Homeಎಕಾನಮಿಆರ್ಥಿಕ ಕುಸಿತ ತಡೆದು ಉದ್ಯೋಗ ಸೃಷ್ಟಿಗಾಗಿ ‘ಯುವಜನರ ಪ್ರಣಾಳಿಕೆ’ಯನ್ನು ಜಾರಿ ಮಾಡಲು ಒತ್ತಾಯ..

ಆರ್ಥಿಕ ಕುಸಿತ ತಡೆದು ಉದ್ಯೋಗ ಸೃಷ್ಟಿಗಾಗಿ ‘ಯುವಜನರ ಪ್ರಣಾಳಿಕೆ’ಯನ್ನು ಜಾರಿ ಮಾಡಲು ಒತ್ತಾಯ..

- Advertisement -
- Advertisement -

ಪ್ರತಿನಿತ್ಯ ಲಕ್ಷ ಲಕ್ಷ ಉದ್ಯೋಗ ನಷ್ಟದ ಸುದ್ದಿ ಕೇಳುತ್ತಿದ್ದೇವೆ. ನೂರು ಉದ್ಯೋಗಗಳಿಗೆ ಲಕ್ಷಾಂತರ ಯುವಜನರು ಪರೀಕ್ಷೆ ಬರೆಯುತ್ತಿದ್ದಾರೆ. ವಿವಿಧ ಬಗೆಯ ಸ್ವಂತ ವೃತ್ತಿ, ವ್ಯವಹಾರಗಳಲ್ಲಿರುವವರ ಸಂಪಾದನೆ ಇಳಿದಿದೆ. ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುವವರು ಉದ್ಯೋಗ ನಷ್ಟದ ಮೊದಲ ಬಲಿಪಶುಗಳಾಗಿದ್ದಾರೆ. ನಿರುದ್ಯೋಗದ ಟೈಂ ಬಾಂಬ್ ಕರ್ನಾಟಕದಲ್ಲಿ ಸ್ಫೋಟ ಆಗುವ ಮುಂಚೆಯೇ ಎಚ್ಚೆತ್ತುಕೊಳ್ಳದಿದ್ದರೆ ಸಮಾಜದಲ್ಲಿ ಉಂಟಾಗುವ ಅಶಾಂತಿ, ಅರಾಜಕತೆ, ಅಪರಾಧಗಳಿಗೆ ನಾವೂ ಕಾರಣರಾಗುತ್ತೇವೆ ಎಂದು ಉದ್ಯೋಗಕ್ಕಾಗಿ ಯುವಜನರು ಸಂಚಾಲಕರಾದ ಸರೋವರ್ ಬೆಂಕೀಕೆರೆ ಆತಂಕ ವ್ಯಕ್ತಪಡಿಸಿದ್ದಾರೆ.

ಆರ್ಥಿಕ ಕುಸಿತದ ಉಂಟಾಗುತ್ತಿರುವ ಉದ್ಯೋಗ ಕಡಿತದ ವಿರುದ್ಧ ನಡೆದ ಬಹಿರಂಗ ಸಹಿ ಸಂಗ್ರಹ ಮತ್ತು ಯುವಜನರೊಂದಿಗೆ ಸಂವಾದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು ಸ್ಥಳೀಯ ಸಂಪನ್ಮೂಲಗಳನ್ನು ಆಧರಿಸಿ, ಸ್ಥಳೀಯರಿಗೆ ಸ್ಥಳೀಯವಾಗಿಯೇ ಉದ್ಯೋಗ ಸೃಷ್ಟಿ ಮಾಡುವುದೇ ಇದಕ್ಕೆ ಪರಿಹಾರ. ಕರ್ನಾಟಕದಲ್ಲಿ 50 ಲಕ್ಷ ಹೊಸ ಉದ್ಯೋಗ ಸೃಷ್ಟಿ, ಇರುವ 1 ಕೋಟಿ ಉದ್ಯೋಗಗಳಿಗೆ ಸ್ಥಿರತೆ ಕಲ್ಪಿಸುವ ಯೋಜನೆಯಾದ ‘ಯುವಜನರ ಪ್ರಣಾಳಿಕೆ’ಯನ್ನು ಜಾರಿ ಮಾಡಲು ಸರ್ಕಾರಗಳ ಮೇಲೆ ಒತ್ತಾಯಿಸೋಣ ಎಂದರು.

ಬೆಂಗಳೂರಿನ ಎಸ್.ಜೆ.ಪಿ ಪಾಲಿಟೆಕ್ನಿಕ್ ಕಾಲೇಜು ಮುಂದೆ ನಡೆದ ಸಹಿ ಸಂಗ್ರಹ ಅಭಿಯಾನದಲ್ಲಿ ಸಾವಿರಾರು ವಿದ್ಯಾರ್ಥಿಗಳು ಉದ್ಯೋಗ ಸೃಷ್ಟಿಗೆ ಒತ್ತಾಯಿಸಿ ಸಹಿ ಮಾಡಿದರು.

ಹಕ್ಕೊತ್ತಾಯಗಳು

  • ಸರ್ಕಾರದ ನೀತಿಗಳಿಂದ ಉದ್ಯೋಗ ನಷ್ಟ ಉಂಟಾಗುತ್ತಿರುವುದರಿಂದ, ಉದ್ಯೋಗ ಕಳೆದುಕೊಂಡವರಿಗೆ ಪರ್ಯಾಯ ಉದ್ಯೋಗ ಸಿಗುವವರೆಗೆ ಸರ್ಕಾರ ವೇತನ ನೀಡಬೇಕು.
  • ನಿರುದ್ಯೋಗಿಗಳಿಗೆ ಉದ್ಯೋಗ ಸೃಷ್ಟಿಯ ಯೋಜನೆ ಜಾರಿ ಮಾಡುವವರೆಗೆ ನಿರುದ್ಯೋಗ ಭತ್ಯೆ ಕೊಡಬೇಕು.
  • ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವವರಿಗೆ ಉದ್ಯೋಗ ಭದ್ರತೆ ಕಲ್ಪಿಸಬೇಕು.
  • ಶಿಕ್ಷಣಕ್ಕೆ ತಕ್ಕ ಉದ್ಯೋಗ, ಉದ್ಯೋಗಕ್ಕೆ ತಕ್ಕ ವೇತನ, ಭದ್ರತೆ ಮತ್ತು ಘನತೆ ಪ್ರತಿಯೊಬ್ಬರ ಹಕ್ಕಾಗಬೇಕು.

ಸಂಚಾಲಕರಾದ ನರಸಿಂಹಮೂರ್ತಿಯವರು ಮಾತನಾಡಿ ಈ ಆಂದೋಲನವನ್ನು ನಾವು ಮುಂದುವರೆಸುತ್ತೇವೆ. ಸೆಪ್ಟೆಂಬರ್ 8ರಿಂದ ರಾಜ್ಯದೆಲ್ಲೆಡೆ ಸಮಾಲೋಚನಾ ಸಭೆಗಳು, ವಿಚಾರಗೋಷ್ಠಿಗಳು ಮತ್ತು ಸ್ಥಳೀಯವಾಗಿ ಉದ್ಯೋಗ ಸೃಷ್ಟಿಯ ಸಾಧ್ಯತೆಯ ಕುರಿತು ಅಧ್ಯಯನ ಕಾರ್ಯಕ್ರಮಗಳು ನಡೆಯಲಿದ್ದು, ಸೆಪ್ಟೆಂಬರ್ 16ರಂದು ಬೆಂಗಳೂರಿನಲ್ಲಿ ಆಂದೋಲನದ ಮುಂದಿನ ನಡೆಗಳ ಕುರಿತು ರಾಜ್ಯಮಟ್ಟದ ಸಮಾಲೋಚನಾ ಸಭೆ ನಡೆಸಲಿದ್ದೇವೆ ಎಂದರು.

ಉದ್ಯೋಗಕ್ಕಾಗಿ ಯುವಜನರು ವೇದಿಕೆಯ ಅನಿಲ್ ಕುಮಾರ್ ಚಿಕ್ಕದಾಳವಟ್ಟ, ಬಿ.ಶ್ರೀಪಾದ್ ಭಟ್, ವಾಸು ಎಚ್.ವಿ, ರಾಜಶೇಖರ್ ಅಕ್ಕಿ, ಮಲ್ಲಿಗೆ, ಸಾಲಿಡಾರಿಟಿ ಯೂತ್ ಮೂವ್ ಮೆಂಟ್ ನ ಮಹಮ್ಮದ್ ನವಾಜ್ ಮತ್ತಿತರರು ಇದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...