Homeಮುಖಪುಟವಾಟ್ಸಾಪ್ ಹಿಂದಿಕ್ಕಿ ನಂ.1 ಸ್ಥಾನಕ್ಕೇರಿದ ಸಿಗ್ನಲ್: ಭಾರತ ಸೇರಿ 7 ದೇಶಗಳಲ್ಲಿ ಸಿಗ್ನಲ್ ಪಾರುಪತ್ಯ ಶುರು

ವಾಟ್ಸಾಪ್ ಹಿಂದಿಕ್ಕಿ ನಂ.1 ಸ್ಥಾನಕ್ಕೇರಿದ ಸಿಗ್ನಲ್: ಭಾರತ ಸೇರಿ 7 ದೇಶಗಳಲ್ಲಿ ಸಿಗ್ನಲ್ ಪಾರುಪತ್ಯ ಶುರು

ಕೇವಲ ಮೂರು ದಿನಗಳ ಅವಧಿಯಲ್ಲಿ ಹೆಚ್ಚು ಸುರಕ್ಷಿತ ಎಂದು ಹೇಳಲಾದ ಸಿಗ್ನಲ್‌ ಆಪ್‌, ಅತಿ ಹೆಚ್ಚು ಡೌನ್‌ಲೋಡ್‌ ಆಗುವ ಮೂಲಕ ಉಚಿತ ಮೆಸೇಜಿಂಗ್‌ ಆಪ್‌ಗಳ ಪಟ್ಟಿಯಲ್ಲಿ ವಾಟ್ಸಾಪ್‌‌ ಅನ್ನು ಎರಡನೆಯ ಸ್ಥಾನಕ್ಕೆ ತಳ್ಳಿದೆ.

- Advertisement -
- Advertisement -

ಎರಡು ವರ್ಷಗಳ ಹಿಂದೆ 40 ಕೋಟಿ ಬಳಕೆದಾರರನ್ನು ಹೊಂದಿದ್ದ ವಾಟ್ಸಾಪ್ ಕಳೆದ ವರ್ಷ ಡಿಸೆಂಬರ್‌ ಅಂತ್ಯದ ಹೊತ್ತಿಗೆ 6 ಕೋಟಿ ಬಳಕೆದಾರರನ್ನು ಕಳೆದುಕೊಂಡಿತ್ತು. ಆದರೆ ಈಗ ಬಳಕೆದಾರರ ಸಂದೇಶಗಳನ್ನು ಓದುತ್ತೇವೆ ಮತ್ತು ಫೇಸ್‌ಬುಕ್ ಸೇರಿದಂತೆ ಹಲವು ಕಂಪನಿಗಳಿಗೆ ಡೇಟಾ ಮಾರುತ್ತೇವೆ ಎಂದು ಘೋಷಿಸಿದ ಕೂಡಲೇ ಜನ ವಾಟ್ಸಾಪ್ ತೊರೆದು ಸಿಗ್ನಲ್ ಆಪ್ ಸೇರುತ್ತಿದ್ದಾರೆ. ಹಾಗಾಗಿ ಭಾರತ ಸೇರಿದಂತೆ ಆರು ರಾಷ್ಟ್ರಗಳಲ್ಲಿ ಅತಿ ಹೆಚ್ಚು ಡೌನ್‌ಲೋಡ್‌ ಆಪ್‌ಗಳ ಪಟ್ಟಿಯಲ್ಲಿ ಸಿಗ್ನಲ್ ನಂಬರ್‍ ಒನ್ ಸ್ಥಾನಕ್ಕೇರಿದೆ.

ಕಳೆದವಾರ ವಾಟ್ಸಾಪ್‌ ತನ್ನ ಖಾಸಗಿ ನಿಯಮಗಳನ್ನು ಬದಲಿಸುತ್ತಿರುವ ಹೇಳಿಕೆ ನೀಡಿದ ಬಳಿಕ ಕೇವಲ ಮೂರು ದಿನಗಳ ಅವಧಿಯಲ್ಲಿ ಹೆಚ್ಚು ಸುರಕ್ಷಿತ ಎಂದು ಹೇಳಲಾದ ಸಿಗ್ನಲ್‌ ಆಪ್‌ ಜನಪ್ರಿಯವಾಗಿದ್ದಷ್ಟೇ ಅಲ್ಲ, ಅತಿ ಹೆಚ್ಚು ಡೌನ್‌ಲೋಡ್‌ ಆಗುವ ಮೂಲಕ ಉಚಿತ ಮೆಸೇಜಿಂಗ್‌ ಆಪ್‌ಗಳ ಪಟ್ಟಿಯಲ್ಲಿ ವಾಟ್ಸ್‌ ಆಪ್‌ ಅನ್ನು ಎರಡನೆಯ ಸ್ಥಾನಕ್ಕೆ ತಳ್ಳಿದೆ.

ಭಾರತ ಅಷ್ಟೇ ಅಲ್ಲದೆ ಜರ್ಮನಿ, ಫ್ರಾನ್ಸ್, ಆಸ್ಟ್ರಿಯಾ, ಫಿನ್‌ಲ್ಯಾಂಡ್‌, ಹಾಂಕಾಂಗ್‌ ಮತ್ತು ಸ್ವಿಟ್ಜರ್‌ಲ್ಯಾಂಡ್‌ಗಳಲ್ಲೂ ಇದೇ ಬೆಳವಣಿಗೆ. ಸಿಗ್ನಲ್‌ ತನ್ನ ಅಧಿಕೃತ ಟ್ವಿಟರ್‌ ಹ್ಯಾಂಡಲ್‌ನಲ್ಲಿ ”ನೋಡು ನೀನೇನು ಮಾಡಿಬಿಟ್ಟೆ” ಎಂದು ಟ್ವೀಟ್ ಮಾಡುವ ಮೂಲಕ ವಾಟ್ಸಾಪ್‌ನ ಕಾಲೆಳೆದಿದೆ.

ಅತಿ ದೊಡ್ಡ ಬಳಕೆದಾರರ ಮಾರುಕಟ್ಟೆಯನ್ನು ಹೊಂದಿದ್ದ ವಾಟ್ಸಾಪ್‌ ಯಾವುದೇ ಹೊಸ ಫೀಚರ್‌ ಪರಿಚಯಿಸುವ ಉದ್ದೇಶವಿದ್ದರೆ ಅದನ್ನು ಮೊದಲು ಮಾಡುತ್ತಿದುದೇ ಭಾರತೀಯ ಮಾರುಕಟ್ಟೆಯಲ್ಲಿ. ಏಕೆಂದರೆ ಅತಿ ದೊಡ್ಡ ಸಂಖ್ಯೆಯ ಬಳಕೆದಾರರು ಇಲ್ಲಿದ್ದರು.

ವಾಟ್ಸಾಪ್‌ನ ಡಾರ್ಕ್‌ಮೋಡ್‌ ಫೀಚರ್‌ ಆಗಲಿ, ಪೇಮೆಂಟ್ ಆಪ್ಶನ್‌ ಆಗಲಿ ಎಲ್ಲವೂ ಪ್ರಯೋಗವಾಗಿದ್ದು ಮೊದಲ ಭಾರತದಲ್ಲಿ. ಸುಲಭವಾಗಿ ಸೆಳೆಯಬಹುದಾದ ಮಾರುಕಟ್ಟೆ ಎಂದು ಭಾವಿಸಿದ್ದ ವಾಟ್ಸಾಪ್‌ ತನ್ನೆಲ್ಲಾ ಮಾರುಕಟ್ಟೆಯ ತಂತ್ರಗಳನ್ನು ಸಲೀಸಾಗಿ ಇಲ್ಲಿ ಬಳಸುತ್ತಿತ್ತು.

ಫೇಸ್‌ಬುಕ್‌, ವಾಟ್ಸ್‌ಆಪ್‌ ಮತ್ತು ಇನ್‌ಸ್ಟಾಗ್ರಾಮ್‌ ಮೂಲಕ ಅತಿದೊಡ್ಡ ಬಳಕೆದಾರರ ಜಾಲವನ್ನು ಹೊಂದಿರುವ ಧಾಷ್ಟ್ಯದಿಂದ ಕಳೆದ ಬಳಕೆದಾರರ ಮಾಹಿತಿ ಬಳಸಿಕೊಳ್ಳುವ ಹೊಸ ಖಾಸಗಿನಿಯಮವನ್ನು ಫೆಬ್ರವರಿ 8 ಒಳಗೆ ಒಪ್ಪಿಕೊಳ್ಳಿ ಇಲ್ಲವೇ ನಿಮ್ಮ ವಾಟ್ಸಾಪ್ ಅಕೌಂಟ್‌ ಕಳೆದುಕೊಳ್ಳಿ ಎಂದು ಹೇಳಿತ್ತು.

ವಾಟ್ಸ್‌ಆಪ್‌ನ ಈ ನಿಯಮದಿಂದ ಆಕ್ರೋಶಗೊಂಡ ಬಳಕೆದಾರರು ಪರ್ಯಾಯ ಆಪ್‌ ಹುಡುಕಾಟದಲ್ಲಿ ಗುರುತಿಸಿದ್ದು ಸಿಗ್ನಲ್‌ ಅನ್ನು.

ಸಿಗ್ನಲ್‌ ಸಂಪೂರ್ಣ ಮಾಹಿತಿ ಸುರಕ್ಷತೆಯ ವಾಗ್ದಾನ ನೀಡುತ್ತದೆ. ಬಳಕೆಯಲ್ಲೂ ಅತ್ಯಂತ ಸರಳ. ಇದೇ ಕಾರಣಕ್ಕೆ ಖಾಸಗಿತನದ ಬಗ್ಗೆ ಅಪಾರ ಕಾಳಜಿ ಇರುವ ಎಡ್ವರ್ಡ್‌ ಸ್ನೋ ಡೆನ್‌ ಐದು ವರ್ಷಗಳ ಹಿಂದೆಯೇ ನಾನು ಸಿಗ್ನಲ್‌ ಆಪ್‌ ಬಳಸುತ್ತೇನೆ ಎಂದು ಹೇಳಿಕೊಂಡಿದ್ದರು.

ಇತ್ತೀಚೆಗೆ, ಟೆಸ್ಲಾ, ಸ್ಪೇಸ್‌ಎಕ್ಸ್‌ ಮಾಲಿಕ ಎಲಾನ್‌ ಮಸ್ಕ್‌ ಕೂಡ ‘ ಸಿಗ್ನಲ್‌ ಬಳಸಿ’ ಎಂದು ಟ್ವೀಟ್‌ ಮಾಡಿ ಸಲಹೆ ನೀಡಿದ್ದರು.

ಕಳೆದ ವಾರ ಫೋರ್ಬ್ಸ್‌ ಪಟ್ಟಿದಂತೆ ವಾಟ್ಸ್‌ಆಪ್‌ ತನ್ನ ಬಳಕೆದಾರರಿಂದ ಎರಡು ರೀತಿಯಲ್ಲಿ ಮಾಹಿತಿ ಸಂಗ್ರಹಿಸುತ್ತದೆ. ಒಂದು ಆಪ್‌ ಚಟುವಟಿಕೆಗಳನ್ನು ಮತ್ತು ಆಪ್‌ನ ಒಟ್ಟು ನಾಲಿಟಿಕ್ಸ್‌ ಅನ್ನು. ಅಂದರೆ ನಿರಂತರವಾಗಿ ಬಳಕೆದಾರರ ಗೂಢಚಾರಿಕೆ ಮಾಡುವುದಲ್ಲದೆ, ಅದರ ಅನಾಲಿಟಿಕ್ಸ್‌ ಸಂಗ್ರಹಿಸುವುದು (ಇದು ನೀವು ಹೆಚ್ಚು ಭೇಟಿ ನೀಡುವ, ಹೆಚ್ಚು ಮಾತನಾಡುವ, ಹೆಚ್ಚು ಖರೀದಿಸುವ ವಿವರಗಳನ್ನು ಕಲೆಹಾಕುವ ವಿಧಾನ). ಅಂದರೆ ನಿಮ್ಮ ಖರೀದಿ, ನೀವಿರುವ/ಓಡಾಡುವ ಸ್ಥಳಗಳು, ಕಾಂಟ್ಯಾಕ್ಟ್‌ಗಳು, ಬಳಕೆದಾರರ ಎಲ್ಲ ಮಾಹಿತಿ, ಯೂಸರ್‌ ಐಡಿಗಳು, ಡಿವೈಸ್‌ ಮಾಹಿತಿ, ಬಳಕೆಯ ಪ್ರಮಾಣ, ಹಣಕಾಸಿನ ಮಾಹಿತಿ.

ಈ ವಿಷಯ ಬಹಿರಂಗಗೊಳ್ಳುತ್ತಿದ್ದಂತೆ ಭಾರತೀಯರು, ಮಾಹಿತಿ ಸುರಕ್ಷತೆ, ಖಾಸಗಿತನಕ್ಕೆ ಹೆಚ್ಚು ಆದ್ಯತೆ ನೀಡುವ ಸಿಗ್ನಲ್‌ ಆಪ್‌ನ ಕಡೆ ವಾಲಿದ್ದಾರೆ.

ಎಲಾನ್‌ ಮಸ್ಕ್‌ ಟ್ವೀಟ್‌ ಬಳಿಕ ಶೇರು ಮಾರುಕಟ್ಟೆಯಲ್ಲೂ ಹೆಚ್ಚಿನ ಮೌಲ್ಯ ಗಳಿಸಿದೆ. ಕಳೆದ ವರ್ಷಾಂತ್ಯದವರೆಗೆ 1 ಡಾಲರ್‌ ಕೂಡ ದಾಟದ ಸಿಗ್ನಲ್‌ ಬೆಲೆ ಈಗ 7.19 ಡಾಲರ್‌! ಜ.8ರಂದು 10 ಡಾಲರ್‌ವರೆಗೆ ಇದರ ಶೇರು ಮೌಲ್ಯ ಹೆಚ್ಚಿತ್ತು. ವಾಟ್ಸ್‌ ಆಪ್‌ ಸಿಗ್ನಲ್‌ ಅತಿ ದೊಡ್ಡ ಹೊಡೆತ ನೀಡುತ್ತಿರುವ ಲಕ್ಷಣ ಇದು ಎಂದು ಮಾರುಕಟ್ಟೆ ತಜ್ಞರು ವಿಶ್ಲೇಷಿಸುತ್ತಿದ್ದಾರೆ.

ಕೃಪೆ: ಟೆಕ್‌ಕನ್ನಡ


ಇದನ್ನೂ ಓದಿ: ವಾಟ್ಸಾಪ್‌ಗೆ ಗುಡ್‌ಬೈ ಹೇಳಿ, ಸಿಗ್ನಲ್‌ಗೆ ಹೆಲೋ ಹೇಳಿ: ಏನಿದು ಸಿಗ್ನಲ್ ಆಪ್?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...