Homeಎಕಾನಮಿಆರ್ಥಿಕ ಕುಸಿತ ತಡೆದು ಉದ್ಯೋಗ ಸೃಷ್ಟಿಗಾಗಿ ‘ಯುವಜನರ ಪ್ರಣಾಳಿಕೆ’ಯನ್ನು ಜಾರಿ ಮಾಡಲು ಒತ್ತಾಯ..

ಆರ್ಥಿಕ ಕುಸಿತ ತಡೆದು ಉದ್ಯೋಗ ಸೃಷ್ಟಿಗಾಗಿ ‘ಯುವಜನರ ಪ್ರಣಾಳಿಕೆ’ಯನ್ನು ಜಾರಿ ಮಾಡಲು ಒತ್ತಾಯ..

- Advertisement -
- Advertisement -

ಪ್ರತಿನಿತ್ಯ ಲಕ್ಷ ಲಕ್ಷ ಉದ್ಯೋಗ ನಷ್ಟದ ಸುದ್ದಿ ಕೇಳುತ್ತಿದ್ದೇವೆ. ನೂರು ಉದ್ಯೋಗಗಳಿಗೆ ಲಕ್ಷಾಂತರ ಯುವಜನರು ಪರೀಕ್ಷೆ ಬರೆಯುತ್ತಿದ್ದಾರೆ. ವಿವಿಧ ಬಗೆಯ ಸ್ವಂತ ವೃತ್ತಿ, ವ್ಯವಹಾರಗಳಲ್ಲಿರುವವರ ಸಂಪಾದನೆ ಇಳಿದಿದೆ. ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುವವರು ಉದ್ಯೋಗ ನಷ್ಟದ ಮೊದಲ ಬಲಿಪಶುಗಳಾಗಿದ್ದಾರೆ. ನಿರುದ್ಯೋಗದ ಟೈಂ ಬಾಂಬ್ ಕರ್ನಾಟಕದಲ್ಲಿ ಸ್ಫೋಟ ಆಗುವ ಮುಂಚೆಯೇ ಎಚ್ಚೆತ್ತುಕೊಳ್ಳದಿದ್ದರೆ ಸಮಾಜದಲ್ಲಿ ಉಂಟಾಗುವ ಅಶಾಂತಿ, ಅರಾಜಕತೆ, ಅಪರಾಧಗಳಿಗೆ ನಾವೂ ಕಾರಣರಾಗುತ್ತೇವೆ ಎಂದು ಉದ್ಯೋಗಕ್ಕಾಗಿ ಯುವಜನರು ಸಂಚಾಲಕರಾದ ಸರೋವರ್ ಬೆಂಕೀಕೆರೆ ಆತಂಕ ವ್ಯಕ್ತಪಡಿಸಿದ್ದಾರೆ.

ಆರ್ಥಿಕ ಕುಸಿತದ ಉಂಟಾಗುತ್ತಿರುವ ಉದ್ಯೋಗ ಕಡಿತದ ವಿರುದ್ಧ ನಡೆದ ಬಹಿರಂಗ ಸಹಿ ಸಂಗ್ರಹ ಮತ್ತು ಯುವಜನರೊಂದಿಗೆ ಸಂವಾದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು ಸ್ಥಳೀಯ ಸಂಪನ್ಮೂಲಗಳನ್ನು ಆಧರಿಸಿ, ಸ್ಥಳೀಯರಿಗೆ ಸ್ಥಳೀಯವಾಗಿಯೇ ಉದ್ಯೋಗ ಸೃಷ್ಟಿ ಮಾಡುವುದೇ ಇದಕ್ಕೆ ಪರಿಹಾರ. ಕರ್ನಾಟಕದಲ್ಲಿ 50 ಲಕ್ಷ ಹೊಸ ಉದ್ಯೋಗ ಸೃಷ್ಟಿ, ಇರುವ 1 ಕೋಟಿ ಉದ್ಯೋಗಗಳಿಗೆ ಸ್ಥಿರತೆ ಕಲ್ಪಿಸುವ ಯೋಜನೆಯಾದ ‘ಯುವಜನರ ಪ್ರಣಾಳಿಕೆ’ಯನ್ನು ಜಾರಿ ಮಾಡಲು ಸರ್ಕಾರಗಳ ಮೇಲೆ ಒತ್ತಾಯಿಸೋಣ ಎಂದರು.

ಬೆಂಗಳೂರಿನ ಎಸ್.ಜೆ.ಪಿ ಪಾಲಿಟೆಕ್ನಿಕ್ ಕಾಲೇಜು ಮುಂದೆ ನಡೆದ ಸಹಿ ಸಂಗ್ರಹ ಅಭಿಯಾನದಲ್ಲಿ ಸಾವಿರಾರು ವಿದ್ಯಾರ್ಥಿಗಳು ಉದ್ಯೋಗ ಸೃಷ್ಟಿಗೆ ಒತ್ತಾಯಿಸಿ ಸಹಿ ಮಾಡಿದರು.

ಹಕ್ಕೊತ್ತಾಯಗಳು

  • ಸರ್ಕಾರದ ನೀತಿಗಳಿಂದ ಉದ್ಯೋಗ ನಷ್ಟ ಉಂಟಾಗುತ್ತಿರುವುದರಿಂದ, ಉದ್ಯೋಗ ಕಳೆದುಕೊಂಡವರಿಗೆ ಪರ್ಯಾಯ ಉದ್ಯೋಗ ಸಿಗುವವರೆಗೆ ಸರ್ಕಾರ ವೇತನ ನೀಡಬೇಕು.
  • ನಿರುದ್ಯೋಗಿಗಳಿಗೆ ಉದ್ಯೋಗ ಸೃಷ್ಟಿಯ ಯೋಜನೆ ಜಾರಿ ಮಾಡುವವರೆಗೆ ನಿರುದ್ಯೋಗ ಭತ್ಯೆ ಕೊಡಬೇಕು.
  • ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವವರಿಗೆ ಉದ್ಯೋಗ ಭದ್ರತೆ ಕಲ್ಪಿಸಬೇಕು.
  • ಶಿಕ್ಷಣಕ್ಕೆ ತಕ್ಕ ಉದ್ಯೋಗ, ಉದ್ಯೋಗಕ್ಕೆ ತಕ್ಕ ವೇತನ, ಭದ್ರತೆ ಮತ್ತು ಘನತೆ ಪ್ರತಿಯೊಬ್ಬರ ಹಕ್ಕಾಗಬೇಕು.

ಸಂಚಾಲಕರಾದ ನರಸಿಂಹಮೂರ್ತಿಯವರು ಮಾತನಾಡಿ ಈ ಆಂದೋಲನವನ್ನು ನಾವು ಮುಂದುವರೆಸುತ್ತೇವೆ. ಸೆಪ್ಟೆಂಬರ್ 8ರಿಂದ ರಾಜ್ಯದೆಲ್ಲೆಡೆ ಸಮಾಲೋಚನಾ ಸಭೆಗಳು, ವಿಚಾರಗೋಷ್ಠಿಗಳು ಮತ್ತು ಸ್ಥಳೀಯವಾಗಿ ಉದ್ಯೋಗ ಸೃಷ್ಟಿಯ ಸಾಧ್ಯತೆಯ ಕುರಿತು ಅಧ್ಯಯನ ಕಾರ್ಯಕ್ರಮಗಳು ನಡೆಯಲಿದ್ದು, ಸೆಪ್ಟೆಂಬರ್ 16ರಂದು ಬೆಂಗಳೂರಿನಲ್ಲಿ ಆಂದೋಲನದ ಮುಂದಿನ ನಡೆಗಳ ಕುರಿತು ರಾಜ್ಯಮಟ್ಟದ ಸಮಾಲೋಚನಾ ಸಭೆ ನಡೆಸಲಿದ್ದೇವೆ ಎಂದರು.

ಉದ್ಯೋಗಕ್ಕಾಗಿ ಯುವಜನರು ವೇದಿಕೆಯ ಅನಿಲ್ ಕುಮಾರ್ ಚಿಕ್ಕದಾಳವಟ್ಟ, ಬಿ.ಶ್ರೀಪಾದ್ ಭಟ್, ವಾಸು ಎಚ್.ವಿ, ರಾಜಶೇಖರ್ ಅಕ್ಕಿ, ಮಲ್ಲಿಗೆ, ಸಾಲಿಡಾರಿಟಿ ಯೂತ್ ಮೂವ್ ಮೆಂಟ್ ನ ಮಹಮ್ಮದ್ ನವಾಜ್ ಮತ್ತಿತರರು ಇದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...