Homeಮುಖಪುಟವಾಟ್ಸಾಪ್ ಹಿಂದಿಕ್ಕಿ ನಂ.1 ಸ್ಥಾನಕ್ಕೇರಿದ ಸಿಗ್ನಲ್: ಭಾರತ ಸೇರಿ 7 ದೇಶಗಳಲ್ಲಿ ಸಿಗ್ನಲ್ ಪಾರುಪತ್ಯ ಶುರು

ವಾಟ್ಸಾಪ್ ಹಿಂದಿಕ್ಕಿ ನಂ.1 ಸ್ಥಾನಕ್ಕೇರಿದ ಸಿಗ್ನಲ್: ಭಾರತ ಸೇರಿ 7 ದೇಶಗಳಲ್ಲಿ ಸಿಗ್ನಲ್ ಪಾರುಪತ್ಯ ಶುರು

ಕೇವಲ ಮೂರು ದಿನಗಳ ಅವಧಿಯಲ್ಲಿ ಹೆಚ್ಚು ಸುರಕ್ಷಿತ ಎಂದು ಹೇಳಲಾದ ಸಿಗ್ನಲ್‌ ಆಪ್‌, ಅತಿ ಹೆಚ್ಚು ಡೌನ್‌ಲೋಡ್‌ ಆಗುವ ಮೂಲಕ ಉಚಿತ ಮೆಸೇಜಿಂಗ್‌ ಆಪ್‌ಗಳ ಪಟ್ಟಿಯಲ್ಲಿ ವಾಟ್ಸಾಪ್‌‌ ಅನ್ನು ಎರಡನೆಯ ಸ್ಥಾನಕ್ಕೆ ತಳ್ಳಿದೆ.

- Advertisement -
- Advertisement -

ಎರಡು ವರ್ಷಗಳ ಹಿಂದೆ 40 ಕೋಟಿ ಬಳಕೆದಾರರನ್ನು ಹೊಂದಿದ್ದ ವಾಟ್ಸಾಪ್ ಕಳೆದ ವರ್ಷ ಡಿಸೆಂಬರ್‌ ಅಂತ್ಯದ ಹೊತ್ತಿಗೆ 6 ಕೋಟಿ ಬಳಕೆದಾರರನ್ನು ಕಳೆದುಕೊಂಡಿತ್ತು. ಆದರೆ ಈಗ ಬಳಕೆದಾರರ ಸಂದೇಶಗಳನ್ನು ಓದುತ್ತೇವೆ ಮತ್ತು ಫೇಸ್‌ಬುಕ್ ಸೇರಿದಂತೆ ಹಲವು ಕಂಪನಿಗಳಿಗೆ ಡೇಟಾ ಮಾರುತ್ತೇವೆ ಎಂದು ಘೋಷಿಸಿದ ಕೂಡಲೇ ಜನ ವಾಟ್ಸಾಪ್ ತೊರೆದು ಸಿಗ್ನಲ್ ಆಪ್ ಸೇರುತ್ತಿದ್ದಾರೆ. ಹಾಗಾಗಿ ಭಾರತ ಸೇರಿದಂತೆ ಆರು ರಾಷ್ಟ್ರಗಳಲ್ಲಿ ಅತಿ ಹೆಚ್ಚು ಡೌನ್‌ಲೋಡ್‌ ಆಪ್‌ಗಳ ಪಟ್ಟಿಯಲ್ಲಿ ಸಿಗ್ನಲ್ ನಂಬರ್‍ ಒನ್ ಸ್ಥಾನಕ್ಕೇರಿದೆ.

ಕಳೆದವಾರ ವಾಟ್ಸಾಪ್‌ ತನ್ನ ಖಾಸಗಿ ನಿಯಮಗಳನ್ನು ಬದಲಿಸುತ್ತಿರುವ ಹೇಳಿಕೆ ನೀಡಿದ ಬಳಿಕ ಕೇವಲ ಮೂರು ದಿನಗಳ ಅವಧಿಯಲ್ಲಿ ಹೆಚ್ಚು ಸುರಕ್ಷಿತ ಎಂದು ಹೇಳಲಾದ ಸಿಗ್ನಲ್‌ ಆಪ್‌ ಜನಪ್ರಿಯವಾಗಿದ್ದಷ್ಟೇ ಅಲ್ಲ, ಅತಿ ಹೆಚ್ಚು ಡೌನ್‌ಲೋಡ್‌ ಆಗುವ ಮೂಲಕ ಉಚಿತ ಮೆಸೇಜಿಂಗ್‌ ಆಪ್‌ಗಳ ಪಟ್ಟಿಯಲ್ಲಿ ವಾಟ್ಸ್‌ ಆಪ್‌ ಅನ್ನು ಎರಡನೆಯ ಸ್ಥಾನಕ್ಕೆ ತಳ್ಳಿದೆ.

ಭಾರತ ಅಷ್ಟೇ ಅಲ್ಲದೆ ಜರ್ಮನಿ, ಫ್ರಾನ್ಸ್, ಆಸ್ಟ್ರಿಯಾ, ಫಿನ್‌ಲ್ಯಾಂಡ್‌, ಹಾಂಕಾಂಗ್‌ ಮತ್ತು ಸ್ವಿಟ್ಜರ್‌ಲ್ಯಾಂಡ್‌ಗಳಲ್ಲೂ ಇದೇ ಬೆಳವಣಿಗೆ. ಸಿಗ್ನಲ್‌ ತನ್ನ ಅಧಿಕೃತ ಟ್ವಿಟರ್‌ ಹ್ಯಾಂಡಲ್‌ನಲ್ಲಿ ”ನೋಡು ನೀನೇನು ಮಾಡಿಬಿಟ್ಟೆ” ಎಂದು ಟ್ವೀಟ್ ಮಾಡುವ ಮೂಲಕ ವಾಟ್ಸಾಪ್‌ನ ಕಾಲೆಳೆದಿದೆ.

ಅತಿ ದೊಡ್ಡ ಬಳಕೆದಾರರ ಮಾರುಕಟ್ಟೆಯನ್ನು ಹೊಂದಿದ್ದ ವಾಟ್ಸಾಪ್‌ ಯಾವುದೇ ಹೊಸ ಫೀಚರ್‌ ಪರಿಚಯಿಸುವ ಉದ್ದೇಶವಿದ್ದರೆ ಅದನ್ನು ಮೊದಲು ಮಾಡುತ್ತಿದುದೇ ಭಾರತೀಯ ಮಾರುಕಟ್ಟೆಯಲ್ಲಿ. ಏಕೆಂದರೆ ಅತಿ ದೊಡ್ಡ ಸಂಖ್ಯೆಯ ಬಳಕೆದಾರರು ಇಲ್ಲಿದ್ದರು.

ವಾಟ್ಸಾಪ್‌ನ ಡಾರ್ಕ್‌ಮೋಡ್‌ ಫೀಚರ್‌ ಆಗಲಿ, ಪೇಮೆಂಟ್ ಆಪ್ಶನ್‌ ಆಗಲಿ ಎಲ್ಲವೂ ಪ್ರಯೋಗವಾಗಿದ್ದು ಮೊದಲ ಭಾರತದಲ್ಲಿ. ಸುಲಭವಾಗಿ ಸೆಳೆಯಬಹುದಾದ ಮಾರುಕಟ್ಟೆ ಎಂದು ಭಾವಿಸಿದ್ದ ವಾಟ್ಸಾಪ್‌ ತನ್ನೆಲ್ಲಾ ಮಾರುಕಟ್ಟೆಯ ತಂತ್ರಗಳನ್ನು ಸಲೀಸಾಗಿ ಇಲ್ಲಿ ಬಳಸುತ್ತಿತ್ತು.

ಫೇಸ್‌ಬುಕ್‌, ವಾಟ್ಸ್‌ಆಪ್‌ ಮತ್ತು ಇನ್‌ಸ್ಟಾಗ್ರಾಮ್‌ ಮೂಲಕ ಅತಿದೊಡ್ಡ ಬಳಕೆದಾರರ ಜಾಲವನ್ನು ಹೊಂದಿರುವ ಧಾಷ್ಟ್ಯದಿಂದ ಕಳೆದ ಬಳಕೆದಾರರ ಮಾಹಿತಿ ಬಳಸಿಕೊಳ್ಳುವ ಹೊಸ ಖಾಸಗಿನಿಯಮವನ್ನು ಫೆಬ್ರವರಿ 8 ಒಳಗೆ ಒಪ್ಪಿಕೊಳ್ಳಿ ಇಲ್ಲವೇ ನಿಮ್ಮ ವಾಟ್ಸಾಪ್ ಅಕೌಂಟ್‌ ಕಳೆದುಕೊಳ್ಳಿ ಎಂದು ಹೇಳಿತ್ತು.

ವಾಟ್ಸ್‌ಆಪ್‌ನ ಈ ನಿಯಮದಿಂದ ಆಕ್ರೋಶಗೊಂಡ ಬಳಕೆದಾರರು ಪರ್ಯಾಯ ಆಪ್‌ ಹುಡುಕಾಟದಲ್ಲಿ ಗುರುತಿಸಿದ್ದು ಸಿಗ್ನಲ್‌ ಅನ್ನು.

ಸಿಗ್ನಲ್‌ ಸಂಪೂರ್ಣ ಮಾಹಿತಿ ಸುರಕ್ಷತೆಯ ವಾಗ್ದಾನ ನೀಡುತ್ತದೆ. ಬಳಕೆಯಲ್ಲೂ ಅತ್ಯಂತ ಸರಳ. ಇದೇ ಕಾರಣಕ್ಕೆ ಖಾಸಗಿತನದ ಬಗ್ಗೆ ಅಪಾರ ಕಾಳಜಿ ಇರುವ ಎಡ್ವರ್ಡ್‌ ಸ್ನೋ ಡೆನ್‌ ಐದು ವರ್ಷಗಳ ಹಿಂದೆಯೇ ನಾನು ಸಿಗ್ನಲ್‌ ಆಪ್‌ ಬಳಸುತ್ತೇನೆ ಎಂದು ಹೇಳಿಕೊಂಡಿದ್ದರು.

ಇತ್ತೀಚೆಗೆ, ಟೆಸ್ಲಾ, ಸ್ಪೇಸ್‌ಎಕ್ಸ್‌ ಮಾಲಿಕ ಎಲಾನ್‌ ಮಸ್ಕ್‌ ಕೂಡ ‘ ಸಿಗ್ನಲ್‌ ಬಳಸಿ’ ಎಂದು ಟ್ವೀಟ್‌ ಮಾಡಿ ಸಲಹೆ ನೀಡಿದ್ದರು.

ಕಳೆದ ವಾರ ಫೋರ್ಬ್ಸ್‌ ಪಟ್ಟಿದಂತೆ ವಾಟ್ಸ್‌ಆಪ್‌ ತನ್ನ ಬಳಕೆದಾರರಿಂದ ಎರಡು ರೀತಿಯಲ್ಲಿ ಮಾಹಿತಿ ಸಂಗ್ರಹಿಸುತ್ತದೆ. ಒಂದು ಆಪ್‌ ಚಟುವಟಿಕೆಗಳನ್ನು ಮತ್ತು ಆಪ್‌ನ ಒಟ್ಟು ನಾಲಿಟಿಕ್ಸ್‌ ಅನ್ನು. ಅಂದರೆ ನಿರಂತರವಾಗಿ ಬಳಕೆದಾರರ ಗೂಢಚಾರಿಕೆ ಮಾಡುವುದಲ್ಲದೆ, ಅದರ ಅನಾಲಿಟಿಕ್ಸ್‌ ಸಂಗ್ರಹಿಸುವುದು (ಇದು ನೀವು ಹೆಚ್ಚು ಭೇಟಿ ನೀಡುವ, ಹೆಚ್ಚು ಮಾತನಾಡುವ, ಹೆಚ್ಚು ಖರೀದಿಸುವ ವಿವರಗಳನ್ನು ಕಲೆಹಾಕುವ ವಿಧಾನ). ಅಂದರೆ ನಿಮ್ಮ ಖರೀದಿ, ನೀವಿರುವ/ಓಡಾಡುವ ಸ್ಥಳಗಳು, ಕಾಂಟ್ಯಾಕ್ಟ್‌ಗಳು, ಬಳಕೆದಾರರ ಎಲ್ಲ ಮಾಹಿತಿ, ಯೂಸರ್‌ ಐಡಿಗಳು, ಡಿವೈಸ್‌ ಮಾಹಿತಿ, ಬಳಕೆಯ ಪ್ರಮಾಣ, ಹಣಕಾಸಿನ ಮಾಹಿತಿ.

ಈ ವಿಷಯ ಬಹಿರಂಗಗೊಳ್ಳುತ್ತಿದ್ದಂತೆ ಭಾರತೀಯರು, ಮಾಹಿತಿ ಸುರಕ್ಷತೆ, ಖಾಸಗಿತನಕ್ಕೆ ಹೆಚ್ಚು ಆದ್ಯತೆ ನೀಡುವ ಸಿಗ್ನಲ್‌ ಆಪ್‌ನ ಕಡೆ ವಾಲಿದ್ದಾರೆ.

ಎಲಾನ್‌ ಮಸ್ಕ್‌ ಟ್ವೀಟ್‌ ಬಳಿಕ ಶೇರು ಮಾರುಕಟ್ಟೆಯಲ್ಲೂ ಹೆಚ್ಚಿನ ಮೌಲ್ಯ ಗಳಿಸಿದೆ. ಕಳೆದ ವರ್ಷಾಂತ್ಯದವರೆಗೆ 1 ಡಾಲರ್‌ ಕೂಡ ದಾಟದ ಸಿಗ್ನಲ್‌ ಬೆಲೆ ಈಗ 7.19 ಡಾಲರ್‌! ಜ.8ರಂದು 10 ಡಾಲರ್‌ವರೆಗೆ ಇದರ ಶೇರು ಮೌಲ್ಯ ಹೆಚ್ಚಿತ್ತು. ವಾಟ್ಸ್‌ ಆಪ್‌ ಸಿಗ್ನಲ್‌ ಅತಿ ದೊಡ್ಡ ಹೊಡೆತ ನೀಡುತ್ತಿರುವ ಲಕ್ಷಣ ಇದು ಎಂದು ಮಾರುಕಟ್ಟೆ ತಜ್ಞರು ವಿಶ್ಲೇಷಿಸುತ್ತಿದ್ದಾರೆ.

ಕೃಪೆ: ಟೆಕ್‌ಕನ್ನಡ


ಇದನ್ನೂ ಓದಿ: ವಾಟ್ಸಾಪ್‌ಗೆ ಗುಡ್‌ಬೈ ಹೇಳಿ, ಸಿಗ್ನಲ್‌ಗೆ ಹೆಲೋ ಹೇಳಿ: ಏನಿದು ಸಿಗ್ನಲ್ ಆಪ್?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...