Homeಎಕಾನಮಿಆರ್ಥಿಕ ಕುಸಿತ ತಡೆದು ಉದ್ಯೋಗ ಸೃಷ್ಟಿಗಾಗಿ ‘ಯುವಜನರ ಪ್ರಣಾಳಿಕೆ’ಯನ್ನು ಜಾರಿ ಮಾಡಲು ಒತ್ತಾಯ..

ಆರ್ಥಿಕ ಕುಸಿತ ತಡೆದು ಉದ್ಯೋಗ ಸೃಷ್ಟಿಗಾಗಿ ‘ಯುವಜನರ ಪ್ರಣಾಳಿಕೆ’ಯನ್ನು ಜಾರಿ ಮಾಡಲು ಒತ್ತಾಯ..

- Advertisement -
- Advertisement -

ಪ್ರತಿನಿತ್ಯ ಲಕ್ಷ ಲಕ್ಷ ಉದ್ಯೋಗ ನಷ್ಟದ ಸುದ್ದಿ ಕೇಳುತ್ತಿದ್ದೇವೆ. ನೂರು ಉದ್ಯೋಗಗಳಿಗೆ ಲಕ್ಷಾಂತರ ಯುವಜನರು ಪರೀಕ್ಷೆ ಬರೆಯುತ್ತಿದ್ದಾರೆ. ವಿವಿಧ ಬಗೆಯ ಸ್ವಂತ ವೃತ್ತಿ, ವ್ಯವಹಾರಗಳಲ್ಲಿರುವವರ ಸಂಪಾದನೆ ಇಳಿದಿದೆ. ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುವವರು ಉದ್ಯೋಗ ನಷ್ಟದ ಮೊದಲ ಬಲಿಪಶುಗಳಾಗಿದ್ದಾರೆ. ನಿರುದ್ಯೋಗದ ಟೈಂ ಬಾಂಬ್ ಕರ್ನಾಟಕದಲ್ಲಿ ಸ್ಫೋಟ ಆಗುವ ಮುಂಚೆಯೇ ಎಚ್ಚೆತ್ತುಕೊಳ್ಳದಿದ್ದರೆ ಸಮಾಜದಲ್ಲಿ ಉಂಟಾಗುವ ಅಶಾಂತಿ, ಅರಾಜಕತೆ, ಅಪರಾಧಗಳಿಗೆ ನಾವೂ ಕಾರಣರಾಗುತ್ತೇವೆ ಎಂದು ಉದ್ಯೋಗಕ್ಕಾಗಿ ಯುವಜನರು ಸಂಚಾಲಕರಾದ ಸರೋವರ್ ಬೆಂಕೀಕೆರೆ ಆತಂಕ ವ್ಯಕ್ತಪಡಿಸಿದ್ದಾರೆ.

ಆರ್ಥಿಕ ಕುಸಿತದ ಉಂಟಾಗುತ್ತಿರುವ ಉದ್ಯೋಗ ಕಡಿತದ ವಿರುದ್ಧ ನಡೆದ ಬಹಿರಂಗ ಸಹಿ ಸಂಗ್ರಹ ಮತ್ತು ಯುವಜನರೊಂದಿಗೆ ಸಂವಾದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು ಸ್ಥಳೀಯ ಸಂಪನ್ಮೂಲಗಳನ್ನು ಆಧರಿಸಿ, ಸ್ಥಳೀಯರಿಗೆ ಸ್ಥಳೀಯವಾಗಿಯೇ ಉದ್ಯೋಗ ಸೃಷ್ಟಿ ಮಾಡುವುದೇ ಇದಕ್ಕೆ ಪರಿಹಾರ. ಕರ್ನಾಟಕದಲ್ಲಿ 50 ಲಕ್ಷ ಹೊಸ ಉದ್ಯೋಗ ಸೃಷ್ಟಿ, ಇರುವ 1 ಕೋಟಿ ಉದ್ಯೋಗಗಳಿಗೆ ಸ್ಥಿರತೆ ಕಲ್ಪಿಸುವ ಯೋಜನೆಯಾದ ‘ಯುವಜನರ ಪ್ರಣಾಳಿಕೆ’ಯನ್ನು ಜಾರಿ ಮಾಡಲು ಸರ್ಕಾರಗಳ ಮೇಲೆ ಒತ್ತಾಯಿಸೋಣ ಎಂದರು.

ಬೆಂಗಳೂರಿನ ಎಸ್.ಜೆ.ಪಿ ಪಾಲಿಟೆಕ್ನಿಕ್ ಕಾಲೇಜು ಮುಂದೆ ನಡೆದ ಸಹಿ ಸಂಗ್ರಹ ಅಭಿಯಾನದಲ್ಲಿ ಸಾವಿರಾರು ವಿದ್ಯಾರ್ಥಿಗಳು ಉದ್ಯೋಗ ಸೃಷ್ಟಿಗೆ ಒತ್ತಾಯಿಸಿ ಸಹಿ ಮಾಡಿದರು.

ಹಕ್ಕೊತ್ತಾಯಗಳು

  • ಸರ್ಕಾರದ ನೀತಿಗಳಿಂದ ಉದ್ಯೋಗ ನಷ್ಟ ಉಂಟಾಗುತ್ತಿರುವುದರಿಂದ, ಉದ್ಯೋಗ ಕಳೆದುಕೊಂಡವರಿಗೆ ಪರ್ಯಾಯ ಉದ್ಯೋಗ ಸಿಗುವವರೆಗೆ ಸರ್ಕಾರ ವೇತನ ನೀಡಬೇಕು.
  • ನಿರುದ್ಯೋಗಿಗಳಿಗೆ ಉದ್ಯೋಗ ಸೃಷ್ಟಿಯ ಯೋಜನೆ ಜಾರಿ ಮಾಡುವವರೆಗೆ ನಿರುದ್ಯೋಗ ಭತ್ಯೆ ಕೊಡಬೇಕು.
  • ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವವರಿಗೆ ಉದ್ಯೋಗ ಭದ್ರತೆ ಕಲ್ಪಿಸಬೇಕು.
  • ಶಿಕ್ಷಣಕ್ಕೆ ತಕ್ಕ ಉದ್ಯೋಗ, ಉದ್ಯೋಗಕ್ಕೆ ತಕ್ಕ ವೇತನ, ಭದ್ರತೆ ಮತ್ತು ಘನತೆ ಪ್ರತಿಯೊಬ್ಬರ ಹಕ್ಕಾಗಬೇಕು.

ಸಂಚಾಲಕರಾದ ನರಸಿಂಹಮೂರ್ತಿಯವರು ಮಾತನಾಡಿ ಈ ಆಂದೋಲನವನ್ನು ನಾವು ಮುಂದುವರೆಸುತ್ತೇವೆ. ಸೆಪ್ಟೆಂಬರ್ 8ರಿಂದ ರಾಜ್ಯದೆಲ್ಲೆಡೆ ಸಮಾಲೋಚನಾ ಸಭೆಗಳು, ವಿಚಾರಗೋಷ್ಠಿಗಳು ಮತ್ತು ಸ್ಥಳೀಯವಾಗಿ ಉದ್ಯೋಗ ಸೃಷ್ಟಿಯ ಸಾಧ್ಯತೆಯ ಕುರಿತು ಅಧ್ಯಯನ ಕಾರ್ಯಕ್ರಮಗಳು ನಡೆಯಲಿದ್ದು, ಸೆಪ್ಟೆಂಬರ್ 16ರಂದು ಬೆಂಗಳೂರಿನಲ್ಲಿ ಆಂದೋಲನದ ಮುಂದಿನ ನಡೆಗಳ ಕುರಿತು ರಾಜ್ಯಮಟ್ಟದ ಸಮಾಲೋಚನಾ ಸಭೆ ನಡೆಸಲಿದ್ದೇವೆ ಎಂದರು.

ಉದ್ಯೋಗಕ್ಕಾಗಿ ಯುವಜನರು ವೇದಿಕೆಯ ಅನಿಲ್ ಕುಮಾರ್ ಚಿಕ್ಕದಾಳವಟ್ಟ, ಬಿ.ಶ್ರೀಪಾದ್ ಭಟ್, ವಾಸು ಎಚ್.ವಿ, ರಾಜಶೇಖರ್ ಅಕ್ಕಿ, ಮಲ್ಲಿಗೆ, ಸಾಲಿಡಾರಿಟಿ ಯೂತ್ ಮೂವ್ ಮೆಂಟ್ ನ ಮಹಮ್ಮದ್ ನವಾಜ್ ಮತ್ತಿತರರು ಇದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...

ಮೊದಲ ಪತ್ನಿಗೆ ಮುಸ್ಲಿಂ ಪತಿ ಜೀವನಾಂಶ ನಿರಾಕರಿಸುವಂತಿಲ್ಲ: ಕೇರಳ ಹೈಕೋರ್ಟ್

ಎರಡನೇ ಪತ್ನಿಯ ಮೇಲಿನ ಆರ್ಥಿಕ ಜವಾಬ್ದಾರಿ ಕುರಿತ ಮಹತ್ವದ ತೀರ್ಪಿನಲ್ಲಿ, ಮುಸ್ಲಿಂ ಪುರುಷನು ತನ್ನ ಮೊದಲ ಪತ್ನಿಗೆ ಜೀವನಾಂಶ ಪಾವತಿಸುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್ ಹೇಳಿದೆ. ಎಲ್ಲ ಪತ್ನಿಯರನ್ನು ಸಮಾನವಾಗಿ...

ಆಸ್ಪತ್ರೆಗಳು ಕಡ್ಡಾಯವಾಗಿ ದರಪಟ್ಟಿ ಪ್ರದರ್ಶಿಸಬೇಕು, ಹಣ ಪಾವತಿಸದ ಕಾರಣ ತುರ್ತು ಆರೈಕೆ ನಿರಾಕರಿಸುವಂತಿಲ್ಲ : ಕಾನೂನು ಎತ್ತಿ ಹಿಡಿದ ಹೈಕೋರ್ಟ್

ಕೇರಳ ವೈದ್ಯಕೀಯ ಸಂಸ್ಥೆಗಳ ಕಾಯ್ದೆ ಮತ್ತು ನಿಬಂಧನೆಗಳನ್ನು ಎತ್ತಿಹಿಡಿದ ಹೈಕೋರ್ಟ್‌ನ ಏಕ ಸದಸ್ಯ ಪೀಠದ ಆದೇಶದ ವಿರುದ್ಧ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಮತ್ತು ಕೇರಳ ಖಾಸಗಿ ಆಸ್ಪತ್ರೆಗಳ ಸಂಘ ಸಲ್ಲಿಸಿದ್ದ ಮೇಲ್ಮನವಿಗಳನ್ನು...

ಎಸ್‌ಐಆರ್‌ನ ನಿಜವಾದ ಉದ್ದೇಶ ಎನ್‌ಆರ್‌ಸಿ : ಮಮತಾ ಬ್ಯಾನರ್ಜಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್‌) ಹಿಂದಿನ ಕೇಂದ್ರ ಸರ್ಕಾರದ ನಿಜವಾದ ಉದ್ದೇಶ ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಮಾಡುವುದು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ನವೆಂಬರ್...

ಬೆಂಗಳೂರು ಚಲೋ: ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಸಚಿವ ಮಹದೇವಪ್ಪ: ಸಿಎಂ ಜೊತೆ ಚರ್ಚಿಸುವ ಭರವಸೆ 

ಕೇಂದ್ರ ಸರ್ಕಾರದ ರೈತ, ಕಾರ್ಮಿಕ, ಜನವಿರೋಧಿ ನೀತಿಗಳು ಹಾಗೂ ರಾಜ್ಯ ಸರ್ಕಾರದ ನಿರ್ಲಕ್ಷ್ಯ, ನಿರ್ಲಜ್ಜ ಧೋರಣೆಯ ವಿರುದ್ಧ ಸಂಯುಕ್ತ ಹೋರಾಟ ಕರ್ನಾಟಕದ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿರುವ ‘ಬೆಂಗಳೂರು ಚಲೋ’...

ಛತ್ತೀಸ್‌ಗಢ : ಬಿಜಾಪುರದಲ್ಲಿ 41 ಮಾವೋವಾದಿಗಳು ಶರಣಾಗತಿ

ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಬುಧವಾರ (ನವೆಂಬರ್ 26) 41 ಮಂದಿ ನಕ್ಸಲರು ಶರಣಾಗಿದ್ದು, ಈ ಪೈಕಿ 32 ಮಂದಿಯ ತಲೆಗೆ ಒಟ್ಟು 1.19 ಕೋಟಿ ರೂಪಾಯಿ ಬಹುಮಾನ ಘೋಷಣೆಯಾಗಿತ್ತು ಎಂದು ವರದಿಯಾಗಿದೆ. ಸರ್ಕಾರದ ಹೊಸ...