Homeಮುಖಪುಟವಾಟ್ಸಾಪ್ ಹಿಂದಿಕ್ಕಿ ನಂ.1 ಸ್ಥಾನಕ್ಕೇರಿದ ಸಿಗ್ನಲ್: ಭಾರತ ಸೇರಿ 7 ದೇಶಗಳಲ್ಲಿ ಸಿಗ್ನಲ್ ಪಾರುಪತ್ಯ ಶುರು

ವಾಟ್ಸಾಪ್ ಹಿಂದಿಕ್ಕಿ ನಂ.1 ಸ್ಥಾನಕ್ಕೇರಿದ ಸಿಗ್ನಲ್: ಭಾರತ ಸೇರಿ 7 ದೇಶಗಳಲ್ಲಿ ಸಿಗ್ನಲ್ ಪಾರುಪತ್ಯ ಶುರು

ಕೇವಲ ಮೂರು ದಿನಗಳ ಅವಧಿಯಲ್ಲಿ ಹೆಚ್ಚು ಸುರಕ್ಷಿತ ಎಂದು ಹೇಳಲಾದ ಸಿಗ್ನಲ್‌ ಆಪ್‌, ಅತಿ ಹೆಚ್ಚು ಡೌನ್‌ಲೋಡ್‌ ಆಗುವ ಮೂಲಕ ಉಚಿತ ಮೆಸೇಜಿಂಗ್‌ ಆಪ್‌ಗಳ ಪಟ್ಟಿಯಲ್ಲಿ ವಾಟ್ಸಾಪ್‌‌ ಅನ್ನು ಎರಡನೆಯ ಸ್ಥಾನಕ್ಕೆ ತಳ್ಳಿದೆ.

- Advertisement -
- Advertisement -

ಎರಡು ವರ್ಷಗಳ ಹಿಂದೆ 40 ಕೋಟಿ ಬಳಕೆದಾರರನ್ನು ಹೊಂದಿದ್ದ ವಾಟ್ಸಾಪ್ ಕಳೆದ ವರ್ಷ ಡಿಸೆಂಬರ್‌ ಅಂತ್ಯದ ಹೊತ್ತಿಗೆ 6 ಕೋಟಿ ಬಳಕೆದಾರರನ್ನು ಕಳೆದುಕೊಂಡಿತ್ತು. ಆದರೆ ಈಗ ಬಳಕೆದಾರರ ಸಂದೇಶಗಳನ್ನು ಓದುತ್ತೇವೆ ಮತ್ತು ಫೇಸ್‌ಬುಕ್ ಸೇರಿದಂತೆ ಹಲವು ಕಂಪನಿಗಳಿಗೆ ಡೇಟಾ ಮಾರುತ್ತೇವೆ ಎಂದು ಘೋಷಿಸಿದ ಕೂಡಲೇ ಜನ ವಾಟ್ಸಾಪ್ ತೊರೆದು ಸಿಗ್ನಲ್ ಆಪ್ ಸೇರುತ್ತಿದ್ದಾರೆ. ಹಾಗಾಗಿ ಭಾರತ ಸೇರಿದಂತೆ ಆರು ರಾಷ್ಟ್ರಗಳಲ್ಲಿ ಅತಿ ಹೆಚ್ಚು ಡೌನ್‌ಲೋಡ್‌ ಆಪ್‌ಗಳ ಪಟ್ಟಿಯಲ್ಲಿ ಸಿಗ್ನಲ್ ನಂಬರ್‍ ಒನ್ ಸ್ಥಾನಕ್ಕೇರಿದೆ.

ಕಳೆದವಾರ ವಾಟ್ಸಾಪ್‌ ತನ್ನ ಖಾಸಗಿ ನಿಯಮಗಳನ್ನು ಬದಲಿಸುತ್ತಿರುವ ಹೇಳಿಕೆ ನೀಡಿದ ಬಳಿಕ ಕೇವಲ ಮೂರು ದಿನಗಳ ಅವಧಿಯಲ್ಲಿ ಹೆಚ್ಚು ಸುರಕ್ಷಿತ ಎಂದು ಹೇಳಲಾದ ಸಿಗ್ನಲ್‌ ಆಪ್‌ ಜನಪ್ರಿಯವಾಗಿದ್ದಷ್ಟೇ ಅಲ್ಲ, ಅತಿ ಹೆಚ್ಚು ಡೌನ್‌ಲೋಡ್‌ ಆಗುವ ಮೂಲಕ ಉಚಿತ ಮೆಸೇಜಿಂಗ್‌ ಆಪ್‌ಗಳ ಪಟ್ಟಿಯಲ್ಲಿ ವಾಟ್ಸ್‌ ಆಪ್‌ ಅನ್ನು ಎರಡನೆಯ ಸ್ಥಾನಕ್ಕೆ ತಳ್ಳಿದೆ.

ಭಾರತ ಅಷ್ಟೇ ಅಲ್ಲದೆ ಜರ್ಮನಿ, ಫ್ರಾನ್ಸ್, ಆಸ್ಟ್ರಿಯಾ, ಫಿನ್‌ಲ್ಯಾಂಡ್‌, ಹಾಂಕಾಂಗ್‌ ಮತ್ತು ಸ್ವಿಟ್ಜರ್‌ಲ್ಯಾಂಡ್‌ಗಳಲ್ಲೂ ಇದೇ ಬೆಳವಣಿಗೆ. ಸಿಗ್ನಲ್‌ ತನ್ನ ಅಧಿಕೃತ ಟ್ವಿಟರ್‌ ಹ್ಯಾಂಡಲ್‌ನಲ್ಲಿ ”ನೋಡು ನೀನೇನು ಮಾಡಿಬಿಟ್ಟೆ” ಎಂದು ಟ್ವೀಟ್ ಮಾಡುವ ಮೂಲಕ ವಾಟ್ಸಾಪ್‌ನ ಕಾಲೆಳೆದಿದೆ.

ಅತಿ ದೊಡ್ಡ ಬಳಕೆದಾರರ ಮಾರುಕಟ್ಟೆಯನ್ನು ಹೊಂದಿದ್ದ ವಾಟ್ಸಾಪ್‌ ಯಾವುದೇ ಹೊಸ ಫೀಚರ್‌ ಪರಿಚಯಿಸುವ ಉದ್ದೇಶವಿದ್ದರೆ ಅದನ್ನು ಮೊದಲು ಮಾಡುತ್ತಿದುದೇ ಭಾರತೀಯ ಮಾರುಕಟ್ಟೆಯಲ್ಲಿ. ಏಕೆಂದರೆ ಅತಿ ದೊಡ್ಡ ಸಂಖ್ಯೆಯ ಬಳಕೆದಾರರು ಇಲ್ಲಿದ್ದರು.

ವಾಟ್ಸಾಪ್‌ನ ಡಾರ್ಕ್‌ಮೋಡ್‌ ಫೀಚರ್‌ ಆಗಲಿ, ಪೇಮೆಂಟ್ ಆಪ್ಶನ್‌ ಆಗಲಿ ಎಲ್ಲವೂ ಪ್ರಯೋಗವಾಗಿದ್ದು ಮೊದಲ ಭಾರತದಲ್ಲಿ. ಸುಲಭವಾಗಿ ಸೆಳೆಯಬಹುದಾದ ಮಾರುಕಟ್ಟೆ ಎಂದು ಭಾವಿಸಿದ್ದ ವಾಟ್ಸಾಪ್‌ ತನ್ನೆಲ್ಲಾ ಮಾರುಕಟ್ಟೆಯ ತಂತ್ರಗಳನ್ನು ಸಲೀಸಾಗಿ ಇಲ್ಲಿ ಬಳಸುತ್ತಿತ್ತು.

ಫೇಸ್‌ಬುಕ್‌, ವಾಟ್ಸ್‌ಆಪ್‌ ಮತ್ತು ಇನ್‌ಸ್ಟಾಗ್ರಾಮ್‌ ಮೂಲಕ ಅತಿದೊಡ್ಡ ಬಳಕೆದಾರರ ಜಾಲವನ್ನು ಹೊಂದಿರುವ ಧಾಷ್ಟ್ಯದಿಂದ ಕಳೆದ ಬಳಕೆದಾರರ ಮಾಹಿತಿ ಬಳಸಿಕೊಳ್ಳುವ ಹೊಸ ಖಾಸಗಿನಿಯಮವನ್ನು ಫೆಬ್ರವರಿ 8 ಒಳಗೆ ಒಪ್ಪಿಕೊಳ್ಳಿ ಇಲ್ಲವೇ ನಿಮ್ಮ ವಾಟ್ಸಾಪ್ ಅಕೌಂಟ್‌ ಕಳೆದುಕೊಳ್ಳಿ ಎಂದು ಹೇಳಿತ್ತು.

ವಾಟ್ಸ್‌ಆಪ್‌ನ ಈ ನಿಯಮದಿಂದ ಆಕ್ರೋಶಗೊಂಡ ಬಳಕೆದಾರರು ಪರ್ಯಾಯ ಆಪ್‌ ಹುಡುಕಾಟದಲ್ಲಿ ಗುರುತಿಸಿದ್ದು ಸಿಗ್ನಲ್‌ ಅನ್ನು.

ಸಿಗ್ನಲ್‌ ಸಂಪೂರ್ಣ ಮಾಹಿತಿ ಸುರಕ್ಷತೆಯ ವಾಗ್ದಾನ ನೀಡುತ್ತದೆ. ಬಳಕೆಯಲ್ಲೂ ಅತ್ಯಂತ ಸರಳ. ಇದೇ ಕಾರಣಕ್ಕೆ ಖಾಸಗಿತನದ ಬಗ್ಗೆ ಅಪಾರ ಕಾಳಜಿ ಇರುವ ಎಡ್ವರ್ಡ್‌ ಸ್ನೋ ಡೆನ್‌ ಐದು ವರ್ಷಗಳ ಹಿಂದೆಯೇ ನಾನು ಸಿಗ್ನಲ್‌ ಆಪ್‌ ಬಳಸುತ್ತೇನೆ ಎಂದು ಹೇಳಿಕೊಂಡಿದ್ದರು.

ಇತ್ತೀಚೆಗೆ, ಟೆಸ್ಲಾ, ಸ್ಪೇಸ್‌ಎಕ್ಸ್‌ ಮಾಲಿಕ ಎಲಾನ್‌ ಮಸ್ಕ್‌ ಕೂಡ ‘ ಸಿಗ್ನಲ್‌ ಬಳಸಿ’ ಎಂದು ಟ್ವೀಟ್‌ ಮಾಡಿ ಸಲಹೆ ನೀಡಿದ್ದರು.

ಕಳೆದ ವಾರ ಫೋರ್ಬ್ಸ್‌ ಪಟ್ಟಿದಂತೆ ವಾಟ್ಸ್‌ಆಪ್‌ ತನ್ನ ಬಳಕೆದಾರರಿಂದ ಎರಡು ರೀತಿಯಲ್ಲಿ ಮಾಹಿತಿ ಸಂಗ್ರಹಿಸುತ್ತದೆ. ಒಂದು ಆಪ್‌ ಚಟುವಟಿಕೆಗಳನ್ನು ಮತ್ತು ಆಪ್‌ನ ಒಟ್ಟು ನಾಲಿಟಿಕ್ಸ್‌ ಅನ್ನು. ಅಂದರೆ ನಿರಂತರವಾಗಿ ಬಳಕೆದಾರರ ಗೂಢಚಾರಿಕೆ ಮಾಡುವುದಲ್ಲದೆ, ಅದರ ಅನಾಲಿಟಿಕ್ಸ್‌ ಸಂಗ್ರಹಿಸುವುದು (ಇದು ನೀವು ಹೆಚ್ಚು ಭೇಟಿ ನೀಡುವ, ಹೆಚ್ಚು ಮಾತನಾಡುವ, ಹೆಚ್ಚು ಖರೀದಿಸುವ ವಿವರಗಳನ್ನು ಕಲೆಹಾಕುವ ವಿಧಾನ). ಅಂದರೆ ನಿಮ್ಮ ಖರೀದಿ, ನೀವಿರುವ/ಓಡಾಡುವ ಸ್ಥಳಗಳು, ಕಾಂಟ್ಯಾಕ್ಟ್‌ಗಳು, ಬಳಕೆದಾರರ ಎಲ್ಲ ಮಾಹಿತಿ, ಯೂಸರ್‌ ಐಡಿಗಳು, ಡಿವೈಸ್‌ ಮಾಹಿತಿ, ಬಳಕೆಯ ಪ್ರಮಾಣ, ಹಣಕಾಸಿನ ಮಾಹಿತಿ.

ಈ ವಿಷಯ ಬಹಿರಂಗಗೊಳ್ಳುತ್ತಿದ್ದಂತೆ ಭಾರತೀಯರು, ಮಾಹಿತಿ ಸುರಕ್ಷತೆ, ಖಾಸಗಿತನಕ್ಕೆ ಹೆಚ್ಚು ಆದ್ಯತೆ ನೀಡುವ ಸಿಗ್ನಲ್‌ ಆಪ್‌ನ ಕಡೆ ವಾಲಿದ್ದಾರೆ.

ಎಲಾನ್‌ ಮಸ್ಕ್‌ ಟ್ವೀಟ್‌ ಬಳಿಕ ಶೇರು ಮಾರುಕಟ್ಟೆಯಲ್ಲೂ ಹೆಚ್ಚಿನ ಮೌಲ್ಯ ಗಳಿಸಿದೆ. ಕಳೆದ ವರ್ಷಾಂತ್ಯದವರೆಗೆ 1 ಡಾಲರ್‌ ಕೂಡ ದಾಟದ ಸಿಗ್ನಲ್‌ ಬೆಲೆ ಈಗ 7.19 ಡಾಲರ್‌! ಜ.8ರಂದು 10 ಡಾಲರ್‌ವರೆಗೆ ಇದರ ಶೇರು ಮೌಲ್ಯ ಹೆಚ್ಚಿತ್ತು. ವಾಟ್ಸ್‌ ಆಪ್‌ ಸಿಗ್ನಲ್‌ ಅತಿ ದೊಡ್ಡ ಹೊಡೆತ ನೀಡುತ್ತಿರುವ ಲಕ್ಷಣ ಇದು ಎಂದು ಮಾರುಕಟ್ಟೆ ತಜ್ಞರು ವಿಶ್ಲೇಷಿಸುತ್ತಿದ್ದಾರೆ.

ಕೃಪೆ: ಟೆಕ್‌ಕನ್ನಡ


ಇದನ್ನೂ ಓದಿ: ವಾಟ್ಸಾಪ್‌ಗೆ ಗುಡ್‌ಬೈ ಹೇಳಿ, ಸಿಗ್ನಲ್‌ಗೆ ಹೆಲೋ ಹೇಳಿ: ಏನಿದು ಸಿಗ್ನಲ್ ಆಪ್?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...