಳಿಕ ಶೇರು ಮಾರುಕಟ್ಟೆಯಲ್ಲೂ ಹೆಚ್ಚಿನ ಮೌಲ್ಯ ಗಳಿಸಿದೆ. ಕಳೆದ ವರ್ಷಾಂತ್ಯದವರೆಗೆ 1 ಡಾಲರ್‌ ಕೂಡ ದಾಟದ ಸಿಗ್ನಲ್‌ ಬೆಲೆ ಈಗ 7.19 ಡಾಲರ್‌! ಜ.8ರಂದು 10 ಡಾಲರ್‌ವರೆಗೆ ಇದರ ಶೇರು ಮೌಲ್ಯ ಹೆಚ್ಚಿತ್ತು. ವಾಟ್ಸ್‌ ಆಪ್‌ ಸಿಗ್ನಲ್‌ ಅತಿ ದೊಡ್ಡ ಹೊಡೆತ ನೀಡುತ್ತಿರುವ ಲಕ್ಷಣ ಇದು ಎಂದು ಮಾರುಕಟ್ಟೆ ತಜ್ಞರು ವಿಶ್ಲೇಷಿಸುತ್ತಿದ್ದಾರೆ.

ಕೃಪೆ: ಟೆಕ್‌ಕನ್ನಡ


ಇದನ್ನೂ ಓದಿ: ವಾಟ್ಸಾಪ್‌ಗೆ ಗುಡ್‌ಬೈ ಹೇಳಿ, ಸಿಗ್ನಲ್‌ಗೆ ಹೆಲೋ ಹೇಳಿ: ಏನಿದು ಸಿಗ್ನಲ್ ಆಪ್?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಶಾಲಾ ಮಕ್ಕಳು ಆರ್‌ಎಸ್‌ಎಸ್‌ ಗೀತೆ ಹಾಡಿದ ಪ್ರಕರಣ : ತನಿಖೆಗೆ ಆದೇಶಿಸಿದ ಸರ್ಕಾರ

ಹೊಸದಾಗಿ ಚಾಲನೆ ನೀಡಲಾದ ಎರ್ನಾಕುಲಂ-ಬೆಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಮೊದಲ ಸಂಚಾರದ ವೇಳೆ ಶಾಲಾ ಮಕ್ಕಳು ಆರ್‌ಎಸ್‌ಎಸ್‌ ಗೀತೆ (ಗಾನ ಗೀತಂ) ಹಾಡಿದ ಬಗ್ಗೆ ತನಿಖೆಗೆ ಕೇರಳದ ಪ್ರಾಥಮಿಕ ಶಿಕ್ಷಣ ಸಚಿವ...

ಬಿಹಾರ ಚುನಾವಣೆ | ಎಲ್‌ಜೆಪಿ ಸಂಸದೆಯ ಎರಡೂ ಕೈಗಳಲ್ಲಿ ಮತದಾನದ ಶಾಯಿ ಗುರುತು; ಮತಗಳ್ಳತನ ಆರೋಪ

ಬಿಹಾರದಲ್ಲಿ ನವೆಂಬರ್ 6ರಂದು ನಡೆದ ಮೊದಲ ಹಂತದ ಮತದಾನದ ವೇಳೆ ಎನ್‌ಡಿಎ ಭಾಗವಾಗಿರುವ ಲೋಕಜನಶಕ್ತಿ ಪಕ್ಷ (ಎಲ್‌ಜೆಪಿ) ಸಂಸದೆ ಶಾಂಭವಿ ಚೌಧರಿ ಅವರ ಎರಡೂ ಕೈಗಳಲ್ಲಿ ಮತದಾನದ ಗುರುತಿನ ಶಾಯಿ ಕಂಡುಬಂದಿದೆ. ಈ...

ಗೋಲ್ಪಾರದಲ್ಲಿ ತೆರವು ಕಾರ್ಯಾಚರಣೆ ಪುನರಾರಂಭಿಸಿದ ಅಸ್ಸಾಂ ಸರ್ಕಾರ : ನೆಲೆ ಕಳೆದುಕೊಳ್ಳಲಿರುವ 600 ಕುಟುಂಬಗಳು

ದಹಿಕಾಟಾ ಮೀಸಲು ಅರಣ್ಯದೊಳಗಿನ 1,140 ಬಿಘಾ (376 ಎಕರೆಗೂ ಹೆಚ್ಚು) ಅರಣ್ಯ ಭೂಮಿಯ ಮೇಲಿನ ಅತಿಕ್ರಮಣವನ್ನು ತೆರವುಗೊಳಿಸಲು ಅಸ್ಸಾಂ ಸರ್ಕಾರ ಭಾನುವಾರ (ನ.9) ಗೋಲ್ಪಾರ ಜಿಲ್ಲೆಯಲ್ಲಿ ತನ್ನ ತೆರವು ಕಾರ್ಯಾಚರಣೆಯನ್ನು ಪುನರಾರಂಭಿಸಿದೆ. ಇದರಿಂದ...

ದಲಿತ ಸಂಶೋಧನಾ ವಿದ್ಯಾರ್ಥಿಗೆ ಜಾತಿ ತಾರತಮ್ಯ ಆರೋಪ : ತನಿಖೆಗೆ ಆದೇಶಿಸಿದ ಸರ್ಕಾರ

ತಿರುವನಂತಪುರದ ಕೇರಳ ವಿಶ್ವವಿದ್ಯಾಲಯದಲ್ಲಿ ದಲಿತ ಸಂಶೋಧನಾ ವಿದ್ಯಾರ್ಥಿಗೆ ಜಾತಿ ತಾರತಮ್ಯ ಮಾಡಲಾಗಿದೆ ಎಂಬ ಆರೋಪದ ಕುರಿತ ತನಿಖೆಗೆ ಉನ್ನತ ಶಿಕ್ಷಣ ಸಚಿವೆ ಆರ್‌.ಬಿಂದು ಶನಿವಾರ (ನ.8) ಆದೇಶಿಸಿದ್ದಾರೆ. ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ...

ಅಂಡಮಾನ್, ನಿಕೋಬಾರ್ ದ್ವೀಪಗಳಲ್ಲಿ ಭೂಕಂಪ : ರಿಕ್ಟರ್ ಮಾಪಕದಲ್ಲಿ 5.4 ತೀವ್ರತೆ ದಾಖಲು

ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಇಂದು (ನ.9, 2025) ಮಧ್ಯಾಹ್ನ 12:06ಕ್ಕೆ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 5.4 ತೀವ್ರತೆ ದಾಖಲಾಗಿದೆ. ಭೂಕಂಪದ ಕೇಂದ್ರ ಬಿಂದು ಭೂಮಿಯ 90 ಕಿಲೋ ಮೀಟರ್ ಆಳದಲ್ಲಿ...

ತರಬೇತಿ ನಿರತ ಪೊಲೀಸರಿಗೆ ಭಗವದ್ಗೀತೆ ಪಠಿಸಲು ಆದೇಶ : ಇಲಾಖೆಯ ಕೇಸರೀಕರಣ ಎಂದ ಕಾಂಗ್ರೆಸ್

ಎಂಟು ಕೇಂದ್ರಗಳಲ್ಲಿ ತರಬೇತಿ ಪಡೆಯುತ್ತಿರುವ ಮಧ್ಯಪ್ರದೇಶದ ಸುಮಾರು 4,000 ಹೊಸದಾಗಿ ನೇಮಕಗೊಂಡ ಪೊಲೀಸ್ ಕಾನ್‌ಸ್ಟೆಬಲ್‌ಗಳು ಹಿಂದೂ ಮಾಸದ ಮಾರ್ಗಶಿರದಲ್ಲಿ ಪ್ರತಿದಿನ ಸಂಜೆ 'ಭಗವದ್ಗೀತೆ'ಯ ಅಧ್ಯಾಯಗಳನ್ನು ಓದಲು ನಿರ್ದೇಶಿಸಲಾಗಿದೆ. ತರಬೇತಿಯಲ್ಲಿರುವ ಕಾನ್‌ಸ್ಟೆಬಲ್‌ಗಳಿಗೆ ನೀತಿವಂತ ಮತ್ತು ಶಿಸ್ತಿನ...

ಪಶ್ಚಿಮ ಬಂಗಾಳ : ನಾಲ್ಕು ವರ್ಷದ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರ

ನಾಲ್ಕು ವರ್ಷ ವಯಸ್ಸಿನ ಹೆಣ್ಣು ಮಗುವನ್ನು ಅಪಹರಿಸಿ, ಲೈಂಗಿಕ ದೌರ್ಜನ್ಯವೆಸಗಿದ ಆಘಾತಕಾರಿ ಘಟನೆ ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯಲ್ಲಿ ನಡೆದಿರುವುದಾಗಿ ವರದಿಯಾಗಿದೆ. ಶುಕ್ರವಾರ (ನ.7) ರಾತ್ರಿ ಈ ಘಟನೆ ನಡೆದಿದೆ. ಅಪರಿಚಿತರು ದುಷ್ಕೃತ್ಯವೆಸಗಿದ್ದಾರೆ. ಮಗುವಿನ...

ವಂದೇ ಭಾರತ್‌ ರೈಲಿನಲ್ಲಿ ಆರ್‌ಎಸ್‌ಎಸ್‌ ಗೀತೆ ಹಾಡಿದ ಮಕ್ಕಳು, ವಿಡಿಯೋ ಹಂಚಿಕೊಂಡ ರೈಲ್ವೆ : ತೀವ್ರ ವಿರೋಧ

ಶನಿವಾರ (ನ.8) ಎರ್ನಾಕುಲಂ-ಬೆಂಗಳೂರು ನಡುವಿನ ನೂತನ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲಿಗೆ ಚಾಲನೆ ನೀಡಿದ ಸಂದರ್ಭದಲ್ಲಿ ಶಾಲಾ ವಿದ್ಯಾರ್ಥಿಗಳು ಆರ್‌ಎಸ್‌ಎಸ್‌ ಗೀತೆ ಹಾಡಿರುವ ವಿಡಿಯೋವನ್ನು ದಕ್ಷಿಣ ರೈಲ್ವೆ ಹಂಚಿಕೊಂಡಿದ್ದು, ಕೇರಳದಲ್ಲಿ ತೀವ್ರ ಆಕ್ಷೇಪ...

ಶಾಲಾ ಮಕ್ಕಳಿಗೆ ನ್ಯೂಸ್ ಪೇಪರ್‌ನಲ್ಲಿ ಬಿಸಿಯೂಟ ಬಡಿಸಿದ ವಿಡಿಯೋ ವೈರಲ್ : ಪ್ರಧಾನಿ, ಸಿಎಂಗೆ ನಾಚಿಕೆಯಾಗ್ಬೇಕು ಎಂದ ರಾಹುಲ್ ಗಾಂಧಿ

ಮಧ್ಯಪ್ರದೇಶದ ಶಾಲೆಯೊಂದರ ಮಕ್ಕಳು ನ್ಯೂಸ್‌ ಪೇಪರ್‌ನಲ್ಲಿ ಮಧ್ಯಾಹ್ನದ ಬಿಸಿಯೂಟ ಸೇವಿಸಿದ ವಿಡಿಯೋ ಹಂಚಿಕೊಂಡಿರುವ ರಾಹುಲ್ ಗಾಂಧಿ, "ಇಂತಹ ದಯನೀಯ ಸ್ಥಿತಿಯಲ್ಲಿ ಭಾರತದ ಭವಿಷ್ಯ ಬೆಳಗುತ್ತಿರುವ ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಮೋಹನ್...

ಬಿಹಾರ ಚುನಾವಣೆ : ರಸ್ತೆ ಬದಿ ಪತ್ತೆಯಾದ ವಿವಿಪ್ಯಾಟ್‌ ಸ್ಲಿಪ್‌ಗಳು

ಬಿಹಾರದ ಸಮಸ್ತಿಪುರ ಜಿಲ್ಲೆಯ ಶೀತಲ್‌ಪಟ್ಟಿ ಗ್ರಾಮದ ಎಸ್‌ಆರ್ ಕಾಲೇಜು ಬಳಿ ಭಾರೀ ಸಂಖ್ಯೆಯಲ್ಲಿ ವೋಟರ್ ವೆರಿಫೈಯಬಲ್ ಪೇಪರ್ ಆಡಿಟ್ ಟ್ರಯಲ್ (ವಿವಿ ಪ್ಯಾಟ್‌) ಸ್ಲಿಪ್‌ಗಳು ಪತ್ತೆಯಾಗಿದ್ದು, ಭಾರತೀಯ ಚುನಾವಣಾ ಆಯೋಗ (ಇಸಿಐ) ಶನಿವಾರ...