Homeಎಕಾನಮಿಆರ್ಥಿಕ ಕುಸಿತ ತಡೆದು ಉದ್ಯೋಗ ಸೃಷ್ಟಿಗಾಗಿ ‘ಯುವಜನರ ಪ್ರಣಾಳಿಕೆ’ಯನ್ನು ಜಾರಿ ಮಾಡಲು ಒತ್ತಾಯ..

ಆರ್ಥಿಕ ಕುಸಿತ ತಡೆದು ಉದ್ಯೋಗ ಸೃಷ್ಟಿಗಾಗಿ ‘ಯುವಜನರ ಪ್ರಣಾಳಿಕೆ’ಯನ್ನು ಜಾರಿ ಮಾಡಲು ಒತ್ತಾಯ..

- Advertisement -
- Advertisement -

ಪ್ರತಿನಿತ್ಯ ಲಕ್ಷ ಲಕ್ಷ ಉದ್ಯೋಗ ನಷ್ಟದ ಸುದ್ದಿ ಕೇಳುತ್ತಿದ್ದೇವೆ. ನೂರು ಉದ್ಯೋಗಗಳಿಗೆ ಲಕ್ಷಾಂತರ ಯುವಜನರು ಪರೀಕ್ಷೆ ಬರೆಯುತ್ತಿದ್ದಾರೆ. ವಿವಿಧ ಬಗೆಯ ಸ್ವಂತ ವೃತ್ತಿ, ವ್ಯವಹಾರಗಳಲ್ಲಿರುವವರ ಸಂಪಾದನೆ ಇಳಿದಿದೆ. ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುವವರು ಉದ್ಯೋಗ ನಷ್ಟದ ಮೊದಲ ಬಲಿಪಶುಗಳಾಗಿದ್ದಾರೆ. ನಿರುದ್ಯೋಗದ ಟೈಂ ಬಾಂಬ್ ಕರ್ನಾಟಕದಲ್ಲಿ ಸ್ಫೋಟ ಆಗುವ ಮುಂಚೆಯೇ ಎಚ್ಚೆತ್ತುಕೊಳ್ಳದಿದ್ದರೆ ಸಮಾಜದಲ್ಲಿ ಉಂಟಾಗುವ ಅಶಾಂತಿ, ಅರಾಜಕತೆ, ಅಪರಾಧಗಳಿಗೆ ನಾವೂ ಕಾರಣರಾಗುತ್ತೇವೆ ಎಂದು ಉದ್ಯೋಗಕ್ಕಾಗಿ ಯುವಜನರು ಸಂಚಾಲಕರಾದ ಸರೋವರ್ ಬೆಂಕೀಕೆರೆ ಆತಂಕ ವ್ಯಕ್ತಪಡಿಸಿದ್ದಾರೆ.

ಆರ್ಥಿಕ ಕುಸಿತದ ಉಂಟಾಗುತ್ತಿರುವ ಉದ್ಯೋಗ ಕಡಿತದ ವಿರುದ್ಧ ನಡೆದ ಬಹಿರಂಗ ಸಹಿ ಸಂಗ್ರಹ ಮತ್ತು ಯುವಜನರೊಂದಿಗೆ ಸಂವಾದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು ಸ್ಥಳೀಯ ಸಂಪನ್ಮೂಲಗಳನ್ನು ಆಧರಿಸಿ, ಸ್ಥಳೀಯರಿಗೆ ಸ್ಥಳೀಯವಾಗಿಯೇ ಉದ್ಯೋಗ ಸೃಷ್ಟಿ ಮಾಡುವುದೇ ಇದಕ್ಕೆ ಪರಿಹಾರ. ಕರ್ನಾಟಕದಲ್ಲಿ 50 ಲಕ್ಷ ಹೊಸ ಉದ್ಯೋಗ ಸೃಷ್ಟಿ, ಇರುವ 1 ಕೋಟಿ ಉದ್ಯೋಗಗಳಿಗೆ ಸ್ಥಿರತೆ ಕಲ್ಪಿಸುವ ಯೋಜನೆಯಾದ ‘ಯುವಜನರ ಪ್ರಣಾಳಿಕೆ’ಯನ್ನು ಜಾರಿ ಮಾಡಲು ಸರ್ಕಾರಗಳ ಮೇಲೆ ಒತ್ತಾಯಿಸೋಣ ಎಂದರು.

ಬೆಂಗಳೂರಿನ ಎಸ್.ಜೆ.ಪಿ ಪಾಲಿಟೆಕ್ನಿಕ್ ಕಾಲೇಜು ಮುಂದೆ ನಡೆದ ಸಹಿ ಸಂಗ್ರಹ ಅಭಿಯಾನದಲ್ಲಿ ಸಾವಿರಾರು ವಿದ್ಯಾರ್ಥಿಗಳು ಉದ್ಯೋಗ ಸೃಷ್ಟಿಗೆ ಒತ್ತಾಯಿಸಿ ಸಹಿ ಮಾಡಿದರು.

ಹಕ್ಕೊತ್ತಾಯಗಳು

  • ಸರ್ಕಾರದ ನೀತಿಗಳಿಂದ ಉದ್ಯೋಗ ನಷ್ಟ ಉಂಟಾಗುತ್ತಿರುವುದರಿಂದ, ಉದ್ಯೋಗ ಕಳೆದುಕೊಂಡವರಿಗೆ ಪರ್ಯಾಯ ಉದ್ಯೋಗ ಸಿಗುವವರೆಗೆ ಸರ್ಕಾರ ವೇತನ ನೀಡಬೇಕು.
  • ನಿರುದ್ಯೋಗಿಗಳಿಗೆ ಉದ್ಯೋಗ ಸೃಷ್ಟಿಯ ಯೋಜನೆ ಜಾರಿ ಮಾಡುವವರೆಗೆ ನಿರುದ್ಯೋಗ ಭತ್ಯೆ ಕೊಡಬೇಕು.
  • ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವವರಿಗೆ ಉದ್ಯೋಗ ಭದ್ರತೆ ಕಲ್ಪಿಸಬೇಕು.
  • ಶಿಕ್ಷಣಕ್ಕೆ ತಕ್ಕ ಉದ್ಯೋಗ, ಉದ್ಯೋಗಕ್ಕೆ ತಕ್ಕ ವೇತನ, ಭದ್ರತೆ ಮತ್ತು ಘನತೆ ಪ್ರತಿಯೊಬ್ಬರ ಹಕ್ಕಾಗಬೇಕು.

ಸಂಚಾಲಕರಾದ ನರಸಿಂಹಮೂರ್ತಿಯವರು ಮಾತನಾಡಿ ಈ ಆಂದೋಲನವನ್ನು ನಾವು ಮುಂದುವರೆಸುತ್ತೇವೆ. ಸೆಪ್ಟೆಂಬರ್ 8ರಿಂದ ರಾಜ್ಯದೆಲ್ಲೆಡೆ ಸಮಾಲೋಚನಾ ಸಭೆಗಳು, ವಿಚಾರಗೋಷ್ಠಿಗಳು ಮತ್ತು ಸ್ಥಳೀಯವಾಗಿ ಉದ್ಯೋಗ ಸೃಷ್ಟಿಯ ಸಾಧ್ಯತೆಯ ಕುರಿತು ಅಧ್ಯಯನ ಕಾರ್ಯಕ್ರಮಗಳು ನಡೆಯಲಿದ್ದು, ಸೆಪ್ಟೆಂಬರ್ 16ರಂದು ಬೆಂಗಳೂರಿನಲ್ಲಿ ಆಂದೋಲನದ ಮುಂದಿನ ನಡೆಗಳ ಕುರಿತು ರಾಜ್ಯಮಟ್ಟದ ಸಮಾಲೋಚನಾ ಸಭೆ ನಡೆಸಲಿದ್ದೇವೆ ಎಂದರು.

ಉದ್ಯೋಗಕ್ಕಾಗಿ ಯುವಜನರು ವೇದಿಕೆಯ ಅನಿಲ್ ಕುಮಾರ್ ಚಿಕ್ಕದಾಳವಟ್ಟ, ಬಿ.ಶ್ರೀಪಾದ್ ಭಟ್, ವಾಸು ಎಚ್.ವಿ, ರಾಜಶೇಖರ್ ಅಕ್ಕಿ, ಮಲ್ಲಿಗೆ, ಸಾಲಿಡಾರಿಟಿ ಯೂತ್ ಮೂವ್ ಮೆಂಟ್ ನ ಮಹಮ್ಮದ್ ನವಾಜ್ ಮತ್ತಿತರರು ಇದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...